Homeಅಂತರಾಷ್ಟ್ರೀಯ ‘ಹಸಿವಾದಾಗ ಹೆಂಡತಿಯನ್ನು ತಿನ್ನಬಹುದು...’! ಸೌದಿಯಲ್ಲಿ ಹೀಗೊಂದು ಫತ್ವಾ ಹೊರಬಿದ್ದಿದೆಯಾ?

 ‘ಹಸಿವಾದಾಗ ಹೆಂಡತಿಯನ್ನು ತಿನ್ನಬಹುದು…’! ಸೌದಿಯಲ್ಲಿ ಹೀಗೊಂದು ಫತ್ವಾ ಹೊರಬಿದ್ದಿದೆಯಾ?

- Advertisement -
- Advertisement -

ಕಳೆದ ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇಂಥದ್ದೊಂದು ಸುದ್ದಿ ವೈರಲ್ ಆಗುತ್ತಿದೆ. 2015ರಿಂದ ಇದು ಆಗಾಗ ಕಾಣಿಸಿಕೊಂಡು ‘ಮುಸ್ಲಿಮ ಜಗತ್ತು ಕ್ರೂರ’ ಎಂಬ ಹುಳವನ್ನು ತಲೆಗೆ ಬಿಟ್ಟು ಮರೆಯಾಗುತ್ತ ಬಂದಿದೆ.

ಏನಿದರ ಮರ್ಮ?

ಮಿಥ್ಯ: ಸೌದಿಯ ಪ್ರಮುಖ ಧರ್ಮಗುರುವೊಬ್ಬರು ಫತ್ವಾ ಹೊರಡಿಸಿದ್ದು, ಹಸಿವಾದಾಗ ಹೆಂಡತಿಯನ್ನು ತಿಂದರೆ ತಪ್ಪೇನಿಲ್ಲ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಈ ಕುರಿತು  ಆರಂಭದಲ್ಲಿ ಟ್ವೀಟ್ ಮಾಡಿದವರ ಪೈಕಿ ಖುಷಿ ಸಿಂಗ್ ಎನ್ನುವವರು, ‘ಸೌದಿಯ ಧರ್ಮಗುರು ಅಜೀಜ್ ಅಬ್ದುಲ್ ಈ ರೀತಿಯ ಫತ್ವಾ ಹೊರಡಿಸಿದ್ದಾನೆ. ಭಾರತದ ಸ್ತ್ರೀವಾದಿಗಳಿಗೆ ಅಜೀಜ್ ಅಬ್ದುಲ್‍ನಂತಹ ಪತಿಯರು ಸಿಗಲಿ’ ಎಂದು ವ್ಯಂಗ್ಯವಾಡಿದ್ದಾರೆ. ಇದೇ ಬಗೆಯ ಟ್ವೀಟ್‍ಗಳನ್ನು ಸಾಕಷ್ಟು ಜನ ಮಾಡುತ್ತಿದ್ದು, ಅವರೆಲ್ಲರ ಸಿಟ್ಟು ಭಾರತದ ಸ್ತ್ರೀವಾದಿಗಳು ಮತ್ತು ‘ಇಸ್ಲಾಂ ಪ್ರಿಯರ’ ಮೇಲಿರುವುದು ವಿಚಿತ್ರವಾಗಿದೆ.

ಸತ್ಯ: ಸೌದಿಯಲ್ಲಿ ಮಹಿಳೆಯರನ್ನು ತುಂಬ ಕೀಳಾಗಿ ಪರಿಗಣಿಸಲಾಗುತ್ತದೆ ಎಂಬ ಅನಿಸಿಕೆಯನ್ನು ಹರಡಲು ಹೀಗೆ ಸಾಹಸ ಮಾಡುತ್ತಿರುವವರ ಪೈಕಿ ಬಹುಪಾಲು ಜನರು ಬಲಪಂಥೀಯ ಸಿದ್ದಾಂತಗಳ ಆರಾಧಕರೇ ಆಗಿದ್ದಾರೆ. ಸೌದಿಯಲ್ಲಿ ಅಂತಹ ಯಾವ ಫತ್ವಾವನ್ನೂ ಹೊರಡಿಸಿಲ್ಲ. ಅಷ್ಟಕ್ಕೂ ಇದು 2015ರಲ್ಲಿ ಹರಿದಾಡಿದ್ದ ಫೇಕ್ ನೈಸ್ ಆಗಿದ್ದು ಈಗ ಮತ್ತೆ ಅದಕ್ಕೆ ಜೀವ ಕೊಡಲಾಗಿದೆ ಅಷ್ಟೇ. ಇದೊಂದು ಫೇಕ್ ಸುದ್ದಿ ಎಂದು ಹಲವಾರು ಪೋರ್ಟಲ್‍ಗಳು ಸಾಬೀತು ಮಾಡುತ್ತ ಬಂದಿದ್ದರೂ ಮತ್ತೆ ಈ ವಾರ ಈ ಫೇಕ್ ನ್ಯೂಸ್ ಓಡಾಡುತ್ತಿದೆ.

ಸೌದಿಯಲ್ಲಿ ಭೀಕರ ಹಸಿವಿನ ಸಮಸ್ಯೆಯೇ? 

ಕಾಮನ್‍ಸೆನ್ಸ್ ಇದ್ದವರಿಗೆ ಗೊತ್ತು, ಸೌದಿಯಲ್ಲೇನೂ ಭೀಕರ ಹಸಿವಿನ ಸಮಸ್ಯೆ ಇಲ್ಲವೆಂದು. ಹಾಗೆಯೇ ಇಂತಹ ಫತ್ವಾ ಹೊರಡಿಸಿದರೆ ಅಲ್ಲೂ ಕ್ರಮ ಕೈಗೊಳ್ಳುತ್ತಾರೆ. ಮೊದಲಿಗೆ ಇದು ಮಿರರ್ ಪತ್ರಿಕೆಯಲ್ಲಿ ಕಾಣಿಸಿಕೊಂಡಿತ್ತು. ಅದನ್ನೇ ನೆಟ್ಟಿಗರು ಸತ್ಯ ಎಂಬಂತೆ ಹರಡುತ್ತಿದ್ದಾರೆ. ಹಾಗಂತ ಯಾವ ಫತ್ವಾವನ್ನು ಹೊರಡಿಸಿಲ್ಲ ಎಂದು ಅಲ್ಲಿನ ಧರ್ಮಗುರುಗಳು ಪದೇ ಪದೇ ಹೇಳಿದ್ದಾರೆ.

ಸುಳ್ಳನ್ನು ಹರಡುವುದೂ ಒಂದು ಮಾನಸಿಕ ಕಾಯಿಲೆ ಆಗುತ್ತಿದೆಯಾ? ಎಂಬ ಪ್ರಶ್ನೆ ಈಗ ಮತ್ತಷ್ಟು ಮುಖ್ಯವೆನಿಸುತ್ತದೆ.

ಕೃಪೆ: ಆಲ್ಟ್ ನ್ಯೂಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...