Homeಮುಖಪುಟದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

- Advertisement -
- Advertisement -

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದ, ‘ಸ್ಪ್ರಿಂಗ್, ಸಮ್ಮರ್, ಫಾಲ್, ವಿಂಟರ್’ ಸಿನೆಮಾದ ಮೂಲಕ ವಿಶ್ವದ ಸಿನೆಪ್ರಿಯರ ಮನೆಮಾತಾಗಿದ್ದ ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ಇಂದು ಕೊನೆಯುಸಿರೆಳೆದಿದ್ದಾರೆ. ಕಿಮ್ ಅವರು ಕೊರೊನಾ ಸೋಂಕಿಗೆ ಗುರಿಯಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

1960 ರಲ್ಲಿ ಜನಿಸಿದ ಇವರು 1996 ರಲ್ಲಿ ಕ್ರೊಕಡೈಲ್ ಎನ್ನುವ ಚಿತ್ರವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಹಲವು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದ ಕಿಮ್ ಅವರ ಚಲನಚಿತ್ರಗಳು ಬೆಂಗಳೂರು, ಕೇರಳ ಸೇರಿದಂತೆ ಹಲವು ಭಾರತೀಯ ಚಿತ್ರೋತ್ಸವಗಳಲ್ಲಿ ಕೂಡ ಪ್ರದರ್ಶನಗೊಂಡು ಪ್ರೇಕ್ಷಕರ ಗಮನ ಸೆಳೆದಿದ್ದವು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ಸುಮಾರು 40 ಕ್ಕೂ ಹೆಚ್ಚು ಸಿನೆಮಾಗಳನ್ನು ನಿರ್ದೇಶಿಸಿರುವ ಕಿಮ್ ಹಲವು ವಿವಾದಗಗಳಿಗೂ ಸಿಲುಕಿದ್ದರು. ವಿವಾದಾತ್ಮಕ ಚಲನಚಿತ್ರ ‘ಮೊಬಿಯಸ್’ ಚಿತ್ರೀಕರಣದ ವೇಳೆ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸಿದ್ದರು.

3-ಐರನ್, ದ ಬೋ, ಬ್ಯಾಡ್ ಗಯ್, ಡ್ರೀಮ್, ಕ್ರೋಕೋಡೈಲ್ ಇತ್ಯಾದಿ ಸಿನೆಮಾಗಳು ವಿಶ್ವದಾದ್ಯಂತ ಪ್ರೇಕ್ಷಕರ ನಡುವೆ ಜನಪ್ರಿಯವಾಗಿವೆ. 2016 ರಲ್ಲಿ ಉತ್ತರ ಮತ್ತು ದಕ್ಷಿಣ ಕೊರಿಯಾ ದೇಶಗಳ ನಡುವಿನ ಸಂಘರ್ಷವನ್ನು ಅವಲೋಕಿಸುವ ‘ದ ನೆಟ್’ ಚಲನಚಿತ್ರವನ್ನು ಕೂಡ ಕಿಮ್ ನಿರ್ದೇಶಿಸಿದ್ದರು. ಇದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು,.

2013ರ ಕೇರಳ ಚಲನಚಿತ್ರೋತ್ಸವಕ್ಕೆ ತಿರುವನಂತಪುರಂಗೆ ಕಿಮ್ ಕಿ ಡುಕ್ ಆಗಮಿಸಿದ್ದು ಆ ಉತ್ಸವದ ಮುಖ್ಯ ಆಕರ್ಷಣೆಯಲ್ಲೊಂದಾಗಿತ್ತು.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಇವರ ಸಿನಿಮಾಗಳನ್ನು ಶ್ರೇಷ್ಠ ಚಿತ್ರಗಳೆಂದು ಆರಾಧಿಸುವ ದೊಡ್ಡ ಸಮೂಹವೇ ಜಗತ್ತಿನಾದ್ಯಂತ ಇದೆ. ಹಾಗೇ ಅವರೊಬ್ಬ ಕೀಳು ಅಭಿರುಚಿಯ ಕೆಟ್ಟ ನಿರ್ದೇಶಕ; ಕ್ರೌರ್ಯ, ಲೈಂಗಿಕತೆಯನ್ನೇ ಬಂಡವಾಳ ಮಾಡಿಕೊಂಡು ಸಿನಿಮಾ ಮಾಡುವ ಸ್ಯಾಡಿಸ್ಟ್ ಎಂದು ಜರಿಯುವವರ ಸಂಖ್ಯೆಯೂ ಕಮ್ಮಿಯಿಲ್ಲ. ‘ಕೊರಿಯನ್ ಸಿನಿಮಾ’ ಎಂಬ ಹಣೆಪಟ್ಟಿಯಲ್ಲಿ ಜಗತ್ತಿನಾದ್ಯಂತ ಗಮನಸೆಳೆಯುತ್ತಿರುವ ಚಿತ್ರಗಳಿಗಿಂತ ತುಂಬ ಭಿನ್ನವಾದ, ವಿರುದ್ಧವೇನೋ ಅನಿಸುವಂಥ ಸಿನಿಮಾಗಳನ್ನು ನೀಡಿದ ನಿರ್ದೇಶಕ ಕಿಮ್ ಕಿ ಡುಕ್. ಕಿಮ್‌ ಕಿ ಡುಕ್ ಹೆಸರಿನ ಹಿಂದೆ ‘ಕಾಂಟ್ರವರ್ಷಿಯಲ್ ಡೈರೆಕ್ಟರ್’ ಎಂಬ ಒಂದು ಬಿರುದು ಸದಾಕಾಲ ಉಲ್ಲೇಖಿತಗೊಳ್ಳುತ್ತಿರುತ್ತದೆ.

ಇವೆಲ್ಲ ಏನೇ ಇದ್ದರೂ ಜಗತ್ತಿನ ಸಿನಿಮಾ ಆಸ್ಥಾನದಲ್ಲಿ ಕಿಮ್‌ ಕಿ ಡುಕ್‌ಗೆ ಒಂದು ಗಟ್ಟಿಯಾದ ಸಿಂಹಾಸನ ಇರುವುದಂತೂ ಯಾರೂ ತಳ್ಳಿಹಾಕಲು ಸಾಧ್ಯವಿಲ್ಲ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ಇಂದಿಗೂ ತಮ್ಮ ಸಿನಿಮಾಗಳ ಮೂಲಕ ಸಿನಿಮಾಜಗತ್ತಿನಲ್ಲಿ ಕಂಪನ ಎಬ್ಬಿಸುತ್ತಲೇ ಇರುವ ಕಿಮ್ ಕಿ ಡುಕ್ ಸಿನಿಮಾ ಕಲೆಯನ್ನು ಅಕಾಡೆಮಿಕ್ ಆಗಿ ಕಲಿತವರಲ್ಲ. ಆದರೆ ಅವರ ಎಷ್ಟೋ ಸಿನಿಮಾಗಳನ್ನು ನೋಡಿದಾಗ ಸಿನಿಮಾ ಮಾಧ್ಯಮವೂ ತನ್ನನ್ನು ತಾನು ವಿಸ್ತರಿಸಿಕೊಳ್ಳಲು, ಅಭಿವ್ಯಕ್ತಿಸಿಕೊಳ್ಳಲು ಈ ನಿರ್ದೇಶಕನಿಗಾಗಿ ಕಾಯುತ್ತಿತ್ತೇನೋ ಎಂಬುದು ಹಲವರ ಅಭಿಪ್ರಾಯವಾಗಿತ್ತು.


ಇದನ್ನೂ ಓದಿ: ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...