Homeಮುಖಪುಟದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

- Advertisement -
- Advertisement -

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿ ಜನಾಕ್ರೋಶದ ಬಳಿಕ ವಾಪಸ್ ಪಡೆಯುವ ಮೂಲಕ ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ಬಂಧನ ವಾರೆಂಟ್ ಹಿನ್ನೆಲೆ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲು ಈ ಹಿಂದೆ (ಜ.3) ಅಧಿಕಾರಿಗಳು ಪ್ರಯತ್ನಿಸಿದ್ದರು. ಆದರೆ, ಅದು ವಿಫಲವಾಗಿತ್ತು. ಪ್ರಧಾನಿ ನಿವಾಸದ ಬಳಿಗೆ ಅಧಿಕಾರಿಗಳು ಬಂದಾಗ, ಯೋಲ್ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿ ತಡೆಯೊಡ್ಡಿದ್ದರು.

ಆ ಬಳಿಕ ಯೋಲ್ ಕಡೆಯವರು ಮತ್ತು ಅಧಿಕಾರಿಗಳ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಬಂಧನ ವಾರೆಂಟ್ ಕಾನೂನುಬಾಹಿರ ಎಂಬ ಯೋಲ್ ವಾದವನ್ನೂ ನ್ಯಾಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು. ಇದೀಗ ಕೊನೆಗೂ ಯೋಲ್ ಬಂಧನವಾಗಿದೆ ಎಂದು ವರದಿಯಾಗಿದೆ.

ಯೂನ್ ಸುಕ್ ಯೋಲ್ ಬಂಧನದ ಮೂಲಕ ದಕ್ಷಿಣ ಕೊರಿಯಾದ ಇತಿಹಾಸದಲ್ಲೇ ಮೊದಲ ಬಾರಿಗೆ ಅಧ್ಯಕ್ಷರೊಬ್ಬರ ಬಂಧನವಾದಂತಾಗಿದೆ.

ತನ್ನ ಅಧಿಕಾರ ಉಳಿಸಿಕೊಳ್ಳಲು ಮತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹಠಾತ್ ಮಿಲಿಟರಿ ಆಡಳಿತ ಜಾರಿಗೊಳಿಸುವ ಮೂಲಕ ಯೂನ್ ಸುಕ್ ಯೋಲ್ ಅವರು ದೇಶದಲ್ಲಿ ದಂಗೆ ಉಂಟಾಗಲು ಕಾರಣರಾಗಿದ್ದಾರೆ ಎಂಬ ಆರೋಪವಿದೆ. ಈ ಆರೋಪ ಸಾಬೀತಾದರೆ ಅವರಿಗೆ ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆಯಾಗಬಹುದು ಎಂದು ವರದಿಗಳು ಹೇಳಿವೆ.

ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿಯಾದ ಬಳಿಕ, ಅಧ್ಯಕ್ಷರ ನಿವಾಸದಲ್ಲಿ ಯೋಲ್ ಅವಿತುಕೊಂಡಿದ್ದರು. ಅವರ ಬಂಧನಕ್ಕೆ ಅಧಿಕಾರಿಗಳು ಪ್ರಯತ್ನಿಸಿದರೂ ಅಧ್ಯಕ್ಷೀಯ ಭದ್ರತಾ ಸೇವೆಯ (ಪಿಎಸ್‌ಎಸ್) ಸಿಬ್ಬಂದಿ ಅವಕಾಶ ನೀಡುತ್ತಿರಲಿಲ್ಲ. ಇದರ ಜೊತೆಗೆ ಯೋಲ್ ಬೆಂಬಲಿಗರು ಕೂಡ ಮನೆ ಬಳಿ ಜಮಾಯಿಸಿದ್ದರು.

ಇಂದು (ಜ.15) ಬೆಳಗಿನ ಜಾವಕ್ಕೆ ಮುನ್ನ, ಭ್ರಷ್ಟಾಚಾರ ತನಿಖಾ ಕಚೇರಿಯ ನೂರಾರು ಪೊಲೀಸ್ ಮತ್ತು ತನಿಖಾಧಿಕಾರಿಗಳು ಮತ್ತೆ ಯೋಲ್ ನಿವಾಸವನ್ನು ಸುತ್ತುವರೆದರು. ಕೆಲವರು ಹಿಂದಿನ ಭಾಗದಲ್ಲಿ ಕಾಂಪೌಂಡ್ ಗೋಡೆ ಹತ್ತಿ ಮುಖ್ಯ ಕಟ್ಟಡ ತಲುಪಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಮುಂದಾದರು. ಸುಮಾರು ಐದು ಗಂಟೆಗಳ ಕಾಲ ನಡೆದ ತಿಕ್ಕಾಟದ ನಂತರ, ಅಧಿಕಾರಿಗಳು ಯೋಲ್ ಅವರನ್ನು ಬಂಧಿಸಿಲಾಗಿದೆ ಎಂದು ಘೋಷಿಸಿದರು ಎಂದು ವರದಿಗಳು ವಿವರಿಸಿವೆ.

ಬಂಧನದ ಬಳಿಕ ಯೋಲ್ ಅವರನ್ನು ಬೆಂಗಾವಲು ಪಡೆಯೊಂದಿಗೆ ಭ್ರಷ್ಟಾಚಾರ ತನಿಖಾ ಕಚೇರಿಗೆ ಕರೆದೊಯ್ಯಲಾಯಿತು. ಅಲ್ಲಿ ಅಧಿಕಾರಿಗಳು ಯೋಲ್ ಅವರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಅವರು ಮೌನವಾಗಿ ಕುಳಿತಿದ್ದು, ಏನೂ ಮಾತನಾಡುತ್ತಿಲ್ಲ ಎಂದು ವರದಿಗಳು ಹೇಳಿವೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...