Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

- Advertisement -
- Advertisement -

ಸಿಯೋಲ್: ಮಿಲಿಟರಿ ಕಾನೂನು ಜಾರಿಗೊಳಿಸಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಯೋಲ್‍ರನ್ನು ದೋಷಾರೋಪಣೆಗೆ ಗುರಿಪಡಿಸುವ ನಿರ್ಣಯಕ್ಕೆ ದೇಶದ ಸಂಸತ್ತು ಅಂಗೀಕಾರ ನೀಡಿದೆ.

ಈ ಮೂಲಕ, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದಕ್ಕಾಗಿ ಯೋಲ್‌ ಅವರ ವಿರುದ್ಧ ವಾಗ್ದಂಡನೆ ಗೊತ್ತುವಳಿಯನ್ನು ಮಂಡಿಸಲಾಗಿತ್ತು. ಅಧ್ಯಕ್ಷರಿಗೆ ವಾಗ್ದಂಡನೆ ವಿಧಿಸಬೇಕೆಂದು ಕೋರಿದ್ದ ಈ ನಿರ್ಣಯದ ಬಗ್ಗೆ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶನಿವಾರ ಕಾವೇರಿದ ಚರ್ಚೆ ನಡೆಯಿತು. ನಂತರ ನಿರ್ಣಯವನ್ನು 204–85 ಮತಗಳಿಂದ ಅಂಗೀಕರಿಸಲಾಯಿತು.

ಯೋಲ್ ಅವರು ಪ್ರತಿನಿಧಿಸುವ ಕನ್ಸರ್ವೇಟಿವ್ ಪೀಪಲ್‌ ಪವರ್ ಪಾರ್ಟಿಯ (ಪಿಪಿಪಿ) ಕೆಲ ಸದಸ್ಯರು ಕೂಡ ನಿರ್ಣಯದ ಪರವಾಗಿಯೇ ಮತ ಚಲಾಯಿಸಿದ್ದಾರೆ.  ಈ ಬೆಳವಣಿಗೆ ಬೆನ್ನಲ್ಲೇ, ಯೋಲ್‌ ಅವರು ಅಧಿಕಾರವನ್ನು ಮೊಟಕುಗೊಳಿಸಲಾಯಿತು. ಪ್ರಧಾನಿ ಹಾನ್‌ ಡಕ್‌–ಸೂ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧ್ಯಕ್ಷರ ಪದಚ್ಯುತಿಯನ್ನು ಅನುಮೋದಿಸಬೇಕೇ ಅಥವಾ ಅಧಿಕಾರವನ್ನು ಪುನಃಸ್ಥಾಪಿಸಬೇಕೇ ಎಂಬುದನ್ನು ಅಲ್ಲಿನ ಸಾಂವಿಧಾನಿಕ ಕೋರ್ಟ್‌ 180 ದಿನಗಳಲ್ಲಿ ನಿರ್ಧರಿಸಬೇಕಿದೆ. ಕೋರ್ಟ್‌ನಲ್ಲಿಯೂ ಪದಚ್ಯುತಿ ಅನುಮೋದನೆಯಾದರೆ, ಆರು ತಿಂಗಳೊಳಗೆ ಪುನಃ ಚುನಾವಣೆ ನಡೆಯಬೇಕಿದೆ.

 

 

 

 

 

 

 

 

ಅಧ್ಯಕ್ಷರ ವಿರುದ್ಧದ ದೋಷಾರೋಪಣೆ ನಿರ್ಣಯವನ್ನು ವಿರೋಧ ಪಕ್ಷಗಳು ಮಂಡಿಸಿದ್ದು 300 ಸಂಸದರಲ್ಲಿ 204 ಸಂಸದರು ನಿರ್ಣಯದ ಪರ ಮತ್ತು 85 ಸಂಸದರು ವಿರುದ್ಧ ಮತ ಹಾಕಿದ್ದಾರೆ. ಮೂವರು ಸಂಸದರು ಮತದಾನಕ್ಕೆ ಹಾಜರಾಗಲಿಲ್ಲ. 8 ಮತಗಳನ್ನು ಅಸಿಂಧುಗೊಳಿಸಲಾಗಿದೆ. ವಾಗ್ದಂಡನೆಗೆ ಗುರಿಪಡಿಸಲು ಕನಿಷ್ಠ 200 ಸದಸ್ಯರ ಬೆಂಬಲ ಅಗತ್ಯವಿತ್ತು. ನಿರ್ಣಯ ತಂದಿರುವ ಪ್ರತಿಪಕ್ಷಗಳ ಸದಸ್ಯ ಬಲ 192 ಆಗಿದ್ದು ನಿರ್ಣಯವು ಅಂಗೀಕಾರವಾಗಬೇಕಾದರೆ ಆಡಳಿತಾರೂಢ ಪಿಪಿಪಿಯ ಕನಿಷ್ಠ 8 ಸದಸ್ಯರ ಬೆಂಬಲವು ಅಗತ್ಯವಿತ್ತು. ನಿರ್ಣಯವನ್ನು ಶನಿವಾರ ಮತಕ್ಕೆ ಹಾಕಿದಾಗ ಪಿಪಿಪಿ ಪಕ್ಷದ 12 ಮಂದಿ ನಿರ್ಣಯದ ಪರ ಮತ ಹಾಕಿದರು. ಇದಕ್ಕೂ ಮುನ್ನ ಡಿಸೆಂಬರ್‌ 7ರಂದು ಇಂತದ್ದೇ ನಿರ್ಣಯಕ್ಕೆ ಮೂರನೇ ಎರಡರಷ್ಟು ಬೆಂಬಲ ಸಿಗದ ಕಾರಣ ಯೋಲ್‌ ಅವರು ಪದಚ್ಯುತಿ ಕ್ರಮದಿಂದ ಪಾರಾಗಿದ್ದರು.

ನಿರ್ಣಯ ಅಂಗೀಕಾರಗೊಂಡಿರುವುದರಿಂದ ಯೂನ್ ಅವರ ಅಧ್ಯಕ್ಷೀಯ ಅಧಿಕಾರ ಮತ್ತು ಕರ್ತವ್ಯಗಳು ಅಮಾನತುಗೊಂಡಿವೆ. ಪ್ರಧಾನಿ ಹ್ಯಾನ್ ಡುಕ್-ಸೂ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಯೂನ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಸಾಂವಿಧಾನಿಕ ಕೋರ್ಟ್ ಪರಿಶೀಲಿಸಿ 180 ದಿನಗಳೊಳಗೆ ತೀರ್ಪು ನೀಡಲಿದೆ. ಅದುವರೆಗೆ ಪ್ರಧಾನಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಯೂನ್ ಅವರ ಪದಚ್ಯುತಿಯನ್ನು ಸಾಂವಿಧಾನಿಕ ನ್ಯಾಯಾಲಯ ಎತ್ತಿಹಿಡಿದರೆ, 60 ದಿನಗಳೊಳಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ.

75 ವರ್ಷದ ಹ್ಯಾನ್ ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ನಾಯಕತ್ವದ ಹುದ್ದೆ ನಿರ್ವಹಿಸಿದ್ದು 2007-08ರಲ್ಲಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅಮೆರಿಕಕ್ಕೆ ರಾಯಭಾರಿಯಾಗಿ, ವಿತ್ತಸಚಿವ, ವಾಣಿಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು 2022ರಲ್ಲಿ ಅಧ್ಯಕ್ಷ ಯೂನ್ ಸುಕ್ ಮತ್ತೆ ಪ್ರಧಾನಿ ಹುದ್ದೆಗೆ ನೇಮಕಗೊಳಿಸಿದ್ದರು.

ಇದನ್ನೂ ಓದಿ...ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...