Homeಮುಖಪುಟದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

- Advertisement -
- Advertisement -

‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ ಹೊರತಾಗಿ ಯಶಸ್ವಿ ಸಿನಿಮಾವೆಂದರೆ ಏನೆಂದು ನಾವು ಕೇಳಿಕೊಳ್ಳುವ ಅಗತ್ಯವೂ ಇದೆ. ‘ಪ್ಯಾನ್‌ ಇಂಡಿಯಾ’ ಹಾಗೂ ‘ಹಣ ಗಳಿಕೆ’ಯ ಮಾನದಂಡಗಳಾಚೆಯ ಯಶಸ್ಸುಗಳನ್ನೂ ಮನಗಾಣಬೇಕಿದೆ.

ಬಾಲಿವುಡ್‌ಗೆ ದಕ್ಷಿಣದ ಸಿನಿಮಾಗಳು ಸೆಡ್ಡು ಹೊಡೆದಿವೆ ಎಂಬ ಚರ್ಚೆಗೆ ಬಳಕೆಯಾಗುತ್ತಿರುವ ಈ ಮೂರೂ ಸಿನಿಮಾಗಳು ಏನನ್ನು ಹೇಳಲು ಹೊರಟಿವೆ? ಇವುಗಳ ಯಶಸ್ಸು ಪ್ರತಿನಿಧಿಸುತ್ತಿರುವುದೇನೂ ಎಂಬುದೂ ಮುಖ್ಯವಲ್ಲವೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಪುಷ್ಪ’ ಮಾಫಿಯಾಗಳು ಮೇಲುಗೈ ಸಾಧಿಸುವ ಕಥೆಯುಳ್ಳ ಸಿನಿಮಾ, ಹಿಂದುತ್ವವನ್ನು ಜನರ ತಲೆಯೊಳಗೆ ತರುಕಲು ಯತ್ನಿಸಿರುವ ಸಿನಿಮಾ ‘ಆರ್‌ಆರ್‌ಆರ್‌’, ಬಿಲ್ಡಪ್ ಹಾಗೂ ಹೆಣ್ಣನ್ನು ಸರಕು ಎಂಬಂತೆ ಚಿತ್ರಿಸಿದ ಸಿನಿಮಾ ಕೆಜಿಎಫ್‌. ಇಂಥವುಗಳಿಗೆ ಭಾರೀ ಹಣ ತೆತ್ತು ಸಿನಿಮಾ ನೋಡಿದ ಪ್ರೇಕ್ಷಕ ಬಯಸಿದ್ದಾದರೂ ಏನು? ಇವುಗಳನ್ನೆಲ್ಲ ‘ಮನರಂಜನೆ’ ಎನ್ನಲು ಸಾಧ್ಯವೇ? ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ತಲುಪಿದರೆ ಮುಂಬರುವ ಪ್ರಯೋಗಗಳು ಹೇಗಿರುತ್ತವೆ? ಈ ಮೂರು ಸಿನಿಮಾಗಳಾಚೆಗೆ ದಕ್ಷಿಣ ಭಾರತದ ಚಿತ್ರರಂಗ ಹಿಡಿದಿರುವ ಹೊಸತನದ ಹಾದಿ ಮಸುಕಾಗಿ ಮತ್ತದೇ ಸವಕಲು ಮಾದರಿಗೆ ನಾವು ಹೊರಳುತ್ತೇವೆಯೇ?

ದಕ್ಷಿಣ ಭಾರತದತ್ತ ಬಾಲಿವುಡ್ ತಿರುಗಿ ನೋಡಲೇಬೇಕಾದ ಸಾಕಷ್ಟು ಉತ್ಕೃಷ್ಟ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಬರುತ್ತಿವೆ. ಕೋವಿಡ್ ನಡುವೆ ಬಂದ ‘ಆಕ್ಟ್ 1978’, ‘ಅರಿಷಡ್ವರ್ಗ’ ಕನ್ನಡದ ಮಟ್ಟಿಗೆ ಗುರುತಿಸಬಹುದಾದ ಪ್ರಯೋಗಗಳು. ಆದರೆ ತಮಿಳು ಹಾಗೂ ಮಲಯಾಳಂನಲ್ಲಿ ದೊಡ್ಡ ಪಟ್ಟಿಯೇ ಇವೆ. ‘ಸರಪಟ್ಟ ಪರಂಬರೈ’ ಥರದ ಸಿನಿಮಾ ಓಟಿಟಿಗೆ ಬಂತು. ಅದು ಏನಾದರೂ ಚಿತ್ರಮಂದಿರದಲ್ಲಿ ತೆರೆ ಕಂಡಿದಿದ್ದರೆ ಪ್ರೇಕ್ಷಕನಿಗೆ ಸಿಗುತ್ತಿದ್ದ ಫೀಲ್‌ ಉತ್ಕೃಷ್ಟವಾಗಿರುತ್ತಿತ್ತು. ‘ಸೂರರೈ ಪೊಟ್ರು’ ‘ಜೈ ಭೀಮ್’ ಸಿನಿಮಾಗಳು ಚಿತ್ರಮಂದಿರದಲ್ಲಿ ತೆರೆಕಂಡಿದ್ದರೆ ‘ಪ್ಯಾನ್‌ ಇಂಡಿಯಾ’ ಮಾನದಂಡಕ್ಕೆ ಒಳಪಡುತ್ತಿದ್ದವೇನೋ!

ಇದನ್ನೂ ಓದಿರಿ: ಠಾಣಾಕ್ಕಾರನ್‌: ಬ್ರಿಟಿಷ್‌ ಕಾಲದ ಪೊಲೀಸ್‌ ಪಳೆಯುಳಿಕೆ ಮತ್ತು ವರ್ತಮಾನದ ಕ್ರಾಂತಿ

ಕೋವಿಡ್ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ ಭಾರತೀಯರು ಅತಿ ಹೆಚ್ಚು ನೋಡಿದ್ದು ಮಲಯಾಳಂ ಸಿನಿಮಾಗಳನ್ನು. ದೈತ್ಯ ಕಲಾವಿದ ಫಹಾದ್ ಫಾಸಿಲ್ ಅವರ ‘ಸಿ ಯೂ ಸೂನ್’, ‘ಇರುಳ್’, ‘ಜೋಜಿ’, ‘ಮಾಲಿಕ್’ ಒಟಿಟಿಗೆ ಬಂದವು. ಒಂದು ರೀತಿಯಲ್ಲಿ ಹೇಳುವುದಾದರೆ ಫಾಸಿಲ್, ಓಟಿಟಿಯ ಏಕಚಕ್ರಾಧಿಪತಿಯಂತೆ ಮೆರೆದರು. ಒಟಿಟಿಯಲ್ಲಿ ಬಂದ ‘ನಾಯಟ್ಟು’, ‘ಮಾಲಿಕ್’‌, ‘ಗ್ರೇಟ್ ಇಂಡಿಯನ್‌ ಕಿಚನ್’, ‘ಹೋಮ್’, ‘ಕುರುತಿ’, ‘ದೃಶ್ಯಂ2’ ಮೊದಲಾದ ಸಿನಿಮಾಗಳು ಹೊಸ ಚರ್ಚೆಯನ್ನೇ ಹುಟ್ಟು ಹಾಕಿದವು. ಕೋವಿಡ್‌ ಸೋಂಕಿನ ಭೀತಿಯಿಂದಾಗಿ ಮನೆಯೊಳಗೆ ಕುಳಿತ ಜನರನ್ನು ರಂಜಿಸಿದ್ದು, ಚಿಂತನೆಗೆ ಹಚ್ಚಿದ್ದು ಓಟಿಟಿಯಲ್ಲಿ ಬಂದ ಈ ಸಿನಿಮಾಗಳೆಂದರೆ ತಪ್ಪಾಗದು.

ತಮಿಳಿನಲ್ಲಿ 2021, 2022ನೇ ಇಸವಿಯಲ್ಲಿ ಬಿಡುಗಡೆಯಾದ ‘ಮಂಡೇಲಾ’, ‘ಕರ್ಣನ್’, ‘ಸಾರ್ಪಟ್ಟ ಪರಂಬರೈ’, ‘ಜೈ ಭೀಮ್’, ‘ರೈಟರ್’, ‘ಠಾಣಾಕ್ಕಾರನ್’ ಸಿನಿಮಾಗಳು ಕಥೆ ಹಾಗೂ ಉತ್ಕೃಷ್ಟತೆಯ ದೃಷ್ಟಿಯಿಂದ ಅದ್ಭುತವಾದ ಪ್ರಯೋಗಗಳು. ‘ರೈಟರ್‌’ ಹಾಗೂ ‘ಕರ್ಣನ್’ ಕೆಲಕಾಲ ಥೇಟರ್‌ನಲ್ಲಿಯೂ ಪ್ರದರ್ಶನ ಕಂಡವು.

ಇತ್ತೀಚಿಗೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಈಗ ಒಟಿಟಿಗೂ ಬಂದಿರುವ ‘ಪಡ’ ಎಂಬ ಮಲಯಾಳಂ ಸಿನಿಮಾ ನೈಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಆದಿವಾಸಿಗಳ ಬೆಟ್ಟದಂತ ನೋವಿಗೆ ಕನ್ನಡಿ ಹಿಡಿದಿದೆ. ಅಹಿಂಸಾತ್ಮಕವಾದರೂ ಮಿಲಿಟೆಂಟ್ ಪ್ರತಿರೋಧಕ್ಕೆ ಇಳಿದ ಹೋರಾಟಗಾರರು ಎದುರಿಸಿದ ಪ್ರಭುತ್ವದ ಕಿರುಕುಳವನ್ನು ತೆರೆದಿಟ್ಟಿದೆ.

ಇದನ್ನೂ ಓದಿರಿ: NFDC ಜತೆಗೆ ಇತರ ಸರ್ಕಾರಿ ಸಿನಿಮಾ ಸಂಸ್ಥೆಗಳ ವಿಲೀನ – ಅಪಾಯಗಳೇನು?

ಪೃಥ್ವಿರಾಜ್ ಸುಕುಮಾರನ್‌, ಸೂರಜ್ ವೆಂಜರಮೂಡು ಥರದ ಅದ್ಭುತ ನಟರು ಅಭಿನಯಿಸಿರುವ ‘ಜನಗಣಮನ’ (ಮಲಯಾಳಂ) ಸಿನಿಮಾ ಮೊನ್ನೆಯಷ್ಟೇ ಅಂದರೆ ಏಪ್ರಿಲ್‌ 28ರಂದು ಚಿತ್ರಮಂದಿರಗಳಿಗೆ ಬಂದಿದೆ. ಪ್ರಕರಣವೊಂದರ ಸುತ್ತ ಮಾಧ್ಯಮ ಹಾಗೂ ರಾಜಕಾರಣಿಗಳು ಸೃಷ್ಟಿಸುವ ಸಮೂಹ ಸನ್ನಿ, ವಾಸ್ತವಗಳಿಗೆ ಮಾಬ್‌ ಕುರುಡಾಗುವ ಪರಿಯನ್ನು ಈ ಸಿನಿಮಾ ಮನವರಿಕೆ ಮಾಡಿಕೊಟ್ಟಿದೆ. #FuckFascism ಎನ್ನುವಷ್ಟು ಧೈರ್ಯ ಮಲಯಾಳಿಗರಿಗಿದೆ. ಕ್ಯಾಂಪಸ್‌ಗಳ ಮೇಲೆ ಕೇಸರಿಧಾರಿಗಳು ದಾಳಿ ಮಾಡುತ್ತಿರುವುದರಿಂದ ಶೈಕ್ಷಣಿಕ ಹಾಗೂ ಡೆಮಾಕ್ರಟಿಕ್ ವ್ಯವಸ್ಥೆ ದಮನವಾಗುತ್ತಿರುವ ಸೂಕ್ಷ್ಮಗಳನ್ನು ಕಥೆಯೊಳಗೆ ತರಲಾಗಿದೆ.

ಇಷ್ಟೆಲ್ಲ ಅದ್ಭುತ ಸಿನಿಮಾಗಳು ದಕ್ಷಿಣ ಭಾರತದಲ್ಲಿಯೇ ಕಳೆದೆರಡು ವರ್ಷಗಳಲ್ಲಿ ಬಂದಿವೆ. ಪ್ರಾದೇಶಿಕ ಅಸ್ಮಿತೆಯೊಂದಿಗೆ ಜಾಗತಿಕ ಹಾಗೂ ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಮುಖಾಮುಖಿಯಾಗಿವೆ. ಹೊಸ ಆಲೋಚನೆಯನ್ನು ಹುಟ್ಟಿಹಾಕಿ, ಪ್ರಭುತ್ವದ ಮತೀಯ ತಾರತಮ್ಯವನ್ನು ಪ್ರಶ್ನಿಸಿವೆ. ಹೀಗಿರುವಾಗ ಬಾಲಿವುಡ್‌ v/s ದಕ್ಷಿಣ ಭಾರತದ ಚಿತ್ರರಂಗದ ಚರ್ಚೆಗೆ ಬಳಕೆಯಾಗುತ್ತಿರುವ ಸಿನಿಮಾಗಳ್ಯಾವುವು? ನಮ್ಮಲ್ಲಿ ಅದ್ಬುತ ಪ್ರಯೋಗಗಳು ನಡೆಸುತ್ತಿದ್ದರೂ ನಾವು ಬಾಲಿವುಡ್‌ಗೆ ಚಾಲೆಂಜ್ ಮಾಡುತ್ತಿರುವುದು ಯಾವ ರೀತಿಯ ಸಿನಿಮಾಗಳ ಮೂಲಕ? ನಮ್ಮ‌ ದೃಷ್ಟಿಕೋನ ಬದಲಾಗುವ ಅವಶ್ಯಕತೆ ಇದೆ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...