Homeಮುಖಪುಟಎಸ್‌ಪಿ ವರಿಷ್ಠ, ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ

ಎಸ್‌ಪಿ ವರಿಷ್ಠ, ಯುಪಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ

- Advertisement -
- Advertisement -

ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ (82) ಸೋಮವಾರ ನಿಧನರಾಗಿದ್ದಾರೆ. ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು.

ಮುಲಾಯಂ ಅವರಿಗೆ ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆಯು ಶುಕ್ರವಾರ ತನ್ನ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಿತ್ತು.

ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದು, “ಎಲ್ಲರ ನಾಯಕರಾಗಿದ್ದ ನನ್ನ ಗೌರವಾನ್ವಿತ ತಂದೆ ಇನ್ನಿಲ್ಲ” ಎಂದು ತಿಳಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಅವರು ನವೆಂಬರ್ 22, 1939ರಂದು ಜನಿಸಿದರು. ಭಾರತದ ಹಿರಿಯ ರಾಜಕಾರಣಿಯಾಗಿದ್ದ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥರಾಗಿದ್ದರು. ಅವರು ಉತ್ತರ ಪ್ರದೇಶದ ಅಜಂಗಢ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾಗಿದ್ದರು. ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸ್ಥಾಪಕರಾಗಿದ್ದ ಅವರು, ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಸೇವೆ ಸಲ್ಲಿಸಿದ್ದರು. ಮುಲಾಯಂ ಸಿಂಗ್ ಯಾದವ್ ಅವರು 1970ರ ನಂತರದ ಸಾಮಾಜಿಕ, ರಾಜಕೀಯ ಪರಿಸ್ಥಿತಿಯಲ್ಲಿ ಉತ್ತರ ಪ್ರದೇಶದ ರಾಜಕಾರಣದಲ್ಲಿ ಮುಂಚೂಣಿಗೆ ಬಂದರು.

ಸಮಾಜವಾದಿ ನಾಯಕರಾಗಿ ಹೊರಹೊಮ್ಮಿದ ಮುಲಾಯಂ ಅವರು ನಂತರದಲ್ಲಿ ಒಬಿಸಿ ನಾಯಕರಾಗಿ ಗುರುತಿಸಿಕೊಂಡರು. ಕಾಂಗ್ರೆಸ್‌ನಿಂದ ತೆರವಾದ ರಾಜಕೀಯ ಜಾಗವನ್ನು ವಶಪಡಿಸಿಕೊಂಡರು. 1989 ರಲ್ಲಿ ಯುಪಿಯ 15 ನೇ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, “ಮುಲಾಯಂ ಸಿಂಗ್ ಯಾದವ್ ಅವರು ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸ್ಯೆಗಳ ಬಗ್ಗೆ ಸಂವೇದನಾಶೀಲರಾಗಿದ್ದ ಅವರು ವಿನಮ್ರ ಮತ್ತು ತಳಮಟ್ಟದ ನಾಯಕರಾಗಿ ವ್ಯಾಪಕವಾಗಿ ಪ್ರಶಂಸಿಸಲ್ಪಟ್ಟರು. ಅವರು ಶ್ರದ್ಧೆಯಿಂದ ಜನರಿಗೆ ಸೇವೆ ಸಲ್ಲಿಸಿದರು. ಲೋಕನಾಯಕ್ ಜೆಪಿ ಮತ್ತು ಡಾ. ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು” ಎಂದು ಸ್ಮರಿಸಿದ್ದಾರೆ.

“ಯಾದವ್ ಅವರು ಯುಪಿ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಗಮನ ಸೆಳೆದರು. ತುರ್ತು ಪರಿಸ್ಥಿತಿಯ ಸಮಯದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು. ರಕ್ಷಣಾ ಸಚಿವರಾಗಿ, ಅವರು ಬಲಿಷ್ಠ ಭಾರತಕ್ಕಾಗಿ ಕೆಲಸ ಮಾಡಿದ್ದಾರೆ. ಅವರ ಸಂಸದೀಯ ಚರ್ಚೆಗಳು ಒಳನೋಟ ನೀಡಿವೆ. ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಒತ್ತು ನೀಡಿವೆ” ಎಂದಿದ್ದಾರೆ.

“ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಸಾಮಾನ್ಯ ಪರಿಸರದಿಂದ ಬಂದ ಮುಲಾಯಂ ಸಿಂಗ್ ಯಾದವ್ ಅವರ ಸಾಧನೆಗಳು ಅಸಾಧಾರಣವಾಗಿವೆ” ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.

ಮೂರು ದಿನ ಶೋಕಾಚರಣೆ

ಸಮಾಜವಾದಿ ಪಕ್ಷದ ಹಿರಿಯ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ನಿಧನಕ್ಕೆ ಉತ್ತರ ಪ್ರದೇಶದಲ್ಲಿ ಮೂರು ದಿನಗಳ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

ಮುಲಾಯಂ ಸಿಂಗ್ ಅವರ ಪುತ್ರ ಅಖಿಲೇಶ್ ಯಾದವ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಅವರೊಂದಿಗೆ ಮಾತನಾಡಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ.

“‘ಮುಲಾಯಂ ಸಿಂಗ್ ಯಾದವ್ ಅವರ ಸಾವು ಅತ್ಯಂತ ದುಃಖಕರವಾಗಿದೆ. ಅವರು ಸಮಾಜವಾದದ ಆಧಾರಸ್ತಂಭವಾಗಿದ್ದರು” ಎಂದು ಬಣ್ಣಿಸಿದ್ದಾರೆ.

ಸಾಮಾಜಿಕ ನ್ಯಾಯದ ಹೋರಾಟ ಕಟ್ಟಿದವರಲ್ಲಿ ಮುಲಾಯಂ ಪ್ರಮುಖರು: ಸಿದ್ದರಾಮಯ್ಯ

ಮುಲಾಯಂ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. “ಉತ್ತರ ಪ್ರದೇಶದ ಮಾಜಿಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಸಾವು ದೇಶದ ಜಾತ್ಯತೀತ ರಾಜಕೀಯ ಹೋರಾಟಕ್ಕೆ ತುಂಬಲಾರದ ನಷ್ಟ.‘ ರಾಮಮನೋಹರ ಲೋಹಿಯಾ ಅವರ ಅನುಯಾಯಿಯಾಗಿ ರಾಜಕೀಯ ಪ್ರವೇಶ ಮಾಡಿದ್ದ ಮುಲಾಯಂ ಸಿಂಗ್, ಜೆಪಿ ಚಳುವಳಿಯಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡವರು. ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡಿದ ಮಂಡಲ್ ವರದಿಯ ಅನುಷ್ಠಾನಕ್ಕಾಗಿ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಅವರ ಬೆಂಬಲಕ್ಕೆ ನಿಂತಿದ್ದ ಮುಲಾಯಂ ಸಿಂಗ್, ದೇಶದಲ್ಲಿ ಸಾಮಾಜಿಕ ನ್ಯಾಯದ ಹೋರಾಟವನ್ನು ಕಟ್ಟಿದವರಲ್ಲಿ ಪ್ರಮುಖರು” ಎಂದಿದ್ದಾರೆ.

“ಬಾಬರಿ ಮಸೀದಿ ಧ್ವಂಸದ ಪೂರ್ವ ಮತ್ತು ನಂತರದ ಕೋಮುವಾದಿ ರಾಜಕೀಯಕ್ಕೆ ಉತ್ತರಪ್ರದೇಶದಲ್ಲಿ ಪ್ರಬಲ ಪ್ರತಿರೋಧ ಒಡ್ಡಿದ್ದ ಮುಲಾಯಂ ಸಿಂಗ್ ಬಿಜೆಪಿ ಜೊತೆ ರಾಜಿ ಮಾಡಿಕೊಂಡವರಲ್ಲ. ರಾಜ್ಯದಲ್ಲಿ ‘ನೇತಾಜಿ’ ಎಂದೇ ಖ್ಯಾತರಾಗಿದ್ದ ಮುಲಾಯಂ ಸಿಂಗ್, ಮೂರು ಬಾರಿ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಆ ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಪರವಾದ ಆಡಳಿತ ನೀಡಿದವರು. ದೇಶಾದ್ಯಂತ ಇಂದು ಕೋಮುವಾದಿ ಶಕ್ತಿಗಳು ವಿಜೃಂಭಿಸುತ್ತಿರುವಾಗ ಅದರ ವಿರುದ್ಧದ ಹೋರಾಟಕ್ಕೆ ಮುಲಾಯಂ ಸಿಂಗ್ ಅವರ ನಾಯಕತ್ವ ಮತ್ತು ಮಾರ್ಗದರ್ಶನ ಹಿಂದಿಗಿಂತಲೂ ಈಗ ಹೆಚ್ಚು ಅಗತ್ಯ ಇತ್ತು. ಮಾಜಿ ಮುಖ್ಯಮಂತ್ರಿ ಮತ್ತು ಮಗ ಅಖಿಲೇಶ್ ಯಾದವ್ ಅವರು ಅಪ್ಪನ ಸಾಮಾಜಿಕ ನ್ಯಾಯದ ಹೋರಾಟವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುತ್ತಾರೆ ಎಂಬ ಭರವಸೆ ನನಗಿದೆ. ಮುಲಾಯಂ ಸಿಂಗ್ ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...