Homeಮುಖಪುಟದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

- Advertisement -
- Advertisement -

‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ ಹೊರತಾಗಿ ಯಶಸ್ವಿ ಸಿನಿಮಾವೆಂದರೆ ಏನೆಂದು ನಾವು ಕೇಳಿಕೊಳ್ಳುವ ಅಗತ್ಯವೂ ಇದೆ. ‘ಪ್ಯಾನ್‌ ಇಂಡಿಯಾ’ ಹಾಗೂ ‘ಹಣ ಗಳಿಕೆ’ಯ ಮಾನದಂಡಗಳಾಚೆಯ ಯಶಸ್ಸುಗಳನ್ನೂ ಮನಗಾಣಬೇಕಿದೆ.

ಬಾಲಿವುಡ್‌ಗೆ ದಕ್ಷಿಣದ ಸಿನಿಮಾಗಳು ಸೆಡ್ಡು ಹೊಡೆದಿವೆ ಎಂಬ ಚರ್ಚೆಗೆ ಬಳಕೆಯಾಗುತ್ತಿರುವ ಈ ಮೂರೂ ಸಿನಿಮಾಗಳು ಏನನ್ನು ಹೇಳಲು ಹೊರಟಿವೆ? ಇವುಗಳ ಯಶಸ್ಸು ಪ್ರತಿನಿಧಿಸುತ್ತಿರುವುದೇನೂ ಎಂಬುದೂ ಮುಖ್ಯವಲ್ಲವೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಪುಷ್ಪ’ ಮಾಫಿಯಾಗಳು ಮೇಲುಗೈ ಸಾಧಿಸುವ ಕಥೆಯುಳ್ಳ ಸಿನಿಮಾ, ಹಿಂದುತ್ವವನ್ನು ಜನರ ತಲೆಯೊಳಗೆ ತರುಕಲು ಯತ್ನಿಸಿರುವ ಸಿನಿಮಾ ‘ಆರ್‌ಆರ್‌ಆರ್‌’, ಬಿಲ್ಡಪ್ ಹಾಗೂ ಹೆಣ್ಣನ್ನು ಸರಕು ಎಂಬಂತೆ ಚಿತ್ರಿಸಿದ ಸಿನಿಮಾ ಕೆಜಿಎಫ್‌. ಇಂಥವುಗಳಿಗೆ ಭಾರೀ ಹಣ ತೆತ್ತು ಸಿನಿಮಾ ನೋಡಿದ ಪ್ರೇಕ್ಷಕ ಬಯಸಿದ್ದಾದರೂ ಏನು? ಇವುಗಳನ್ನೆಲ್ಲ ‘ಮನರಂಜನೆ’ ಎನ್ನಲು ಸಾಧ್ಯವೇ? ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ತಲುಪಿದರೆ ಮುಂಬರುವ ಪ್ರಯೋಗಗಳು ಹೇಗಿರುತ್ತವೆ? ಈ ಮೂರು ಸಿನಿಮಾಗಳಾಚೆಗೆ ದಕ್ಷಿಣ ಭಾರತದ ಚಿತ್ರರಂಗ ಹಿಡಿದಿರುವ ಹೊಸತನದ ಹಾದಿ ಮಸುಕಾಗಿ ಮತ್ತದೇ ಸವಕಲು ಮಾದರಿಗೆ ನಾವು ಹೊರಳುತ್ತೇವೆಯೇ?

ದಕ್ಷಿಣ ಭಾರತದತ್ತ ಬಾಲಿವುಡ್ ತಿರುಗಿ ನೋಡಲೇಬೇಕಾದ ಸಾಕಷ್ಟು ಉತ್ಕೃಷ್ಟ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಬರುತ್ತಿವೆ. ಕೋವಿಡ್ ನಡುವೆ ಬಂದ ‘ಆಕ್ಟ್ 1978’, ‘ಅರಿಷಡ್ವರ್ಗ’ ಕನ್ನಡದ ಮಟ್ಟಿಗೆ ಗುರುತಿಸಬಹುದಾದ ಪ್ರಯೋಗಗಳು. ಆದರೆ ತಮಿಳು ಹಾಗೂ ಮಲಯಾಳಂನಲ್ಲಿ ದೊಡ್ಡ ಪಟ್ಟಿಯೇ ಇವೆ. ‘ಸರಪಟ್ಟ ಪರಂಬರೈ’ ಥರದ ಸಿನಿಮಾ ಓಟಿಟಿಗೆ ಬಂತು. ಅದು ಏನಾದರೂ ಚಿತ್ರಮಂದಿರದಲ್ಲಿ ತೆರೆ ಕಂಡಿದಿದ್ದರೆ ಪ್ರೇಕ್ಷಕನಿಗೆ ಸಿಗುತ್ತಿದ್ದ ಫೀಲ್‌ ಉತ್ಕೃಷ್ಟವಾಗಿರುತ್ತಿತ್ತು. ‘ಸೂರರೈ ಪೊಟ್ರು’ ‘ಜೈ ಭೀಮ್’ ಸಿನಿಮಾಗಳು ಚಿತ್ರಮಂದಿರದಲ್ಲಿ ತೆರೆಕಂಡಿದ್ದರೆ ‘ಪ್ಯಾನ್‌ ಇಂಡಿಯಾ’ ಮಾನದಂಡಕ್ಕೆ ಒಳಪಡುತ್ತಿದ್ದವೇನೋ!

ಇದನ್ನೂ ಓದಿರಿ: ಠಾಣಾಕ್ಕಾರನ್‌: ಬ್ರಿಟಿಷ್‌ ಕಾಲದ ಪೊಲೀಸ್‌ ಪಳೆಯುಳಿಕೆ ಮತ್ತು ವರ್ತಮಾನದ ಕ್ರಾಂತಿ

ಕೋವಿಡ್ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ ಭಾರತೀಯರು ಅತಿ ಹೆಚ್ಚು ನೋಡಿದ್ದು ಮಲಯಾಳಂ ಸಿನಿಮಾಗಳನ್ನು. ದೈತ್ಯ ಕಲಾವಿದ ಫಹಾದ್ ಫಾಸಿಲ್ ಅವರ ‘ಸಿ ಯೂ ಸೂನ್’, ‘ಇರುಳ್’, ‘ಜೋಜಿ’, ‘ಮಾಲಿಕ್’ ಒಟಿಟಿಗೆ ಬಂದವು. ಒಂದು ರೀತಿಯಲ್ಲಿ ಹೇಳುವುದಾದರೆ ಫಾಸಿಲ್, ಓಟಿಟಿಯ ಏಕಚಕ್ರಾಧಿಪತಿಯಂತೆ ಮೆರೆದರು. ಒಟಿಟಿಯಲ್ಲಿ ಬಂದ ‘ನಾಯಟ್ಟು’, ‘ಮಾಲಿಕ್’‌, ‘ಗ್ರೇಟ್ ಇಂಡಿಯನ್‌ ಕಿಚನ್’, ‘ಹೋಮ್’, ‘ಕುರುತಿ’, ‘ದೃಶ್ಯಂ2’ ಮೊದಲಾದ ಸಿನಿಮಾಗಳು ಹೊಸ ಚರ್ಚೆಯನ್ನೇ ಹುಟ್ಟು ಹಾಕಿದವು. ಕೋವಿಡ್‌ ಸೋಂಕಿನ ಭೀತಿಯಿಂದಾಗಿ ಮನೆಯೊಳಗೆ ಕುಳಿತ ಜನರನ್ನು ರಂಜಿಸಿದ್ದು, ಚಿಂತನೆಗೆ ಹಚ್ಚಿದ್ದು ಓಟಿಟಿಯಲ್ಲಿ ಬಂದ ಈ ಸಿನಿಮಾಗಳೆಂದರೆ ತಪ್ಪಾಗದು.

ತಮಿಳಿನಲ್ಲಿ 2021, 2022ನೇ ಇಸವಿಯಲ್ಲಿ ಬಿಡುಗಡೆಯಾದ ‘ಮಂಡೇಲಾ’, ‘ಕರ್ಣನ್’, ‘ಸಾರ್ಪಟ್ಟ ಪರಂಬರೈ’, ‘ಜೈ ಭೀಮ್’, ‘ರೈಟರ್’, ‘ಠಾಣಾಕ್ಕಾರನ್’ ಸಿನಿಮಾಗಳು ಕಥೆ ಹಾಗೂ ಉತ್ಕೃಷ್ಟತೆಯ ದೃಷ್ಟಿಯಿಂದ ಅದ್ಭುತವಾದ ಪ್ರಯೋಗಗಳು. ‘ರೈಟರ್‌’ ಹಾಗೂ ‘ಕರ್ಣನ್’ ಕೆಲಕಾಲ ಥೇಟರ್‌ನಲ್ಲಿಯೂ ಪ್ರದರ್ಶನ ಕಂಡವು.

ಇತ್ತೀಚಿಗೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಈಗ ಒಟಿಟಿಗೂ ಬಂದಿರುವ ‘ಪಡ’ ಎಂಬ ಮಲಯಾಳಂ ಸಿನಿಮಾ ನೈಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಆದಿವಾಸಿಗಳ ಬೆಟ್ಟದಂತ ನೋವಿಗೆ ಕನ್ನಡಿ ಹಿಡಿದಿದೆ. ಅಹಿಂಸಾತ್ಮಕವಾದರೂ ಮಿಲಿಟೆಂಟ್ ಪ್ರತಿರೋಧಕ್ಕೆ ಇಳಿದ ಹೋರಾಟಗಾರರು ಎದುರಿಸಿದ ಪ್ರಭುತ್ವದ ಕಿರುಕುಳವನ್ನು ತೆರೆದಿಟ್ಟಿದೆ.

ಇದನ್ನೂ ಓದಿರಿ: NFDC ಜತೆಗೆ ಇತರ ಸರ್ಕಾರಿ ಸಿನಿಮಾ ಸಂಸ್ಥೆಗಳ ವಿಲೀನ – ಅಪಾಯಗಳೇನು?

ಪೃಥ್ವಿರಾಜ್ ಸುಕುಮಾರನ್‌, ಸೂರಜ್ ವೆಂಜರಮೂಡು ಥರದ ಅದ್ಭುತ ನಟರು ಅಭಿನಯಿಸಿರುವ ‘ಜನಗಣಮನ’ (ಮಲಯಾಳಂ) ಸಿನಿಮಾ ಮೊನ್ನೆಯಷ್ಟೇ ಅಂದರೆ ಏಪ್ರಿಲ್‌ 28ರಂದು ಚಿತ್ರಮಂದಿರಗಳಿಗೆ ಬಂದಿದೆ. ಪ್ರಕರಣವೊಂದರ ಸುತ್ತ ಮಾಧ್ಯಮ ಹಾಗೂ ರಾಜಕಾರಣಿಗಳು ಸೃಷ್ಟಿಸುವ ಸಮೂಹ ಸನ್ನಿ, ವಾಸ್ತವಗಳಿಗೆ ಮಾಬ್‌ ಕುರುಡಾಗುವ ಪರಿಯನ್ನು ಈ ಸಿನಿಮಾ ಮನವರಿಕೆ ಮಾಡಿಕೊಟ್ಟಿದೆ. #FuckFascism ಎನ್ನುವಷ್ಟು ಧೈರ್ಯ ಮಲಯಾಳಿಗರಿಗಿದೆ. ಕ್ಯಾಂಪಸ್‌ಗಳ ಮೇಲೆ ಕೇಸರಿಧಾರಿಗಳು ದಾಳಿ ಮಾಡುತ್ತಿರುವುದರಿಂದ ಶೈಕ್ಷಣಿಕ ಹಾಗೂ ಡೆಮಾಕ್ರಟಿಕ್ ವ್ಯವಸ್ಥೆ ದಮನವಾಗುತ್ತಿರುವ ಸೂಕ್ಷ್ಮಗಳನ್ನು ಕಥೆಯೊಳಗೆ ತರಲಾಗಿದೆ.

ಇಷ್ಟೆಲ್ಲ ಅದ್ಭುತ ಸಿನಿಮಾಗಳು ದಕ್ಷಿಣ ಭಾರತದಲ್ಲಿಯೇ ಕಳೆದೆರಡು ವರ್ಷಗಳಲ್ಲಿ ಬಂದಿವೆ. ಪ್ರಾದೇಶಿಕ ಅಸ್ಮಿತೆಯೊಂದಿಗೆ ಜಾಗತಿಕ ಹಾಗೂ ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಮುಖಾಮುಖಿಯಾಗಿವೆ. ಹೊಸ ಆಲೋಚನೆಯನ್ನು ಹುಟ್ಟಿಹಾಕಿ, ಪ್ರಭುತ್ವದ ಮತೀಯ ತಾರತಮ್ಯವನ್ನು ಪ್ರಶ್ನಿಸಿವೆ. ಹೀಗಿರುವಾಗ ಬಾಲಿವುಡ್‌ v/s ದಕ್ಷಿಣ ಭಾರತದ ಚಿತ್ರರಂಗದ ಚರ್ಚೆಗೆ ಬಳಕೆಯಾಗುತ್ತಿರುವ ಸಿನಿಮಾಗಳ್ಯಾವುವು? ನಮ್ಮಲ್ಲಿ ಅದ್ಬುತ ಪ್ರಯೋಗಗಳು ನಡೆಸುತ್ತಿದ್ದರೂ ನಾವು ಬಾಲಿವುಡ್‌ಗೆ ಚಾಲೆಂಜ್ ಮಾಡುತ್ತಿರುವುದು ಯಾವ ರೀತಿಯ ಸಿನಿಮಾಗಳ ಮೂಲಕ? ನಮ್ಮ‌ ದೃಷ್ಟಿಕೋನ ಬದಲಾಗುವ ಅವಶ್ಯಕತೆ ಇದೆ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...