Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

ದಕ್ಷಿಣ ಕೊರಿಯಾ ಅಧ್ಯಕ್ಷರ ಪದಚ್ಯುತಿ: ಮಧ್ಯಂತರ ಅಧ್ಯಕ್ಷರಾಗಿ ಪ್ರಧಾನಿ ಹ್ಯಾನ್ ಡುಕ್

- Advertisement -
- Advertisement -

ಸಿಯೋಲ್: ಮಿಲಿಟರಿ ಕಾನೂನು ಜಾರಿಗೊಳಿಸಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೆಯೋಲ್‍ರನ್ನು ದೋಷಾರೋಪಣೆಗೆ ಗುರಿಪಡಿಸುವ ನಿರ್ಣಯಕ್ಕೆ ದೇಶದ ಸಂಸತ್ತು ಅಂಗೀಕಾರ ನೀಡಿದೆ.

ಈ ಮೂಲಕ, ದೇಶದಲ್ಲಿ ಮಿಲಿಟರಿ ಆಡಳಿತ ಜಾರಿಗೊಳಿಸಿದ್ದಕ್ಕಾಗಿ ಯೋಲ್‌ ಅವರ ವಿರುದ್ಧ ವಾಗ್ದಂಡನೆ ಗೊತ್ತುವಳಿಯನ್ನು ಮಂಡಿಸಲಾಗಿತ್ತು. ಅಧ್ಯಕ್ಷರಿಗೆ ವಾಗ್ದಂಡನೆ ವಿಧಿಸಬೇಕೆಂದು ಕೋರಿದ್ದ ಈ ನಿರ್ಣಯದ ಬಗ್ಗೆ, ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಶನಿವಾರ ಕಾವೇರಿದ ಚರ್ಚೆ ನಡೆಯಿತು. ನಂತರ ನಿರ್ಣಯವನ್ನು 204–85 ಮತಗಳಿಂದ ಅಂಗೀಕರಿಸಲಾಯಿತು.

ಯೋಲ್ ಅವರು ಪ್ರತಿನಿಧಿಸುವ ಕನ್ಸರ್ವೇಟಿವ್ ಪೀಪಲ್‌ ಪವರ್ ಪಾರ್ಟಿಯ (ಪಿಪಿಪಿ) ಕೆಲ ಸದಸ್ಯರು ಕೂಡ ನಿರ್ಣಯದ ಪರವಾಗಿಯೇ ಮತ ಚಲಾಯಿಸಿದ್ದಾರೆ.  ಈ ಬೆಳವಣಿಗೆ ಬೆನ್ನಲ್ಲೇ, ಯೋಲ್‌ ಅವರು ಅಧಿಕಾರವನ್ನು ಮೊಟಕುಗೊಳಿಸಲಾಯಿತು. ಪ್ರಧಾನಿ ಹಾನ್‌ ಡಕ್‌–ಸೂ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಧ್ಯಕ್ಷರ ಪದಚ್ಯುತಿಯನ್ನು ಅನುಮೋದಿಸಬೇಕೇ ಅಥವಾ ಅಧಿಕಾರವನ್ನು ಪುನಃಸ್ಥಾಪಿಸಬೇಕೇ ಎಂಬುದನ್ನು ಅಲ್ಲಿನ ಸಾಂವಿಧಾನಿಕ ಕೋರ್ಟ್‌ 180 ದಿನಗಳಲ್ಲಿ ನಿರ್ಧರಿಸಬೇಕಿದೆ. ಕೋರ್ಟ್‌ನಲ್ಲಿಯೂ ಪದಚ್ಯುತಿ ಅನುಮೋದನೆಯಾದರೆ, ಆರು ತಿಂಗಳೊಳಗೆ ಪುನಃ ಚುನಾವಣೆ ನಡೆಯಬೇಕಿದೆ.

 

 

 

 

 

 

 

 

ಅಧ್ಯಕ್ಷರ ವಿರುದ್ಧದ ದೋಷಾರೋಪಣೆ ನಿರ್ಣಯವನ್ನು ವಿರೋಧ ಪಕ್ಷಗಳು ಮಂಡಿಸಿದ್ದು 300 ಸಂಸದರಲ್ಲಿ 204 ಸಂಸದರು ನಿರ್ಣಯದ ಪರ ಮತ್ತು 85 ಸಂಸದರು ವಿರುದ್ಧ ಮತ ಹಾಕಿದ್ದಾರೆ. ಮೂವರು ಸಂಸದರು ಮತದಾನಕ್ಕೆ ಹಾಜರಾಗಲಿಲ್ಲ. 8 ಮತಗಳನ್ನು ಅಸಿಂಧುಗೊಳಿಸಲಾಗಿದೆ. ವಾಗ್ದಂಡನೆಗೆ ಗುರಿಪಡಿಸಲು ಕನಿಷ್ಠ 200 ಸದಸ್ಯರ ಬೆಂಬಲ ಅಗತ್ಯವಿತ್ತು. ನಿರ್ಣಯ ತಂದಿರುವ ಪ್ರತಿಪಕ್ಷಗಳ ಸದಸ್ಯ ಬಲ 192 ಆಗಿದ್ದು ನಿರ್ಣಯವು ಅಂಗೀಕಾರವಾಗಬೇಕಾದರೆ ಆಡಳಿತಾರೂಢ ಪಿಪಿಪಿಯ ಕನಿಷ್ಠ 8 ಸದಸ್ಯರ ಬೆಂಬಲವು ಅಗತ್ಯವಿತ್ತು. ನಿರ್ಣಯವನ್ನು ಶನಿವಾರ ಮತಕ್ಕೆ ಹಾಕಿದಾಗ ಪಿಪಿಪಿ ಪಕ್ಷದ 12 ಮಂದಿ ನಿರ್ಣಯದ ಪರ ಮತ ಹಾಕಿದರು. ಇದಕ್ಕೂ ಮುನ್ನ ಡಿಸೆಂಬರ್‌ 7ರಂದು ಇಂತದ್ದೇ ನಿರ್ಣಯಕ್ಕೆ ಮೂರನೇ ಎರಡರಷ್ಟು ಬೆಂಬಲ ಸಿಗದ ಕಾರಣ ಯೋಲ್‌ ಅವರು ಪದಚ್ಯುತಿ ಕ್ರಮದಿಂದ ಪಾರಾಗಿದ್ದರು.

ನಿರ್ಣಯ ಅಂಗೀಕಾರಗೊಂಡಿರುವುದರಿಂದ ಯೂನ್ ಅವರ ಅಧ್ಯಕ್ಷೀಯ ಅಧಿಕಾರ ಮತ್ತು ಕರ್ತವ್ಯಗಳು ಅಮಾನತುಗೊಂಡಿವೆ. ಪ್ರಧಾನಿ ಹ್ಯಾನ್ ಡುಕ್-ಸೂ ಅವರನ್ನು ಮಧ್ಯಂತರ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ಯೂನ್ ಅವರನ್ನು ಪದಚ್ಯುತಗೊಳಿಸುವ ನಿರ್ಣಯವನ್ನು ಸಾಂವಿಧಾನಿಕ ಕೋರ್ಟ್ ಪರಿಶೀಲಿಸಿ 180 ದಿನಗಳೊಳಗೆ ತೀರ್ಪು ನೀಡಲಿದೆ. ಅದುವರೆಗೆ ಪ್ರಧಾನಿ ಮಧ್ಯಂತರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಯೂನ್ ಅವರ ಪದಚ್ಯುತಿಯನ್ನು ಸಾಂವಿಧಾನಿಕ ನ್ಯಾಯಾಲಯ ಎತ್ತಿಹಿಡಿದರೆ, 60 ದಿನಗಳೊಳಗೆ ಅಧ್ಯಕ್ಷೀಯ ಚುನಾವಣೆ ನಡೆಯುತ್ತದೆ.

75 ವರ್ಷದ ಹ್ಯಾನ್ ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ನಾಯಕತ್ವದ ಹುದ್ದೆ ನಿರ್ವಹಿಸಿದ್ದು 2007-08ರಲ್ಲಿ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಅಮೆರಿಕಕ್ಕೆ ರಾಯಭಾರಿಯಾಗಿ, ವಿತ್ತಸಚಿವ, ವಾಣಿಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದು 2022ರಲ್ಲಿ ಅಧ್ಯಕ್ಷ ಯೂನ್ ಸುಕ್ ಮತ್ತೆ ಪ್ರಧಾನಿ ಹುದ್ದೆಗೆ ನೇಮಕಗೊಳಿಸಿದ್ದರು.

ಇದನ್ನೂ ಓದಿ...ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...