Homeಅಂತರಾಷ್ಟ್ರೀಯಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

ಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

- Advertisement -
- Advertisement -

ಸ್ಪೇನ್‌ನಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನೆಲೆ ಭಾನುವಾರ ಎರಡನೇ ಬಾರಿ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ಘೋಷಿಸಿದೆ. ಜೊತೆಗೆ ದೇಶಾದ್ಯಂತ ರಾತ್ರಿ ಕರ್ಫ್ಯೂಗೆ ಆದೇಶಿಸಲಾಗಿದೆ ಎಂದು ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಹೇಳಿದ್ದಾರೆ.

ಕ್ಯಾನರಿ ದ್ವೀಪಗಳನ್ನು ಹೊರತುಪಡಿಸಿ, ರಾತ್ರಿ 11 ಗಂಟೆಗೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲು ತಮ್ಮ ಸರ್ಕಾರ ತುರ್ತು ಪರಿಸ್ಥಿತಿಯನ್ನು ಬಳಸುತ್ತಿದೆ ಎಂದು ಪ್ರಧಾನಿ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಸ್ಪೇನ್‌ನ 19 ಪ್ರಾದೇಶಿಕ ನಾಯಕರು ತಮ್ಮ ವ್ಯಾಪ್ತಿಯಲ್ಲಿ ಕಠಿಣವಾದ ಕರ್ಫ್ಯೂ ವಿಧಿಸಲು, ಪ್ರಾದೇಶಿಕ ಗಡಿಗಳನ್ನು ಮುಚ್ಚುವುದು ಮತ್ತು ಆರು ಜನರಿಗಿಂತ ಹೆಚ್ಚಿನ ಜನ ಸೇರದಂತೆ ನಿರ್ಬಂಧಿಸುವ ಅಧಿಕಾರವನ್ನು ಹೊಂದಿರುತ್ತಾರೆ ಎಂದು ಪ್ರಧಾನಿ ಹೇಳಿದರು.

“ಸದ್ಯದ ವಾಸ್ತವವೆಂದರೆ ಯುರೋಪ್ ಮತ್ತು ಸ್ಪೇನ್ ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಎಲೆಯಲ್ಲಿ ಮುಳುಗಿವೆ” ಎಂದು ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಆತಂಕ ವ್ಯಕ್ತಪಡಿಸಿದ್ದಾರೆ. ತುರ್ತು ಪರಿಸ್ಥಿತಿಯನ್ನು ಮುಂದಿನ ಆರು ತಿಂಗಳವರೆಗೆ ಅಂದರೆ ಮೇ ತಿಂಗಳವರೆಗೆ ವಿಸ್ತರಿಸುವ ಬಗ್ಗೆಯೂ ಚರ್ಚಿಸಿದ್ದಾರೆ. ಸ್ಪೇನ್‌ನ ಬಹುಪಾಲು ಪ್ರಾದೇಶಿಕ ನಾಯಕರು ಹೊಸ ತುರ್ತು ಪರಿಸ್ಥಿತಿಗೆ ಒಪ್ಪಿಕೊಂಡಿದ್ದಾರೆ ಎಂದು ಪ್ರಧಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ರಾಷ್ಟ್ರೀಯ ತುರ್ತು ಪರಿಸ್ಥಿತಿಯು ಸರ್ಕಾರಕ್ಕೆ ಅಸಾಧಾರಣ ಅಧಿಕಾರವನ್ನು ನೀಡುತ್ತದೆ. ಇದರಲ್ಲಿ ಸ್ಪೇನ್‌ನ ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಸ್ವಾತಂತ್ರ್ಯಗಳಾದ ಚಳುವಳಿಯ ಹಕ್ಕನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಸಾಮರ್ಥ್ಯವಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಸ್ಪೇನ್‌ನ ಸರ್ಕಾರ ಈಗಾಗಲೇ ಎರಡು ತುರ್ತು ಪರಿಸ್ಥಿತಿಗಳನ್ನು ಘೋಷಿಸಿದೆ. ರಾಷ್ಟ್ರದಾದ್ಯಂತ ಕಟ್ಟುನಿಟ್ಟಾದ ಗೃಹಬಂಧನವನ್ನು ಅನ್ವಯಿಸಲು, ಅಂಗಡಿ- ಮಳಿಗೆಗಳನ್ನು ಮುಚ್ಚಲು ಮತ್ತು ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ಹೋರಾಟಕ್ಕಾಗಿ ಖಾಸಗಿ ಉದ್ಯಮವನ್ನು ನೇಮಿಸಿಕೊಳ್ಳಲು ಮಾರ್ಚ್‌ನಲ್ಲಿ ಮೊದಲ ಬಾರಿಗೆ ಘೋಷಿಸಲಾಗಿತ್ತು. ಜೂನ್‌ನಲ್ಲಿ ತುರ್ತು ಪರಿಸ್ಥಿತಿ ತೆಗೆದುಹಾಕಲಾಗಿತ್ತು. ಎರಡನೆಯದು ಮ್ಯಾಡ್ರಿಡ್‌ನಲ್ಲಿ ಎರಡು ವಾರಗಳವರೆಗೆ ಜಾರಿಗೆ ಬಂದಿತು.

ಸ್ಪ್ಯಾನಿಷ್ ಆರೋಗ್ಯ ಸಚಿವ ಸಾಲ್ವಡಾರ್ ಇಲ್ಲಾ ತಮ್ಮ ಸಂಸ್ಥೆ ಮತ್ತು ಪ್ರಾದೇಶಿಕ ಆರೋಗ್ಯ ಅಧಿಕಾರಿಗಳು ರಾತ್ರಿಯ ಕರ್ಫ್ಯೂಗಳನ್ನು ಹೇಗೆ ಜಾರಿಗೆ ತರಬೇಕೆಂದು ಅಧ್ಯಯನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಬಹುಶಃ ಫ್ರಾನ್ಸ್‌ನ ಪ್ರಮುಖ ನಗರಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ರಾತ್ರಿ 9 ಗಂಟೆಯಿಂದ ಕರ್ಫ್ಯೂ ಜಾರಿಯಾಗಬಹುದು ಎಂದಿದ್ದರು.

ಸ್ಪೇನ್‌ನ ಆರ್ಥಿಕತೆಯ ದುರ್ಬಲ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತೊಂದು ಸಂಪೂರ್ಣ ಲಾಕ್‌ಡೌನ್ ಮತ್ತು ಉದ್ಯಮ ಸ್ಥಗಿತಗೊಳಿಸುವಿಕೆಯಿಂದ ಹಿಂಜರಿಯುತ್ತಿದ್ದಾರೆ. ಈಗಾಗಲೇ ಸ್ಪೇನ್ ಆರ್ಥಿಕ ಹಿಂಜರಿತ ಮತ್ತು ನಿರುದ್ಯೋಗದಲ್ಲಿ ಮುಳುಗಿದೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...