Homeಮುಖಪುಟದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

- Advertisement -
- Advertisement -

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿ ಜನಾಕ್ರೋಶದ ಬಳಿಕ ವಾಪಸ್ ಪಡೆಯುವ ಮೂಲಕ ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ಬಂಧನ ವಾರೆಂಟ್ ಹಿನ್ನೆಲೆ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲು ಈ ಹಿಂದೆ (ಜ.3) ಅಧಿಕಾರಿಗಳು ಪ್ರಯತ್ನಿಸಿದ್ದರು. ಆದರೆ, ಅದು ವಿಫಲವಾಗಿತ್ತು. ಪ್ರಧಾನಿ ನಿವಾಸದ ಬಳಿಗೆ ಅಧಿಕಾರಿಗಳು ಬಂದಾಗ, ಯೋಲ್ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿ ತಡೆಯೊಡ್ಡಿದ್ದರು.

ಆ ಬಳಿಕ ಯೋಲ್ ಕಡೆಯವರು ಮತ್ತು ಅಧಿಕಾರಿಗಳ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಬಂಧನ ವಾರೆಂಟ್ ಕಾನೂನುಬಾಹಿರ ಎಂಬ ಯೋಲ್ ವಾದವನ್ನೂ ನ್ಯಾಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು. ಇದೀಗ ಕೊನೆಗೂ ಯೋಲ್ ಬಂಧನವಾಗಿದೆ ಎಂದು ವರದಿಯಾಗಿದೆ.

ಯೂನ್ ಸುಕ್ ಯೋಲ್ ಬಂಧನದ ಮೂಲಕ ದಕ್ಷಿಣ ಕೊರಿಯಾದ ಇತಿಹಾಸದಲ್ಲೇ ಮೊದಲ ಬಾರಿಗೆ ಅಧ್ಯಕ್ಷರೊಬ್ಬರ ಬಂಧನವಾದಂತಾಗಿದೆ.

ತನ್ನ ಅಧಿಕಾರ ಉಳಿಸಿಕೊಳ್ಳಲು ಮತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹಠಾತ್ ಮಿಲಿಟರಿ ಆಡಳಿತ ಜಾರಿಗೊಳಿಸುವ ಮೂಲಕ ಯೂನ್ ಸುಕ್ ಯೋಲ್ ಅವರು ದೇಶದಲ್ಲಿ ದಂಗೆ ಉಂಟಾಗಲು ಕಾರಣರಾಗಿದ್ದಾರೆ ಎಂಬ ಆರೋಪವಿದೆ. ಈ ಆರೋಪ ಸಾಬೀತಾದರೆ ಅವರಿಗೆ ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆಯಾಗಬಹುದು ಎಂದು ವರದಿಗಳು ಹೇಳಿವೆ.

ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿಯಾದ ಬಳಿಕ, ಅಧ್ಯಕ್ಷರ ನಿವಾಸದಲ್ಲಿ ಯೋಲ್ ಅವಿತುಕೊಂಡಿದ್ದರು. ಅವರ ಬಂಧನಕ್ಕೆ ಅಧಿಕಾರಿಗಳು ಪ್ರಯತ್ನಿಸಿದರೂ ಅಧ್ಯಕ್ಷೀಯ ಭದ್ರತಾ ಸೇವೆಯ (ಪಿಎಸ್‌ಎಸ್) ಸಿಬ್ಬಂದಿ ಅವಕಾಶ ನೀಡುತ್ತಿರಲಿಲ್ಲ. ಇದರ ಜೊತೆಗೆ ಯೋಲ್ ಬೆಂಬಲಿಗರು ಕೂಡ ಮನೆ ಬಳಿ ಜಮಾಯಿಸಿದ್ದರು.

ಇಂದು (ಜ.15) ಬೆಳಗಿನ ಜಾವಕ್ಕೆ ಮುನ್ನ, ಭ್ರಷ್ಟಾಚಾರ ತನಿಖಾ ಕಚೇರಿಯ ನೂರಾರು ಪೊಲೀಸ್ ಮತ್ತು ತನಿಖಾಧಿಕಾರಿಗಳು ಮತ್ತೆ ಯೋಲ್ ನಿವಾಸವನ್ನು ಸುತ್ತುವರೆದರು. ಕೆಲವರು ಹಿಂದಿನ ಭಾಗದಲ್ಲಿ ಕಾಂಪೌಂಡ್ ಗೋಡೆ ಹತ್ತಿ ಮುಖ್ಯ ಕಟ್ಟಡ ತಲುಪಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಮುಂದಾದರು. ಸುಮಾರು ಐದು ಗಂಟೆಗಳ ಕಾಲ ನಡೆದ ತಿಕ್ಕಾಟದ ನಂತರ, ಅಧಿಕಾರಿಗಳು ಯೋಲ್ ಅವರನ್ನು ಬಂಧಿಸಿಲಾಗಿದೆ ಎಂದು ಘೋಷಿಸಿದರು ಎಂದು ವರದಿಗಳು ವಿವರಿಸಿವೆ.

ಬಂಧನದ ಬಳಿಕ ಯೋಲ್ ಅವರನ್ನು ಬೆಂಗಾವಲು ಪಡೆಯೊಂದಿಗೆ ಭ್ರಷ್ಟಾಚಾರ ತನಿಖಾ ಕಚೇರಿಗೆ ಕರೆದೊಯ್ಯಲಾಯಿತು. ಅಲ್ಲಿ ಅಧಿಕಾರಿಗಳು ಯೋಲ್ ಅವರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಅವರು ಮೌನವಾಗಿ ಕುಳಿತಿದ್ದು, ಏನೂ ಮಾತನಾಡುತ್ತಿಲ್ಲ ಎಂದು ವರದಿಗಳು ಹೇಳಿವೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...