Homeಮುಖಪುಟಸ್ಪಾ ಮ್ಯಾನೇಜರ್‌‌ ಮತ್ತು ಗ್ರಾಹಕನಿಂದ ಉದ್ಯೋಗಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಪಾ ಮ್ಯಾನೇಜರ್‌‌ ಮತ್ತು ಗ್ರಾಹಕನಿಂದ ಉದ್ಯೋಗಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ದೆಹಲಿಯ ಪಿತಾಂಪುರದಲ್ಲಿರುವ ಸ್ಪಾವೊಂದರ ಮ್ಯಾನೇಜರ್ ಮತ್ತು ಗ್ರಾಹಕ 22 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಯುವತಿ ಶನಿವಾರ ದೆಹಲಿಯ ಮಹಿಳಾ ಆಯೋಗವನ್ನು (ಡಿಸಿಡಬ್ಲ್ಯು) ಸಂಪರ್ಕಿಸಿದ್ದು, ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಘಟನೆಯ ಕುರಿತು ದೆಹಲಿ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಗೆ ನೋಟಿಸ್ ನೀಡಿದ್ದಾರೆ.

ತಾನು ಮಸಾಜಿಯಾಗಿ ಕೆಲಸ ಮಾಡುತ್ತಿದ್ದ ಪಿತಾಂಪುರದ ‘ದಿ ಓಷನ್ ಸ್ಪಾ’ದಲ್ಲಿ ಈ ಘಟನೆ ನಡೆದಿದೆ ಎಂದು ಡಿಸಿಡಬ್ಲ್ಯೂಗೆ ಯುವತಿ ತಿಳಿಸಿದ್ದಾರೆ. “ಸ್ಪಾ ಮ್ಯಾನೇಜರ್ ನನ್ನನ್ನು ಗ್ರಾಹಕನಿಗೆ ಪರಿಚಯಿಸಿ, ನನಗೆ ಅಮಲು ಬೆರೆಸಿದ ಪಾನೀಯವನ್ನು ಕೊಟ್ಟಿದ್ದಾರೆ. ಇದರ ನಂತರ ಇಬ್ಬರು ದುಷ್ಕರ್ಮಿಗಳು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ” ಎಂದು ಸಂತ್ರಸ್ತೆ ಯುವತಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದುರ್ಘಟನೆ ಕುರಿತು ತಿಳಿಸಿಲು ಯತ್ನಿಸಿದಾಗ, ಈ ಬಗ್ಗೆ ಎಲ್ಲೂ ಹೇಳದಂತೆ ತನಗೆ ದುಡ್ಡು ನೀಡಲು  ಸ್ಪಾ ಮಾಲೀಕರು ಪ್ರಯತ್ನಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಹಲ್ಲೆ ನಡೆಸಿ, ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್‌‌; ಆರೋಪಿ ಪರಾರಿ

ಮಹಿಳಾ ಆಯೋಗವು ಈ ಪ್ರಕರಣವನ್ನು ತಕ್ಷಣವೇ ಕೈಗೆತ್ತಿಕೊಂಡಿದ್ದು ದೆಹಲಿ ಮುನ್ಸಿಪಲ್ ಕಾಪೋರೇಷನ್‌ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದು, ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಕೇಳಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ದೆಹಲಿ ಪೊಲೀಸರಿಗೆ ಕಳುಹಿಸಿರುವ ನೋಟಿಸ್‌ನಲ್ಲಿ, ಎಫ್‌ಐಆರ್‌ನ ಪ್ರತಿಯನ್ನು ಮತ್ತು ಈ ಪ್ರಕರಣದ ಕುರಿತು ಬಂಧಿಸಿರುವ ಆರೋಪಿಗಳ ವಿವರಗಳನ್ನು ಕೋರಿದ್ದಾರೆ.

ಇಷ್ಟೆ ಅಲ್ಲದೆ, ವಿವಾದಿತ ಸ್ಪಾಗೆ ಮಾನ್ಯವಾದ ಪರವಾನಗಿ ಇದೆಯೇ ಎಂದು ಆಯೋಗವು ಅಧಿಕಾರಿಗಳಿಂದ ಕೇಳಿದೆ. ಮಾನ್ಯ ಪರವಾನಗಿ ಇಲ್ಲದೆ ಸ್ಪಾ ನಡೆಸುತ್ತಿದ್ದಲ್ಲಿ ಲೋಪಕ್ಕೆ ಕಾರಣರಾದ ವ್ಯಕ್ತಿಗಳ ಬಗ್ಗೆಯೂ ಆಯೋಗ ಅಧಿಕಾರಿಗಳ ಪ್ರಶ್ನಿಸಿದೆ. ಮಹಿಳಾ ಆಯೋಗವೂ ಆಗಸ್ಟ್ 8 ರೊಳಗೆ ವಿವರಗಳನ್ನು ನೀಡುವಂತೆ ಕೇಳಿದೆ.

ಇದನ್ನೂ ಓದಿ: ಕೋಮು ಧ್ರುವೀಕರಣ ತಡೆಗೆ ಮಾಡಬೇಕಿರುವುದೇನು? ದಕ್ಷಿಣ ಕನ್ನಡದ ಮುಸ್ಲಿಂ ದನಿಗಳ ಕಾಳಜಿಯ ನುಡಿಗಳು

ಈ ಬಗ್ಗೆ ಮಾತನಾಡಿದ ಸ್ವಾತಿ ಮಲಿವಾಲ್, “ದೆಹಲಿಯಾದ್ಯಂತ ಸ್ಪಾಗಳ ನೆಪದಲ್ಲಿ ಸೆಕ್ಸ್ ರಾಕೆಟ್ ನಡೆಸಲಾಗುತ್ತಿದೆ. ಆರೋಪಿಗಳು ಹುಡುಗಿಯರ ಬಾಯಿ ಮುಚ್ಚಿಸಲು ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡುವುದರಿಂದ ಈ ಹೆಚ್ಚಿನ ಪ್ರಕರಣಗಳು ವರದಿಯಾಗುವುದಿಲ್ಲ. ಪ್ರಸ್ತುತ ಪ್ರಕರಣದಲ್ಲಿ ಮಹಿಳೆಯರಿಗೆ ಮಾತ್ರ ಮಸಾಜ್ ಮಾಡಲು ಹೇಳಲಾಗುವುದು ಎಂದು ಯುವತಿಗೆ ಭರವಸೆ ನೀಡಿ ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿದೆ” ಎಂದು ತಿಳಿಸಿದ್ದಾರೆ.

ಅಕ್ರಮ ಸ್ಪಾ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲು ಏಕೆ ವಿಫಲರಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...