Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

- Advertisement -
- Advertisement -

ಸಿಯೋಲ್: ಮಿಲಿಟರಿ ಕಾನೂನು ಜಾರಿಗೊಳಿಸಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಯೋಲ್‍ರನ್ನು ದೋಷಾರೋಪಣೆಗೆ ಗುರಿಪಡಿಸುವ ನಿರ್ಣಯಕ್ಕೆ ದೇಶದ ಸಂಸತ್ತು ಅಂಗೀಕಾರ ನೀಡಿದೆ.

ಈ ಮೂಲಕ, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದಕ್ಕಾಗಿ ಯೋಲ್‌ ಅವರ ವಿರುದ್ಧ ವಾಗ್ದಂಡನೆ ಗೊತ್ತುವಳಿಯನ್ನು ಮಂಡಿಸಲಾಗಿತ್ತು. ಅಧ್ಯಕ್ಷರಿಗೆ ವಾಗ್ದಂಡನೆ ವಿಧಿಸಬೇಕೆಂದು ಕೋರಿದ್ದ ಈ ನಿರ್ಣಯದ ಬಗ್ಗೆ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶನಿವಾರ ಕಾವೇರಿದ ಚರ್ಚೆ ನಡೆಯಿತು. ನಂತರ ನಿರ್ಣಯವನ್ನು 204–85 ಮತಗಳಿಂದ ಅಂಗೀಕರಿಸಲಾಯಿತು.

ಯೋಲ್ ಅವರು ಪ್ರತಿನಿಧಿಸುವ ಕನ್ಸರ್ವೇಟಿವ್ ಪೀಪಲ್‌ ಪವರ್ ಪಾರ್ಟಿಯ (ಪಿಪಿಪಿ) ಕೆಲ ಸದಸ್ಯರು ಕೂಡ ನಿರ್ಣಯದ ಪರವಾಗಿಯೇ ಮತ ಚಲಾಯಿಸಿದ್ದಾರೆ.  ಈ ಬೆಳವಣಿಗೆ ಬೆನ್ನಲ್ಲೇ, ಯೋಲ್‌ ಅವರು ಅಧಿಕಾರವನ್ನು ಮೊಟಕುಗೊಳಿಸಲಾಯಿತು. ಪ್ರಧಾನಿ ಹಾನ್‌ ಡಕ್‌–ಸೂ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧ್ಯಕ್ಷರ ಪದಚ್ಯುತಿಯನ್ನು ಅನುಮೋದಿಸಬೇಕೇ ಅಥವಾ ಅಧಿಕಾರವನ್ನು ಪುನಃಸ್ಥಾಪಿಸಬೇಕೇ ಎಂಬುದನ್ನು ಅಲ್ಲಿನ ಸಾಂವಿಧಾನಿಕ ಕೋರ್ಟ್‌ 180 ದಿನಗಳಲ್ಲಿ ನಿರ್ಧರಿಸಬೇಕಿದೆ. ಕೋರ್ಟ್‌ನಲ್ಲಿಯೂ ಪದಚ್ಯುತಿ ಅನುಮೋದನೆಯಾದರೆ, ಆರು ತಿಂಗಳೊಳಗೆ ಪುನಃ ಚುನಾವಣೆ ನಡೆಯಬೇಕಿದೆ.

 

 

 

 

 

 

 

 

ಅಧ್ಯಕ್ಷರ ವಿರುದ್ಧದ ದೋಷಾರೋಪಣೆ ನಿರ್ಣಯವನ್ನು ವಿರೋಧ ಪಕ್ಷಗಳು ಮಂಡಿಸಿದ್ದು 300 ಸಂಸದರಲ್ಲಿ 204 ಸಂಸದರು ನಿರ್ಣಯದ ಪರ ಮತ್ತು 85 ಸಂಸದರು ವಿರುದ್ಧ ಮತ ಹಾಕಿದ್ದಾರೆ. ಮೂವರು ಸಂಸದರು ಮತದಾನಕ್ಕೆ ಹಾಜರಾಗಲಿಲ್ಲ. 8 ಮತಗಳನ್ನು ಅಸಿಂಧುಗೊಳಿಸಲಾಗಿದೆ. ವಾಗ್ದಂಡನೆಗೆ ಗುರಿಪಡಿಸಲು ಕನಿಷ್ಠ 200 ಸದಸ್ಯರ ಬೆಂಬಲ ಅಗತ್ಯವಿತ್ತು. ನಿರ್ಣಯ ತಂದಿರುವ ಪ್ರತಿಪಕ್ಷಗಳ ಸದಸ್ಯ ಬಲ 192 ಆಗಿದ್ದು ನಿರ್ಣಯವು ಅಂಗೀಕಾರವಾಗಬೇಕಾದರೆ ಆಡಳಿತಾರೂಢ ಪಿಪಿಪಿಯ ಕನಿಷ್ಠ 8 ಸದಸ್ಯರ ಬೆಂಬಲವು ಅಗತ್ಯವಿತ್ತು. ನಿರ್ಣಯವನ್ನು ಶನಿವಾರ ಮತಕ್ಕೆ ಹಾಕಿದಾಗ ಪಿಪಿಪಿ ಪಕ್ಷದ 12 ಮಂದಿ ನಿರ್ಣಯದ ಪರ ಮತ ಹಾಕಿದರು. ಇದಕ್ಕೂ ಮುನ್ನ ಡಿಸೆಂಬರ್‌ 7ರಂದು ಇಂತದ್ದೇ ನಿರ್ಣಯಕ್ಕೆ ಮೂರನೇ ಎರಡರಷ್ಟು ಬೆಂಬಲ ಸಿಗದ ಕಾರಣ ಯೋಲ್‌ ಅವರು ಪದಚ್ಯುತಿ ಕ್ರಮದಿಂದ ಪಾರಾಗಿದ್ದರು.

ನಿರ್ಣಯ ಅಂಗೀಕಾರಗೊಂಡಿರುವುದರಿಂದ ಯೂನ್ ಅವರ ಅಧ್ಯಕ್ಷೀಯ ಅಧಿಕಾರ ಮತ್ತು ಕರ್ತವ್ಯಗಳು ಅಮಾನತುಗೊಂಡಿವೆ. ಪ್ರಧಾನಿ ಹ್ಯಾನ್ ಡುಕ್-ಸೂ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಯೂನ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಸಾಂವಿಧಾನಿಕ ಕೋರ್ಟ್ ಪರಿಶೀಲಿಸಿ 180 ದಿನಗಳೊಳಗೆ ತೀರ್ಪು ನೀಡಲಿದೆ. ಅದುವರೆಗೆ ಪ್ರಧಾನಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಯೂನ್ ಅವರ ಪದಚ್ಯುತಿಯನ್ನು ಸಾಂವಿಧಾನಿಕ ನ್ಯಾಯಾಲಯ ಎತ್ತಿಹಿಡಿದರೆ, 60 ದಿನಗಳೊಳಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ.

75 ವರ್ಷದ ಹ್ಯಾನ್ ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ನಾಯಕತ್ವದ ಹುದ್ದೆ ನಿರ್ವಹಿಸಿದ್ದು 2007-08ರಲ್ಲಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅಮೆರಿಕಕ್ಕೆ ರಾಯಭಾರಿಯಾಗಿ, ವಿತ್ತಸಚಿವ, ವಾಣಿಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು 2022ರಲ್ಲಿ ಅಧ್ಯಕ್ಷ ಯೂನ್ ಸುಕ್ ಮತ್ತೆ ಪ್ರಧಾನಿ ಹುದ್ದೆಗೆ ನೇಮಕಗೊಳಿಸಿದ್ದರು.

ಇದನ್ನೂ ಓದಿ...ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...