Homeಮುಖಪುಟ25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

- Advertisement -
- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತು ಶಾಗೆ ದೊಡ್ಡ ಬ್ರೇಕ್ ನೀಡಿದ ಉತ್ತರಪ್ರದೇಶ ಈ ಸಲ ಉಲ್ಟಾ ಹೊಡೆಯುವ ಲಕ್ಷಣಗಳಿವೆ. 2014ರ ಚುನಾವಣೆ ಫಲಿತಾಂಶ ಮತ್ತು ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉತ್ತರಪ್ರದೇಶದಲ್ಲಿ ಒಂದು ಸಮಾಲೋಚನೆ ನಡೆಯುತ್ತದೆ. ಅದು ಕೇವಲ 25 ನಿಮಿಷಗಳದ್ದು ಆದರೂ ಅದು 25 ವರ್ಷಗಳ ದ್ವೇಷಕ್ಕೆ ಒಂದು ಕೊನೆ ಹಾಡುತ್ತದೆ. ಅದು ಎಸ್‍ಪಿ ಮತ್ತು ಬಿಎಸ್‍ಪಿ ನಡುವಿನ ಮಾತುಕತೆ… ಅದಿವತ್ತೂ ಮೋದಿ-ಶಾಗಳ ಹುಚ್ಚಾಟಕ್ಕೆ ಕಢಿವಾಣ ಹಾಕುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದೆ…

ಎರಡನೇ ಹಂತದ ಚುನಾವಣೆ ಮುಗಿದ ಈ ಹೊತ್ತಿನಲ್ಲಿ ಮತ್ತೆ ನಾಲ್ಕೈದು ತಿಂಗಳಿನ ಹಿಂದಿನ ರಾಜಕೀಯ ವಾತಾವರಣವನ್ನು ನೆನಪಲ್ಲಿ ಇಟ್ಟುಕೊಂಡು, ಅದನ್ನು ಒಂದು ಉಪ-ಆಧಾರವಾಗಿ ಇಟ್ಟುಕೊಂಡು ಚುನಾವಣಾ ವಿಶ್ಲೇಷಣೆ ಮಾಡಲೇಬೇಕಾದ ಪರಿಸ್ಥಿತಿ ಚುನಾವಣಾ ಪಂಡಿತರುಗಳಿಗೆ ಈಗ ಉದ್ಭವಿಸಿದೆ. ಅಂದರೆ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತಿಸಘಡಗಳಲ್ಲಿ ಬಿಜೆಪಿಯ ಅದರಲ್ಲೂ ಮೋದಿ-ಶಾಗಳ ಸೋಲಿನ ನಂತರ ಹಲವು ಹರಸಾಹಸ ಮಾಡಿದರೂ ಈಗ ಮತ್ತೆ ಬಿಜೆಪಿಗೆ ಅಂದುಕೊಂಡಂತೆ ಆಗುತ್ತಿಲ್ಲ.

ಸದ್ಯ ಉತ್ತರಪ್ರದೇಶದ ವಿಷಯಕ್ಕೆ ಬರೋಣ. ಅಲ್ಲಿ ಏರ್ಪಟ್ಟ ಮೈತ್ರಿಯೊಂದು ಬಿಜೆಪಿಯ ಓಟಕ್ಕೆ ಮೊದಲ ತಡೆ ಹಾಕಿದೆ. ಅದು ಆರಂಭದಲ್ಲಿ ಮಹಾಘಟಬಂಧನವಾಗಿತ್ತು, ಈಗ ಅದರಲ್ಲಿ ಕಾಂಗ್ರೆಸ್ ಇಲ್ಲದೇ ಅದು ಕೇವಲ ಘಟಬಂಧನವಾಗಿದೆ. ಆದರೆ ಈ ಎಸ್ಪಿ-ಬಿಎಸ್‍ಪಿ-ಆರ್‍ಎಲ್‍ಡಿ ಮೈತ್ರಿ ಬಿಜೆಪಿಯಿಂದ 40-50 ಸ್ಥಾನಗಳನ್ನು ಕಿತ್ತುಕೊಳ್ಳುವ ಸಾಧ್ಯತೆ ಇದ್ದೇ ಇದೆ.

ಗೆಸ್ಟ್‍ಹೌಸ್ ಪ್ರಕರಣದಿಂದ ಘಟಬಂಧನದ ಕತೆ
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಇತಿಹಾಸದಲ್ಲಿ ಅವು ಪರಸ್ಪರ ಎದುರಾಳಿಯಾಗಿದ್ದೇ ಹೆಚ್ಚಾದರೂ, ಆಗಾಗ ಅವುಗಳ ನಡುವೆ ಒಲವು ಚಿಗುರಿದ್ದೂ ಉಂಟು. ಸುಮಾರು 25 ವರ್ಷಗಳ ಹಿಂದೆ ಮುಲಾಯಂ ನೇತೃತ್ವದ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯ ಸರ್ಕಾರ ಬಿದ್ದಾಗ ಎಸ್ಪಿ ಕಾರ್ಯಕರ್ತರು ಮಾಯಾವತಿಯವರನ್ನು ಗೆಸ್ಟ್‍ಹೌಸ್ ಒಂದರಲ್ಲಿ ಲಾಕ್ ಮಾಡಿ ಸತಾಯಿಸಿದ್ದರು. ಅಂದಿನಿಂದ ಎಸ್ಪಿ ಮತ್ತು ಬಿಎಸ್ಪಿ ನಡುವೆ ಒಂದು ದೊಡ್ಡ ಕಂದಕ ನಿರ್ಮಾಣವಾಗಿತ್ತು.

ಅದಾದ 26 ವರ್ಷಗಳ ನಂತರ, ಮೋದಿ-ಶಾ ಉತ್ತರಪ್ರದೇಶದಲ್ಲಿ 80ರಲ್ಲಿ 71 ಸೀಟು (ಅಪ್ನಾದಳ್ 2 ಸೇರಿದರೆ 73) ಗೆದ್ದಾಗ ಈ ಎರಡೂ ಪಕ್ಷಗಳೂ ತತ್ತರಿಸಿದ್ದವು. ಮುಂದೆ ಕೆಲ ವರ್ಷಗಳ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯಿತು. ಅಷ್ಟೊತ್ತಿಗೆ ತಂದೆಯಿಂದ ಬೇರೆಯಾಗಿ ಗುರ್ತಿಸಿಕೊಂಡಿದ್ದ ನಿಕಟಪೂರ್ವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚೆತ್ತುಕೊಂಡರು.
ಅದರ ಫಲವೇ ಅವರು, ಬಿಎಸ್ಪಿಯ ಮಾಯಾವತಿಯವರೊಂದಿಗೆ 25 ನಿಮಿಷಗಳ ಒಂದು ಮುಕ್ತ ಸಮಾಲೋಚನೆ, ಸಂಧಾನವನ್ನು ನಡೆಸಿದರು. ಇಡೀ ಮಾತುಕತೆಯ ಉದ್ದೇಶ ಬಿಜೆಪಿ, ಮುಖ್ಯವಾಗಿ, ಮೋದಿ-ಶಾಗಳನ್ನು ಅಧಿಕಾರದಿಂದ ದೂರ ಇಡುವುದಾಗಿತ್ತು.
ಸಭೆಯ ನಂತರ ಅಖಿಲೇಶ್ ಹೇಳಿದ್ದು ಒಂದೇ ಮಾತು: ‘ಎಸ್ಪಿ ಕಾರ್ಯಕರ್ತರು ಮಾಯಾವತಿಯನ್ನು ಅವಮಾನಿಸಿದರೆ ಅದು ನನ್ನನ್ನೇ ಅವಮಾನಿಸಿದಂತೆ….’

ಆಗ ಆರ್‍ಎಲ್‍ಡಿ ಮತ್ತು ಕಾಂಗ್ರೆಸ್ ಈ ಮೈತ್ರಿ ಜೊತೆ ಸೇರಿಕೊಂಡವು. ನಂತರ ಈ ಮಹಾಘಟಬಂಧನವು 3 ಲೋಕಸಭಾ ಉಪ ಚುನಾವಣೆಗಳನ್ನು ಭಾರಿ ಅಂತರದಿಂದ ಗೆದ್ದಿತು. ಆ ಮೂಲಕ ಬಿಜೆಪಿ ವಿರೋಧಿ ಮತಗಳು ಸೇರಿದರೆ ಮೋದಿ-ಶಾ ಆಟ ಝೀರೊ ಎಂಬುದನ್ನು ಸಾಬೀತು ಮಾಡಲಾಗಿತು. ಇದು ಕರ್ನಾಟಕದ ರಾಜಕಾರಣದ ಮೇಲೂ ಪ್ರಭಾವ ಬೀರಿದ ಪರಿಣಾಮವಾಗಿಯೇ ಇಲ್ಲಿ ಮೈತ್ರಿ ಸರ್ಕಾರ ರಚನೆಗೊಂಡಿತು. ಇಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆಯ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿತು.
ಈಗ ಬಿಜೆಪಿಯ ಅಂದಾಜಿತ ನಾಗಾಲೋಟಕ್ಕೆ ಉತ್ತರಪ್ರದೇಶವೇ ಮೊದಲ ಬ್ರೇಕ್ ಹಾಕುತ್ತಿದೆ. ಕರ್ನಾಟಕದಲ್ಲೂ ಬಿಜೆಪಿಗೆ ಬ್ರೇಕ್ ಬೀಳದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...