Homeಅಂತರಾಷ್ಟ್ರೀಯ ‘ಹಸಿವಾದಾಗ ಹೆಂಡತಿಯನ್ನು ತಿನ್ನಬಹುದು...’! ಸೌದಿಯಲ್ಲಿ ಹೀಗೊಂದು ಫತ್ವಾ ಹೊರಬಿದ್ದಿದೆಯಾ?

 ‘ಹಸಿವಾದಾಗ ಹೆಂಡತಿಯನ್ನು ತಿನ್ನಬಹುದು…’! ಸೌದಿಯಲ್ಲಿ ಹೀಗೊಂದು ಫತ್ವಾ ಹೊರಬಿದ್ದಿದೆಯಾ?

- Advertisement -
- Advertisement -

ಕಳೆದ ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇಂಥದ್ದೊಂದು ಸುದ್ದಿ ವೈರಲ್ ಆಗುತ್ತಿದೆ. 2015ರಿಂದ ಇದು ಆಗಾಗ ಕಾಣಿಸಿಕೊಂಡು ‘ಮುಸ್ಲಿಮ ಜಗತ್ತು ಕ್ರೂರ’ ಎಂಬ ಹುಳವನ್ನು ತಲೆಗೆ ಬಿಟ್ಟು ಮರೆಯಾಗುತ್ತ ಬಂದಿದೆ.

ಏನಿದರ ಮರ್ಮ?

ಮಿಥ್ಯ: ಸೌದಿಯ ಪ್ರಮುಖ ಧರ್ಮಗುರುವೊಬ್ಬರು ಫತ್ವಾ ಹೊರಡಿಸಿದ್ದು, ಹಸಿವಾದಾಗ ಹೆಂಡತಿಯನ್ನು ತಿಂದರೆ ತಪ್ಪೇನಿಲ್ಲ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಈ ಕುರಿತು  ಆರಂಭದಲ್ಲಿ ಟ್ವೀಟ್ ಮಾಡಿದವರ ಪೈಕಿ ಖುಷಿ ಸಿಂಗ್ ಎನ್ನುವವರು, ‘ಸೌದಿಯ ಧರ್ಮಗುರು ಅಜೀಜ್ ಅಬ್ದುಲ್ ಈ ರೀತಿಯ ಫತ್ವಾ ಹೊರಡಿಸಿದ್ದಾನೆ. ಭಾರತದ ಸ್ತ್ರೀವಾದಿಗಳಿಗೆ ಅಜೀಜ್ ಅಬ್ದುಲ್‍ನಂತಹ ಪತಿಯರು ಸಿಗಲಿ’ ಎಂದು ವ್ಯಂಗ್ಯವಾಡಿದ್ದಾರೆ. ಇದೇ ಬಗೆಯ ಟ್ವೀಟ್‍ಗಳನ್ನು ಸಾಕಷ್ಟು ಜನ ಮಾಡುತ್ತಿದ್ದು, ಅವರೆಲ್ಲರ ಸಿಟ್ಟು ಭಾರತದ ಸ್ತ್ರೀವಾದಿಗಳು ಮತ್ತು ‘ಇಸ್ಲಾಂ ಪ್ರಿಯರ’ ಮೇಲಿರುವುದು ವಿಚಿತ್ರವಾಗಿದೆ.

ಸತ್ಯ: ಸೌದಿಯಲ್ಲಿ ಮಹಿಳೆಯರನ್ನು ತುಂಬ ಕೀಳಾಗಿ ಪರಿಗಣಿಸಲಾಗುತ್ತದೆ ಎಂಬ ಅನಿಸಿಕೆಯನ್ನು ಹರಡಲು ಹೀಗೆ ಸಾಹಸ ಮಾಡುತ್ತಿರುವವರ ಪೈಕಿ ಬಹುಪಾಲು ಜನರು ಬಲಪಂಥೀಯ ಸಿದ್ದಾಂತಗಳ ಆರಾಧಕರೇ ಆಗಿದ್ದಾರೆ. ಸೌದಿಯಲ್ಲಿ ಅಂತಹ ಯಾವ ಫತ್ವಾವನ್ನೂ ಹೊರಡಿಸಿಲ್ಲ. ಅಷ್ಟಕ್ಕೂ ಇದು 2015ರಲ್ಲಿ ಹರಿದಾಡಿದ್ದ ಫೇಕ್ ನೈಸ್ ಆಗಿದ್ದು ಈಗ ಮತ್ತೆ ಅದಕ್ಕೆ ಜೀವ ಕೊಡಲಾಗಿದೆ ಅಷ್ಟೇ. ಇದೊಂದು ಫೇಕ್ ಸುದ್ದಿ ಎಂದು ಹಲವಾರು ಪೋರ್ಟಲ್‍ಗಳು ಸಾಬೀತು ಮಾಡುತ್ತ ಬಂದಿದ್ದರೂ ಮತ್ತೆ ಈ ವಾರ ಈ ಫೇಕ್ ನ್ಯೂಸ್ ಓಡಾಡುತ್ತಿದೆ.

ಸೌದಿಯಲ್ಲಿ ಭೀಕರ ಹಸಿವಿನ ಸಮಸ್ಯೆಯೇ? 

ಕಾಮನ್‍ಸೆನ್ಸ್ ಇದ್ದವರಿಗೆ ಗೊತ್ತು, ಸೌದಿಯಲ್ಲೇನೂ ಭೀಕರ ಹಸಿವಿನ ಸಮಸ್ಯೆ ಇಲ್ಲವೆಂದು. ಹಾಗೆಯೇ ಇಂತಹ ಫತ್ವಾ ಹೊರಡಿಸಿದರೆ ಅಲ್ಲೂ ಕ್ರಮ ಕೈಗೊಳ್ಳುತ್ತಾರೆ. ಮೊದಲಿಗೆ ಇದು ಮಿರರ್ ಪತ್ರಿಕೆಯಲ್ಲಿ ಕಾಣಿಸಿಕೊಂಡಿತ್ತು. ಅದನ್ನೇ ನೆಟ್ಟಿಗರು ಸತ್ಯ ಎಂಬಂತೆ ಹರಡುತ್ತಿದ್ದಾರೆ. ಹಾಗಂತ ಯಾವ ಫತ್ವಾವನ್ನು ಹೊರಡಿಸಿಲ್ಲ ಎಂದು ಅಲ್ಲಿನ ಧರ್ಮಗುರುಗಳು ಪದೇ ಪದೇ ಹೇಳಿದ್ದಾರೆ.

ಸುಳ್ಳನ್ನು ಹರಡುವುದೂ ಒಂದು ಮಾನಸಿಕ ಕಾಯಿಲೆ ಆಗುತ್ತಿದೆಯಾ? ಎಂಬ ಪ್ರಶ್ನೆ ಈಗ ಮತ್ತಷ್ಟು ಮುಖ್ಯವೆನಿಸುತ್ತದೆ.

ಕೃಪೆ: ಆಲ್ಟ್ ನ್ಯೂಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...