Homeಮುಖಪುಟಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

- Advertisement -
- Advertisement -

ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ.

“ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ ಅನುಮತಿ ನಿರಾಕರಿಸಿದ್ದೇವೆ. ಏಕೆಂದರೆ, ಸ್ಪ್ಯಾನಿಷ್ ಬಂದರಿನಲ್ಲಿ ನಿಲುಗಡೆ ಬಯಸಿದ್ದ ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿನಲ್ಲಿ ಇದೇ ಮೊದಲ ಬಾರಿಗೆ ನಾವು ಶಸ್ತ್ರಾಸ್ತ್ರ ಪತ್ತೆ ಹಚ್ಚಿದ್ದೇವೆ” ಎಂದು ಅಲ್ಬರೆಸ್ ತಿಳಿಸಿದ್ದಾರೆ.

“ಇಸ್ರೇಲ್‌ಗೆ ಶಸ್ತ್ರಾಸ್ತ್ರ ಹೊತ್ತೊಯ್ಯುವ ಎಲ್ಲಾ ಹಡಗುಗಳಿಗೆ ಸ್ಪ್ಯಾನಿಷ್ ಬಂದರಿನಲ್ಲಿ ಇದೇ ನಿಯಮ ಅನ್ವಯಿಸಲಿದೆ. ವಿದೇಶಾಂಗ ಸಚಿವಾಲಯ ಒಂದು ಸ್ಪಷ್ಟ ಕಾರಣಕ್ಕಾಗಿ ಅಂತಹ ಹಡಗುಗಳ ನಿಲುಗಡೆಗೆ ಅವಕಾಶ ನಿರಾಕರಿಸಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಶಸ್ತ್ರಾಸ್ತ್ರಗಳ ಅಗತ್ಯವಿಲ್ಲ, ಅಲ್ಲಿ ಶಾಂತಿ ನೆಲೆಸಬೇಕು” ಎಂದು ಅಲ್ಬರೆಸ್ ಹೇಳಿದ್ದಾರೆ.

ಅಲ್ಬರೆಸ್ ಅವರು ಹಡಗಿನ ಬಗ್ಗೆ ವಿವರಗಳನ್ನು ನೀಡಿಲ್ಲ. ಆದರೆ, ಸ್ಪೇನ್‌ನ ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಅವರು “ಮೇ 21 ರಂದು ಕಾರ್ಟೇಜಿನಾದ ಆಗ್ನೇಯ ಬಂದರಿನಲ್ಲಿ ನಿಲುಗಡೆಗೆ ‘ಮೇರಿಯಾನ್ನೆ ಡ್ಯಾನಿಕಾ’ ಎಂಬ ಹಡಗು ಅನುಮತಿ ಕೋರಿತ್ತು ಎಂದು ತಿಳಿಸಿದ್ದಾರೆ.

ಡ್ಯಾನಿಶ್ ಧ್ವಜ ಹೊಂದಿದ್ದ ಈ ಹಡಗು ಭಾರತದ ಚೆನ್ನೈನಿಂದ ಇಸ್ರೇಲ್‌ನ ಹೈಫಾ ಬಂದರಿಗೆ 27 ಟನ್ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿತ್ತು ಎಂದು ವರದಿಗಳು ಹೇಳಿವೆ.

ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಜ್ ಮತ್ತು ಅವರ ಸಮ್ಮಿಶ್ರ ಪಾಲುದಾರರಾದ ಎಡಪಂಥೀಯ ‘ಸುಮಾರ್ ಒಕ್ಕೂಟ’ ಶುಕ್ರವಾರ ಕಾರ್ಟೇಜಿನಾ ಬಂದರಿನಲ್ಲಿ ಶುಕ್ರವಾರ ನಿಲುಗಡೆ ಬಯಸಿದ್ದ ‘ಬೋರ್ಕಮ್’ ಎಂಬ ಮತ್ತೊಂದು ಹಡಗಿನ ಮೇಲೂ ಈ ಘೋಷಣೆ ಮಾಡಿದೆ.

‘ಬೋರ್ಕಮ್’ ಹಡಗು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಿದೆ ಎಂದು ಪ್ಯಾಲೆಸ್ತೀನ್ ಪರ ಗುಂಪುಗಳು ಹೇಳಿವೆ. ಈ ಹಡಗಿಗೂ ನಿಲುಗಡೆ ನಿಷೇಧಿಸಬೇಕು ಎಂದು ‘ಸುಮಾರ್’ ಒಕ್ಕೂಟ ಒತ್ತಾಯಿಸಿದೆ. ಆದರೆ, ಬೋರ್ಕಮ್ ಹಡಗು ಮಿಲಿಟರಿ ವಸ್ತುಗಳನ್ನು ಜೆಕ್ ಗಣರಾಜ್ಯಕ್ಕೆ ಸಾಗಿಸುತ್ತಿದೆ, ಇಸ್ರೇಲ್ ಅಲ್ಲ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಹೇಳಿದ್ದಾರೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣವನ್ನು ಕಟುವಾಗಿ ಖಂಡಿಸಿದ ಯುರೋಪಿನ ಪ್ರಮುಖ ದೇಶಗಳಲ್ಲಿ ಸ್ಪೇನ್ ಮೊದಲ ಮುಂಬದಿಯದಲ್ಲಿದೆ. ಪ್ಯಾಲೆಸ್ತೀನ್‌ ದೇಶದ ಹಕ್ಕುಗಳನ್ನು ಬೆಂಬಲಿಸಲು ಇತರ ಯುರೋಪಿಯನ್ ದೇಶಗಳಲ್ಲಿ ಸ್ಪೇನ್ ಕರೆ ನೀಡಿವೆ.

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ನಂತರ ಸ್ಪೇನ್ ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮಾರಾಟವನ್ನು ನಿಲ್ಲಿಸಿದೆ. 2023ರ ಅಕ್ಟೋಬರ್‌ನಿಂದ ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣದಲ್ಲಿ 35 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ. ಇಸ್ರೇಲ್ ಆಕ್ರಮಣ ಈಗಲೂ ಮುಂದುವರೆಯುತ್ತಿದೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...