Homeಮುಖಪುಟದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

- Advertisement -
- Advertisement -

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿ ಜನಾಕ್ರೋಶದ ಬಳಿಕ ವಾಪಸ್ ಪಡೆಯುವ ಮೂಲಕ ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ಬಂಧನ ವಾರೆಂಟ್ ಹಿನ್ನೆಲೆ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲು ಈ ಹಿಂದೆ (ಜ.3) ಅಧಿಕಾರಿಗಳು ಪ್ರಯತ್ನಿಸಿದ್ದರು. ಆದರೆ, ಅದು ವಿಫಲವಾಗಿತ್ತು. ಪ್ರಧಾನಿ ನಿವಾಸದ ಬಳಿಗೆ ಅಧಿಕಾರಿಗಳು ಬಂದಾಗ, ಯೋಲ್ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿ ತಡೆಯೊಡ್ಡಿದ್ದರು.

ಆ ಬಳಿಕ ಯೋಲ್ ಕಡೆಯವರು ಮತ್ತು ಅಧಿಕಾರಿಗಳ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಬಂಧನ ವಾರೆಂಟ್ ಕಾನೂನುಬಾಹಿರ ಎಂಬ ಯೋಲ್ ವಾದವನ್ನೂ ನ್ಯಾಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು. ಇದೀಗ ಕೊನೆಗೂ ಯೋಲ್ ಬಂಧನವಾಗಿದೆ ಎಂದು ವರದಿಯಾಗಿದೆ.

ಯೂನ್ ಸುಕ್ ಯೋಲ್ ಬಂಧನದ ಮೂಲಕ ದಕ್ಷಿಣ ಕೊರಿಯಾದ ಇತಿಹಾಸದಲ್ಲೇ ಮೊದಲ ಬಾರಿಗೆ ಅಧ್ಯಕ್ಷರೊಬ್ಬರ ಬಂಧನವಾದಂತಾಗಿದೆ.

ತನ್ನ ಅಧಿಕಾರ ಉಳಿಸಿಕೊಳ್ಳಲು ಮತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹಠಾತ್ ಮಿಲಿಟರಿ ಆಡಳಿತ ಜಾರಿಗೊಳಿಸುವ ಮೂಲಕ ಯೂನ್ ಸುಕ್ ಯೋಲ್ ಅವರು ದೇಶದಲ್ಲಿ ದಂಗೆ ಉಂಟಾಗಲು ಕಾರಣರಾಗಿದ್ದಾರೆ ಎಂಬ ಆರೋಪವಿದೆ. ಈ ಆರೋಪ ಸಾಬೀತಾದರೆ ಅವರಿಗೆ ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆಯಾಗಬಹುದು ಎಂದು ವರದಿಗಳು ಹೇಳಿವೆ.

ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿಯಾದ ಬಳಿಕ, ಅಧ್ಯಕ್ಷರ ನಿವಾಸದಲ್ಲಿ ಯೋಲ್ ಅವಿತುಕೊಂಡಿದ್ದರು. ಅವರ ಬಂಧನಕ್ಕೆ ಅಧಿಕಾರಿಗಳು ಪ್ರಯತ್ನಿಸಿದರೂ ಅಧ್ಯಕ್ಷೀಯ ಭದ್ರತಾ ಸೇವೆಯ (ಪಿಎಸ್‌ಎಸ್) ಸಿಬ್ಬಂದಿ ಅವಕಾಶ ನೀಡುತ್ತಿರಲಿಲ್ಲ. ಇದರ ಜೊತೆಗೆ ಯೋಲ್ ಬೆಂಬಲಿಗರು ಕೂಡ ಮನೆ ಬಳಿ ಜಮಾಯಿಸಿದ್ದರು.

ಇಂದು (ಜ.15) ಬೆಳಗಿನ ಜಾವಕ್ಕೆ ಮುನ್ನ, ಭ್ರಷ್ಟಾಚಾರ ತನಿಖಾ ಕಚೇರಿಯ ನೂರಾರು ಪೊಲೀಸ್ ಮತ್ತು ತನಿಖಾಧಿಕಾರಿಗಳು ಮತ್ತೆ ಯೋಲ್ ನಿವಾಸವನ್ನು ಸುತ್ತುವರೆದರು. ಕೆಲವರು ಹಿಂದಿನ ಭಾಗದಲ್ಲಿ ಕಾಂಪೌಂಡ್ ಗೋಡೆ ಹತ್ತಿ ಮುಖ್ಯ ಕಟ್ಟಡ ತಲುಪಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಮುಂದಾದರು. ಸುಮಾರು ಐದು ಗಂಟೆಗಳ ಕಾಲ ನಡೆದ ತಿಕ್ಕಾಟದ ನಂತರ, ಅಧಿಕಾರಿಗಳು ಯೋಲ್ ಅವರನ್ನು ಬಂಧಿಸಿಲಾಗಿದೆ ಎಂದು ಘೋಷಿಸಿದರು ಎಂದು ವರದಿಗಳು ವಿವರಿಸಿವೆ.

ಬಂಧನದ ಬಳಿಕ ಯೋಲ್ ಅವರನ್ನು ಬೆಂಗಾವಲು ಪಡೆಯೊಂದಿಗೆ ಭ್ರಷ್ಟಾಚಾರ ತನಿಖಾ ಕಚೇರಿಗೆ ಕರೆದೊಯ್ಯಲಾಯಿತು. ಅಲ್ಲಿ ಅಧಿಕಾರಿಗಳು ಯೋಲ್ ಅವರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಅವರು ಮೌನವಾಗಿ ಕುಳಿತಿದ್ದು, ಏನೂ ಮಾತನಾಡುತ್ತಿಲ್ಲ ಎಂದು ವರದಿಗಳು ಹೇಳಿವೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...