Homeಮುಖಪುಟಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

- Advertisement -
- Advertisement -

ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ.

“ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ ಅನುಮತಿ ನಿರಾಕರಿಸಿದ್ದೇವೆ. ಏಕೆಂದರೆ, ಸ್ಪ್ಯಾನಿಷ್ ಬಂದರಿನಲ್ಲಿ ನಿಲುಗಡೆ ಬಯಸಿದ್ದ ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿನಲ್ಲಿ ಇದೇ ಮೊದಲ ಬಾರಿಗೆ ನಾವು ಶಸ್ತ್ರಾಸ್ತ್ರ ಪತ್ತೆ ಹಚ್ಚಿದ್ದೇವೆ” ಎಂದು ಅಲ್ಬರೆಸ್ ತಿಳಿಸಿದ್ದಾರೆ.

“ಇಸ್ರೇಲ್‌ಗೆ ಶಸ್ತ್ರಾಸ್ತ್ರ ಹೊತ್ತೊಯ್ಯುವ ಎಲ್ಲಾ ಹಡಗುಗಳಿಗೆ ಸ್ಪ್ಯಾನಿಷ್ ಬಂದರಿನಲ್ಲಿ ಇದೇ ನಿಯಮ ಅನ್ವಯಿಸಲಿದೆ. ವಿದೇಶಾಂಗ ಸಚಿವಾಲಯ ಒಂದು ಸ್ಪಷ್ಟ ಕಾರಣಕ್ಕಾಗಿ ಅಂತಹ ಹಡಗುಗಳ ನಿಲುಗಡೆಗೆ ಅವಕಾಶ ನಿರಾಕರಿಸಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಶಸ್ತ್ರಾಸ್ತ್ರಗಳ ಅಗತ್ಯವಿಲ್ಲ, ಅಲ್ಲಿ ಶಾಂತಿ ನೆಲೆಸಬೇಕು” ಎಂದು ಅಲ್ಬರೆಸ್ ಹೇಳಿದ್ದಾರೆ.

ಅಲ್ಬರೆಸ್ ಅವರು ಹಡಗಿನ ಬಗ್ಗೆ ವಿವರಗಳನ್ನು ನೀಡಿಲ್ಲ. ಆದರೆ, ಸ್ಪೇನ್‌ನ ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಅವರು “ಮೇ 21 ರಂದು ಕಾರ್ಟೇಜಿನಾದ ಆಗ್ನೇಯ ಬಂದರಿನಲ್ಲಿ ನಿಲುಗಡೆಗೆ ‘ಮೇರಿಯಾನ್ನೆ ಡ್ಯಾನಿಕಾ’ ಎಂಬ ಹಡಗು ಅನುಮತಿ ಕೋರಿತ್ತು ಎಂದು ತಿಳಿಸಿದ್ದಾರೆ.

ಡ್ಯಾನಿಶ್ ಧ್ವಜ ಹೊಂದಿದ್ದ ಈ ಹಡಗು ಭಾರತದ ಚೆನ್ನೈನಿಂದ ಇಸ್ರೇಲ್‌ನ ಹೈಫಾ ಬಂದರಿಗೆ 27 ಟನ್ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿತ್ತು ಎಂದು ವರದಿಗಳು ಹೇಳಿವೆ.

ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಜ್ ಮತ್ತು ಅವರ ಸಮ್ಮಿಶ್ರ ಪಾಲುದಾರರಾದ ಎಡಪಂಥೀಯ ‘ಸುಮಾರ್ ಒಕ್ಕೂಟ’ ಶುಕ್ರವಾರ ಕಾರ್ಟೇಜಿನಾ ಬಂದರಿನಲ್ಲಿ ಶುಕ್ರವಾರ ನಿಲುಗಡೆ ಬಯಸಿದ್ದ ‘ಬೋರ್ಕಮ್’ ಎಂಬ ಮತ್ತೊಂದು ಹಡಗಿನ ಮೇಲೂ ಈ ಘೋಷಣೆ ಮಾಡಿದೆ.

‘ಬೋರ್ಕಮ್’ ಹಡಗು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಿದೆ ಎಂದು ಪ್ಯಾಲೆಸ್ತೀನ್ ಪರ ಗುಂಪುಗಳು ಹೇಳಿವೆ. ಈ ಹಡಗಿಗೂ ನಿಲುಗಡೆ ನಿಷೇಧಿಸಬೇಕು ಎಂದು ‘ಸುಮಾರ್’ ಒಕ್ಕೂಟ ಒತ್ತಾಯಿಸಿದೆ. ಆದರೆ, ಬೋರ್ಕಮ್ ಹಡಗು ಮಿಲಿಟರಿ ವಸ್ತುಗಳನ್ನು ಜೆಕ್ ಗಣರಾಜ್ಯಕ್ಕೆ ಸಾಗಿಸುತ್ತಿದೆ, ಇಸ್ರೇಲ್ ಅಲ್ಲ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಹೇಳಿದ್ದಾರೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣವನ್ನು ಕಟುವಾಗಿ ಖಂಡಿಸಿದ ಯುರೋಪಿನ ಪ್ರಮುಖ ದೇಶಗಳಲ್ಲಿ ಸ್ಪೇನ್ ಮೊದಲ ಮುಂಬದಿಯದಲ್ಲಿದೆ. ಪ್ಯಾಲೆಸ್ತೀನ್‌ ದೇಶದ ಹಕ್ಕುಗಳನ್ನು ಬೆಂಬಲಿಸಲು ಇತರ ಯುರೋಪಿಯನ್ ದೇಶಗಳಲ್ಲಿ ಸ್ಪೇನ್ ಕರೆ ನೀಡಿವೆ.

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ನಂತರ ಸ್ಪೇನ್ ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮಾರಾಟವನ್ನು ನಿಲ್ಲಿಸಿದೆ. 2023ರ ಅಕ್ಟೋಬರ್‌ನಿಂದ ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣದಲ್ಲಿ 35 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ. ಇಸ್ರೇಲ್ ಆಕ್ರಮಣ ಈಗಲೂ ಮುಂದುವರೆಯುತ್ತಿದೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...