Homeಮುಖಪುಟದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ

- Advertisement -
- Advertisement -

ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿ ಜನಾಕ್ರೋಶದ ಬಳಿಕ ವಾಪಸ್ ಪಡೆಯುವ ಮೂಲಕ ವಾಗ್ದಂಡನೆಗೆ ಗುರಿಯಾಗಿರುವ ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ನ್ಯಾಯಾಲಯದ ಬಂಧನ ವಾರೆಂಟ್ ಹಿನ್ನೆಲೆ ಯೂನ್ ಸುಕ್ ಯೋಲ್ ಅವರನ್ನು ಬಂಧಿಸಲು ಈ ಹಿಂದೆ (ಜ.3) ಅಧಿಕಾರಿಗಳು ಪ್ರಯತ್ನಿಸಿದ್ದರು. ಆದರೆ, ಅದು ವಿಫಲವಾಗಿತ್ತು. ಪ್ರಧಾನಿ ನಿವಾಸದ ಬಳಿಗೆ ಅಧಿಕಾರಿಗಳು ಬಂದಾಗ, ಯೋಲ್ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿ ತಡೆಯೊಡ್ಡಿದ್ದರು.

ಆ ಬಳಿಕ ಯೋಲ್ ಕಡೆಯವರು ಮತ್ತು ಅಧಿಕಾರಿಗಳ ನಡುವೆ ತಿಕ್ಕಾಟ ಏರ್ಪಟ್ಟಿತ್ತು. ಬಂಧನ ವಾರೆಂಟ್ ಕಾನೂನುಬಾಹಿರ ಎಂಬ ಯೋಲ್ ವಾದವನ್ನೂ ನ್ಯಾಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು. ಇದೀಗ ಕೊನೆಗೂ ಯೋಲ್ ಬಂಧನವಾಗಿದೆ ಎಂದು ವರದಿಯಾಗಿದೆ.

ಯೂನ್ ಸುಕ್ ಯೋಲ್ ಬಂಧನದ ಮೂಲಕ ದಕ್ಷಿಣ ಕೊರಿಯಾದ ಇತಿಹಾಸದಲ್ಲೇ ಮೊದಲ ಬಾರಿಗೆ ಅಧ್ಯಕ್ಷರೊಬ್ಬರ ಬಂಧನವಾದಂತಾಗಿದೆ.

ತನ್ನ ಅಧಿಕಾರ ಉಳಿಸಿಕೊಳ್ಳಲು ಮತ್ತು ಪ್ರತಿಪಕ್ಷಗಳನ್ನು ಹತ್ತಿಕ್ಕಲು ಹಠಾತ್ ಮಿಲಿಟರಿ ಆಡಳಿತ ಜಾರಿಗೊಳಿಸುವ ಮೂಲಕ ಯೂನ್ ಸುಕ್ ಯೋಲ್ ಅವರು ದೇಶದಲ್ಲಿ ದಂಗೆ ಉಂಟಾಗಲು ಕಾರಣರಾಗಿದ್ದಾರೆ ಎಂಬ ಆರೋಪವಿದೆ. ಈ ಆರೋಪ ಸಾಬೀತಾದರೆ ಅವರಿಗೆ ಜೀವಾವಧಿ ಅಥವಾ ಮರಣದಂಡನೆ ಶಿಕ್ಷೆಯಾಗಬಹುದು ಎಂದು ವರದಿಗಳು ಹೇಳಿವೆ.

ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿಯಾದ ಬಳಿಕ, ಅಧ್ಯಕ್ಷರ ನಿವಾಸದಲ್ಲಿ ಯೋಲ್ ಅವಿತುಕೊಂಡಿದ್ದರು. ಅವರ ಬಂಧನಕ್ಕೆ ಅಧಿಕಾರಿಗಳು ಪ್ರಯತ್ನಿಸಿದರೂ ಅಧ್ಯಕ್ಷೀಯ ಭದ್ರತಾ ಸೇವೆಯ (ಪಿಎಸ್‌ಎಸ್) ಸಿಬ್ಬಂದಿ ಅವಕಾಶ ನೀಡುತ್ತಿರಲಿಲ್ಲ. ಇದರ ಜೊತೆಗೆ ಯೋಲ್ ಬೆಂಬಲಿಗರು ಕೂಡ ಮನೆ ಬಳಿ ಜಮಾಯಿಸಿದ್ದರು.

ಇಂದು (ಜ.15) ಬೆಳಗಿನ ಜಾವಕ್ಕೆ ಮುನ್ನ, ಭ್ರಷ್ಟಾಚಾರ ತನಿಖಾ ಕಚೇರಿಯ ನೂರಾರು ಪೊಲೀಸ್ ಮತ್ತು ತನಿಖಾಧಿಕಾರಿಗಳು ಮತ್ತೆ ಯೋಲ್ ನಿವಾಸವನ್ನು ಸುತ್ತುವರೆದರು. ಕೆಲವರು ಹಿಂದಿನ ಭಾಗದಲ್ಲಿ ಕಾಂಪೌಂಡ್ ಗೋಡೆ ಹತ್ತಿ ಮುಖ್ಯ ಕಟ್ಟಡ ತಲುಪಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಮುಂದಾದರು. ಸುಮಾರು ಐದು ಗಂಟೆಗಳ ಕಾಲ ನಡೆದ ತಿಕ್ಕಾಟದ ನಂತರ, ಅಧಿಕಾರಿಗಳು ಯೋಲ್ ಅವರನ್ನು ಬಂಧಿಸಿಲಾಗಿದೆ ಎಂದು ಘೋಷಿಸಿದರು ಎಂದು ವರದಿಗಳು ವಿವರಿಸಿವೆ.

ಬಂಧನದ ಬಳಿಕ ಯೋಲ್ ಅವರನ್ನು ಬೆಂಗಾವಲು ಪಡೆಯೊಂದಿಗೆ ಭ್ರಷ್ಟಾಚಾರ ತನಿಖಾ ಕಚೇರಿಗೆ ಕರೆದೊಯ್ಯಲಾಯಿತು. ಅಲ್ಲಿ ಅಧಿಕಾರಿಗಳು ಯೋಲ್ ಅವರ ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ಅವರು ಮೌನವಾಗಿ ಕುಳಿತಿದ್ದು, ಏನೂ ಮಾತನಾಡುತ್ತಿಲ್ಲ ಎಂದು ವರದಿಗಳು ಹೇಳಿವೆ.

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಯೂನ್ ಸುಕ್ ಯೋಲ್ ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿದೆ. ಆದರೆ, ಅವರ ವಿರುದ್ದ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದೆ.

ತುರ್ತು ಮಿಲಿಟರಿ ಆಡಳಿತ ಹೇರಿದ ಸಂಬಂಧ ತನಿಖಾ ತಂಡ ಯೂನ್ ಸುಕ್ ಯೋಲ್ ಅವರನ್ನು ಮೂರು ಬಾರಿ ವಿಚಾರಣೆಗೆ ಕರೆದರೂ ಅವರು ಹಾಜರಾಗಲು ವಿಫಲರಾಗಿದ್ದಾರೆ. ಈ ಹಿನ್ನೆಲೆ ಅವರ ಬಂಧನಕ್ಕೆ ಡಿಸೆಂಬರ್ 31ರಂದು ನ್ಯಾಯಾಲಯ ವಾರೆಂಟ್ ಜಾರಿಗೊಳಿಸಿದೆ.

ವಿಚಾರಣೆಯಿಲ್ಲದೆ ದೀರ್ಘಾವಧಿ ಜೈಲಿನಲ್ಲಿಡುವುದು ‘ಬದುಕುವ ಹಕ್ಕಿನ’ ಉಲ್ಲಂಘನೆ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...