Homeಮುಖಪುಟಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

- Advertisement -
- Advertisement -

ರಾಮಮಂದಿರದ ಕುರಿತು ಸುಪ್ರೀಂಕೋರ್ಟ್ ಆದೇಶವು ಬರೀ ತೀರ್ಪು, ಅದು ನ್ಯಾಯವಲ್ಲ ಎಂದು ಮೊರಾದಾಬಾದ್‌ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದ ಎಸ್‌ಟಿ ಹಸನ್ ಲೋಕಸಭೆಯಲ್ಲಿ ಹೇಳಿದ್ದು, ಕಾಶಿ ಮತ್ತು ಮಥುರಾದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಕೂಡ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. ಸರಕಾರ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ತೆಗೆದುಕೊಂಡ ನಿಲುವುಗಳನ್ನು ಕೂಡ ಸದನದ ಮುಂದಿಟ್ಟಿದ್ದು, ಯಾಕೆ ಈ ತಾರತಮ್ಯ ಮಾಡಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಸಂಸತ್ತಿನಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಹಸನ್‌, ಸುಪ್ರೀಂಕೋರ್ಟ್ ತೀರ್ಪು ನೀಡಿತು ಮತ್ತು ರಾಮ ಮಂದಿರದ ಸಮಸ್ಯೆಯನ್ನು ಬಗೆಹರಿಸಲಾಯಿತು. ಇದು ತೀರ್ಪು ಮತ್ತು ನ್ಯಾಯವಲ್ಲ, ಆದರೆ ಅದನ್ನು ಪರಿಹರಿಸಲಾಯಿತು. ಈಗ ಮತ್ತೊಂದು ಮಸೀದಿಯ ವಿಷಯ ಬಂದಿದೆ. ಜ್ಞಾನವಾಪಿ, ನಂತರ ಮಥುರಾ ಇರುತ್ತದೆ, ನಂತರ ತಾಜ್ ಮಹಲ್, ಕುತುಬ್ ಮಿನಾರ್ ಮತ್ತು ದೆಹಲಿಯ ಜಮಾ ಮಸೀದಿ, ಜನರು 3,000 ಮಸೀದಿಗಳು ಇದೇ ರೀತಿ ತಮ್ಮದೆಂದರೆ ಹೇಗೆ? ನಾವು ನಮ್ಮ ಮುಂದಿನ ಪೀಳಿಗೆಗೆ ಏನು ನೀಡುತ್ತಿದ್ದೇವೆ ಪ್ರೀತಿ ಅಥವಾ ದ್ವೇಷವನ್ನು ನೀಡುತ್ತಿದ್ದೇವೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ರಾಷ್ಟ್ರವು ಸಾಧಿಸಿದ ಕ್ರೀಡಾ ಸಾಧನೆಯನ್ನು ಅವರು ಶ್ಲಾಘಿಸಿದ್ದಾರೆ ಆದರೆ ಅಲ್ಪಸಂಖ್ಯಾತರಿರ ಮೇಲೆ ನಿರಂತರ ದೌರ್ಜನ್ಯ ನಡೆದಿದೆ ಎಂದು ಹೇಳಿದ್ದಾರೆ. ದೇಶದ ಮುಸ್ಲಿಮರನ್ನು ತೊಂದರೆಗೊಳಪಡಿಸುವ ಮತ್ತು ಅವರಲ್ಲಿ ಆತಂಕವನ್ನು ಉಂಟುಮಾಡುವ ಕೆಲವು ಶಾಸನಗಳನ್ನು ಅಂಗೀಕರಿಸಲಾಗಿದೆ. ಮೊದಲ ಬಾರಿಗೆ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರಲಾಯಿತು. 370ನೇ ವಿಧಿಯನ್ನು ತೆಗೆದುಹಾಕಲಾಯಿತು. ಭಯೋತ್ಪಾದನೆಯನ್ನು ಕೊನೆಗೊಳಿಸಲಾಗುವುದು ಎಂದು ನಮಗೆ ಹೇಳಲಾಗಿದೆ, ಆದರೆ ಪ್ರತಿ ಎರಡನೇ ದಿನಕ್ಕೆ ಒಂದು ಘಟನೆ ನಡೆಯುತ್ತಿದೆ. ತ್ರಿವಳಿ ತಲಾಖ್ ಮಸೂದೆಯನ್ನು ಜಾರಿಗೆ ತರಲಾಯಿತು,  ಹಿಜಾಬ್ ಮತ್ತು ಅಝಾನ್‌ ವಿಚಾರದಲ್ಲಿ ಜನರಿಗೆ ಸಮಸ್ಯೆಗಳನ್ನು ಮಾಡಲಾಯಿತು. ಸ್ವಾತಂತ್ರ್ಯ ಪಡೆಯಲು ನಾವೆಲ್ಲರೂ ಸೇರಿ ರಕ್ತ ಹರಿಸಿದ್ದು ಇದೇ ದೇಶಕ್ಕಯೇ? ಅದು ಎಲ್ಲಿ ನಿಲ್ಲುತ್ತದೆ? ಎಂದು ಅವರು ಪ್ರಶ್ನಿಸಿದ್ದಾರೆ.

ಹಸನ್ ಅವರು ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯನ್ನು ಪ್ರಸ್ತಾಪಿಸಿದರು. ನಮ್ಮ ಸರ್ಕಾರವು ಇಸ್ರೇಲ್‌ಗೆ ಬೆಂಬಲವನ್ನು ಘೋಷಿಸಿತ್ತು. ಭಯೋತ್ಪಾದನೆಯನ್ನು ಯಾರೂ ಬೆಂಬಲಿಸುವುದಿಲ್ಲ. ಆದರೆ ಒಂದು ರಾಜ್ಯವು ಭಯೋತ್ಪಾದಕರಾದರೆ, ಮಹಿಳೆಯರು, ಮಕ್ಕಳು ಮತ್ತು ವೃದ್ಧರನ್ನು ಕೊಂದರೆ, ಆ ರಾಜ್ಯವನ್ನು ವಿರೋಧಿಸುವುದು ನಮ್ಮ ಕರ್ತವ್ಯವಲ್ವ. ಈ ದಬ್ಬಾಳಿಕೆ ಕೊನೆಗೊಳ್ಳಬೇಕು ಎಂಬ ಸಂದೇಶ ನಮ್ಮ ಸರ್ಕಾರ ಮತ್ತು ಸಂಸತ್ತಿನಿಂದ ಹೋಗಬೇಕಿತ್ತು ಎಂದರು.

ಸರ್ಕಾರವು ಮದರಸಾಗಳಿಂದ ಶಿಕ್ಷಕರನ್ನು ತೆಗೆದುಹಾಕಿದೆ, ಮೌಲಾನಾ ಆಜಾದ್ ವಿದ್ಯಾರ್ಥಿ ವೇತನವನ್ನು ಹಿಂಪಡೆಯಲಾಗಿದೆ, AMU ಮತ್ತು ಜಾಮಿಯಾ ಮಿಲಿಯಾಗೆ ಬಜೆಟ್ ಅನುದಾನ ಏಕೆ ಕಡಿಮೆ ಮಾಡಲಾಗಿದೆ? ಇದು ನೀವು ಧರ್ಮದ ಆಧಾರದ ಮೇಲೆ ಮಾಡುತ್ತಿರುವ ತಾರತಮ್ಯ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಮೋದಿ ಹೇಳಿಕೆಗಳಿಂದ ಜನ ಬೇಸತ್ತಿದ್ದಾರೆ, #ByeByeModi ಟ್ರೆಂಡಿಂಗ್‌ನಲ್ಲಿದೆ: ಕಾಂಗ್ರೆಸ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...