Homeಮುಖಪುಟ25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

- Advertisement -
- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತು ಶಾಗೆ ದೊಡ್ಡ ಬ್ರೇಕ್ ನೀಡಿದ ಉತ್ತರಪ್ರದೇಶ ಈ ಸಲ ಉಲ್ಟಾ ಹೊಡೆಯುವ ಲಕ್ಷಣಗಳಿವೆ. 2014ರ ಚುನಾವಣೆ ಫಲಿತಾಂಶ ಮತ್ತು ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉತ್ತರಪ್ರದೇಶದಲ್ಲಿ ಒಂದು ಸಮಾಲೋಚನೆ ನಡೆಯುತ್ತದೆ. ಅದು ಕೇವಲ 25 ನಿಮಿಷಗಳದ್ದು ಆದರೂ ಅದು 25 ವರ್ಷಗಳ ದ್ವೇಷಕ್ಕೆ ಒಂದು ಕೊನೆ ಹಾಡುತ್ತದೆ. ಅದು ಎಸ್‍ಪಿ ಮತ್ತು ಬಿಎಸ್‍ಪಿ ನಡುವಿನ ಮಾತುಕತೆ… ಅದಿವತ್ತೂ ಮೋದಿ-ಶಾಗಳ ಹುಚ್ಚಾಟಕ್ಕೆ ಕಢಿವಾಣ ಹಾಕುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದೆ…

ಎರಡನೇ ಹಂತದ ಚುನಾವಣೆ ಮುಗಿದ ಈ ಹೊತ್ತಿನಲ್ಲಿ ಮತ್ತೆ ನಾಲ್ಕೈದು ತಿಂಗಳಿನ ಹಿಂದಿನ ರಾಜಕೀಯ ವಾತಾವರಣವನ್ನು ನೆನಪಲ್ಲಿ ಇಟ್ಟುಕೊಂಡು, ಅದನ್ನು ಒಂದು ಉಪ-ಆಧಾರವಾಗಿ ಇಟ್ಟುಕೊಂಡು ಚುನಾವಣಾ ವಿಶ್ಲೇಷಣೆ ಮಾಡಲೇಬೇಕಾದ ಪರಿಸ್ಥಿತಿ ಚುನಾವಣಾ ಪಂಡಿತರುಗಳಿಗೆ ಈಗ ಉದ್ಭವಿಸಿದೆ. ಅಂದರೆ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತಿಸಘಡಗಳಲ್ಲಿ ಬಿಜೆಪಿಯ ಅದರಲ್ಲೂ ಮೋದಿ-ಶಾಗಳ ಸೋಲಿನ ನಂತರ ಹಲವು ಹರಸಾಹಸ ಮಾಡಿದರೂ ಈಗ ಮತ್ತೆ ಬಿಜೆಪಿಗೆ ಅಂದುಕೊಂಡಂತೆ ಆಗುತ್ತಿಲ್ಲ.

ಸದ್ಯ ಉತ್ತರಪ್ರದೇಶದ ವಿಷಯಕ್ಕೆ ಬರೋಣ. ಅಲ್ಲಿ ಏರ್ಪಟ್ಟ ಮೈತ್ರಿಯೊಂದು ಬಿಜೆಪಿಯ ಓಟಕ್ಕೆ ಮೊದಲ ತಡೆ ಹಾಕಿದೆ. ಅದು ಆರಂಭದಲ್ಲಿ ಮಹಾಘಟಬಂಧನವಾಗಿತ್ತು, ಈಗ ಅದರಲ್ಲಿ ಕಾಂಗ್ರೆಸ್ ಇಲ್ಲದೇ ಅದು ಕೇವಲ ಘಟಬಂಧನವಾಗಿದೆ. ಆದರೆ ಈ ಎಸ್ಪಿ-ಬಿಎಸ್‍ಪಿ-ಆರ್‍ಎಲ್‍ಡಿ ಮೈತ್ರಿ ಬಿಜೆಪಿಯಿಂದ 40-50 ಸ್ಥಾನಗಳನ್ನು ಕಿತ್ತುಕೊಳ್ಳುವ ಸಾಧ್ಯತೆ ಇದ್ದೇ ಇದೆ.

ಗೆಸ್ಟ್‍ಹೌಸ್ ಪ್ರಕರಣದಿಂದ ಘಟಬಂಧನದ ಕತೆ
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಇತಿಹಾಸದಲ್ಲಿ ಅವು ಪರಸ್ಪರ ಎದುರಾಳಿಯಾಗಿದ್ದೇ ಹೆಚ್ಚಾದರೂ, ಆಗಾಗ ಅವುಗಳ ನಡುವೆ ಒಲವು ಚಿಗುರಿದ್ದೂ ಉಂಟು. ಸುಮಾರು 25 ವರ್ಷಗಳ ಹಿಂದೆ ಮುಲಾಯಂ ನೇತೃತ್ವದ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯ ಸರ್ಕಾರ ಬಿದ್ದಾಗ ಎಸ್ಪಿ ಕಾರ್ಯಕರ್ತರು ಮಾಯಾವತಿಯವರನ್ನು ಗೆಸ್ಟ್‍ಹೌಸ್ ಒಂದರಲ್ಲಿ ಲಾಕ್ ಮಾಡಿ ಸತಾಯಿಸಿದ್ದರು. ಅಂದಿನಿಂದ ಎಸ್ಪಿ ಮತ್ತು ಬಿಎಸ್ಪಿ ನಡುವೆ ಒಂದು ದೊಡ್ಡ ಕಂದಕ ನಿರ್ಮಾಣವಾಗಿತ್ತು.

ಅದಾದ 26 ವರ್ಷಗಳ ನಂತರ, ಮೋದಿ-ಶಾ ಉತ್ತರಪ್ರದೇಶದಲ್ಲಿ 80ರಲ್ಲಿ 71 ಸೀಟು (ಅಪ್ನಾದಳ್ 2 ಸೇರಿದರೆ 73) ಗೆದ್ದಾಗ ಈ ಎರಡೂ ಪಕ್ಷಗಳೂ ತತ್ತರಿಸಿದ್ದವು. ಮುಂದೆ ಕೆಲ ವರ್ಷಗಳ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯಿತು. ಅಷ್ಟೊತ್ತಿಗೆ ತಂದೆಯಿಂದ ಬೇರೆಯಾಗಿ ಗುರ್ತಿಸಿಕೊಂಡಿದ್ದ ನಿಕಟಪೂರ್ವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚೆತ್ತುಕೊಂಡರು.
ಅದರ ಫಲವೇ ಅವರು, ಬಿಎಸ್ಪಿಯ ಮಾಯಾವತಿಯವರೊಂದಿಗೆ 25 ನಿಮಿಷಗಳ ಒಂದು ಮುಕ್ತ ಸಮಾಲೋಚನೆ, ಸಂಧಾನವನ್ನು ನಡೆಸಿದರು. ಇಡೀ ಮಾತುಕತೆಯ ಉದ್ದೇಶ ಬಿಜೆಪಿ, ಮುಖ್ಯವಾಗಿ, ಮೋದಿ-ಶಾಗಳನ್ನು ಅಧಿಕಾರದಿಂದ ದೂರ ಇಡುವುದಾಗಿತ್ತು.
ಸಭೆಯ ನಂತರ ಅಖಿಲೇಶ್ ಹೇಳಿದ್ದು ಒಂದೇ ಮಾತು: ‘ಎಸ್ಪಿ ಕಾರ್ಯಕರ್ತರು ಮಾಯಾವತಿಯನ್ನು ಅವಮಾನಿಸಿದರೆ ಅದು ನನ್ನನ್ನೇ ಅವಮಾನಿಸಿದಂತೆ….’

ಆಗ ಆರ್‍ಎಲ್‍ಡಿ ಮತ್ತು ಕಾಂಗ್ರೆಸ್ ಈ ಮೈತ್ರಿ ಜೊತೆ ಸೇರಿಕೊಂಡವು. ನಂತರ ಈ ಮಹಾಘಟಬಂಧನವು 3 ಲೋಕಸಭಾ ಉಪ ಚುನಾವಣೆಗಳನ್ನು ಭಾರಿ ಅಂತರದಿಂದ ಗೆದ್ದಿತು. ಆ ಮೂಲಕ ಬಿಜೆಪಿ ವಿರೋಧಿ ಮತಗಳು ಸೇರಿದರೆ ಮೋದಿ-ಶಾ ಆಟ ಝೀರೊ ಎಂಬುದನ್ನು ಸಾಬೀತು ಮಾಡಲಾಗಿತು. ಇದು ಕರ್ನಾಟಕದ ರಾಜಕಾರಣದ ಮೇಲೂ ಪ್ರಭಾವ ಬೀರಿದ ಪರಿಣಾಮವಾಗಿಯೇ ಇಲ್ಲಿ ಮೈತ್ರಿ ಸರ್ಕಾರ ರಚನೆಗೊಂಡಿತು. ಇಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆಯ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿತು.
ಈಗ ಬಿಜೆಪಿಯ ಅಂದಾಜಿತ ನಾಗಾಲೋಟಕ್ಕೆ ಉತ್ತರಪ್ರದೇಶವೇ ಮೊದಲ ಬ್ರೇಕ್ ಹಾಕುತ್ತಿದೆ. ಕರ್ನಾಟಕದಲ್ಲೂ ಬಿಜೆಪಿಗೆ ಬ್ರೇಕ್ ಬೀಳದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...