Homeಮುಖಪುಟಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ...

ಸಂಭಾಲ್ ಹಿಂಸಾಚಾರ ಸಂತ್ರಸ್ತರ ಕುಟುಂಬ ಭೇಟಿ ಮಾಡಿದ ಎಸ್ಪಿ ನಿಯೋಗ: 5 ಲಕ್ಷ ರೂ. ಪರಿಹಾರ ಘೋಷಣೆ

- Advertisement -
- Advertisement -

ಸಂಭಾಲ್: ಇತ್ತೀಚಿಗೆ ಶಾಹಿ ಜಾಮಾ ಮಸೀದಿ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು  ಸಮಾಜವಾದಿ ಪಕ್ಷದ (ಎಸ್‌ಪಿ) ಹನ್ನೊಂದು ಸದಸ್ಯರ ನಿಯೋಗವು ಸೋಮವಾರ ಸಂಭಾಲ್‌ಗೆ ಭೇಟಿ ನೀಡಿತು. ನಿಯೋಗವು ನೊಂದ ಕುಟುಂಬಗಳಿಗೆ ಸಂತಾಪ ಸೂಚಿಸಿ, ಚೆಕ್ ರೂಪದಲ್ಲಿ 5 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಿತು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮಾತಾ ಪ್ರಸಾದ್ ಪಾಂಡೆ ಅವರು, ಈ ಸರಕಾರವು ಮುಸ್ಲಿಂ ಸಮುದಾಯದ ಬಗ್ಗೆ ಸಂವೇದನಾಶೀಲತೆ ಹೊಂದಿಲ್ಲ. ಅದು ಮುಸ್ಲಿಮರ ಬಗ್ಗೆ ಅದಕ್ಕೆ ಸಹಾನುಭೂತಿ ಇಲ್ಲ. ರಾಜಕೀಯ ಲಾಭಕ್ಕಾಗಿ ಹಿಂದೂ-ಮುಸ್ಲಿಂರ ನಡುವೆ ದ್ವೇಷವನ್ನು ಬೆಳೆಸುವುದು, ಕೋಮುವಾದದಲ್ಲಿ ಜನರನ್ನು ವಿಭಜಿಸುವುದು ಅದರ ಅಜೆಂಡಾವಾಗಿದೆ ಎಂದು  ಉತ್ತರಪ್ರದೇಶ ಸರ್ಕಾರದ ವಿರುದ್ಧ ಕಟುವಾದ ವಾಗ್ದಾಳಿ ನಡೆಸಿದರು

ಸಂಭಾಲ್ ಶಾಹಿ ಜಾಮಾ ಮಸೀದಿ ಬಳಿ ಪೊಲೀಸ್ ಪೋಸ್ಟ್ ನಿರ್ಮಾಣಕ್ಕೂ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದರು. ಸೂಕ್ತ ತನಿಖೆಯಾಗಲಿ, ಸೂಕ್ತ ಪರಿಹಾರ ನೀಡದೇ ಖಾಸಗಿ ಜಮೀನು ಒತ್ತುವರಿ ಮಾಡಿಕೊಂಡಿರುವ ಆಡಳಿತದ ಕಾನೂನುಬದ್ಧತೆ ಏನು ಎಂದು ಪ್ರಶ್ನಿಸಿದರು.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಅಡಿಯಲ್ಲಿ ಮಸೀದಿಯ ಪಾರಂಪರಿಕ ಸ್ಥಾನಮಾನವನ್ನು ಸರ್ವೆಯ ಮೂಲಕ ಸಮೀಕ್ಷೆ ನಡೆಸುವ ಕಾನೂನುಬದ್ಧತೆಯನ್ನು ಅವರು ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಚುನಾವಣಾ ದುರುಪಯೋಗದ ಬಗ್ಗೆ ಆರೋಪಿಸಿರುವ ಪಾಂಡೆ ಅವರು, ನವೆಂಬರ್ 20 ರಂದು ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಬೆದರಿಸುವ ಪುರಾವೆಗಳಿವೆ ಎಂದು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳನ್ನು ಮತದಾರರಿಗೆ ಬೆದರಿಕೆ ಹಾಕಲು ಮತ್ತು ಮತದಾನ ಮಾಡದಂತೆ ಅವರನ್ನು ನಿರುತ್ಸಾಹಗೊಳಿಸಲು ಬಳಸಲಾಗುತ್ತಿತ್ತು. ಈ ಹೇಳಿಕೆಯನ್ನು ಸಾಬೀತುಪಡಿಸಲು ನನ್ನ ಬಳಿ ಮತದಾನದ ದಿನದ ದಾಖಲೆಗಳಿವೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿಯವರ ತವರು ಗೋರಖ್‌ಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದವರಾಗಿದ್ದರೂ, ನಗರವು ದೈನಂದಿನ ಗುಂಡಿನ ಸಪ್ಪಳದ ಘಟನೆಗಳಿಗೆ ಸಾಕ್ಷಿಯಾಗುತ್ತಿದೆ. ನಿರುದ್ಯೋಗ ಮತ್ತು ಹಣದುಬ್ಬರ ಅನಿಯಂತ್ರಿತವಾಗಿ ಏರುತ್ತಿದೆ. ಈ ಒತ್ತುವರಿ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರವು ಸುಳ್ಳು ಪ್ರಚಾರದ ಮೂಲಕ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯುವಲ್ಲಿ ನಿರತವಾಗಿದೆ ಎಂದು ಪಾಂಡೆ ತಿಳಿಸಿದ್ದಾರೆ.

ಸಂಭಾಲ್‌ನ ಸಮಾಜವಾದಿ ಪಕ್ಷದ ಸಂಸದ ಜಿಯಾವುರ್ ರೆಹಮಾನ್ ಬಾರ್ಕ್ ಮಾತನಾಡಿ,  ಪೊಲೀಸರು ಆಧಾರರಹಿತ ಊಹೆಗಳ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಪೊಲೀಸರು ಜನರ ಬಳಿ ಬಂದೂಕುಗಳಿವೆ ಎಂದು ಯಾವ ಪುರಾವೆಗಳ ಆಧಾರದ ಮೇಲೆ ಕಂಡುಕೊಂಡಿದ್ದಾರೆ? ಹಿಂಸಾಚಾರವನ್ನು ಪ್ರಚೋದಿಸುವುದು ನಮ್ಮ ಉದ್ದೇಶವಾಗಿದ್ದರೆ, ಸಮೀಕ್ಷೆಯ ಮೊದಲ ದಿನ ಏಕೆ ಗಲಭೆಗಳು ಸಂಭವಿಸಲಿಲ್ಲ? ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ನಮಗ ವಿಶ್ವಾಸವಿದೆ. ನ್ಯಾಯವು ಮೇಲುಗೈ ಸಾಧಿಸುತ್ತದೆ ಎಂದು ಅವರು ಹೇಳಿದರು.

ತನ್ನ ಧ್ವನಿಯನ್ನು ಹತ್ತಿಕ್ಕಲು ತನ್ನ ವಿರುದ್ಧ ವಿದ್ಯುತ್ ಕಳ್ಳತನದ ಸುಳ್ಳು ಪ್ರಕರಣವನ್ನು ದಾಖಲಿಸಿ, ತನ್ನನ್ನು ವೈಯಕ್ತಿಕವಾಗಿ ಗುರಿ ಮಾಡಲಾಗುತ್ತಿದೆ ಎಂದು ಬಾರ್ಕ್ ಆರೋಪಿಸಿದ್ದಾರೆ.

ನಿಯೋಗದಲ್ಲಿದ್ದ ಮತ್ತೊಬ್ಬ ಎಸ್‌ಪಿ ನಾಯಕ ಲಾಲ್ ಬಿಹಾರಿ ಯಾದವ್ ಮಾತನಾಡಿದರು. ಅವರು ಹಿಂಸಾಚಾರವನ್ನು ಪೊಲೀಸರು ನಿಭಾಯಿಸುತ್ತಿರುವುದನ್ನು ಪ್ರಶ್ನಿಸಿದ್ದಾರೆ. “ಪೊಲೀಸರು ತಮಗೆ ಇಷ್ಟ ಬಂದಂತೆ ಜನರಿಗೆ ಕಿರುಕುಳ ನೀಡಿದ್ದಾರೆ. ಸಂಭಾಲ್ ಹಿಂಸಾಚಾರದ ಐದು ಬಲಿಪಶುಗಳ ಹತ್ಯೆಗೆ ಸಂಬಂಧಿಸಿ ಪೊಲೀಸರು ಏಕೆ ಪ್ರಕರಣವನ್ನು ದಾಖಲಿಸಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಯಾದವ್ ಅವರು ಸ್ಥಳೀಯ ಮುಸ್ಲಿಂ ಸಮುದಾಯದ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದು, “ಜನರು ಎಸೆದ ಇಟ್ಟಿಗೆಗಳು ಮತ್ತು ಕಲ್ಲುಗಳು ಆತ್ಮರಕ್ಷಣೆಯ ಕೃತ್ಯಗಳಾಗಿವೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಸಂಭಾಲ್‌ನಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಎಸ್‌ಪಿ ನಿಯೋಗವು ಈ ಭೇಟಿ ನೀಡಿದೆ. ಸಂಭಾಲ್‌ನಲ್ಲಿ ನವೆಂಬರ್ 24ರಂದು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ತಂಡವು ಮೊಘಲರ ಕಾಲದ ಮಸೀದಿಯನ್ನು ಸಮೀಕ್ಷೆ ನಡೆಸಲು ಬಂದಾಗ ಹಿಂಸಾಚಾರ ಸ್ಫೋಟಗೊಂಡಿತು. ಈ ಹಿಂಸಾಚಾರದಲ್ಲಿ ಪೊಲೀಸರ ಗುಂಡಿಗೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು 50 ಮಂದಿಯನ್ನು ಬಂಧಿಸಲಾಗಿದೆ.

ಜುಬೇರ್ ವಿರುದ್ಧ ಯತಿ ನರಸಿಂಹಾನಂದ ದೂರು: ಹೇಳಿಕೆ ದಾಖಲಿಸಿದ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...