Homeಅಂತರಾಷ್ಟ್ರೀಯದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಪದಚ್ಯುತಿ ಎತ್ತಿಹಿಡಿದ ಕೋರ್ಟ್

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೋಲ್ ಪದಚ್ಯುತಿ ಎತ್ತಿಹಿಡಿದ ಕೋರ್ಟ್

- Advertisement -
- Advertisement -

ದಕ್ಷಿಣ ಕೊರಿಯಾದ ಪದಚ್ಯುತ ಅಧ್ಯಕ್ಷ ಯೂನ್ ಸುಕ್‌ ಯೋಲ್ ಅವರನ್ನು ಸಾಂವಿಧಾನಿಕ ನ್ಯಾಯಾಲಯ ಶುಕ್ರವಾರ (ಏ.3) ಅಧಿಕಾರದಿಂದ ವಜಾಗೊಳಿಸಿದೆ. ಈ ಮೂಲಕ ಕಳೆದ ನಾಲ್ಕು ತಿಂಗಳಿನಿಂದ ತಲೆದೋರಿದ್ದ ರಾಜಕೀಯ ಅಸ್ಥಿರತೆಗೆ ಅಂತ್ಯ ಹಾಡಿದೆ.

ಎಂಟು ನ್ಯಾಯಮೂರ್ತಿಗಳಲ್ಲಿ ಆರು ಮಂದಿ ಯೂನ್ ಅವರ ಪದಚ್ಯುತಿ ಪರವಾಗಿ ತೀರ್ಪು ನೀಡಿದ್ದಾರೆ. ಆದ್ದರಿಂದ ಅವರು ಅಧಿಕಾರದಿಂದ ವಜಾಗೊಂಡಿದ್ದಾರೆ ಎಂದು ನ್ಯಾಯಾಲಯದ ತೀರ್ಪನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

“ಯೂನ್ ಅವರು ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿರುವುದು ದೇಶದ ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಗಂಭೀರ ಋಣಾತ್ಮಕ ಪರಿಣಾಮ ಬೀರಿದೆ. ಯೂನ್ ಅವರು ಸಾಂವಿಧಾನಿಕ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ ಅವರನ್ನು ಅಧಿಕಾರದಿಂದ ವಜಾಗೊಳಿಸುವುದು ಸೂಕ್ತವೆನಿಸುತ್ತದೆ” ಎಂದು ತೀರ್ಪು ಪ್ರಕಟಿಸುವಾಗ ನ್ಯಾಯಾಲಯದ ಹಂಗಾಮಿ ಮುಖ್ಯಸ್ಥ ಮೂನ್ ಹ್ಯುಂಗ್-ಬೇ ಹೇಳಿದ್ದಾರೆ.

“ಯೂನ್ ಅವರು ತುರ್ತು ಮಿಲಿಟರಿ ಆಡಳಿತವನ್ನು ಜಾರಿಗೊಳಿಸಿ, ಶಾಸಕಾಂಗದ ಆಡಳಿತ ಅಧಿಕಾರವನ್ನು ಕಿತ್ತುಕೊಂಡಿದ್ದಾರೆ. ಇದಕ್ಕಾಗಿ ಮಿಲಿಟರಿ ಮತ್ತು ಪೊಲೀಸ್ ಬಲ ಪ್ರಯೋಗಿಸಿ ಸಂವಿಧಾನ ಉಲ್ಲಂಘಿಸಿದ್ದಾರೆ. ತುರ್ತು ಮಿಲಿಟರಿ ಆಡಳಿತ ಹೇರುವ ಮೂಲಭೂತ ನಿಯಮಗಳನ್ನು ಅವರು ಪಾಲಿಸಿಲ್ಲ” ಎಂದಿದ್ದಾರೆ.

ನ್ಯಾಯಾಲಯದ ತೀರ್ಪಿನಿಂದ ಕಳೆದ ನಾಲ್ಕು ತಿಂಗಳಿನಿಂದ ತಲೆದ್ದೋರಿದ್ದ ರಾಜಕೀಯ ಅಸ್ಥಿರತೆ ಕೊನೆಗೊಂಡಿದೆ. ಮುಂದಿನ ಎರಡು ತಿಂಗಳ ಒಳಗೆ ಅಧ್ಯಕ್ಷೀಯ ಚುನಾವಣೆ ನಡೆಸಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಿದೆ.

ನ್ಯಾಯಾಲಯದ ಆದೇಶ ದಕ್ಷಿಣ ಕೊರಿಯಾದಲ್ಲಿ ಮಹತ್ವದ ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ನ್ಯಾಯಯುತ ರೀತಿಯಲ್ಲಿ ಹೊಸ ಅಧ್ಯಕ್ಷರ ಆಯ್ಕೆಯೂ ನಡೆಯಬಹುದು. ಆದರೆ, ಮತ್ತೊಂದೆಡೆ ಯೂನ್ ಅವರ ಬೆಂಬಲಿಗರು ತಿರುಗಿ ಬೀಳುವ ಸಾಧ್ಯತೆಯೂ ಇದೆ. ಯೂನ್ ಮುಂದೆ ಯಾವ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದೂ ಕಾದು ನೋಡಬೇಕಿದೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ದೇಶದಲ್ಲಿ ಮಿಲಿಟರಿ ಕಣ್ಗಾವಲು ಹೆಚ್ಚಿಸಲಾಗಿದೆ.

“ಜನರು ಶಾಂತವಾಗಿರಬೇಕು, ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾರೂ ಉದ್ವೇಗಕ್ಕೆ ಒಳಗಾಗಬಾರದು” ಎಂದು ಹಂಗಾಮಿ ಅಧ್ಯಕ್ಷ ಹಾನ್ ಡಕ್-ಸೂ ಮನವಿ ಮಾಡಿದ್ದಾರೆ.

ನ್ಯಾಯಾಲಯದ ತೀರ್ಪಿಗೂ ಮುನ್ನ ಸಚಿವ ಸಂಪುಟದ ಸಭೆ ನಡೆಸಿದ ಅವರು, ಶಾಂತಿ-ಸುವ್ಯವಸ್ಥೆಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ರಾಜಕಾರಣಿಗಳು ಅಶಾಂತಿ ಉಂಟು ಮಾಡಬಹುದಾದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ನಿರ್ದೇಶನ ನೀಡಿದ್ದಾರೆ.

ಯಾವುದೇ ಕಾನೂನುಬಾಹಿರ, ಹಿಂಸಾತ್ಮಕ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ. ಅಂತಹ ಕೃತ್ಯವೆಸಗುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಯೂನ್ ಸುಕ್ ಯೋಲ್ ಅಧಿಕಾರ ಕಳೆದುಕೊಂಡಿದ್ದೇಕೆ?

ಯೂನ್ ಸುಕ್ ಯೋಲ್ ಅವರು ಡಿಸೆಂಬರ್ 3, 2024ರಂದು ರಾತ್ರಿ ದೇಶದಲ್ಲಿ ತುರ್ತು ಮಿಲಿಟರಿ ಆಡಳಿತ ಜಾರಿಗೊಳಿಸಿದ್ದರು. ಸ್ವಪಕ್ಷದವರು ಸೇರಿದಂತೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಮರುದಿನ ಅದನ್ನು ವಾಪಸ್ ಪಡೆದಿದ್ದರು.

ಸ್ವಹಿತಾಸಕ್ತಿಗಾಗಿ ದೇಶದಲ್ಲಿ ಮಿಲಿಟರಿ ಆಡಳಿತ ಹೇರಿದ ಆರೋಪದ ಮೇಲೆ ಯೂನ್ ಅವರನ್ನು ಸಂಸತ್‌ ವಾಗ್ದದಂಡನೆ ಮೂಲಕ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿತ್ತು. ಅವರ ವಿರುದ್ದ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಮೂರು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ಯೂನ್ ಅದನ್ನು ಕಡೆಗಣಿಸಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಅವರ ಬಂಧನಕ್ಕೆ ಮನೆ ಬಳಿಗೆ ಹೋದಾಗ, ಬೆಂಬಲಿಗರು ಹೈಡ್ರಾಮ ಸೃಷ್ಟಿಸಿ ಬಂಧನಕ್ಕೆ ಅಡ್ಡಿಪಡಿಸಿದ್ದರು.

ಕೊನೆಗೆ, 2025ರ ಜನವರಿ 15ರಂದು ಬೆಳಗಿನ ಜಾವಕ್ಕೆ ಮುನ್ನ, ಭ್ರಷ್ಟಾಚಾರ ತನಿಖಾ ಕಚೇರಿಯ ನೂರಾರು ಪೊಲೀಸ್ ಮತ್ತು ತನಿಖಾಧಿಕಾರಿಗಳು ಮತ್ತೆ ಯೋನ್ ಅವರ ಮನೆಯಯನ್ನು ಸುತ್ತುವರೆದರು. ಕೆಲವರು ಹಿಂದಿನ ಭಾಗದಲ್ಲಿ ಕಾಂಪೌಂಡ್ ಗೋಡೆ ಹತ್ತಿ ಮುಖ್ಯ ಕಟ್ಟಡ ತಲುಪಿದರು. ಈ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆಯಲು ಮುಂದಾದರು. ಸುಮಾರು ಐದು ಗಂಟೆಗಳ ಕಾಲ ನಡೆದ ತಿಕ್ಕಾಟದ ನಂತರ, ಅಧಿಕಾರಿಗಳು ಯೋಲ್ ಅವರನ್ನು ಬಂಧಿಸಿಲಾಗಿದೆ ಎಂದು ಘೋಷಿಸಿದರು.

ಶುಕ್ರವಾರ ನ್ಯಾಯಾಲಯದ ತೀರ್ಪು ಹೊರ ಬೀಳುವ ಹೊತ್ತಿಗೆ ಯೂನ್ ಅವರ ಸಾವಿರಾರು ಬೆಂಬಲಿಗರು ಸಿಯೋಲ್‌ನ ಡೌನ್‌ಟೌನ್‌ನಲ್ಲಿ ಜಮಾಯಿಸಿದ್ದರು. ಸಂಭಾವ್ಯ ಘರ್ಷಣೆಗಳನ್ನು ತಡೆಗಟ್ಟಲು ಸರ್ಕಾರ ನೂರಾರು ಪೊಲೀಸ್ ಬಸ್‌ಗಳು, ಬ್ಯಾರಿಕೇಡ್‌ಗಳು ಮತ್ತು ಅಧಿಕಾರಿಗಳನ್ನು ನಿಯೋಜಿಸಿತ್ತು.

ಗಾಜಾದ ‘ವಿಶಾಲ ಪ್ರದೇಶಗಳ’ ವಶಕ್ಕೆ ಮಿಲಿಟರಿ ಕಾರ್ಯಾಚರಣೆ ವಿಸ್ತರಣೆ: ನಿವಾಸಿಗಳು ಹೊರಹೋಗಲು ಆದೇಶಿಸಿದ ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...