Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

- Advertisement -
- Advertisement -

ಸಿಯೋಲ್: ಮಿಲಿಟರಿ ಕಾನೂನು ಜಾರಿಗೊಳಿಸಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಯೋಲ್‍ರನ್ನು ದೋಷಾರೋಪಣೆಗೆ ಗುರಿಪಡಿಸುವ ನಿರ್ಣಯಕ್ಕೆ ದೇಶದ ಸಂಸತ್ತು ಅಂಗೀಕಾರ ನೀಡಿದೆ.

ಈ ಮೂಲಕ, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದಕ್ಕಾಗಿ ಯೋಲ್‌ ಅವರ ವಿರುದ್ಧ ವಾಗ್ದಂಡನೆ ಗೊತ್ತುವಳಿಯನ್ನು ಮಂಡಿಸಲಾಗಿತ್ತು. ಅಧ್ಯಕ್ಷರಿಗೆ ವಾಗ್ದಂಡನೆ ವಿಧಿಸಬೇಕೆಂದು ಕೋರಿದ್ದ ಈ ನಿರ್ಣಯದ ಬಗ್ಗೆ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶನಿವಾರ ಕಾವೇರಿದ ಚರ್ಚೆ ನಡೆಯಿತು. ನಂತರ ನಿರ್ಣಯವನ್ನು 204–85 ಮತಗಳಿಂದ ಅಂಗೀಕರಿಸಲಾಯಿತು.

ಯೋಲ್ ಅವರು ಪ್ರತಿನಿಧಿಸುವ ಕನ್ಸರ್ವೇಟಿವ್ ಪೀಪಲ್‌ ಪವರ್ ಪಾರ್ಟಿಯ (ಪಿಪಿಪಿ) ಕೆಲ ಸದಸ್ಯರು ಕೂಡ ನಿರ್ಣಯದ ಪರವಾಗಿಯೇ ಮತ ಚಲಾಯಿಸಿದ್ದಾರೆ.  ಈ ಬೆಳವಣಿಗೆ ಬೆನ್ನಲ್ಲೇ, ಯೋಲ್‌ ಅವರು ಅಧಿಕಾರವನ್ನು ಮೊಟಕುಗೊಳಿಸಲಾಯಿತು. ಪ್ರಧಾನಿ ಹಾನ್‌ ಡಕ್‌–ಸೂ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧ್ಯಕ್ಷರ ಪದಚ್ಯುತಿಯನ್ನು ಅನುಮೋದಿಸಬೇಕೇ ಅಥವಾ ಅಧಿಕಾರವನ್ನು ಪುನಃಸ್ಥಾಪಿಸಬೇಕೇ ಎಂಬುದನ್ನು ಅಲ್ಲಿನ ಸಾಂವಿಧಾನಿಕ ಕೋರ್ಟ್‌ 180 ದಿನಗಳಲ್ಲಿ ನಿರ್ಧರಿಸಬೇಕಿದೆ. ಕೋರ್ಟ್‌ನಲ್ಲಿಯೂ ಪದಚ್ಯುತಿ ಅನುಮೋದನೆಯಾದರೆ, ಆರು ತಿಂಗಳೊಳಗೆ ಪುನಃ ಚುನಾವಣೆ ನಡೆಯಬೇಕಿದೆ.

 

 

 

 

 

 

 

 

ಅಧ್ಯಕ್ಷರ ವಿರುದ್ಧದ ದೋಷಾರೋಪಣೆ ನಿರ್ಣಯವನ್ನು ವಿರೋಧ ಪಕ್ಷಗಳು ಮಂಡಿಸಿದ್ದು 300 ಸಂಸದರಲ್ಲಿ 204 ಸಂಸದರು ನಿರ್ಣಯದ ಪರ ಮತ್ತು 85 ಸಂಸದರು ವಿರುದ್ಧ ಮತ ಹಾಕಿದ್ದಾರೆ. ಮೂವರು ಸಂಸದರು ಮತದಾನಕ್ಕೆ ಹಾಜರಾಗಲಿಲ್ಲ. 8 ಮತಗಳನ್ನು ಅಸಿಂಧುಗೊಳಿಸಲಾಗಿದೆ. ವಾಗ್ದಂಡನೆಗೆ ಗುರಿಪಡಿಸಲು ಕನಿಷ್ಠ 200 ಸದಸ್ಯರ ಬೆಂಬಲ ಅಗತ್ಯವಿತ್ತು. ನಿರ್ಣಯ ತಂದಿರುವ ಪ್ರತಿಪಕ್ಷಗಳ ಸದಸ್ಯ ಬಲ 192 ಆಗಿದ್ದು ನಿರ್ಣಯವು ಅಂಗೀಕಾರವಾಗಬೇಕಾದರೆ ಆಡಳಿತಾರೂಢ ಪಿಪಿಪಿಯ ಕನಿಷ್ಠ 8 ಸದಸ್ಯರ ಬೆಂಬಲವು ಅಗತ್ಯವಿತ್ತು. ನಿರ್ಣಯವನ್ನು ಶನಿವಾರ ಮತಕ್ಕೆ ಹಾಕಿದಾಗ ಪಿಪಿಪಿ ಪಕ್ಷದ 12 ಮಂದಿ ನಿರ್ಣಯದ ಪರ ಮತ ಹಾಕಿದರು. ಇದಕ್ಕೂ ಮುನ್ನ ಡಿಸೆಂಬರ್‌ 7ರಂದು ಇಂತದ್ದೇ ನಿರ್ಣಯಕ್ಕೆ ಮೂರನೇ ಎರಡರಷ್ಟು ಬೆಂಬಲ ಸಿಗದ ಕಾರಣ ಯೋಲ್‌ ಅವರು ಪದಚ್ಯುತಿ ಕ್ರಮದಿಂದ ಪಾರಾಗಿದ್ದರು.

ನಿರ್ಣಯ ಅಂಗೀಕಾರಗೊಂಡಿರುವುದರಿಂದ ಯೂನ್ ಅವರ ಅಧ್ಯಕ್ಷೀಯ ಅಧಿಕಾರ ಮತ್ತು ಕರ್ತವ್ಯಗಳು ಅಮಾನತುಗೊಂಡಿವೆ. ಪ್ರಧಾನಿ ಹ್ಯಾನ್ ಡುಕ್-ಸೂ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಯೂನ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಸಾಂವಿಧಾನಿಕ ಕೋರ್ಟ್ ಪರಿಶೀಲಿಸಿ 180 ದಿನಗಳೊಳಗೆ ತೀರ್ಪು ನೀಡಲಿದೆ. ಅದುವರೆಗೆ ಪ್ರಧಾನಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಯೂನ್ ಅವರ ಪದಚ್ಯುತಿಯನ್ನು ಸಾಂವಿಧಾನಿಕ ನ್ಯಾಯಾಲಯ ಎತ್ತಿಹಿಡಿದರೆ, 60 ದಿನಗಳೊಳಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ.

75 ವರ್ಷದ ಹ್ಯಾನ್ ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ನಾಯಕತ್ವದ ಹುದ್ದೆ ನಿರ್ವಹಿಸಿದ್ದು 2007-08ರಲ್ಲಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅಮೆರಿಕಕ್ಕೆ ರಾಯಭಾರಿಯಾಗಿ, ವಿತ್ತಸಚಿವ, ವಾಣಿಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು 2022ರಲ್ಲಿ ಅಧ್ಯಕ್ಷ ಯೂನ್ ಸುಕ್ ಮತ್ತೆ ಪ್ರಧಾನಿ ಹುದ್ದೆಗೆ ನೇಮಕಗೊಳಿಸಿದ್ದರು.

ಇದನ್ನೂ ಓದಿ...ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...