Homeಮುಖಪುಟಸ್ಪಾ ಮ್ಯಾನೇಜರ್‌‌ ಮತ್ತು ಗ್ರಾಹಕನಿಂದ ಉದ್ಯೋಗಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಪಾ ಮ್ಯಾನೇಜರ್‌‌ ಮತ್ತು ಗ್ರಾಹಕನಿಂದ ಉದ್ಯೋಗಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ದೆಹಲಿಯ ಪಿತಾಂಪುರದಲ್ಲಿರುವ ಸ್ಪಾವೊಂದರ ಮ್ಯಾನೇಜರ್ ಮತ್ತು ಗ್ರಾಹಕ 22 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಯುವತಿ ಶನಿವಾರ ದೆಹಲಿಯ ಮಹಿಳಾ ಆಯೋಗವನ್ನು (ಡಿಸಿಡಬ್ಲ್ಯು) ಸಂಪರ್ಕಿಸಿದ್ದು, ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಘಟನೆಯ ಕುರಿತು ದೆಹಲಿ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಗೆ ನೋಟಿಸ್ ನೀಡಿದ್ದಾರೆ.

ತಾನು ಮಸಾಜಿಯಾಗಿ ಕೆಲಸ ಮಾಡುತ್ತಿದ್ದ ಪಿತಾಂಪುರದ ‘ದಿ ಓಷನ್ ಸ್ಪಾ’ದಲ್ಲಿ ಈ ಘಟನೆ ನಡೆದಿದೆ ಎಂದು ಡಿಸಿಡಬ್ಲ್ಯೂಗೆ ಯುವತಿ ತಿಳಿಸಿದ್ದಾರೆ. “ಸ್ಪಾ ಮ್ಯಾನೇಜರ್ ನನ್ನನ್ನು ಗ್ರಾಹಕನಿಗೆ ಪರಿಚಯಿಸಿ, ನನಗೆ ಅಮಲು ಬೆರೆಸಿದ ಪಾನೀಯವನ್ನು ಕೊಟ್ಟಿದ್ದಾರೆ. ಇದರ ನಂತರ ಇಬ್ಬರು ದುಷ್ಕರ್ಮಿಗಳು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ” ಎಂದು ಸಂತ್ರಸ್ತೆ ಯುವತಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದುರ್ಘಟನೆ ಕುರಿತು ತಿಳಿಸಿಲು ಯತ್ನಿಸಿದಾಗ, ಈ ಬಗ್ಗೆ ಎಲ್ಲೂ ಹೇಳದಂತೆ ತನಗೆ ದುಡ್ಡು ನೀಡಲು  ಸ್ಪಾ ಮಾಲೀಕರು ಪ್ರಯತ್ನಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಿಳೆಗೆ ಹಲ್ಲೆ ನಡೆಸಿ, ಅಶ್ಲೀಲವಾಗಿ ನಿಂದಿಸಿದ ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್‌‌; ಆರೋಪಿ ಪರಾರಿ

ಮಹಿಳಾ ಆಯೋಗವು ಈ ಪ್ರಕರಣವನ್ನು ತಕ್ಷಣವೇ ಕೈಗೆತ್ತಿಕೊಂಡಿದ್ದು ದೆಹಲಿ ಮುನ್ಸಿಪಲ್ ಕಾಪೋರೇಷನ್‌ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದು, ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಕೇಳಿದೆ.

ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ದೆಹಲಿ ಪೊಲೀಸರಿಗೆ ಕಳುಹಿಸಿರುವ ನೋಟಿಸ್‌ನಲ್ಲಿ, ಎಫ್‌ಐಆರ್‌ನ ಪ್ರತಿಯನ್ನು ಮತ್ತು ಈ ಪ್ರಕರಣದ ಕುರಿತು ಬಂಧಿಸಿರುವ ಆರೋಪಿಗಳ ವಿವರಗಳನ್ನು ಕೋರಿದ್ದಾರೆ.

ಇಷ್ಟೆ ಅಲ್ಲದೆ, ವಿವಾದಿತ ಸ್ಪಾಗೆ ಮಾನ್ಯವಾದ ಪರವಾನಗಿ ಇದೆಯೇ ಎಂದು ಆಯೋಗವು ಅಧಿಕಾರಿಗಳಿಂದ ಕೇಳಿದೆ. ಮಾನ್ಯ ಪರವಾನಗಿ ಇಲ್ಲದೆ ಸ್ಪಾ ನಡೆಸುತ್ತಿದ್ದಲ್ಲಿ ಲೋಪಕ್ಕೆ ಕಾರಣರಾದ ವ್ಯಕ್ತಿಗಳ ಬಗ್ಗೆಯೂ ಆಯೋಗ ಅಧಿಕಾರಿಗಳ ಪ್ರಶ್ನಿಸಿದೆ. ಮಹಿಳಾ ಆಯೋಗವೂ ಆಗಸ್ಟ್ 8 ರೊಳಗೆ ವಿವರಗಳನ್ನು ನೀಡುವಂತೆ ಕೇಳಿದೆ.

ಇದನ್ನೂ ಓದಿ: ಕೋಮು ಧ್ರುವೀಕರಣ ತಡೆಗೆ ಮಾಡಬೇಕಿರುವುದೇನು? ದಕ್ಷಿಣ ಕನ್ನಡದ ಮುಸ್ಲಿಂ ದನಿಗಳ ಕಾಳಜಿಯ ನುಡಿಗಳು

ಈ ಬಗ್ಗೆ ಮಾತನಾಡಿದ ಸ್ವಾತಿ ಮಲಿವಾಲ್, “ದೆಹಲಿಯಾದ್ಯಂತ ಸ್ಪಾಗಳ ನೆಪದಲ್ಲಿ ಸೆಕ್ಸ್ ರಾಕೆಟ್ ನಡೆಸಲಾಗುತ್ತಿದೆ. ಆರೋಪಿಗಳು ಹುಡುಗಿಯರ ಬಾಯಿ ಮುಚ್ಚಿಸಲು ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡುವುದರಿಂದ ಈ ಹೆಚ್ಚಿನ ಪ್ರಕರಣಗಳು ವರದಿಯಾಗುವುದಿಲ್ಲ. ಪ್ರಸ್ತುತ ಪ್ರಕರಣದಲ್ಲಿ ಮಹಿಳೆಯರಿಗೆ ಮಾತ್ರ ಮಸಾಜ್ ಮಾಡಲು ಹೇಳಲಾಗುವುದು ಎಂದು ಯುವತಿಗೆ ಭರವಸೆ ನೀಡಿ ಅವರನ್ನು ಕೆಲಸಕ್ಕೆ ನೇಮಿಸಿಕೊಂಡಿದೆ” ಎಂದು ತಿಳಿಸಿದ್ದಾರೆ.

ಅಕ್ರಮ ಸ್ಪಾ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲು ಏಕೆ ವಿಫಲರಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...