Homeಮುಖಪುಟರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ರೈತ ಹೋರಾಟಕ್ಕೆ ತೆರಳಿದ್ದ ಅಖಿಲೇಶ್ ಯಾದವ್‌ಗೆ ತಡೆ: ಮನೆಮುಂದೆಯೇ ಧರಣಿ-ಗೃಹಬಂಧನ

ಈ ಕುರಿತು ಟ್ವೀಟ್‌ ಮಾಡಿರುವ ಅಖಿಲೇಶ್ ಯಾದವ್ "ನನಗೆ ತಿಳಿದ ಮಟ್ಟಿಗೆ ಎಲ್ಲಾ ಜನರು ನಿಮ್ಮ ವಿರುದ್ಧ ಇದ್ದಾರೆ. ಓ ದಬ್ಬಾಳಿಕೆಗಾರ, ನೀವು ಯಾರನ್ನು ಬಂಧಿಸುವಿರಿ?" ಎಂದು ಪ್ರಶ್ನಿಸಿದ್ದಾರೆ.

- Advertisement -
- Advertisement -

ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಕಿಸಾನ್ ಯಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್‌ರನ್ನು ಉತ್ತರ ಪ್ರದೇಶ ಸರ್ಕಾರ ತಡೆದಿದೆ. ಇದರಿಂದ ಕುಪಿತಗೊಂಡ ಅವರು ಲಖನೌದ ತಮ್ಮ ಮನೆ ಮುಂದೆಯೇ ಧರಣಿ ನಡೆಸಿದ್ದು, ಅವರನ್ನು ಗೃಹಬಂಧನದಲ್ಲಿಡಲಾಗಿದೆ.

ಕೊರೊನಾ ಸಾಂಕ್ರಾಮಿಕ ಕಾಯ್ದೆಯನ್ವಯ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದೇವೆ. ಗುಂಪುಗೂಡಬಾರದೆಂದು ಹಲವ ಬಾರಿ ಮನವಿ ಮಾಡಿದರು ಅಖಿಲೇಶ್ ಆದಿಯಾಗಿ ಯಾರು ನಮ್ಮ ಮಾತು ಕೇಳಲಿಲ್ಲ. ಹಾಗಾಗಿ ಅವರನ್ನು ಗೃಹಬಂಧನದಲ್ಲಿಡಬೇಕಾಯಿತು ಎಂದು ಕನೌಜ್‌ ಜಿಲ್ಲಾಧಿಕಾರಿ ರಾಕೇಶ್ ಮಿಶ್ರಾ ತಿಳಿಸಿದ್ದಾರೆ.

ಇಂದು ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಿಂದ ಹೊರಟು ಕನೌಜ್‌ನ ತಾತಿಯದಿಂದ ತಿವರವರೆಗೂ 13 ಕಿ.ಮೀ ಗಳ ಕಿಸಾನ್ ಯಾತ್ರೆ ನಡೆಸಲು ಯೋಜಿಸಲಾಗಿದೆ. ಅದಕ್ಕೆ ಇಂದು ಮಾಜಿ ಸಿಎಂ ಅಖಿಲೇಶ್ ಯಾದವ್ ಚಾಲನೆ ನೀಡಬೇಕಿತ್ತು. ಆದರೆ ಉತ್ತರ ಪ್ರದೇಶ ಸರ್ಕಾರ ಕೊರೊನಾ ನೆಪವೊಡ್ಡಿ ಅದಕ್ಕೆ ತಡೆಯೊಡ್ಡಿದೆ.

ಲಖನೌ ಪೊಲೀಸರು ಅಖಿಲೇಶ್ ಯಾದವ್‌ರವರ ನಿವಾಸದ ಸುತ್ತಲಿನ ರಸ್ತೆಗಳು ಮತ್ತು ಸಮಾಜವಾದಿ ಪಕ್ಷದ ಕಛೇರಿಯ ಸುತ್ತಲಿನ ರಸ್ತೆಗಳನ್ನು ಮುಚ್ಚಿ ಪ್ರತಿಭಟನೆ ನಡೆಯದಂತೆ ತಡೆದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಘಟನೆ ಕುರಿತು ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ರಾಜೇಂದ್ರ ಚೌಧರಿ ಮಾತನಾಡಿ “ಶಾಂತಿಯುತವಾಗಿ ಪ್ರತಿಭಟನೆ ಮಾಡುವ ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳಲಾಗುತ್ತಿದೆ. ಇದು ಪ್ರಜಾತಂತ್ರ ವಿರೋಧಿ ನಡೆಯಾಗಿದೆ. ಅಖಿಲೇಶ್ ಯಾದವ್‌ರವರು ಕಿಸಾನ್ ಯಾತ್ರೆಯಲ್ಲಿ ಪಾಲ್ಗೊಳ್ಳುವುದರಿಂದ ಆದಿತ್ಯನಾಥ್ ಸರ್ಕಾರ ಬೆದರಿದೆ. ಹಾಗಾಗಿ ಅವರನ್ನು ಬಂಧಿಸಲಾಗಿದೆ” ಎಂದಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅಖಿಲೇಶ್ ಯಾದವ್ “ನನಗೆ ತಿಳಿದ ಮಟ್ಟಿಗೆ ಎಲ್ಲಾ ಜನರು ನಿಮ್ಮ ವಿರುದ್ಧ ಇದ್ದಾರೆ. ಓ ದಬ್ಬಾಳಿಕೆಗಾರ, ನೀವು ಯಾರನ್ನು ಬಂಧಿಸುವಿರಿ?” ಎಂದು ಪ್ರಶ್ನಿಸಿದ್ದಾರೆ.

ನಾಳೆ ನಡೆಯುವ ರೈತರ ಭಾರತ್‌ ಬಂದ್‌ಗೆ ಸಮಾಜವಾದಿ ಪಕ್ಷ ಸಂಪೂರ್ಣವಾಗಿ ಬೆಂಬಲ ನೀಡಿದೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...