Homeಮುಖಪುಟ25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

25 ವರ್ಷದ ದ್ವೇಷ 25 ನಿಮಿಷದಲ್ಲಿ ಶಮನ: ಅಲ್ಲಿಂದ ಶುರುವಾಯಿತು ಮೋದಿಯ ಅಧ:ಪತನ!

- Advertisement -
- Advertisement -

ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಮತ್ತು ಶಾಗೆ ದೊಡ್ಡ ಬ್ರೇಕ್ ನೀಡಿದ ಉತ್ತರಪ್ರದೇಶ ಈ ಸಲ ಉಲ್ಟಾ ಹೊಡೆಯುವ ಲಕ್ಷಣಗಳಿವೆ. 2014ರ ಚುನಾವಣೆ ಫಲಿತಾಂಶ ಮತ್ತು ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉತ್ತರಪ್ರದೇಶದಲ್ಲಿ ಒಂದು ಸಮಾಲೋಚನೆ ನಡೆಯುತ್ತದೆ. ಅದು ಕೇವಲ 25 ನಿಮಿಷಗಳದ್ದು ಆದರೂ ಅದು 25 ವರ್ಷಗಳ ದ್ವೇಷಕ್ಕೆ ಒಂದು ಕೊನೆ ಹಾಡುತ್ತದೆ. ಅದು ಎಸ್‍ಪಿ ಮತ್ತು ಬಿಎಸ್‍ಪಿ ನಡುವಿನ ಮಾತುಕತೆ… ಅದಿವತ್ತೂ ಮೋದಿ-ಶಾಗಳ ಹುಚ್ಚಾಟಕ್ಕೆ ಕಢಿವಾಣ ಹಾಕುವ ಪ್ರಕ್ರಿಯೆಯಲ್ಲಿ ಮುಂಚೂಣಿಯಲ್ಲಿದೆ…

ಎರಡನೇ ಹಂತದ ಚುನಾವಣೆ ಮುಗಿದ ಈ ಹೊತ್ತಿನಲ್ಲಿ ಮತ್ತೆ ನಾಲ್ಕೈದು ತಿಂಗಳಿನ ಹಿಂದಿನ ರಾಜಕೀಯ ವಾತಾವರಣವನ್ನು ನೆನಪಲ್ಲಿ ಇಟ್ಟುಕೊಂಡು, ಅದನ್ನು ಒಂದು ಉಪ-ಆಧಾರವಾಗಿ ಇಟ್ಟುಕೊಂಡು ಚುನಾವಣಾ ವಿಶ್ಲೇಷಣೆ ಮಾಡಲೇಬೇಕಾದ ಪರಿಸ್ಥಿತಿ ಚುನಾವಣಾ ಪಂಡಿತರುಗಳಿಗೆ ಈಗ ಉದ್ಭವಿಸಿದೆ. ಅಂದರೆ, ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತಿಸಘಡಗಳಲ್ಲಿ ಬಿಜೆಪಿಯ ಅದರಲ್ಲೂ ಮೋದಿ-ಶಾಗಳ ಸೋಲಿನ ನಂತರ ಹಲವು ಹರಸಾಹಸ ಮಾಡಿದರೂ ಈಗ ಮತ್ತೆ ಬಿಜೆಪಿಗೆ ಅಂದುಕೊಂಡಂತೆ ಆಗುತ್ತಿಲ್ಲ.

ಸದ್ಯ ಉತ್ತರಪ್ರದೇಶದ ವಿಷಯಕ್ಕೆ ಬರೋಣ. ಅಲ್ಲಿ ಏರ್ಪಟ್ಟ ಮೈತ್ರಿಯೊಂದು ಬಿಜೆಪಿಯ ಓಟಕ್ಕೆ ಮೊದಲ ತಡೆ ಹಾಕಿದೆ. ಅದು ಆರಂಭದಲ್ಲಿ ಮಹಾಘಟಬಂಧನವಾಗಿತ್ತು, ಈಗ ಅದರಲ್ಲಿ ಕಾಂಗ್ರೆಸ್ ಇಲ್ಲದೇ ಅದು ಕೇವಲ ಘಟಬಂಧನವಾಗಿದೆ. ಆದರೆ ಈ ಎಸ್ಪಿ-ಬಿಎಸ್‍ಪಿ-ಆರ್‍ಎಲ್‍ಡಿ ಮೈತ್ರಿ ಬಿಜೆಪಿಯಿಂದ 40-50 ಸ್ಥಾನಗಳನ್ನು ಕಿತ್ತುಕೊಳ್ಳುವ ಸಾಧ್ಯತೆ ಇದ್ದೇ ಇದೆ.

ಗೆಸ್ಟ್‍ಹೌಸ್ ಪ್ರಕರಣದಿಂದ ಘಟಬಂಧನದ ಕತೆ
ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳ ಇತಿಹಾಸದಲ್ಲಿ ಅವು ಪರಸ್ಪರ ಎದುರಾಳಿಯಾಗಿದ್ದೇ ಹೆಚ್ಚಾದರೂ, ಆಗಾಗ ಅವುಗಳ ನಡುವೆ ಒಲವು ಚಿಗುರಿದ್ದೂ ಉಂಟು. ಸುಮಾರು 25 ವರ್ಷಗಳ ಹಿಂದೆ ಮುಲಾಯಂ ನೇತೃತ್ವದ ಎಸ್ಪಿ ಮತ್ತು ಬಿಎಸ್ಪಿ ಮೈತ್ರಿಯ ಸರ್ಕಾರ ಬಿದ್ದಾಗ ಎಸ್ಪಿ ಕಾರ್ಯಕರ್ತರು ಮಾಯಾವತಿಯವರನ್ನು ಗೆಸ್ಟ್‍ಹೌಸ್ ಒಂದರಲ್ಲಿ ಲಾಕ್ ಮಾಡಿ ಸತಾಯಿಸಿದ್ದರು. ಅಂದಿನಿಂದ ಎಸ್ಪಿ ಮತ್ತು ಬಿಎಸ್ಪಿ ನಡುವೆ ಒಂದು ದೊಡ್ಡ ಕಂದಕ ನಿರ್ಮಾಣವಾಗಿತ್ತು.

ಅದಾದ 26 ವರ್ಷಗಳ ನಂತರ, ಮೋದಿ-ಶಾ ಉತ್ತರಪ್ರದೇಶದಲ್ಲಿ 80ರಲ್ಲಿ 71 ಸೀಟು (ಅಪ್ನಾದಳ್ 2 ಸೇರಿದರೆ 73) ಗೆದ್ದಾಗ ಈ ಎರಡೂ ಪಕ್ಷಗಳೂ ತತ್ತರಿಸಿದ್ದವು. ಮುಂದೆ ಕೆಲ ವರ್ಷಗಳ ನಂತರ ನಡೆದ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯಿತು. ಅಷ್ಟೊತ್ತಿಗೆ ತಂದೆಯಿಂದ ಬೇರೆಯಾಗಿ ಗುರ್ತಿಸಿಕೊಂಡಿದ್ದ ನಿಕಟಪೂರ್ವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಎಚ್ಚೆತ್ತುಕೊಂಡರು.
ಅದರ ಫಲವೇ ಅವರು, ಬಿಎಸ್ಪಿಯ ಮಾಯಾವತಿಯವರೊಂದಿಗೆ 25 ನಿಮಿಷಗಳ ಒಂದು ಮುಕ್ತ ಸಮಾಲೋಚನೆ, ಸಂಧಾನವನ್ನು ನಡೆಸಿದರು. ಇಡೀ ಮಾತುಕತೆಯ ಉದ್ದೇಶ ಬಿಜೆಪಿ, ಮುಖ್ಯವಾಗಿ, ಮೋದಿ-ಶಾಗಳನ್ನು ಅಧಿಕಾರದಿಂದ ದೂರ ಇಡುವುದಾಗಿತ್ತು.
ಸಭೆಯ ನಂತರ ಅಖಿಲೇಶ್ ಹೇಳಿದ್ದು ಒಂದೇ ಮಾತು: ‘ಎಸ್ಪಿ ಕಾರ್ಯಕರ್ತರು ಮಾಯಾವತಿಯನ್ನು ಅವಮಾನಿಸಿದರೆ ಅದು ನನ್ನನ್ನೇ ಅವಮಾನಿಸಿದಂತೆ….’

ಆಗ ಆರ್‍ಎಲ್‍ಡಿ ಮತ್ತು ಕಾಂಗ್ರೆಸ್ ಈ ಮೈತ್ರಿ ಜೊತೆ ಸೇರಿಕೊಂಡವು. ನಂತರ ಈ ಮಹಾಘಟಬಂಧನವು 3 ಲೋಕಸಭಾ ಉಪ ಚುನಾವಣೆಗಳನ್ನು ಭಾರಿ ಅಂತರದಿಂದ ಗೆದ್ದಿತು. ಆ ಮೂಲಕ ಬಿಜೆಪಿ ವಿರೋಧಿ ಮತಗಳು ಸೇರಿದರೆ ಮೋದಿ-ಶಾ ಆಟ ಝೀರೊ ಎಂಬುದನ್ನು ಸಾಬೀತು ಮಾಡಲಾಗಿತು. ಇದು ಕರ್ನಾಟಕದ ರಾಜಕಾರಣದ ಮೇಲೂ ಪ್ರಭಾವ ಬೀರಿದ ಪರಿಣಾಮವಾಗಿಯೇ ಇಲ್ಲಿ ಮೈತ್ರಿ ಸರ್ಕಾರ ರಚನೆಗೊಂಡಿತು. ಇಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆಯ ಉಪ ಚುನಾವಣೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗಿತು.
ಈಗ ಬಿಜೆಪಿಯ ಅಂದಾಜಿತ ನಾಗಾಲೋಟಕ್ಕೆ ಉತ್ತರಪ್ರದೇಶವೇ ಮೊದಲ ಬ್ರೇಕ್ ಹಾಕುತ್ತಿದೆ. ಕರ್ನಾಟಕದಲ್ಲೂ ಬಿಜೆಪಿಗೆ ಬ್ರೇಕ್ ಬೀಳದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...