Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

- Advertisement -
- Advertisement -

ಸಿಯೋಲ್: ಮಿಲಿಟರಿ ಕಾನೂನು ಜಾರಿಗೊಳಿಸಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಯೋಲ್‍ರನ್ನು ದೋಷಾರೋಪಣೆಗೆ ಗುರಿಪಡಿಸುವ ನಿರ್ಣಯಕ್ಕೆ ದೇಶದ ಸಂಸತ್ತು ಅಂಗೀಕಾರ ನೀಡಿದೆ.

ಈ ಮೂಲಕ, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದಕ್ಕಾಗಿ ಯೋಲ್‌ ಅವರ ವಿರುದ್ಧ ವಾಗ್ದಂಡನೆ ಗೊತ್ತುವಳಿಯನ್ನು ಮಂಡಿಸಲಾಗಿತ್ತು. ಅಧ್ಯಕ್ಷರಿಗೆ ವಾಗ್ದಂಡನೆ ವಿಧಿಸಬೇಕೆಂದು ಕೋರಿದ್ದ ಈ ನಿರ್ಣಯದ ಬಗ್ಗೆ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶನಿವಾರ ಕಾವೇರಿದ ಚರ್ಚೆ ನಡೆಯಿತು. ನಂತರ ನಿರ್ಣಯವನ್ನು 204–85 ಮತಗಳಿಂದ ಅಂಗೀಕರಿಸಲಾಯಿತು.

ಯೋಲ್ ಅವರು ಪ್ರತಿನಿಧಿಸುವ ಕನ್ಸರ್ವೇಟಿವ್ ಪೀಪಲ್‌ ಪವರ್ ಪಾರ್ಟಿಯ (ಪಿಪಿಪಿ) ಕೆಲ ಸದಸ್ಯರು ಕೂಡ ನಿರ್ಣಯದ ಪರವಾಗಿಯೇ ಮತ ಚಲಾಯಿಸಿದ್ದಾರೆ.  ಈ ಬೆಳವಣಿಗೆ ಬೆನ್ನಲ್ಲೇ, ಯೋಲ್‌ ಅವರು ಅಧಿಕಾರವನ್ನು ಮೊಟಕುಗೊಳಿಸಲಾಯಿತು. ಪ್ರಧಾನಿ ಹಾನ್‌ ಡಕ್‌–ಸೂ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧ್ಯಕ್ಷರ ಪದಚ್ಯುತಿಯನ್ನು ಅನುಮೋದಿಸಬೇಕೇ ಅಥವಾ ಅಧಿಕಾರವನ್ನು ಪುನಃಸ್ಥಾಪಿಸಬೇಕೇ ಎಂಬುದನ್ನು ಅಲ್ಲಿನ ಸಾಂವಿಧಾನಿಕ ಕೋರ್ಟ್‌ 180 ದಿನಗಳಲ್ಲಿ ನಿರ್ಧರಿಸಬೇಕಿದೆ. ಕೋರ್ಟ್‌ನಲ್ಲಿಯೂ ಪದಚ್ಯುತಿ ಅನುಮೋದನೆಯಾದರೆ, ಆರು ತಿಂಗಳೊಳಗೆ ಪುನಃ ಚುನಾವಣೆ ನಡೆಯಬೇಕಿದೆ.

 

 

 

 

 

 

 

 

ಅಧ್ಯಕ್ಷರ ವಿರುದ್ಧದ ದೋಷಾರೋಪಣೆ ನಿರ್ಣಯವನ್ನು ವಿರೋಧ ಪಕ್ಷಗಳು ಮಂಡಿಸಿದ್ದು 300 ಸಂಸದರಲ್ಲಿ 204 ಸಂಸದರು ನಿರ್ಣಯದ ಪರ ಮತ್ತು 85 ಸಂಸದರು ವಿರುದ್ಧ ಮತ ಹಾಕಿದ್ದಾರೆ. ಮೂವರು ಸಂಸದರು ಮತದಾನಕ್ಕೆ ಹಾಜರಾಗಲಿಲ್ಲ. 8 ಮತಗಳನ್ನು ಅಸಿಂಧುಗೊಳಿಸಲಾಗಿದೆ. ವಾಗ್ದಂಡನೆಗೆ ಗುರಿಪಡಿಸಲು ಕನಿಷ್ಠ 200 ಸದಸ್ಯರ ಬೆಂಬಲ ಅಗತ್ಯವಿತ್ತು. ನಿರ್ಣಯ ತಂದಿರುವ ಪ್ರತಿಪಕ್ಷಗಳ ಸದಸ್ಯ ಬಲ 192 ಆಗಿದ್ದು ನಿರ್ಣಯವು ಅಂಗೀಕಾರವಾಗಬೇಕಾದರೆ ಆಡಳಿತಾರೂಢ ಪಿಪಿಪಿಯ ಕನಿಷ್ಠ 8 ಸದಸ್ಯರ ಬೆಂಬಲವು ಅಗತ್ಯವಿತ್ತು. ನಿರ್ಣಯವನ್ನು ಶನಿವಾರ ಮತಕ್ಕೆ ಹಾಕಿದಾಗ ಪಿಪಿಪಿ ಪಕ್ಷದ 12 ಮಂದಿ ನಿರ್ಣಯದ ಪರ ಮತ ಹಾಕಿದರು. ಇದಕ್ಕೂ ಮುನ್ನ ಡಿಸೆಂಬರ್‌ 7ರಂದು ಇಂತದ್ದೇ ನಿರ್ಣಯಕ್ಕೆ ಮೂರನೇ ಎರಡರಷ್ಟು ಬೆಂಬಲ ಸಿಗದ ಕಾರಣ ಯೋಲ್‌ ಅವರು ಪದಚ್ಯುತಿ ಕ್ರಮದಿಂದ ಪಾರಾಗಿದ್ದರು.

ನಿರ್ಣಯ ಅಂಗೀಕಾರಗೊಂಡಿರುವುದರಿಂದ ಯೂನ್ ಅವರ ಅಧ್ಯಕ್ಷೀಯ ಅಧಿಕಾರ ಮತ್ತು ಕರ್ತವ್ಯಗಳು ಅಮಾನತುಗೊಂಡಿವೆ. ಪ್ರಧಾನಿ ಹ್ಯಾನ್ ಡುಕ್-ಸೂ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಯೂನ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಸಾಂವಿಧಾನಿಕ ಕೋರ್ಟ್ ಪರಿಶೀಲಿಸಿ 180 ದಿನಗಳೊಳಗೆ ತೀರ್ಪು ನೀಡಲಿದೆ. ಅದುವರೆಗೆ ಪ್ರಧಾನಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಯೂನ್ ಅವರ ಪದಚ್ಯುತಿಯನ್ನು ಸಾಂವಿಧಾನಿಕ ನ್ಯಾಯಾಲಯ ಎತ್ತಿಹಿಡಿದರೆ, 60 ದಿನಗಳೊಳಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ.

75 ವರ್ಷದ ಹ್ಯಾನ್ ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ನಾಯಕತ್ವದ ಹುದ್ದೆ ನಿರ್ವಹಿಸಿದ್ದು 2007-08ರಲ್ಲಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅಮೆರಿಕಕ್ಕೆ ರಾಯಭಾರಿಯಾಗಿ, ವಿತ್ತಸಚಿವ, ವಾಣಿಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು 2022ರಲ್ಲಿ ಅಧ್ಯಕ್ಷ ಯೂನ್ ಸುಕ್ ಮತ್ತೆ ಪ್ರಧಾನಿ ಹುದ್ದೆಗೆ ನೇಮಕಗೊಳಿಸಿದ್ದರು.

ಇದನ್ನೂ ಓದಿ...ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...