Homeಮುಖಪುಟದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ವಿಧಿವಶ

- Advertisement -
- Advertisement -

ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದ, ‘ಸ್ಪ್ರಿಂಗ್, ಸಮ್ಮರ್, ಫಾಲ್, ವಿಂಟರ್’ ಸಿನೆಮಾದ ಮೂಲಕ ವಿಶ್ವದ ಸಿನೆಪ್ರಿಯರ ಮನೆಮಾತಾಗಿದ್ದ ದಕ್ಷಿಣ ಕೊರಿಯಾದ ಖ್ಯಾತ ಚಿತ್ರನಿರ್ದೇಶಕ ಕಿಮ್ ಕಿ ಡುಕ್ ಇಂದು ಕೊನೆಯುಸಿರೆಳೆದಿದ್ದಾರೆ. ಕಿಮ್ ಅವರು ಕೊರೊನಾ ಸೋಂಕಿಗೆ ಗುರಿಯಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೈತರಿಗೆ ಬೆಂಬಲ: ‘#WeUnitedForFarmers’ ಟ್ರೆಂಡಿಂಗ್ – ಪ್ರತಿತಂತ್ರ ಹೂಡುತ್ತಿರುವ ಬಿಜೆಪಿ!

1960 ರಲ್ಲಿ ಜನಿಸಿದ ಇವರು 1996 ರಲ್ಲಿ ಕ್ರೊಕಡೈಲ್ ಎನ್ನುವ ಚಿತ್ರವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

ಹಲವು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿಗಳನ್ನು ಪಡೆದಿದ್ದ ಕಿಮ್ ಅವರ ಚಲನಚಿತ್ರಗಳು ಬೆಂಗಳೂರು, ಕೇರಳ ಸೇರಿದಂತೆ ಹಲವು ಭಾರತೀಯ ಚಿತ್ರೋತ್ಸವಗಳಲ್ಲಿ ಕೂಡ ಪ್ರದರ್ಶನಗೊಂಡು ಪ್ರೇಕ್ಷಕರ ಗಮನ ಸೆಳೆದಿದ್ದವು.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘಟನೆ

ಸುಮಾರು 40 ಕ್ಕೂ ಹೆಚ್ಚು ಸಿನೆಮಾಗಳನ್ನು ನಿರ್ದೇಶಿಸಿರುವ ಕಿಮ್ ಹಲವು ವಿವಾದಗಗಳಿಗೂ ಸಿಲುಕಿದ್ದರು. ವಿವಾದಾತ್ಮಕ ಚಲನಚಿತ್ರ ‘ಮೊಬಿಯಸ್’ ಚಿತ್ರೀಕರಣದ ವೇಳೆ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪವನ್ನು ಎದುರಿಸಿದ್ದರು.

3-ಐರನ್, ದ ಬೋ, ಬ್ಯಾಡ್ ಗಯ್, ಡ್ರೀಮ್, ಕ್ರೋಕೋಡೈಲ್ ಇತ್ಯಾದಿ ಸಿನೆಮಾಗಳು ವಿಶ್ವದಾದ್ಯಂತ ಪ್ರೇಕ್ಷಕರ ನಡುವೆ ಜನಪ್ರಿಯವಾಗಿವೆ. 2016 ರಲ್ಲಿ ಉತ್ತರ ಮತ್ತು ದಕ್ಷಿಣ ಕೊರಿಯಾ ದೇಶಗಳ ನಡುವಿನ ಸಂಘರ್ಷವನ್ನು ಅವಲೋಕಿಸುವ ‘ದ ನೆಟ್’ ಚಲನಚಿತ್ರವನ್ನು ಕೂಡ ಕಿಮ್ ನಿರ್ದೇಶಿಸಿದ್ದರು. ಇದು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು,.

2013ರ ಕೇರಳ ಚಲನಚಿತ್ರೋತ್ಸವಕ್ಕೆ ತಿರುವನಂತಪುರಂಗೆ ಕಿಮ್ ಕಿ ಡುಕ್ ಆಗಮಿಸಿದ್ದು ಆ ಉತ್ಸವದ ಮುಖ್ಯ ಆಕರ್ಷಣೆಯಲ್ಲೊಂದಾಗಿತ್ತು.

ಇದನ್ನೂ ಓದಿ: ಟೊಯೊಟಾ ಕಿರ್ಲೋಸ್ಕರ್‌ ದರ್ಪ ಮುಂದುವರಿಕೆ: ’ಛತ್ರಿ ಚಳುವಳಿ’ ಆರಂಭಿಸಿದ ಕಾರ್ಮಿಕರು!

ಇವರ ಸಿನಿಮಾಗಳನ್ನು ಶ್ರೇಷ್ಠ ಚಿತ್ರಗಳೆಂದು ಆರಾಧಿಸುವ ದೊಡ್ಡ ಸಮೂಹವೇ ಜಗತ್ತಿನಾದ್ಯಂತ ಇದೆ. ಹಾಗೇ ಅವರೊಬ್ಬ ಕೀಳು ಅಭಿರುಚಿಯ ಕೆಟ್ಟ ನಿರ್ದೇಶಕ; ಕ್ರೌರ್ಯ, ಲೈಂಗಿಕತೆಯನ್ನೇ ಬಂಡವಾಳ ಮಾಡಿಕೊಂಡು ಸಿನಿಮಾ ಮಾಡುವ ಸ್ಯಾಡಿಸ್ಟ್ ಎಂದು ಜರಿಯುವವರ ಸಂಖ್ಯೆಯೂ ಕಮ್ಮಿಯಿಲ್ಲ. ‘ಕೊರಿಯನ್ ಸಿನಿಮಾ’ ಎಂಬ ಹಣೆಪಟ್ಟಿಯಲ್ಲಿ ಜಗತ್ತಿನಾದ್ಯಂತ ಗಮನಸೆಳೆಯುತ್ತಿರುವ ಚಿತ್ರಗಳಿಗಿಂತ ತುಂಬ ಭಿನ್ನವಾದ, ವಿರುದ್ಧವೇನೋ ಅನಿಸುವಂಥ ಸಿನಿಮಾಗಳನ್ನು ನೀಡಿದ ನಿರ್ದೇಶಕ ಕಿಮ್ ಕಿ ಡುಕ್. ಕಿಮ್‌ ಕಿ ಡುಕ್ ಹೆಸರಿನ ಹಿಂದೆ ‘ಕಾಂಟ್ರವರ್ಷಿಯಲ್ ಡೈರೆಕ್ಟರ್’ ಎಂಬ ಒಂದು ಬಿರುದು ಸದಾಕಾಲ ಉಲ್ಲೇಖಿತಗೊಳ್ಳುತ್ತಿರುತ್ತದೆ.

ಇವೆಲ್ಲ ಏನೇ ಇದ್ದರೂ ಜಗತ್ತಿನ ಸಿನಿಮಾ ಆಸ್ಥಾನದಲ್ಲಿ ಕಿಮ್‌ ಕಿ ಡುಕ್‌ಗೆ ಒಂದು ಗಟ್ಟಿಯಾದ ಸಿಂಹಾಸನ ಇರುವುದಂತೂ ಯಾರೂ ತಳ್ಳಿಹಾಕಲು ಸಾಧ್ಯವಿಲ್ಲ.

ಇದನ್ನೂ ಓದಿ: ಗೋಹತ್ಯೆ ನಿಷೇಧ: ವಯಸ್ಸಾದ ದನಗಳನ್ನು ಸರ್ಕಾರವೇ ಖರೀದಿಸಲಿ – ಸಿದ್ದರಾಮಯ್ಯ ಸಲಹೆ

ಇಂದಿಗೂ ತಮ್ಮ ಸಿನಿಮಾಗಳ ಮೂಲಕ ಸಿನಿಮಾಜಗತ್ತಿನಲ್ಲಿ ಕಂಪನ ಎಬ್ಬಿಸುತ್ತಲೇ ಇರುವ ಕಿಮ್ ಕಿ ಡುಕ್ ಸಿನಿಮಾ ಕಲೆಯನ್ನು ಅಕಾಡೆಮಿಕ್ ಆಗಿ ಕಲಿತವರಲ್ಲ. ಆದರೆ ಅವರ ಎಷ್ಟೋ ಸಿನಿಮಾಗಳನ್ನು ನೋಡಿದಾಗ ಸಿನಿಮಾ ಮಾಧ್ಯಮವೂ ತನ್ನನ್ನು ತಾನು ವಿಸ್ತರಿಸಿಕೊಳ್ಳಲು, ಅಭಿವ್ಯಕ್ತಿಸಿಕೊಳ್ಳಲು ಈ ನಿರ್ದೇಶಕನಿಗಾಗಿ ಕಾಯುತ್ತಿತ್ತೇನೋ ಎಂಬುದು ಹಲವರ ಅಭಿಪ್ರಾಯವಾಗಿತ್ತು.


ಇದನ್ನೂ ಓದಿ: ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...