Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

- Advertisement -
- Advertisement -

ಸಿಯೋಲ್: ಮಿಲಿಟರಿ ಕಾನೂನು ಜಾರಿಗೊಳಿಸಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಯೋಲ್‍ರನ್ನು ದೋಷಾರೋಪಣೆಗೆ ಗುರಿಪಡಿಸುವ ನಿರ್ಣಯಕ್ಕೆ ದೇಶದ ಸಂಸತ್ತು ಅಂಗೀಕಾರ ನೀಡಿದೆ.

ಈ ಮೂಲಕ, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದಕ್ಕಾಗಿ ಯೋಲ್‌ ಅವರ ವಿರುದ್ಧ ವಾಗ್ದಂಡನೆ ಗೊತ್ತುವಳಿಯನ್ನು ಮಂಡಿಸಲಾಗಿತ್ತು. ಅಧ್ಯಕ್ಷರಿಗೆ ವಾಗ್ದಂಡನೆ ವಿಧಿಸಬೇಕೆಂದು ಕೋರಿದ್ದ ಈ ನಿರ್ಣಯದ ಬಗ್ಗೆ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶನಿವಾರ ಕಾವೇರಿದ ಚರ್ಚೆ ನಡೆಯಿತು. ನಂತರ ನಿರ್ಣಯವನ್ನು 204–85 ಮತಗಳಿಂದ ಅಂಗೀಕರಿಸಲಾಯಿತು.

ಯೋಲ್ ಅವರು ಪ್ರತಿನಿಧಿಸುವ ಕನ್ಸರ್ವೇಟಿವ್ ಪೀಪಲ್‌ ಪವರ್ ಪಾರ್ಟಿಯ (ಪಿಪಿಪಿ) ಕೆಲ ಸದಸ್ಯರು ಕೂಡ ನಿರ್ಣಯದ ಪರವಾಗಿಯೇ ಮತ ಚಲಾಯಿಸಿದ್ದಾರೆ.  ಈ ಬೆಳವಣಿಗೆ ಬೆನ್ನಲ್ಲೇ, ಯೋಲ್‌ ಅವರು ಅಧಿಕಾರವನ್ನು ಮೊಟಕುಗೊಳಿಸಲಾಯಿತು. ಪ್ರಧಾನಿ ಹಾನ್‌ ಡಕ್‌–ಸೂ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧ್ಯಕ್ಷರ ಪದಚ್ಯುತಿಯನ್ನು ಅನುಮೋದಿಸಬೇಕೇ ಅಥವಾ ಅಧಿಕಾರವನ್ನು ಪುನಃಸ್ಥಾಪಿಸಬೇಕೇ ಎಂಬುದನ್ನು ಅಲ್ಲಿನ ಸಾಂವಿಧಾನಿಕ ಕೋರ್ಟ್‌ 180 ದಿನಗಳಲ್ಲಿ ನಿರ್ಧರಿಸಬೇಕಿದೆ. ಕೋರ್ಟ್‌ನಲ್ಲಿಯೂ ಪದಚ್ಯುತಿ ಅನುಮೋದನೆಯಾದರೆ, ಆರು ತಿಂಗಳೊಳಗೆ ಪುನಃ ಚುನಾವಣೆ ನಡೆಯಬೇಕಿದೆ.

 

 

 

 

 

 

 

 

ಅಧ್ಯಕ್ಷರ ವಿರುದ್ಧದ ದೋಷಾರೋಪಣೆ ನಿರ್ಣಯವನ್ನು ವಿರೋಧ ಪಕ್ಷಗಳು ಮಂಡಿಸಿದ್ದು 300 ಸಂಸದರಲ್ಲಿ 204 ಸಂಸದರು ನಿರ್ಣಯದ ಪರ ಮತ್ತು 85 ಸಂಸದರು ವಿರುದ್ಧ ಮತ ಹಾಕಿದ್ದಾರೆ. ಮೂವರು ಸಂಸದರು ಮತದಾನಕ್ಕೆ ಹಾಜರಾಗಲಿಲ್ಲ. 8 ಮತಗಳನ್ನು ಅಸಿಂಧುಗೊಳಿಸಲಾಗಿದೆ. ವಾಗ್ದಂಡನೆಗೆ ಗುರಿಪಡಿಸಲು ಕನಿಷ್ಠ 200 ಸದಸ್ಯರ ಬೆಂಬಲ ಅಗತ್ಯವಿತ್ತು. ನಿರ್ಣಯ ತಂದಿರುವ ಪ್ರತಿಪಕ್ಷಗಳ ಸದಸ್ಯ ಬಲ 192 ಆಗಿದ್ದು ನಿರ್ಣಯವು ಅಂಗೀಕಾರವಾಗಬೇಕಾದರೆ ಆಡಳಿತಾರೂಢ ಪಿಪಿಪಿಯ ಕನಿಷ್ಠ 8 ಸದಸ್ಯರ ಬೆಂಬಲವು ಅಗತ್ಯವಿತ್ತು. ನಿರ್ಣಯವನ್ನು ಶನಿವಾರ ಮತಕ್ಕೆ ಹಾಕಿದಾಗ ಪಿಪಿಪಿ ಪಕ್ಷದ 12 ಮಂದಿ ನಿರ್ಣಯದ ಪರ ಮತ ಹಾಕಿದರು. ಇದಕ್ಕೂ ಮುನ್ನ ಡಿಸೆಂಬರ್‌ 7ರಂದು ಇಂತದ್ದೇ ನಿರ್ಣಯಕ್ಕೆ ಮೂರನೇ ಎರಡರಷ್ಟು ಬೆಂಬಲ ಸಿಗದ ಕಾರಣ ಯೋಲ್‌ ಅವರು ಪದಚ್ಯುತಿ ಕ್ರಮದಿಂದ ಪಾರಾಗಿದ್ದರು.

ನಿರ್ಣಯ ಅಂಗೀಕಾರಗೊಂಡಿರುವುದರಿಂದ ಯೂನ್ ಅವರ ಅಧ್ಯಕ್ಷೀಯ ಅಧಿಕಾರ ಮತ್ತು ಕರ್ತವ್ಯಗಳು ಅಮಾನತುಗೊಂಡಿವೆ. ಪ್ರಧಾನಿ ಹ್ಯಾನ್ ಡುಕ್-ಸೂ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಯೂನ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಸಾಂವಿಧಾನಿಕ ಕೋರ್ಟ್ ಪರಿಶೀಲಿಸಿ 180 ದಿನಗಳೊಳಗೆ ತೀರ್ಪು ನೀಡಲಿದೆ. ಅದುವರೆಗೆ ಪ್ರಧಾನಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಯೂನ್ ಅವರ ಪದಚ್ಯುತಿಯನ್ನು ಸಾಂವಿಧಾನಿಕ ನ್ಯಾಯಾಲಯ ಎತ್ತಿಹಿಡಿದರೆ, 60 ದಿನಗಳೊಳಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ.

75 ವರ್ಷದ ಹ್ಯಾನ್ ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ನಾಯಕತ್ವದ ಹುದ್ದೆ ನಿರ್ವಹಿಸಿದ್ದು 2007-08ರಲ್ಲಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅಮೆರಿಕಕ್ಕೆ ರಾಯಭಾರಿಯಾಗಿ, ವಿತ್ತಸಚಿವ, ವಾಣಿಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು 2022ರಲ್ಲಿ ಅಧ್ಯಕ್ಷ ಯೂನ್ ಸುಕ್ ಮತ್ತೆ ಪ್ರಧಾನಿ ಹುದ್ದೆಗೆ ನೇಮಕಗೊಳಿಸಿದ್ದರು.

ಇದನ್ನೂ ಓದಿ...ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...