Homeಅಂತರಾಷ್ಟ್ರೀಯಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

ಕೊರೊನಾ ಉಲ್ಬಣ: ರಾಷ್ಟ್ರೀಯ ತುರ್ತು ಪರಿಸ್ಥಿತಿ ಹೇರಿದ ಸ್ಪೇನ್

- Advertisement -
- Advertisement -

ಸ್ಪೇನ್‌ನಲ್ಲಿ ಕೊರೊನಾ ಸೋಂಕು ಉಲ್ಬಣವಾದ ಹಿನ್ನೆಲೆ ಭಾನುವಾರ ಎರಡನೇ ಬಾರಿ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿ ಘೋಷಿಸಿದೆ. ಜೊತೆಗೆ ದೇಶಾದ್ಯಂತ ರಾತ್ರಿ ಕರ್ಫ್ಯೂಗೆ ಆದೇಶಿಸಲಾಗಿದೆ ಎಂದು ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಹೇಳಿದ್ದಾರೆ.

ಕ್ಯಾನರಿ ದ್ವೀಪಗಳನ್ನು ಹೊರತುಪಡಿಸಿ, ರಾತ್ರಿ 11 ಗಂಟೆಗೆಯಿಂದ ಬೆಳಗ್ಗೆ 6 ಗಂಟೆಯವರೆಗೆ ರಾಷ್ಟ್ರವ್ಯಾಪಿ ಕರ್ಫ್ಯೂ ವಿಧಿಸಲು ತಮ್ಮ ಸರ್ಕಾರ ತುರ್ತು ಪರಿಸ್ಥಿತಿಯನ್ನು ಬಳಸುತ್ತಿದೆ ಎಂದು ಪ್ರಧಾನಿ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಸ್ಪೇನ್‌ನ 19 ಪ್ರಾದೇಶಿಕ ನಾಯಕರು ತಮ್ಮ ವ್ಯಾಪ್ತಿಯಲ್ಲಿ ಕಠಿಣವಾದ ಕರ್ಫ್ಯೂ ವಿಧಿಸಲು, ಪ್ರಾದೇಶಿಕ ಗಡಿಗಳನ್ನು ಮುಚ್ಚುವುದು ಮತ್ತು ಆರು ಜನರಿಗಿಂತ ಹೆಚ್ಚಿನ ಜನ ಸೇರದಂತೆ ನಿರ್ಬಂಧಿಸುವ ಅಧಿಕಾರವನ್ನು ಹೊಂದಿರುತ್ತಾರೆ ಎಂದು ಪ್ರಧಾನಿ ಹೇಳಿದರು.

“ಸದ್ಯದ ವಾಸ್ತವವೆಂದರೆ ಯುರೋಪ್ ಮತ್ತು ಸ್ಪೇನ್ ಕೊರೋನಾ ಸಾಂಕ್ರಾಮಿಕ ರೋಗದ ಎರಡನೇ ಎಲೆಯಲ್ಲಿ ಮುಳುಗಿವೆ” ಎಂದು ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಆತಂಕ ವ್ಯಕ್ತಪಡಿಸಿದ್ದಾರೆ. ತುರ್ತು ಪರಿಸ್ಥಿತಿಯನ್ನು ಮುಂದಿನ ಆರು ತಿಂಗಳವರೆಗೆ ಅಂದರೆ ಮೇ ತಿಂಗಳವರೆಗೆ ವಿಸ್ತರಿಸುವ ಬಗ್ಗೆಯೂ ಚರ್ಚಿಸಿದ್ದಾರೆ. ಸ್ಪೇನ್‌ನ ಬಹುಪಾಲು ಪ್ರಾದೇಶಿಕ ನಾಯಕರು ಹೊಸ ತುರ್ತು ಪರಿಸ್ಥಿತಿಗೆ ಒಪ್ಪಿಕೊಂಡಿದ್ದಾರೆ ಎಂದು ಪ್ರಧಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ರಾಷ್ಟ್ರೀಯ ತುರ್ತು ಪರಿಸ್ಥಿತಿಯು ಸರ್ಕಾರಕ್ಕೆ ಅಸಾಧಾರಣ ಅಧಿಕಾರವನ್ನು ನೀಡುತ್ತದೆ. ಇದರಲ್ಲಿ ಸ್ಪೇನ್‌ನ ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಸ್ವಾತಂತ್ರ್ಯಗಳಾದ ಚಳುವಳಿಯ ಹಕ್ಕನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಸಾಮರ್ಥ್ಯವಿದೆ.

ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಸ್ಪೇನ್‌ನ ಸರ್ಕಾರ ಈಗಾಗಲೇ ಎರಡು ತುರ್ತು ಪರಿಸ್ಥಿತಿಗಳನ್ನು ಘೋಷಿಸಿದೆ. ರಾಷ್ಟ್ರದಾದ್ಯಂತ ಕಟ್ಟುನಿಟ್ಟಾದ ಗೃಹಬಂಧನವನ್ನು ಅನ್ವಯಿಸಲು, ಅಂಗಡಿ- ಮಳಿಗೆಗಳನ್ನು ಮುಚ್ಚಲು ಮತ್ತು ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ಹೋರಾಟಕ್ಕಾಗಿ ಖಾಸಗಿ ಉದ್ಯಮವನ್ನು ನೇಮಿಸಿಕೊಳ್ಳಲು ಮಾರ್ಚ್‌ನಲ್ಲಿ ಮೊದಲ ಬಾರಿಗೆ ಘೋಷಿಸಲಾಗಿತ್ತು. ಜೂನ್‌ನಲ್ಲಿ ತುರ್ತು ಪರಿಸ್ಥಿತಿ ತೆಗೆದುಹಾಕಲಾಗಿತ್ತು. ಎರಡನೆಯದು ಮ್ಯಾಡ್ರಿಡ್‌ನಲ್ಲಿ ಎರಡು ವಾರಗಳವರೆಗೆ ಜಾರಿಗೆ ಬಂದಿತು.

ಸ್ಪ್ಯಾನಿಷ್ ಆರೋಗ್ಯ ಸಚಿವ ಸಾಲ್ವಡಾರ್ ಇಲ್ಲಾ ತಮ್ಮ ಸಂಸ್ಥೆ ಮತ್ತು ಪ್ರಾದೇಶಿಕ ಆರೋಗ್ಯ ಅಧಿಕಾರಿಗಳು ರಾತ್ರಿಯ ಕರ್ಫ್ಯೂಗಳನ್ನು ಹೇಗೆ ಜಾರಿಗೆ ತರಬೇಕೆಂದು ಅಧ್ಯಯನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಬಹುಶಃ ಫ್ರಾನ್ಸ್‌ನ ಪ್ರಮುಖ ನಗರಗಳಲ್ಲಿ ಈಗಾಗಲೇ ಜಾರಿಯಲ್ಲಿರುವ ರಾತ್ರಿ 9 ಗಂಟೆಯಿಂದ ಕರ್ಫ್ಯೂ ಜಾರಿಯಾಗಬಹುದು ಎಂದಿದ್ದರು.

ಸ್ಪೇನ್‌ನ ಆರ್ಥಿಕತೆಯ ದುರ್ಬಲ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತೊಂದು ಸಂಪೂರ್ಣ ಲಾಕ್‌ಡೌನ್ ಮತ್ತು ಉದ್ಯಮ ಸ್ಥಗಿತಗೊಳಿಸುವಿಕೆಯಿಂದ ಹಿಂಜರಿಯುತ್ತಿದ್ದಾರೆ. ಈಗಾಗಲೇ ಸ್ಪೇನ್ ಆರ್ಥಿಕ ಹಿಂಜರಿತ ಮತ್ತು ನಿರುದ್ಯೋಗದಲ್ಲಿ ಮುಳುಗಿದೆ.


ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...