Homeಮುಖಪುಟಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : 'ತುರ್ತು ಮಿಲಿಟರಿ ಆಡಳಿತ' ವಾಪಸ್

ಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : ‘ತುರ್ತು ಮಿಲಿಟರಿ ಆಡಳಿತ’ ವಾಪಸ್

- Advertisement -
- Advertisement -

ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದೇಶದ ಮೇಲೆ ಹೇರಿದ್ದ ‘ತುರ್ತು ಮಿಲಿಟರಿ ಆಡಳಿತ’ವನ್ನು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ನೇತೃತ್ವದ ಸರ್ಕಾರ ಬುಧವಾರ (ಡಿ.4) ನಸುಕಿನಲ್ಲಿ ಹಿಂಪಡೆದಿದೆ.

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದ್ದರು. ಇದರಿಂದ ಬೆದರಿದ ಸರ್ಕಾರ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಮಂಗಳವಾರ (ಡಿ.3) ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದ್ದರು. ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಅಧ್ಯಕ್ಷರು ಮಣಿದಿದ್ದಾರೆ.

ದೇಶದ ವಿರೋಧ ಪಕ್ಷಗಳು ಸಂಸತ್‌ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿದ್ದ ಅಧ್ಯಕ್ಷ ಸುಕ್‌ ಯೋಲ್‌ ಅವರು, ಮಂಗಳವಾರದಿಂದಲೇ ‘ತುರ್ತು ಮಿಲಿಟರಿ ಆಡಳಿತ’ವನ್ನು ಜಾರಿಗೊಳಿಸಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ಹೇಳಿದ್ದರು.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಮಿಲಿಟರಿ ಆಡಳಿತ ಘೋಷಣೆ ಬಳಿಕ ಏನಾಯಿತು?

ಮಂಗಳವಾರ ರಾತ್ರಿ ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತ್ತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು ಸಂಸದರು ಅಸೆಂಬ್ಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ದ. ಕೊರಿಯಾ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಪ್ರತಿಭಟನೆ ನಡೆಸಿದ ಜನರು

ಬಳಿಕ ಆಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಹಿಂಪಡೆದರು. ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದು ತಿಳಿಸಿದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ನಿಲುವಳಿ

ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಹೋಗುವ ಸಂಭವವಿದೆ. ಯೋಲ್ ಅವರ ವಾಗ್ದಂಡನೆಗೆ ಮಾಡಲು ಸಂಸತ್ತಿನ 3ನೇ 2ರಷ್ಟು ಬೆಂಬಲ ಬೇಕಾಗುತ್ತದೆ ಮತ್ತು 9 ಸದಸ್ಯರ ಸಾಂವಿಧಾನಿಕ ನ್ಯಾಯಾಲಯದಲ್ಲಿ ಕನಿಷ್ಠ 6 ನ್ಯಾಯಮೂರ್ತಿಗಳು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಅದನ್ನು ಬೆಂಬಲಿಸಬೇಕಾಗುತ್ತದೆ. ಪ್ರಮುಖ ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಮತ್ತು 5 ಸಣ್ಣ ವಿರೋಧ ಪಕ್ಷಗಳು ವಾಗ್ದಂಡನೆ ಗೊತ್ತುವಳಿ ಸಲ್ಲಿಸಿವೆ.

ಈ ನಡುವೆ, ಯೋಲ್ ಅವರ ಬೆಂಬಲಿಗರು ಹಾಗೂ ಹಲವು ಸಚಿವರು ಪದಚ್ಯುತಿ ಭೀತಿಯಿಂದಾಗಿ ಬುಧವಾರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಯೋಲ್ ಮಾತ್ರ ಮೌನವಾಗಿದ್ದಾರೆ. ಒಂದು ವೇಳೆ ಯೋಲ್ ಪದಚ್ಯುತಿ ಆದರೆ ಹಾಲಿ ಪ್ರಧಾನಿ ಹಾನ್ ಡಕ್ ಸೂ ಮುಂದಿನ ಅಧ್ಯಕ್ಷರಾಗಲಿದ್ದಾರೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಧ್ಯಕ್ಷ ಯೋಲ್ ಸ್ವೀಕರಿಸಿದ್ದು, ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ನೇಮಿಸಿದ್ದಾರೆ.

ಇದನ್ನೂ ಓದಿ : ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...