Homeಮುಖಪುಟಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

- Advertisement -
- Advertisement -

ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ.

“ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ ಅನುಮತಿ ನಿರಾಕರಿಸಿದ್ದೇವೆ. ಏಕೆಂದರೆ, ಸ್ಪ್ಯಾನಿಷ್ ಬಂದರಿನಲ್ಲಿ ನಿಲುಗಡೆ ಬಯಸಿದ್ದ ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿನಲ್ಲಿ ಇದೇ ಮೊದಲ ಬಾರಿಗೆ ನಾವು ಶಸ್ತ್ರಾಸ್ತ್ರ ಪತ್ತೆ ಹಚ್ಚಿದ್ದೇವೆ” ಎಂದು ಅಲ್ಬರೆಸ್ ತಿಳಿಸಿದ್ದಾರೆ.

“ಇಸ್ರೇಲ್‌ಗೆ ಶಸ್ತ್ರಾಸ್ತ್ರ ಹೊತ್ತೊಯ್ಯುವ ಎಲ್ಲಾ ಹಡಗುಗಳಿಗೆ ಸ್ಪ್ಯಾನಿಷ್ ಬಂದರಿನಲ್ಲಿ ಇದೇ ನಿಯಮ ಅನ್ವಯಿಸಲಿದೆ. ವಿದೇಶಾಂಗ ಸಚಿವಾಲಯ ಒಂದು ಸ್ಪಷ್ಟ ಕಾರಣಕ್ಕಾಗಿ ಅಂತಹ ಹಡಗುಗಳ ನಿಲುಗಡೆಗೆ ಅವಕಾಶ ನಿರಾಕರಿಸಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಶಸ್ತ್ರಾಸ್ತ್ರಗಳ ಅಗತ್ಯವಿಲ್ಲ, ಅಲ್ಲಿ ಶಾಂತಿ ನೆಲೆಸಬೇಕು” ಎಂದು ಅಲ್ಬರೆಸ್ ಹೇಳಿದ್ದಾರೆ.

ಅಲ್ಬರೆಸ್ ಅವರು ಹಡಗಿನ ಬಗ್ಗೆ ವಿವರಗಳನ್ನು ನೀಡಿಲ್ಲ. ಆದರೆ, ಸ್ಪೇನ್‌ನ ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಅವರು “ಮೇ 21 ರಂದು ಕಾರ್ಟೇಜಿನಾದ ಆಗ್ನೇಯ ಬಂದರಿನಲ್ಲಿ ನಿಲುಗಡೆಗೆ ‘ಮೇರಿಯಾನ್ನೆ ಡ್ಯಾನಿಕಾ’ ಎಂಬ ಹಡಗು ಅನುಮತಿ ಕೋರಿತ್ತು ಎಂದು ತಿಳಿಸಿದ್ದಾರೆ.

ಡ್ಯಾನಿಶ್ ಧ್ವಜ ಹೊಂದಿದ್ದ ಈ ಹಡಗು ಭಾರತದ ಚೆನ್ನೈನಿಂದ ಇಸ್ರೇಲ್‌ನ ಹೈಫಾ ಬಂದರಿಗೆ 27 ಟನ್ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿತ್ತು ಎಂದು ವರದಿಗಳು ಹೇಳಿವೆ.

ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಜ್ ಮತ್ತು ಅವರ ಸಮ್ಮಿಶ್ರ ಪಾಲುದಾರರಾದ ಎಡಪಂಥೀಯ ‘ಸುಮಾರ್ ಒಕ್ಕೂಟ’ ಶುಕ್ರವಾರ ಕಾರ್ಟೇಜಿನಾ ಬಂದರಿನಲ್ಲಿ ಶುಕ್ರವಾರ ನಿಲುಗಡೆ ಬಯಸಿದ್ದ ‘ಬೋರ್ಕಮ್’ ಎಂಬ ಮತ್ತೊಂದು ಹಡಗಿನ ಮೇಲೂ ಈ ಘೋಷಣೆ ಮಾಡಿದೆ.

‘ಬೋರ್ಕಮ್’ ಹಡಗು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಿದೆ ಎಂದು ಪ್ಯಾಲೆಸ್ತೀನ್ ಪರ ಗುಂಪುಗಳು ಹೇಳಿವೆ. ಈ ಹಡಗಿಗೂ ನಿಲುಗಡೆ ನಿಷೇಧಿಸಬೇಕು ಎಂದು ‘ಸುಮಾರ್’ ಒಕ್ಕೂಟ ಒತ್ತಾಯಿಸಿದೆ. ಆದರೆ, ಬೋರ್ಕಮ್ ಹಡಗು ಮಿಲಿಟರಿ ವಸ್ತುಗಳನ್ನು ಜೆಕ್ ಗಣರಾಜ್ಯಕ್ಕೆ ಸಾಗಿಸುತ್ತಿದೆ, ಇಸ್ರೇಲ್ ಅಲ್ಲ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಹೇಳಿದ್ದಾರೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣವನ್ನು ಕಟುವಾಗಿ ಖಂಡಿಸಿದ ಯುರೋಪಿನ ಪ್ರಮುಖ ದೇಶಗಳಲ್ಲಿ ಸ್ಪೇನ್ ಮೊದಲ ಮುಂಬದಿಯದಲ್ಲಿದೆ. ಪ್ಯಾಲೆಸ್ತೀನ್‌ ದೇಶದ ಹಕ್ಕುಗಳನ್ನು ಬೆಂಬಲಿಸಲು ಇತರ ಯುರೋಪಿಯನ್ ದೇಶಗಳಲ್ಲಿ ಸ್ಪೇನ್ ಕರೆ ನೀಡಿವೆ.

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ನಂತರ ಸ್ಪೇನ್ ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮಾರಾಟವನ್ನು ನಿಲ್ಲಿಸಿದೆ. 2023ರ ಅಕ್ಟೋಬರ್‌ನಿಂದ ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣದಲ್ಲಿ 35 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ. ಇಸ್ರೇಲ್ ಆಕ್ರಮಣ ಈಗಲೂ ಮುಂದುವರೆಯುತ್ತಿದೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...