Homeಮುಖಪುಟದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

- Advertisement -
- Advertisement -

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿ ಜನಾಕ್ರೋಶದ ಬಳಿಕ ವಾಪಸ್ ಪಡೆಯುವ ಮೂಲಕ ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ಬಂಧನ ವಾರೆಂಟ್ ಹಿನ್ನೆಲೆ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲು ಈ ಹಿಂದೆ (ಜ.3) ಅಧಿಕಾರಿಗಳು ಪ್ರಯತ್ನಿಸಿದ್ದರು. ಆದರೆ, ಅದು ವಿಫಲವಾಗಿತ್ತು. ಪ್ರಧಾನಿ ನಿವಾಸದ ಬಳಿಗೆ ಅಧಿಕಾರಿಗಳು ಬಂದಾಗ, ಯೋಲ್ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿ ತಡೆಯೊಡ್ಡಿದ್ದರು.

ಆ ಬಳಿಕ ಯೋಲ್ ಕಡೆಯವರು ಮತ್ತು ಅಧಿಕಾರಿಗಳ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಬಂಧನ ವಾರೆಂಟ್ ಕಾನೂನುಬಾಹಿರ ಎಂಬ ಯೋಲ್ ವಾದವನ್ನೂ ನ್ಯಾಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು. ಇದೀಗ ಕೊನೆಗೂ ಯೋಲ್ ಬಂಧನವಾಗಿದೆ ಎಂದು ವರದಿಯಾಗಿದೆ.

ಯೂನ್ ಸುಕ್ ಯೋಲ್ ಬಂಧನದ ಮೂಲಕ ದಕ್ಷಿಣ ಕೊರಿಯಾದ ಇತಿಹಾಸದಲ್ಲೇ ಮೊದಲ ಬಾರಿಗೆ ಅಧ್ಯಕ್ಷರೊಬ್ಬರ ಬಂಧನವಾದಂತಾಗಿದೆ.

ತನ್ನ ಅಧಿಕಾರ ಉಳಿಸಿಕೊಳ್ಳಲು ಮತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹಠಾತ್ ಮಿಲಿಟರಿ ಆಡಳಿತ ಜಾರಿಗೊಳಿಸುವ ಮೂಲಕ ಯೂನ್ ಸುಕ್ ಯೋಲ್ ಅವರು ದೇಶದಲ್ಲಿ ದಂಗೆ ಉಂಟಾಗಲು ಕಾರಣರಾಗಿದ್ದಾರೆ ಎಂಬ ಆರೋಪವಿದೆ. ಈ ಆರೋಪ ಸಾಬೀತಾದರೆ ಅವರಿಗೆ ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆಯಾಗಬಹುದು ಎಂದು ವರದಿಗಳು ಹೇಳಿವೆ.

ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿಯಾದ ಬಳಿಕ, ಅಧ್ಯಕ್ಷರ ನಿವಾಸದಲ್ಲಿ ಯೋಲ್ ಅವಿತುಕೊಂಡಿದ್ದರು. ಅವರ ಬಂಧನಕ್ಕೆ ಅಧಿಕಾರಿಗಳು ಪ್ರಯತ್ನಿಸಿದರೂ ಅಧ್ಯಕ್ಷೀಯ ಭದ್ರತಾ ಸೇವೆಯ (ಪಿಎಸ್‌ಎಸ್) ಸಿಬ್ಬಂದಿ ಅವಕಾಶ ನೀಡುತ್ತಿರಲಿಲ್ಲ. ಇದರ ಜೊತೆಗೆ ಯೋಲ್ ಬೆಂಬಲಿಗರು ಕೂಡ ಮನೆ ಬಳಿ ಜಮಾಯಿಸಿದ್ದರು.

ಇಂದು (ಜ.15) ಬೆಳಗಿನ ಜಾವಕ್ಕೆ ಮುನ್ನ, ಭ್ರಷ್ಟಾಚಾರ ತನಿಖಾ ಕಚೇರಿಯ ನೂರಾರು ಪೊಲೀಸ್ ಮತ್ತು ತನಿಖಾಧಿಕಾರಿಗಳು ಮತ್ತೆ ಯೋಲ್ ನಿವಾಸವನ್ನು ಸುತ್ತುವರೆದರು. ಕೆಲವರು ಹಿಂದಿನ ಭಾಗದಲ್ಲಿ ಕಾಂಪೌಂಡ್ ಗೋಡೆ ಹತ್ತಿ ಮುಖ್ಯ ಕಟ್ಟಡ ತಲುಪಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಮುಂದಾದರು. ಸುಮಾರು ಐದು ಗಂಟೆಗಳ ಕಾಲ ನಡೆದ ತಿಕ್ಕಾಟದ ನಂತರ, ಅಧಿಕಾರಿಗಳು ಯೋಲ್ ಅವರನ್ನು ಬಂಧಿಸಿಲಾಗಿದೆ ಎಂದು ಘೋಷಿಸಿದರು ಎಂದು ವರದಿಗಳು ವಿವರಿಸಿವೆ.

ಬಂಧನದ ಬಳಿಕ ಯೋಲ್ ಅವರನ್ನು ಬೆಂಗಾವಲು ಪಡೆಯೊಂದಿಗೆ ಭ್ರಷ್ಟಾಚಾರ ತನಿಖಾ ಕಚೇರಿಗೆ ಕರೆದೊಯ್ಯಲಾಯಿತು. ಅಲ್ಲಿ ಅಧಿಕಾರಿಗಳು ಯೋಲ್ ಅವರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಅವರು ಮೌನವಾಗಿ ಕುಳಿತಿದ್ದು, ಏನೂ ಮಾತನಾಡುತ್ತಿಲ್ಲ ಎಂದು ವರದಿಗಳು ಹೇಳಿವೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...