Homeಮುಖಪುಟ25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

- Advertisement -
- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತು ಶಾಗೆ ದೊಡ್ಡ ಬ್ರೇಕ್ ನೀಡಿದ ಉತ್ತರಪ್ರದೇಶ ಈ ಸಲ ಉಲ್ಟಾ ಹೊಡೆಯುವ ಲಕ್ಷಣಗಳಿವೆ. 2014ರ ಚುನಾವಣೆ ಫಲಿತಾಂಶ ಮತ್ತು ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉತ್ತರಪ್ರದೇಶದಲ್ಲಿ ಒಂದು ಸಮಾಲೋಚನೆ ನಡೆಯುತ್ತದೆ. ಅದು ಕೇವಲ 25 ನಿಮಿಷಗಳದ್ದು ಆದರೂ ಅದು 25 ವರ್ಷಗಳ ದ್ವೇಷಕ್ಕೆ ಒಂದು ಕೊನೆ ಹಾಡುತ್ತದೆ. ಅದು ಎಸ್‍ಪಿ ಮತ್ತು ಬಿಎಸ್‍ಪಿ ನಡುವಿನ ಮಾತುಕತೆ… ಅದಿವತ್ತೂ ಮೋದಿ-ಶಾಗಳ ಹುಚ್ಚಾಟಕ್ಕೆ ಕಢಿವಾಣ ಹಾಕುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದೆ…

ಎರಡನೇ ಹಂತದ ಚುನಾವಣೆ ಮುಗಿದ ಈ ಹೊತ್ತಿನಲ್ಲಿ ಮತ್ತೆ ನಾಲ್ಕೈದು ತಿಂಗಳಿನ ಹಿಂದಿನ ರಾಜಕೀಯ ವಾತಾವರಣವನ್ನು ನೆನಪಲ್ಲಿ ಇಟ್ಟುಕೊಂಡು, ಅದನ್ನು ಒಂದು ಉಪ-ಆಧಾರವಾಗಿ ಇಟ್ಟುಕೊಂಡು ಚುನಾವಣಾ ವಿಶ್ಲೇಷಣೆ ಮಾಡಲೇಬೇಕಾದ ಪರಿಸ್ಥಿತಿ ಚುನಾವಣಾ ಪಂಡಿತರುಗಳಿಗೆ ಈಗ ಉದ್ಭವಿಸಿದೆ. ಅಂದರೆ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತಿಸಘಡಗಳಲ್ಲಿ ಬಿಜೆಪಿಯ ಅದರಲ್ಲೂ ಮೋದಿ-ಶಾಗಳ ಸೋಲಿನ ನಂತರ ಹಲವು ಹರಸಾಹಸ ಮಾಡಿದರೂ ಈಗ ಮತ್ತೆ ಬಿಜೆಪಿಗೆ ಅಂದುಕೊಂಡಂತೆ ಆಗುತ್ತಿಲ್ಲ.

ಸದ್ಯ ಉತ್ತರಪ್ರದೇಶದ ವಿಷಯಕ್ಕೆ ಬರೋಣ. ಅಲ್ಲಿ ಏರ್ಪಟ್ಟ ಮೈತ್ರಿಯೊಂದು ಬಿಜೆಪಿಯ ಓಟಕ್ಕೆ ಮೊದಲ ತಡೆ ಹಾಕಿದೆ. ಅದು ಆರಂಭದಲ್ಲಿ ಮಹಾಘಟಬಂಧನವಾಗಿತ್ತು, ಈಗ ಅದರಲ್ಲಿ ಕಾಂಗ್ರೆಸ್ ಇಲ್ಲದೇ ಅದು ಕೇವಲ ಘಟಬಂಧನವಾಗಿದೆ. ಆದರೆ ಈ ಎಸ್ಪಿ-ಬಿಎಸ್‍ಪಿ-ಆರ್‍ಎಲ್‍ಡಿ ಮೈತ್ರಿ ಬಿಜೆಪಿಯಿಂದ 40-50 ಸ್ಥಾನಗಳನ್ನು ಕಿತ್ತುಕೊಳ್ಳುವ ಸಾಧ್ಯತೆ ಇದ್ದೇ ಇದೆ.

ಗೆಸ್ಟ್‍ಹೌಸ್ ಪ್ರಕರಣದಿಂದ ಘಟಬಂಧನದ ಕತೆ
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಇತಿಹಾಸದಲ್ಲಿ ಅವು ಪರಸ್ಪರ ಎದುರಾಳಿಯಾಗಿದ್ದೇ ಹೆಚ್ಚಾದರೂ, ಆಗಾಗ ಅವುಗಳ ನಡುವೆ ಒಲವು ಚಿಗುರಿದ್ದೂ ಉಂಟು. ಸುಮಾರು 25 ವರ್ಷಗಳ ಹಿಂದೆ ಮುಲಾಯಂ ನೇತೃತ್ವದ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯ ಸರ್ಕಾರ ಬಿದ್ದಾಗ ಎಸ್ಪಿ ಕಾರ್ಯಕರ್ತರು ಮಾಯಾವತಿಯವರನ್ನು ಗೆಸ್ಟ್‍ಹೌಸ್ ಒಂದರಲ್ಲಿ ಲಾಕ್ ಮಾಡಿ ಸತಾಯಿಸಿದ್ದರು. ಅಂದಿನಿಂದ ಎಸ್ಪಿ ಮತ್ತು ಬಿಎಸ್ಪಿ ನಡುವೆ ಒಂದು ದೊಡ್ಡ ಕಂದಕ ನಿರ್ಮಾಣವಾಗಿತ್ತು.

ಅದಾದ 26 ವರ್ಷಗಳ ನಂತರ, ಮೋದಿ-ಶಾ ಉತ್ತರಪ್ರದೇಶದಲ್ಲಿ 80ರಲ್ಲಿ 71 ಸೀಟು (ಅಪ್ನಾದಳ್ 2 ಸೇರಿದರೆ 73) ಗೆದ್ದಾಗ ಈ ಎರಡೂ ಪಕ್ಷಗಳೂ ತತ್ತರಿಸಿದ್ದವು. ಮುಂದೆ ಕೆಲ ವರ್ಷಗಳ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯಿತು. ಅಷ್ಟೊತ್ತಿಗೆ ತಂದೆಯಿಂದ ಬೇರೆಯಾಗಿ ಗುರ್ತಿಸಿಕೊಂಡಿದ್ದ ನಿಕಟಪೂರ್ವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚೆತ್ತುಕೊಂಡರು.
ಅದರ ಫಲವೇ ಅವರು, ಬಿಎಸ್ಪಿಯ ಮಾಯಾವತಿಯವರೊಂದಿಗೆ 25 ನಿಮಿಷಗಳ ಒಂದು ಮುಕ್ತ ಸಮಾಲೋಚನೆ, ಸಂಧಾನವನ್ನು ನಡೆಸಿದರು. ಇಡೀ ಮಾತುಕತೆಯ ಉದ್ದೇಶ ಬಿಜೆಪಿ, ಮುಖ್ಯವಾಗಿ, ಮೋದಿ-ಶಾಗಳನ್ನು ಅಧಿಕಾರದಿಂದ ದೂರ ಇಡುವುದಾಗಿತ್ತು.
ಸಭೆಯ ನಂತರ ಅಖಿಲೇಶ್ ಹೇಳಿದ್ದು ಒಂದೇ ಮಾತು: ‘ಎಸ್ಪಿ ಕಾರ್ಯಕರ್ತರು ಮಾಯಾವತಿಯನ್ನು ಅವಮಾನಿಸಿದರೆ ಅದು ನನ್ನನ್ನೇ ಅವಮಾನಿಸಿದಂತೆ….’

ಆಗ ಆರ್‍ಎಲ್‍ಡಿ ಮತ್ತು ಕಾಂಗ್ರೆಸ್ ಈ ಮೈತ್ರಿ ಜೊತೆ ಸೇರಿಕೊಂಡವು. ನಂತರ ಈ ಮಹಾಘಟಬಂಧನವು 3 ಲೋಕಸಭಾ ಉಪ ಚುನಾವಣೆಗಳನ್ನು ಭಾರಿ ಅಂತರದಿಂದ ಗೆದ್ದಿತು. ಆ ಮೂಲಕ ಬಿಜೆಪಿ ವಿರೋಧಿ ಮತಗಳು ಸೇರಿದರೆ ಮೋದಿ-ಶಾ ಆಟ ಝೀರೊ ಎಂಬುದನ್ನು ಸಾಬೀತು ಮಾಡಲಾಗಿತು. ಇದು ಕರ್ನಾಟಕದ ರಾಜಕಾರಣದ ಮೇಲೂ ಪ್ರಭಾವ ಬೀರಿದ ಪರಿಣಾಮವಾಗಿಯೇ ಇಲ್ಲಿ ಮೈತ್ರಿ ಸರ್ಕಾರ ರಚನೆಗೊಂಡಿತು. ಇಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆಯ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿತು.
ಈಗ ಬಿಜೆಪಿಯ ಅಂದಾಜಿತ ನಾಗಾಲೋಟಕ್ಕೆ ಉತ್ತರಪ್ರದೇಶವೇ ಮೊದಲ ಬ್ರೇಕ್ ಹಾಕುತ್ತಿದೆ. ಕರ್ನಾಟಕದಲ್ಲೂ ಬಿಜೆಪಿಗೆ ಬ್ರೇಕ್ ಬೀಳದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...