Homeಮುಖಪುಟಸ್ಪಾನಿಶ್ ಸಿನಿಮಾ ರೋಮಾ : ನೆನಪುಗಳೆಂಬ ಲೋಕ

ಸ್ಪಾನಿಶ್ ಸಿನಿಮಾ ರೋಮಾ : ನೆನಪುಗಳೆಂಬ ಲೋಕ

ಈ ಚಿತ್ರಕ್ಕೆ ತನ್ನದೇ ಆದ ಒಂದು ವ್ಯಾಕರಣವಿದೆ; ತನ್ನದೇ ಆದ ಒಂದು ಜೀವವಿದೆ. ಅದನ್ನು ಒಂದು ಜೀವಮಾನದಲ್ಲಿ ಒಂದು ಸಲ ಮಾತ್ರ ಮಾಡಲು ಸಾಧ್ಯ ಎನ್ನುತ್ತಾರೆ ನಿರ್ದೇಶಕ ಅಲ್ಪಾಂಸೋ ಕ್ವಾರೋನ್

- Advertisement -
- Advertisement -

ಕೆಲವು ಚಿತ್ರಗಳನ್ನು ನೋಡಿದಾಗ ಒಂದಿಷ್ಟು ಪ್ರಶ್ನೆಗಳು ಮೂಡುತ್ತವೆ; ನನಗ್ಯಾಕೆ ಈ ಚಿತ್ರ ಇಷ್ಟವಾಯಿತು? ನನಗೆ ನಿಜವಾಗಿಯೂ ಇಷ್ಟವಾಗಿದೆಯಾ ಅಥವಾ ಸುಮ್ನೆ ಹಾಗೆ ಅಂತಿದೀನಾ? ಒಂದು ವೇಳೆ ಈ ಚಿತ್ರದ ಕಥೆಯನ್ನು ನನಗೆ ಯಾರೋ ಹೇಳಿದ್ದಲ್ಲಿ ನನಗೆ ಇಷ್ಟವಾಗುತ್ತಿತ್ತಾ? ಯಾಕೆ ಈ ಚಿತ್ರ ಮಾಡಿದ ನಿರ್ದೇಶಕ?

ರೋಮಾ ಎಂಬ ಚಿತ್ರ ನೋಡಿದ ನಂತರ ಮೂಡಿದ ಕೆಲವ ಪ್ರಶ್ನೆಗಳು ಹೀಗೆಯೆ ಇದ್ದವು. ಈ ಚಿತ್ರ, ಈ ಚಿತ್ರದ ಹಿಂದಿರುವ ದೀರ್ಘ ಪ್ರಯಾಣವನ್ನು ಅರ್ಥ ಮಾಡಿಕೊಳ್ಳುವುದು ಒಂದು ಸವಾಲೆನಿಸಿತು. ಚಿತ್ರದ ಬಗ್ಗೆ ಹೇಳುವುದಾದರೆ; ಮೆಕ್ಸಿಕೋದ ಒಂದು ನಗರದಲ್ಲಿ ಉಚ್ಚ ಮಧ್ಯಮ ವರ್ಗದ ಮನೆಯಲ್ಲಿ ಕೆಲಸ ಮಾಡುತ್ತಿರುವ ಒಬ್ಬ ಯುವಕಿಯ ಕಥೆ. ಅದರೊಂದಿಗೆ ಅವಳನ್ನು ಕೆಲಸಕ್ಕಿಟ್ಟುಕೊಂಡಿರುವ ಕುಟುಂಬದ ಕಥೆಯೂ ಹೌದು. 70ರ ದಶಕದಲ್ಲಿಯ ಕಥೆಯಾದ ಇದನ್ನು ಆ ಕಾಲದಲ್ಲಿ ಮೆಕ್ಸಿಕೋದಲ್ಲಿ ಮನೆಗೆಲಸ ಮಾಡುವವರ ವ್ಯಥೆ ಅಥವಾ ಸಂಕಷ್ಟಗಳನ್ನು ತೋರಿಸಲು ಮಾಡಿದ ಚಿತ್ರವಲ್ಲ. ಈ ಚಿತ್ರ ಅಲ್ಪಾಂಸೋ ಕ್ವಾರೋನ್ ಎಂಬ ಖ್ಯಾತ ನಿರ್ದೇಶಕನ ನೆನಪುಗಳ ಚಿತ್ರಣ.

ಯಾವುದೇ ಚಿತ್ರ ಇಷ್ಟವಾದಾಗ ಅದರ ಸ್ಟ್ರಕ್ಚರ್ ಗಟ್ಟಿಯಾಗಿತ್ತು, ಪಾತ್ರಗಳು ಜೀವಂತವಾಗಿದ್ದವು, ಚಿತ್ರ ಪ್ರತಿ ಫ್ರೇಮ್‌ನಲ್ಲೂ ಕಥೆಯನ್ನು ಮುಂದುವರೆಸುತ್ತಿತ್ತು, ಮುಂದೇನಾಗುವುದೋ ಎನ್ನುವ ಕಾತುರ ಹುಟ್ಟಿಸುತ್ತಿತ್ತು ಎಂದೆಲ್ಲಾ ನಾವು ತಿಳಿದಿದ್ದೆವು. ಇಲ್ಲಿ ಅವೆಲ್ಲ ಗೌಣ. ಆ ಆಯಾಮಗಳ ಪೋಸ್ಟ್ ಮಾರ್ಟಮ್ ಮಾಡುವ ಯಾವ ಅವಶ್ಯಕತೆ ಕಾಣುವುದಿಲ್ಲ. ಈ ಚಿತ್ರವನ್ನು ನೋಡುವುದೊಂದು ಅನುಭವ. ನಿರ್ದೇಶಕನ ನೆನಪುಗಳ, ಅವನ ಬಾಲ್ಯದ ಜಗತ್ತಿನ ಪಾತ್ರಗಳ, ಘಟನೆಗಳ ಅನುಭವ. ಅದೇ ನನ್ನ ಮುಂದಿನ ಪ್ರಶ್ನೆಗೆ ಎಡೆಮಾಡಿಕೊಡುತ್ತದೆ.

ಕೇವಲ ನೆನಪುಗಳು ಒಂದು ಕಥೆಯಾಗಬಲ್ಲವೇ? ನೆನಪಿಡಿ, ಇಲ್ಲಿ ನೆನಪು ಅಂದರೆ ಒಂದು ಸ್ವಾರಸ್ಯಕರ ಅಥವಾ ಭೀಕರ ಘಟನೆಯ ನೆನಪಲ್ಲ. ನೆನಪೆಂದರೆ, ತಾನು ಬೆಳೆದ ಓಣಿಯಲ್ಲಿ ಬೀಳಿತ್ತಿದ್ದ ಬಿಸಿಲನ ನೆನಪು, ಪ್ರತಿಭಟನೆಯೊಂದು ನಡೆದಾಗ ಹಿಂಸೆಯಾಗಿ ಆ ಸುದ್ದಿ ಪತ್ರಿಕೆಯಲ್ಲಿ ಬಂದಾಗ, ಅಲ್ಲಿ ರಸ್ತೆಯ ಮೇಲೆ ನಡೆಯುತ್ತಿರುವ ಗಲಭೆಯ ಚಿತ್ರದ ಹಿನ್ನೆಲೆಯಲ್ಲಿ ಒಂದು ಫರ್ನಿಚರ್ ಅಂಗಡಿಯ ಕಿಟಕಿಯಿಂದ ಜನರು ಇಣುಕಿ ನೋಡುತ್ತಿದ್ದಾರೆ, ಅದರ ನೆನಪು, ಆ ಸದ್ದುಗಳು, ಬಣ್ಣಗಳ ನೆನಪು. ಬಣ್ಣಗಳು ಹುಟ್ಟಿಸುವ ಭಾವನೆಗಳ ನೆನಪು, ಗತಿಸಿ ಹೋದ ಕಾಲದ, ಸಂಬಂಧಗಳ ನೆನಪುಗಳು. ಅತ್ಯಂತ ಖಾಸಗಿಯಾದ ನೆನಪುಗಳನ್ನು ಕಥೆಯನ್ನಾಗಿಸುವುದು, ಅದನ್ನು ನಿಜವಾಗಿಯೂ ಪರದೆಯ ಮೇಲೆ ತರುವುದಾದರೂ ಹೇಗೆ?

ನಿರ್ದೇಶಕ ಅಲ್ಫಾಂಸೋ ಕ್ವಾರೋನ್ ಕೂಡ ಚಿತ್ರದಲ್ಲಿ ತೋರಿಸಿದತಹ ಉಚ್ಚ ಮಧ್ಯಮ ವರ್ಗದಲ್ಲಿ ಬೆಳದವನು. ತಾನು ಬೆಳೆಯುತ್ತಿರುವಾಗ ಚಿತ್ರದಲ್ಲಿ ಇರುವ ಕ್ಲಿಯೋ ಹಾಗೆ ಅವನನ್ನೂ ಒಬ್ಬ ಸಹಾಯಕಿ ಲಿಬೋ ನೋಡಿಕೊಂಡಿದ್ದಳು. ಎಪ್ಪತ್ತರ ಮೊದಲರ್ಧದಲ್ಲಿ ಮೆಕ್ಸಿಕೋ ಕಷ್ಟದ ಕಾಲದಿಂದ ಹೋಗುತ್ತಿತ್ತು. ಆ ಸಹಾಯಕಿ, ಮೆಕ್ಸಿಕೋ ದೇಶದ ಆ ಕಾಲದ ನೆನಪುಗಳನ್ನು ದಶಕಗಟ್ಟಲೇ ಚಿಂತಿಸಿ, ಮನದಲ್ಲಿ ಒಂದು ಅಸ್ಪಷ್ಟ ರೂಪ ಮೂಡಿದಾಗ ಈ ಚಿತ್ರವನ್ನು ಪ್ರಾರಂಭಿಸಿದ. ಈ ಚಿತ್ರದ ಬಗ್ಗೆ ಯೋಚಿಸಿದಾಗೆಲ್ಲ, ತನ್ನ ನೆನಪುಗಳನ್ನೆಲ್ಲ ಕೆದಕಿದಾಗ ಅವೆಲ್ಲವುಗಳನ್ನು ಕಪ್ಪುಬಿಳುಪಿನಲ್ಲೇ ಕಂಡಿದ್ದರಿಂದ ಇದು ಕಲರ್ ಚಿತ್ರವಲ್ಲ. ತನ್ನ ಮುಂಚಿನ ಚಿತ್ರಗಳಲ್ಲಿ ಛಾಯಾಗ್ರಾಹಕನಾಗಿದ್ದ ಇಮ್ಯಾನುಯೆಲ್ ಲುಬೆಜ್ಕಿ ಅನ್ನು ಬಿಟ್ಟು ತಾನೇ ಕ್ಯಾಮರ ಹಿಡಿದ. ಪ್ರತಿಯೊಂದು ದೃಶ್ಯಗಳನ್ನು ತನ್ನ ನೆನಪಿನಾಳದಲ್ಲಿ ಮೂಡಿದ ಚಿತ್ರಗಳಂತೆ ಪರೆದಯ ಮೇಲೆ ಮೂಡಿಸಲು ಪ್ರಯತ್ನಿಸಿದ.

ತನ್ನ ನೆನಪುಗಳ ಪ್ರಾಮಾಣಿಕತೆಯನ್ನು ಮೂಡಿಸಲು ಕಠಿಣ ಶ್ರಮದೊಂದಿಗೆ ಸಿನೆಮಾ ಎಂಬ ಕಲೆಯ ಟೆಕ್ನಿಕ್‌ಗಳ ಸಹಾಯವೂ ಬೇಕು. ತನ್ನ ಆ ನೆನಪುಗಳು ಬಿಡಿ ಬಿಡಿ ಶಾಟ್‌ಗಳಲ್ಲಿ ಕಾಣಲಿಲ್ಲವಾದುದರಿಂದ ಚಿತ್ರದಲ್ಲಿ ಲಾಂಗ್‌ಶಾಟ್‌ಗಳು ಹೆಚ್ಚು ಕಾಣುತ್ತವೆ. ಆಗ ಇನ್ನಷ್ಟು ಶ್ರಮ ಬೇಕು. ಆಯಾ ದೀರ್ಘ ಶಾಟ್‌ಗಳಲ್ಲಿ ಕಂಡುವರುವ ಎಲ್ಲಾ ವಸ್ತುಗಳು ಆ ಸಮಯಕ್ಕೆ ತಕ್ಕಂತೆ ಇರಬೇಕು, ಪ್ರತಿಯೊಂದು ಚಲನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ಯಾಮರಾದ ಚಲನೆ ಮಾಡಬೇಕು, ಹೀಗೆ ಹತ್ತಾರು ವಿಷಯಗಳನ್ನು ಲಕ್ಷದಲ್ಲಿಟ್ಟುಕೊಂಡು ಪ್ರತಿಯೊಂದು ಶಾಟ್ ಅನ್ನು ತೆಗೆಯಬೇಕಾಗುತ್ತದೆ.

ಇದೊಂದು ಖಾಸಗಿ ಚಿತ್ರವಾದುದರಿಂದ ಚಿತ್ರದ ಸ್ಕ್ರಿಪ್ಟ್ ನಿರ್ದೇಶಕನಿಗೆ ಮಾತ್ರ ತಿಳಿದಿತ್ತು. ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡ ಜಲಿಟ್ಸಾ ಅಪಾರೆಸಿಒ ಸೇರಿ ಬಹುತೇಕ ನಟರು ವೃತ್ತಿಪರ ನಟರಲ್ಲ. ಚಿತ್ರದಲ್ಲಿ ನೈಜತೆಯನ್ನು ತರಲು ಸಾಮಾನ್ಯ ಜನರನ್ನೇ ಬಳಸಿಕೊಳ್ಳಲಾಯಿತು. ಪ್ರತಿದಿನ ಚಿತ್ರೀಕರಣ ಶುರುವಾಗುವ ಮುನ್ನ ಎಲ್ಲಾ ನಟರಿಗೂ ಪ್ರತ್ಯೇಕವಾಗಿ ದೃಶ್ಯಗಳನ್ನು ವಿವರಿಸಿ (ಕೆಲವೊಮ್ಮೆ ಬೇರೆ ಬೇರೆ ನಟರಿಗೆ ಒಂದೇ ದೃಶ್ಯದ ಬೇರೆ ಬೇರೆ ವಿವರಣ ನೀಡಿ) ಕ್ಯಾಮೆರ ಚಾಲನೆ ನೀಡುತ್ತಿದ್ದರು; ದೃಶ್ಯ ತನ್ನಿಂತಾನೆ ರೂಪಗೊಳ್ಳಲಿ ಎಂದು.

ಚಿತ್ರದಲ್ಲಿ ಇದ್ದ ಕೆಲವು ವೃತ್ತಿಪರ ನಟರಿಗೆ ಇದು ಗಲಿಬಿಲಿ (ಪ್ರಾರಂಭದಲ್ಲಿ) ಮಾಡಿಸಿದರೆ, ಮೊದಲನೇ ಬಾರಿ ನಟಿಸುವವರು ಲೀಲಾಜಾಲವಾಗಿ ನಟಿಸುವಂತೆ ಮಾಡಿತು. ಆಸ್ಪತ್ರೆಯ ದೃಶ್ಯದಲ್ಲಿ ನಿಜವಾದ ವೈದ್ಯರು ಮತ್ತು ಆರೋಗ್ಯಕರ್ಮಿಗಳನ್ನೇ ಬಳಸಿ ಚಿತ್ರೀಕರಣ ಮಾಡಿದರು.

ಕ್ಯಾಮೆರ ಮೂವಮೆಂಟ್ ಅಥವಾ ಛಾಯಾಗ್ರಹಣದ ಪ್ರಶ್ನೆ ಬಂದಾಗ ಎಷ್ಟೇ ಸುಂದರವಾದ ಶಾಟ್ ಬರುತ್ತಿದ್ದರೂ ಈ ಮುಂಚೆ ಬಳಸಲಾಗುವ ರೆಫರನ್ಸ್ ಶಾಟ್‌ಗಳನ್ನು ಬಳಸಬಾರದು ಎನ್ನುವ ಹಟಕ್ಕೆ ಬಿದ್ದಿದ್ದರು ನಿರ್ದೇಶಕ ಅಲ್ಫಾಂಸೋ. ಪ್ರತಿಯೊಂದು ಶಾಟ್ ಕೂಡ ಹೊಸದಾಗಿ, ತನ್ನ ನೆನಪಿನ ಚಿತ್ರಕ್ಕೆ ಪೂರಕವಾಗಿರುವಂತೆ ನೋಡಿಕೊಂಡರು. ಅದರಿಂದ ಈ ಚಿತ್ರಕ್ಕೆ ತನ್ನದೇ ಆದ ಒಂದು ವ್ಯಾಕರಣವಿದೆ; ತನ್ನದೇ ಆದ ಒಂದು ಜೀವವಿದೆ. ಅದನ್ನು ಒಂದು ಜೀವಮಾನದಲ್ಲಿ ಒಂದು ಸಲ ಮಾತ್ರ ಮಾಡಲು ಸಾಧ್ಯ. ಗ್ಯ್ರಾವಿಟಿ, ಯಿ ತು ಮಾಮಾ ತಾಂಬಿಯನ್, ಚಿಲ್ಡ್ರನ್ ಆಫ್ ಮೆನ್ ಮುಂತಾದ ವಿಶ್ವವಿಖ್ಯಾತ ಚಿತ್ರಗಳನ್ನು ನೀಡಿದ್ದರೂ, ರೋಮಾ ಎಂಬ ಈ ಚಿತ್ರ ತನ್ನ ಮೊದಲ ಚಿತ್ರ ಎಂದೇ ಅಂದುಕೊಳ್ಳುತ್ತಾನೆ ಅಲ್ಫಾಂಸೋ ಕ್ವಾರೋನ್.


ಇದನ್ನೂ ಓದಿ: ’’ಪ್ರತೀಕಾರ’: ರಾಜಶೇಖರ್‌ ಅಕ್ಕಿಯವರ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...