Homeಮುಖಪುಟಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : 'ತುರ್ತು ಮಿಲಿಟರಿ ಆಡಳಿತ' ವಾಪಸ್

ಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : ‘ತುರ್ತು ಮಿಲಿಟರಿ ಆಡಳಿತ’ ವಾಪಸ್

- Advertisement -
- Advertisement -

ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ದೇಶದ ಮೇಲೆ ಹೇರಿದ್ದ ‘ತುರ್ತು ಮಿಲಿಟರಿ ಆಡಳಿತ’ವನ್ನು ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ನೇತೃತ್ವದ ಸರ್ಕಾರ ಬುಧವಾರ (ಡಿ.4) ನಸುಕಿನಲ್ಲಿ ಹಿಂಪಡೆದಿದೆ.

ಮಿಲಿಟರಿ ಆಡಳಿತ ಘೋಷಿಸಿದ ಬೆನ್ನಲ್ಲೇ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಸಭೆ ಸೇರಿದ ಸಂಸದರು, ಮಿಲಿಟರಿ ಆಡಳಿತ ತಿರಸ್ಕರಿಸುವುದರ ಪರವಾಗಿ ಮತ ಚಲಾಯಿಸಿದರು. ದೇಶದ ವಿವಿದೆಡೆಗಳಲ್ಲಿ ಜನರು ಬೀದಿಗಿಳಿದು ಹೋರಾಟ ಆರಂಭಿಸಿದ್ದರು. ಇದರಿಂದ ಬೆದರಿದ ಸರ್ಕಾರ ಮಿಲಿಟರಿ ಆಡಳಿತವನ್ನು ವಾಪಸ್ ಪಡೆದಿದೆ.

ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲು ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಮಂಗಳವಾರ (ಡಿ.3) ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಘೋಷಿಸಿದ್ದರು. ಅಧ್ಯಕ್ಷರ ನಡೆಯ ವಿರುದ್ದ ಸಂಪುಟ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮತ್ತಷ್ಟು ರಾಜಕೀಯ ಬಿಕ್ಕಟ್ಟು ಉಂಟಾಗಲಿದೆ. ಜನಾಕ್ರೋಶ ಭುಗಿಲೇಲಲಿದೆ ಎಂದಿದ್ದರು. ಸಂಪುಟ ಸಚಿವರ ಒತ್ತಡ ಮತ್ತು ಜನಾಕ್ರೋಶಕ್ಕೆ ಅಧ್ಯಕ್ಷರು ಮಣಿದಿದ್ದಾರೆ.

ದೇಶದ ವಿರೋಧ ಪಕ್ಷಗಳು ಸಂಸತ್‌ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿದ್ದ ಅಧ್ಯಕ್ಷ ಸುಕ್‌ ಯೋಲ್‌ ಅವರು, ಮಂಗಳವಾರದಿಂದಲೇ ‘ತುರ್ತು ಮಿಲಿಟರಿ ಆಡಳಿತ’ವನ್ನು ಜಾರಿಗೊಳಿಸಿದ್ದರು.

ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ ಎಂದು ಸುಕ್‌ ಯೋಲ್‌ ಆರೋಪಿಸಿದ್ದರು. ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ ಎಂದು ಟೆಲಿವಿಷನ್‌ ಮೂಲಕ ಅವರು ಹೇಳಿದ್ದರು.

1980ರ ದಶಕದ ಉತ್ತರಾರ್ಧದಲ್ಲಿ ದೇಶದಲ್ಲಿ ಮಿಲಿಟರಿ ಸರ್ವಾಧಿಕಾರವು ಕೊನೆಗೊಂಡ ನಂತರ ದಕ್ಷಿಣ ಕೊರಿಯಾದ ಅಧ್ಯಕ್ಷರು ಇದೇ ಮೊದಲ ಬಾರಿಗೆ ‘ಮಿಲಿಟರಿ ಆಡಳಿತ ಜಾರಿ’ ಮಾಡಿ ಆದೇಶ ಹೊರಡಿಸಿದ್ದರು. ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ತುರ್ತು ಪರಿಸ್ಥಿತಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೋಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

ಮಿಲಿಟರಿ ಆಡಳಿತ ಘೋಷಣೆ ಬಳಿಕ ಏನಾಯಿತು?

ಮಂಗಳವಾರ ರಾತ್ರಿ ಅಧ್ಯಕ್ಷ ತುರ್ತು ಮಿಲಿಟರಿ ಆಡಳಿತ ಘೋಷಣೆ ಮಾಡಿದ ಬೆನ್ನಲ್ಲೇ ಭದ್ರತಾ ಪಡೆಗಳು ರಾಷ್ಟ್ರೀಯ ಅಸೆಂಬ್ಲಿಯ ಬಾಗಿಲನ್ನು ಸೀಲ್ ಮಾಡಿತ್ತು. ಅಸೆಂಬ್ಲಿ ಕಟ್ಟಡದ ಛಾವಣಿಯ ಮೇಲೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಭದ್ರತಾ ಪಡೆಗಳು ಸಂಸದರು ಅಸೆಂಬ್ಲಿ ಪ್ರವೇಶಿಸದಂತೆ ತಡೆಯಲು ಪ್ರಯತ್ನಿಸಿತು. ಆದರೆ, ಸುಮಾರು 190 ಸಂಸದರು ಭದ್ರತಾ ಪಡೆಗಳನ್ನು ಬೇಧಿಸಿ ಅಸೆಂಬ್ಲಿ ಒಳಗೆ ಪ್ರವೇಶಿಸಿದರು. ತುರ್ತು ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ತೆಗೆದು ಹಾಕಲು ಸರ್ವಾನುಮತದಿಂದ ಮತ ಚಲಾಯಿಸಿದರು.

ಅಸೆಂಬ್ಲಿ ಒಳಗೆ ಅಧ್ಯಕ್ಷರ ನಿರ್ಧಾರದ ವಿರುದ್ದ ಸಂಸದರು ಮತ ಚಲಾಯಿಸಿದರೆ, ಹೊರಗಡೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಅಧ್ಯಕ್ಷರ ಬಂಧನಕ್ಕೆ ಒತ್ತಾಯಿಸಿದರು.

ದ. ಕೊರಿಯಾ ರಾಷ್ಟ್ರೀಯ ಅಸೆಂಬ್ಲಿ ಮುಂದೆ ಪ್ರತಿಭಟನೆ ನಡೆಸಿದ ಜನರು

ಬಳಿಕ ಆಕ್ರೋಶಕ್ಕೆ ಮಣಿದ ಅಧ್ಯಕ್ಷ ಯೋಲ್ ತನ್ನ ಆದೇಶವನ್ನು ಹಿಂಪಡೆದರು. ಬಳಿಕ ದೇಶವನ್ನು ಉದ್ದೇಶಿಸಿ ಟೆಲಿವಿಷನ್‌ನಲ್ಲಿ ಮಾತನಾಡಿದ ಅವರು, ಅಸೆಂಬ್ಲಿಯಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಹಿಂಪಡೆಯುವಂತೆ ಮತ ಚಲಾಯಿಸಲಾಗಿದೆ. ಆದ್ದರಿಂದ ನಾವು ಆದೇಶವನ್ನು ಹಿಂಪಡೆಯುತ್ತಿದ್ದೇವೆ” ಎಂದು ತಿಳಿಸಿದರು.

ದಕ್ಷಿಣ ಕೊರಿಯಾದ ಸಂವಿಧಾನದ ಪ್ರಕಾರ, ಮಿಲಿಟರಿ ಆಡಳಿತ ಅಥವಾ ಸಮರ ಕಾನೂನು ಜಾರಿ ಆದೇಶದ ವಿರುದ್ದ ರಾಷ್ಟ್ರೀಯ ಅಸೆಂಬ್ಲಿ ಬಹುಮತದೊಂದಿಗೆ ಮತ ಚಲಾಯಿಸಿದರೆ, ಅದನ್ನು ಗೌರವಿಸಿ ಆದೇಶ ವಾಪಸ್ ಪಡೆಯಬೇಕಿದೆ.

ಅಧ್ಯಕ್ಷರ ಪದಚ್ಯುತಿಗೆ ನಿಲುವಳಿ

ವಿಪಕ್ಷಗಳನ್ನು ಹತ್ತಿಕ್ಕಲು ತುರ್ತುಸ್ಥಿತಿ ಹೇರಲು ವಿಫಲ ಯತ್ನ ನಡೆಸಿದ್ದ ಅಧ್ಯಕ್ಷ ಯೂನ್ ಸುಕ್ ಯೋಲ್ ವಿರುದ್ಧ ಪ್ರತಿಪಕ್ಷಗಳು ವಾಗ್ದಂಡನೆ ಗೊತ್ತುವಳಿ ಮಂಡಿಸಿವೆ. ಇದು ಸಂಸತ್ತಿನಲ್ಲಿ ಶುಕ್ರವಾರ (ಡಿ.6) ಮತಕ್ಕೆ ಹೋಗುವ ಸಂಭವವಿದೆ. ಯೋಲ್ ಅವರ ವಾಗ್ದಂಡನೆಗೆ ಮಾಡಲು ಸಂಸತ್ತಿನ 3ನೇ 2ರಷ್ಟು ಬೆಂಬಲ ಬೇಕಾಗುತ್ತದೆ ಮತ್ತು 9 ಸದಸ್ಯರ ಸಾಂವಿಧಾನಿಕ ನ್ಯಾಯಾಲಯದಲ್ಲಿ ಕನಿಷ್ಠ 6 ನ್ಯಾಯಮೂರ್ತಿಗಳು ಅವರನ್ನು ಅಧಿಕಾರದಿಂದ ತೆಗೆದುಹಾಕಲು ಅದನ್ನು ಬೆಂಬಲಿಸಬೇಕಾಗುತ್ತದೆ. ಪ್ರಮುಖ ವಿರೋಧ ಪಕ್ಷವಾದ ಡೆಮಾಕ್ರಟಿಕ್ ಪಕ್ಷ ಮತ್ತು 5 ಸಣ್ಣ ವಿರೋಧ ಪಕ್ಷಗಳು ವಾಗ್ದಂಡನೆ ಗೊತ್ತುವಳಿ ಸಲ್ಲಿಸಿವೆ.

ಈ ನಡುವೆ, ಯೋಲ್ ಅವರ ಬೆಂಬಲಿಗರು ಹಾಗೂ ಹಲವು ಸಚಿವರು ಪದಚ್ಯುತಿ ಭೀತಿಯಿಂದಾಗಿ ಬುಧವಾರವೇ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಯೋಲ್ ಮಾತ್ರ ಮೌನವಾಗಿದ್ದಾರೆ. ಒಂದು ವೇಳೆ ಯೋಲ್ ಪದಚ್ಯುತಿ ಆದರೆ ಹಾಲಿ ಪ್ರಧಾನಿ ಹಾನ್ ಡಕ್ ಸೂ ಮುಂದಿನ ಅಧ್ಯಕ್ಷರಾಗಲಿದ್ದಾರೆ.

ರಕ್ಷಣಾ ಸಚಿವ ರಾಜೀನಾಮೆ

ಏಕಾಏಕಿ ತುರ್ತು ಮಿಲಿಟರಿ ಆಡಳಿತ ಹೇರಿದ ಅಧ್ಯಕ್ಷ ಯೋನ್ ಸುಕ್ ಯೋಲ್ ಅವರ ನಡೆ ಖಂಡಿಸಿ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ಬುಧವಾರ (ಡಿ.4) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಧ್ಯಕ್ಷ ಯೋಲ್ ಸ್ವೀಕರಿಸಿದ್ದು, ನೂತನ ರಕ್ಷಣಾ ಸಚಿವರಾಗಿ ಸೌದಿ ಅರೇಬಿಯಾದಲ್ಲಿ ದೇಶದ ರಾಯಭಾರಿಯಾಗಿದ್ದ ಚೋಯ್ ಬ್ಯುಂಗ್-ಹ್ಯುಕ್ ಅವರನ್ನು ನೇಮಿಸಿದ್ದಾರೆ.

ಇದನ್ನೂ ಓದಿ : ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...