Homeಮುಖಪುಟದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?

- Advertisement -
- Advertisement -

‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ ಹೊರತಾಗಿ ಯಶಸ್ವಿ ಸಿನಿಮಾವೆಂದರೆ ಏನೆಂದು ನಾವು ಕೇಳಿಕೊಳ್ಳುವ ಅಗತ್ಯವೂ ಇದೆ. ‘ಪ್ಯಾನ್‌ ಇಂಡಿಯಾ’ ಹಾಗೂ ‘ಹಣ ಗಳಿಕೆ’ಯ ಮಾನದಂಡಗಳಾಚೆಯ ಯಶಸ್ಸುಗಳನ್ನೂ ಮನಗಾಣಬೇಕಿದೆ.

ಬಾಲಿವುಡ್‌ಗೆ ದಕ್ಷಿಣದ ಸಿನಿಮಾಗಳು ಸೆಡ್ಡು ಹೊಡೆದಿವೆ ಎಂಬ ಚರ್ಚೆಗೆ ಬಳಕೆಯಾಗುತ್ತಿರುವ ಈ ಮೂರೂ ಸಿನಿಮಾಗಳು ಏನನ್ನು ಹೇಳಲು ಹೊರಟಿವೆ? ಇವುಗಳ ಯಶಸ್ಸು ಪ್ರತಿನಿಧಿಸುತ್ತಿರುವುದೇನೂ ಎಂಬುದೂ ಮುಖ್ಯವಲ್ಲವೆ?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಪುಷ್ಪ’ ಮಾಫಿಯಾಗಳು ಮೇಲುಗೈ ಸಾಧಿಸುವ ಕಥೆಯುಳ್ಳ ಸಿನಿಮಾ, ಹಿಂದುತ್ವವನ್ನು ಜನರ ತಲೆಯೊಳಗೆ ತರುಕಲು ಯತ್ನಿಸಿರುವ ಸಿನಿಮಾ ‘ಆರ್‌ಆರ್‌ಆರ್‌’, ಬಿಲ್ಡಪ್ ಹಾಗೂ ಹೆಣ್ಣನ್ನು ಸರಕು ಎಂಬಂತೆ ಚಿತ್ರಿಸಿದ ಸಿನಿಮಾ ಕೆಜಿಎಫ್‌. ಇಂಥವುಗಳಿಗೆ ಭಾರೀ ಹಣ ತೆತ್ತು ಸಿನಿಮಾ ನೋಡಿದ ಪ್ರೇಕ್ಷಕ ಬಯಸಿದ್ದಾದರೂ ಏನು? ಇವುಗಳನ್ನೆಲ್ಲ ‘ಮನರಂಜನೆ’ ಎನ್ನಲು ಸಾಧ್ಯವೇ? ಇಂತಹ ಸಿನಿಮಾಗಳು ಹೆಚ್ಚು ಹೆಚ್ಚು ಪ್ರೇಕ್ಷಕರನ್ನು ತಲುಪಿದರೆ ಮುಂಬರುವ ಪ್ರಯೋಗಗಳು ಹೇಗಿರುತ್ತವೆ? ಈ ಮೂರು ಸಿನಿಮಾಗಳಾಚೆಗೆ ದಕ್ಷಿಣ ಭಾರತದ ಚಿತ್ರರಂಗ ಹಿಡಿದಿರುವ ಹೊಸತನದ ಹಾದಿ ಮಸುಕಾಗಿ ಮತ್ತದೇ ಸವಕಲು ಮಾದರಿಗೆ ನಾವು ಹೊರಳುತ್ತೇವೆಯೇ?

ದಕ್ಷಿಣ ಭಾರತದತ್ತ ಬಾಲಿವುಡ್ ತಿರುಗಿ ನೋಡಲೇಬೇಕಾದ ಸಾಕಷ್ಟು ಉತ್ಕೃಷ್ಟ ಸಿನಿಮಾಗಳು ಇತ್ತೀಚಿನ ವರ್ಷಗಳಲ್ಲಿ ಬರುತ್ತಿವೆ. ಕೋವಿಡ್ ನಡುವೆ ಬಂದ ‘ಆಕ್ಟ್ 1978’, ‘ಅರಿಷಡ್ವರ್ಗ’ ಕನ್ನಡದ ಮಟ್ಟಿಗೆ ಗುರುತಿಸಬಹುದಾದ ಪ್ರಯೋಗಗಳು. ಆದರೆ ತಮಿಳು ಹಾಗೂ ಮಲಯಾಳಂನಲ್ಲಿ ದೊಡ್ಡ ಪಟ್ಟಿಯೇ ಇವೆ. ‘ಸರಪಟ್ಟ ಪರಂಬರೈ’ ಥರದ ಸಿನಿಮಾ ಓಟಿಟಿಗೆ ಬಂತು. ಅದು ಏನಾದರೂ ಚಿತ್ರಮಂದಿರದಲ್ಲಿ ತೆರೆ ಕಂಡಿದಿದ್ದರೆ ಪ್ರೇಕ್ಷಕನಿಗೆ ಸಿಗುತ್ತಿದ್ದ ಫೀಲ್‌ ಉತ್ಕೃಷ್ಟವಾಗಿರುತ್ತಿತ್ತು. ‘ಸೂರರೈ ಪೊಟ್ರು’ ‘ಜೈ ಭೀಮ್’ ಸಿನಿಮಾಗಳು ಚಿತ್ರಮಂದಿರದಲ್ಲಿ ತೆರೆಕಂಡಿದ್ದರೆ ‘ಪ್ಯಾನ್‌ ಇಂಡಿಯಾ’ ಮಾನದಂಡಕ್ಕೆ ಒಳಪಡುತ್ತಿದ್ದವೇನೋ!

ಇದನ್ನೂ ಓದಿರಿ: ಠಾಣಾಕ್ಕಾರನ್‌: ಬ್ರಿಟಿಷ್‌ ಕಾಲದ ಪೊಲೀಸ್‌ ಪಳೆಯುಳಿಕೆ ಮತ್ತು ವರ್ತಮಾನದ ಕ್ರಾಂತಿ

ಕೋವಿಡ್ ಉಚ್ಛ್ರಾಯ ಸ್ಥಿತಿಯಲ್ಲಿದ್ದಾಗ ಭಾರತೀಯರು ಅತಿ ಹೆಚ್ಚು ನೋಡಿದ್ದು ಮಲಯಾಳಂ ಸಿನಿಮಾಗಳನ್ನು. ದೈತ್ಯ ಕಲಾವಿದ ಫಹಾದ್ ಫಾಸಿಲ್ ಅವರ ‘ಸಿ ಯೂ ಸೂನ್’, ‘ಇರುಳ್’, ‘ಜೋಜಿ’, ‘ಮಾಲಿಕ್’ ಒಟಿಟಿಗೆ ಬಂದವು. ಒಂದು ರೀತಿಯಲ್ಲಿ ಹೇಳುವುದಾದರೆ ಫಾಸಿಲ್, ಓಟಿಟಿಯ ಏಕಚಕ್ರಾಧಿಪತಿಯಂತೆ ಮೆರೆದರು. ಒಟಿಟಿಯಲ್ಲಿ ಬಂದ ‘ನಾಯಟ್ಟು’, ‘ಮಾಲಿಕ್’‌, ‘ಗ್ರೇಟ್ ಇಂಡಿಯನ್‌ ಕಿಚನ್’, ‘ಹೋಮ್’, ‘ಕುರುತಿ’, ‘ದೃಶ್ಯಂ2’ ಮೊದಲಾದ ಸಿನಿಮಾಗಳು ಹೊಸ ಚರ್ಚೆಯನ್ನೇ ಹುಟ್ಟು ಹಾಕಿದವು. ಕೋವಿಡ್‌ ಸೋಂಕಿನ ಭೀತಿಯಿಂದಾಗಿ ಮನೆಯೊಳಗೆ ಕುಳಿತ ಜನರನ್ನು ರಂಜಿಸಿದ್ದು, ಚಿಂತನೆಗೆ ಹಚ್ಚಿದ್ದು ಓಟಿಟಿಯಲ್ಲಿ ಬಂದ ಈ ಸಿನಿಮಾಗಳೆಂದರೆ ತಪ್ಪಾಗದು.

ತಮಿಳಿನಲ್ಲಿ 2021, 2022ನೇ ಇಸವಿಯಲ್ಲಿ ಬಿಡುಗಡೆಯಾದ ‘ಮಂಡೇಲಾ’, ‘ಕರ್ಣನ್’, ‘ಸಾರ್ಪಟ್ಟ ಪರಂಬರೈ’, ‘ಜೈ ಭೀಮ್’, ‘ರೈಟರ್’, ‘ಠಾಣಾಕ್ಕಾರನ್’ ಸಿನಿಮಾಗಳು ಕಥೆ ಹಾಗೂ ಉತ್ಕೃಷ್ಟತೆಯ ದೃಷ್ಟಿಯಿಂದ ಅದ್ಭುತವಾದ ಪ್ರಯೋಗಗಳು. ‘ರೈಟರ್‌’ ಹಾಗೂ ‘ಕರ್ಣನ್’ ಕೆಲಕಾಲ ಥೇಟರ್‌ನಲ್ಲಿಯೂ ಪ್ರದರ್ಶನ ಕಂಡವು.

ಇತ್ತೀಚಿಗೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ಈಗ ಒಟಿಟಿಗೂ ಬಂದಿರುವ ‘ಪಡ’ ಎಂಬ ಮಲಯಾಳಂ ಸಿನಿಮಾ ನೈಜ ಘಟನೆಯನ್ನು ಆಧರಿಸಿ ಮೂಡಿಬಂದಿದೆ. ಆದಿವಾಸಿಗಳ ಬೆಟ್ಟದಂತ ನೋವಿಗೆ ಕನ್ನಡಿ ಹಿಡಿದಿದೆ. ಅಹಿಂಸಾತ್ಮಕವಾದರೂ ಮಿಲಿಟೆಂಟ್ ಪ್ರತಿರೋಧಕ್ಕೆ ಇಳಿದ ಹೋರಾಟಗಾರರು ಎದುರಿಸಿದ ಪ್ರಭುತ್ವದ ಕಿರುಕುಳವನ್ನು ತೆರೆದಿಟ್ಟಿದೆ.

ಇದನ್ನೂ ಓದಿರಿ: NFDC ಜತೆಗೆ ಇತರ ಸರ್ಕಾರಿ ಸಿನಿಮಾ ಸಂಸ್ಥೆಗಳ ವಿಲೀನ – ಅಪಾಯಗಳೇನು?

ಪೃಥ್ವಿರಾಜ್ ಸುಕುಮಾರನ್‌, ಸೂರಜ್ ವೆಂಜರಮೂಡು ಥರದ ಅದ್ಭುತ ನಟರು ಅಭಿನಯಿಸಿರುವ ‘ಜನಗಣಮನ’ (ಮಲಯಾಳಂ) ಸಿನಿಮಾ ಮೊನ್ನೆಯಷ್ಟೇ ಅಂದರೆ ಏಪ್ರಿಲ್‌ 28ರಂದು ಚಿತ್ರಮಂದಿರಗಳಿಗೆ ಬಂದಿದೆ. ಪ್ರಕರಣವೊಂದರ ಸುತ್ತ ಮಾಧ್ಯಮ ಹಾಗೂ ರಾಜಕಾರಣಿಗಳು ಸೃಷ್ಟಿಸುವ ಸಮೂಹ ಸನ್ನಿ, ವಾಸ್ತವಗಳಿಗೆ ಮಾಬ್‌ ಕುರುಡಾಗುವ ಪರಿಯನ್ನು ಈ ಸಿನಿಮಾ ಮನವರಿಕೆ ಮಾಡಿಕೊಟ್ಟಿದೆ. #FuckFascism ಎನ್ನುವಷ್ಟು ಧೈರ್ಯ ಮಲಯಾಳಿಗರಿಗಿದೆ. ಕ್ಯಾಂಪಸ್‌ಗಳ ಮೇಲೆ ಕೇಸರಿಧಾರಿಗಳು ದಾಳಿ ಮಾಡುತ್ತಿರುವುದರಿಂದ ಶೈಕ್ಷಣಿಕ ಹಾಗೂ ಡೆಮಾಕ್ರಟಿಕ್ ವ್ಯವಸ್ಥೆ ದಮನವಾಗುತ್ತಿರುವ ಸೂಕ್ಷ್ಮಗಳನ್ನು ಕಥೆಯೊಳಗೆ ತರಲಾಗಿದೆ.

ಇಷ್ಟೆಲ್ಲ ಅದ್ಭುತ ಸಿನಿಮಾಗಳು ದಕ್ಷಿಣ ಭಾರತದಲ್ಲಿಯೇ ಕಳೆದೆರಡು ವರ್ಷಗಳಲ್ಲಿ ಬಂದಿವೆ. ಪ್ರಾದೇಶಿಕ ಅಸ್ಮಿತೆಯೊಂದಿಗೆ ಜಾಗತಿಕ ಹಾಗೂ ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಮುಖಾಮುಖಿಯಾಗಿವೆ. ಹೊಸ ಆಲೋಚನೆಯನ್ನು ಹುಟ್ಟಿಹಾಕಿ, ಪ್ರಭುತ್ವದ ಮತೀಯ ತಾರತಮ್ಯವನ್ನು ಪ್ರಶ್ನಿಸಿವೆ. ಹೀಗಿರುವಾಗ ಬಾಲಿವುಡ್‌ v/s ದಕ್ಷಿಣ ಭಾರತದ ಚಿತ್ರರಂಗದ ಚರ್ಚೆಗೆ ಬಳಕೆಯಾಗುತ್ತಿರುವ ಸಿನಿಮಾಗಳ್ಯಾವುವು? ನಮ್ಮಲ್ಲಿ ಅದ್ಬುತ ಪ್ರಯೋಗಗಳು ನಡೆಸುತ್ತಿದ್ದರೂ ನಾವು ಬಾಲಿವುಡ್‌ಗೆ ಚಾಲೆಂಜ್ ಮಾಡುತ್ತಿರುವುದು ಯಾವ ರೀತಿಯ ಸಿನಿಮಾಗಳ ಮೂಲಕ? ನಮ್ಮ‌ ದೃಷ್ಟಿಕೋನ ಬದಲಾಗುವ ಅವಶ್ಯಕತೆ ಇದೆ ಅಲ್ಲವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...