Homeಮುಖಪುಟದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

- Advertisement -
- Advertisement -

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದ, ‘ಸ್ಪ್ರಿಂಗ್, ಸಮ್ಮರ್, ಫಾಲ್, ವಿಂಟರ್’ ಸಿನೆಮಾದ ಮೂಲಕ ವಿಶ್ವದ ಸಿನೆಪ್ರಿಯರ ಮನೆಮಾತಾಗಿದ್ದ ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ಇಂದು ಕೊನೆಯುಸಿರೆಳೆದಿದ್ದಾರೆ. ಕಿಮ್ ಅವರು ಕೊರೊನಾ ಸೋಂಕಿಗೆ ಗುರಿಯಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

1960 ರಲ್ಲಿ ಜನಿಸಿದ ಇವರು 1996 ರಲ್ಲಿ ಕ್ರೊಕಡೈಲ್ ಎನ್ನುವ ಚಿತ್ರವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಹಲವು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದ ಕಿಮ್ ಅವರ ಚಲನಚಿತ್ರಗಳು ಬೆಂಗಳೂರು, ಕೇರಳ ಸೇರಿದಂತೆ ಹಲವು ಭಾರತೀಯ ಚಿತ್ರೋತ್ಸವಗಳಲ್ಲಿ ಕೂಡ ಪ್ರದರ್ಶನಗೊಂಡು ಪ್ರೇಕ್ಷಕರ ಗಮನ ಸೆಳೆದಿದ್ದವು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ಸುಮಾರು 40 ಕ್ಕೂ ಹೆಚ್ಚು ಸಿನೆಮಾಗಳನ್ನು ನಿರ್ದೇಶಿಸಿರುವ ಕಿಮ್ ಹಲವು ವಿವಾದಗಗಳಿಗೂ ಸಿಲುಕಿದ್ದರು. ವಿವಾದಾತ್ಮಕ ಚಲನಚಿತ್ರ ‘ಮೊಬಿಯಸ್’ ಚಿತ್ರೀಕರಣದ ವೇಳೆ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸಿದ್ದರು.

3-ಐರನ್, ದ ಬೋ, ಬ್ಯಾಡ್ ಗಯ್, ಡ್ರೀಮ್, ಕ್ರೋಕೋಡೈಲ್ ಇತ್ಯಾದಿ ಸಿನೆಮಾಗಳು ವಿಶ್ವದಾದ್ಯಂತ ಪ್ರೇಕ್ಷಕರ ನಡುವೆ ಜನಪ್ರಿಯವಾಗಿವೆ. 2016 ರಲ್ಲಿ ಉತ್ತರ ಮತ್ತು ದಕ್ಷಿಣ ಕೊರಿಯಾ ದೇಶಗಳ ನಡುವಿನ ಸಂಘರ್ಷವನ್ನು ಅವಲೋಕಿಸುವ ‘ದ ನೆಟ್’ ಚಲನಚಿತ್ರವನ್ನು ಕೂಡ ಕಿಮ್ ನಿರ್ದೇಶಿಸಿದ್ದರು. ಇದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು,.

2013ರ ಕೇರಳ ಚಲನಚಿತ್ರೋತ್ಸವಕ್ಕೆ ತಿರುವನಂತಪುರಂಗೆ ಕಿಮ್ ಕಿ ಡುಕ್ ಆಗಮಿಸಿದ್ದು ಆ ಉತ್ಸವದ ಮುಖ್ಯ ಆಕರ್ಷಣೆಯಲ್ಲೊಂದಾಗಿತ್ತು.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಇವರ ಸಿನಿಮಾಗಳನ್ನು ಶ್ರೇಷ್ಠ ಚಿತ್ರಗಳೆಂದು ಆರಾಧಿಸುವ ದೊಡ್ಡ ಸಮೂಹವೇ ಜಗತ್ತಿನಾದ್ಯಂತ ಇದೆ. ಹಾಗೇ ಅವರೊಬ್ಬ ಕೀಳು ಅಭಿರುಚಿಯ ಕೆಟ್ಟ ನಿರ್ದೇಶಕ; ಕ್ರೌರ್ಯ, ಲೈಂಗಿಕತೆಯನ್ನೇ ಬಂಡವಾಳ ಮಾಡಿಕೊಂಡು ಸಿನಿಮಾ ಮಾಡುವ ಸ್ಯಾಡಿಸ್ಟ್ ಎಂದು ಜರಿಯುವವರ ಸಂಖ್ಯೆಯೂ ಕಮ್ಮಿಯಿಲ್ಲ. ‘ಕೊರಿಯನ್ ಸಿನಿಮಾ’ ಎಂಬ ಹಣೆಪಟ್ಟಿಯಲ್ಲಿ ಜಗತ್ತಿನಾದ್ಯಂತ ಗಮನಸೆಳೆಯುತ್ತಿರುವ ಚಿತ್ರಗಳಿಗಿಂತ ತುಂಬ ಭಿನ್ನವಾದ, ವಿರುದ್ಧವೇನೋ ಅನಿಸುವಂಥ ಸಿನಿಮಾಗಳನ್ನು ನೀಡಿದ ನಿರ್ದೇಶಕ ಕಿಮ್ ಕಿ ಡುಕ್. ಕಿಮ್‌ ಕಿ ಡುಕ್ ಹೆಸರಿನ ಹಿಂದೆ ‘ಕಾಂಟ್ರವರ್ಷಿಯಲ್ ಡೈರೆಕ್ಟರ್’ ಎಂಬ ಒಂದು ಬಿರುದು ಸದಾಕಾಲ ಉಲ್ಲೇಖಿತಗೊಳ್ಳುತ್ತಿರುತ್ತದೆ.

ಇವೆಲ್ಲ ಏನೇ ಇದ್ದರೂ ಜಗತ್ತಿನ ಸಿನಿಮಾ ಆಸ್ಥಾನದಲ್ಲಿ ಕಿಮ್‌ ಕಿ ಡುಕ್‌ಗೆ ಒಂದು ಗಟ್ಟಿಯಾದ ಸಿಂಹಾಸನ ಇರುವುದಂತೂ ಯಾರೂ ತಳ್ಳಿಹಾಕಲು ಸಾಧ್ಯವಿಲ್ಲ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ಇಂದಿಗೂ ತಮ್ಮ ಸಿನಿಮಾಗಳ ಮೂಲಕ ಸಿನಿಮಾಜಗತ್ತಿನಲ್ಲಿ ಕಂಪನ ಎಬ್ಬಿಸುತ್ತಲೇ ಇರುವ ಕಿಮ್ ಕಿ ಡುಕ್ ಸಿನಿಮಾ ಕಲೆಯನ್ನು ಅಕಾಡೆಮಿಕ್ ಆಗಿ ಕಲಿತವರಲ್ಲ. ಆದರೆ ಅವರ ಎಷ್ಟೋ ಸಿನಿಮಾಗಳನ್ನು ನೋಡಿದಾಗ ಸಿನಿಮಾ ಮಾಧ್ಯಮವೂ ತನ್ನನ್ನು ತಾನು ವಿಸ್ತರಿಸಿಕೊಳ್ಳಲು, ಅಭಿವ್ಯಕ್ತಿಸಿಕೊಳ್ಳಲು ಈ ನಿರ್ದೇಶಕನಿಗಾಗಿ ಕಾಯುತ್ತಿತ್ತೇನೋ ಎಂಬುದು ಹಲವರ ಅಭಿಪ್ರಾಯವಾಗಿತ್ತು.


ಇದನ್ನೂ ಓದಿ: ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...