Homeಮುಖಪುಟಸ್ಪಾನಿಶ್ ಸಿನಿಮಾ ರೋಮಾ : ನೆನಪುಗಳೆಂಬ ಲೋಕ

ಸ್ಪಾನಿಶ್ ಸಿನಿಮಾ ರೋಮಾ : ನೆನಪುಗಳೆಂಬ ಲೋಕ

ಈ ಚಿತ್ರಕ್ಕೆ ತನ್ನದೇ ಆದ ಒಂದು ವ್ಯಾಕರಣವಿದೆ; ತನ್ನದೇ ಆದ ಒಂದು ಜೀವವಿದೆ. ಅದನ್ನು ಒಂದು ಜೀವಮಾನದಲ್ಲಿ ಒಂದು ಸಲ ಮಾತ್ರ ಮಾಡಲು ಸಾಧ್ಯ ಎನ್ನುತ್ತಾರೆ ನಿರ್ದೇಶಕ ಅಲ್ಪಾಂಸೋ ಕ್ವಾರೋನ್

- Advertisement -
- Advertisement -

ಕೆಲವು ಚಿತ್ರಗಳನ್ನು ನೋಡಿದಾಗ ಒಂದಿಷ್ಟು ಪ್ರಶ್ನೆಗಳು ಮೂಡುತ್ತವೆ; ನನಗ್ಯಾಕೆ ಈ ಚಿತ್ರ ಇಷ್ಟವಾಯಿತು? ನನಗೆ ನಿಜವಾಗಿಯೂ ಇಷ್ಟವಾಗಿದೆಯಾ ಅಥವಾ ಸುಮ್ನೆ ಹಾಗೆ ಅಂತಿದೀನಾ? ಒಂದು ವೇಳೆ ಈ ಚಿತ್ರದ ಕಥೆಯನ್ನು ನನಗೆ ಯಾರೋ ಹೇಳಿದ್ದಲ್ಲಿ ನನಗೆ ಇಷ್ಟವಾಗುತ್ತಿತ್ತಾ? ಯಾಕೆ ಈ ಚಿತ್ರ ಮಾಡಿದ ನಿರ್ದೇಶಕ?

ರೋಮಾ ಎಂಬ ಚಿತ್ರ ನೋಡಿದ ನಂತರ ಮೂಡಿದ ಕೆಲವ ಪ್ರಶ್ನೆಗಳು ಹೀಗೆಯೆ ಇದ್ದವು. ಈ ಚಿತ್ರ, ಈ ಚಿತ್ರದ ಹಿಂದಿರುವ ದೀರ್ಘ ಪ್ರಯಾಣವನ್ನು ಅರ್ಥ ಮಾಡಿಕೊಳ್ಳುವುದು ಒಂದು ಸವಾಲೆನಿಸಿತು. ಚಿತ್ರದ ಬಗ್ಗೆ ಹೇಳುವುದಾದರೆ; ಮೆಕ್ಸಿಕೋದ ಒಂದು ನಗರದಲ್ಲಿ ಉಚ್ಚ ಮಧ್ಯಮ ವರ್ಗದ ಮನೆಯಲ್ಲಿ ಕೆಲಸ ಮಾಡುತ್ತಿರುವ ಒಬ್ಬ ಯುವಕಿಯ ಕಥೆ. ಅದರೊಂದಿಗೆ ಅವಳನ್ನು ಕೆಲಸಕ್ಕಿಟ್ಟುಕೊಂಡಿರುವ ಕುಟುಂಬದ ಕಥೆಯೂ ಹೌದು. 70ರ ದಶಕದಲ್ಲಿಯ ಕಥೆಯಾದ ಇದನ್ನು ಆ ಕಾಲದಲ್ಲಿ ಮೆಕ್ಸಿಕೋದಲ್ಲಿ ಮನೆಗೆಲಸ ಮಾಡುವವರ ವ್ಯಥೆ ಅಥವಾ ಸಂಕಷ್ಟಗಳನ್ನು ತೋರಿಸಲು ಮಾಡಿದ ಚಿತ್ರವಲ್ಲ. ಈ ಚಿತ್ರ ಅಲ್ಪಾಂಸೋ ಕ್ವಾರೋನ್ ಎಂಬ ಖ್ಯಾತ ನಿರ್ದೇಶಕನ ನೆನಪುಗಳ ಚಿತ್ರಣ.

ಯಾವುದೇ ಚಿತ್ರ ಇಷ್ಟವಾದಾಗ ಅದರ ಸ್ಟ್ರಕ್ಚರ್ ಗಟ್ಟಿಯಾಗಿತ್ತು, ಪಾತ್ರಗಳು ಜೀವಂತವಾಗಿದ್ದವು, ಚಿತ್ರ ಪ್ರತಿ ಫ್ರೇಮ್‌ನಲ್ಲೂ ಕಥೆಯನ್ನು ಮುಂದುವರೆಸುತ್ತಿತ್ತು, ಮುಂದೇನಾಗುವುದೋ ಎನ್ನುವ ಕಾತುರ ಹುಟ್ಟಿಸುತ್ತಿತ್ತು ಎಂದೆಲ್ಲಾ ನಾವು ತಿಳಿದಿದ್ದೆವು. ಇಲ್ಲಿ ಅವೆಲ್ಲ ಗೌಣ. ಆ ಆಯಾಮಗಳ ಪೋಸ್ಟ್ ಮಾರ್ಟಮ್ ಮಾಡುವ ಯಾವ ಅವಶ್ಯಕತೆ ಕಾಣುವುದಿಲ್ಲ. ಈ ಚಿತ್ರವನ್ನು ನೋಡುವುದೊಂದು ಅನುಭವ. ನಿರ್ದೇಶಕನ ನೆನಪುಗಳ, ಅವನ ಬಾಲ್ಯದ ಜಗತ್ತಿನ ಪಾತ್ರಗಳ, ಘಟನೆಗಳ ಅನುಭವ. ಅದೇ ನನ್ನ ಮುಂದಿನ ಪ್ರಶ್ನೆಗೆ ಎಡೆಮಾಡಿಕೊಡುತ್ತದೆ.

ಕೇವಲ ನೆನಪುಗಳು ಒಂದು ಕಥೆಯಾಗಬಲ್ಲವೇ? ನೆನಪಿಡಿ, ಇಲ್ಲಿ ನೆನಪು ಅಂದರೆ ಒಂದು ಸ್ವಾರಸ್ಯಕರ ಅಥವಾ ಭೀಕರ ಘಟನೆಯ ನೆನಪಲ್ಲ. ನೆನಪೆಂದರೆ, ತಾನು ಬೆಳೆದ ಓಣಿಯಲ್ಲಿ ಬೀಳಿತ್ತಿದ್ದ ಬಿಸಿಲನ ನೆನಪು, ಪ್ರತಿಭಟನೆಯೊಂದು ನಡೆದಾಗ ಹಿಂಸೆಯಾಗಿ ಆ ಸುದ್ದಿ ಪತ್ರಿಕೆಯಲ್ಲಿ ಬಂದಾಗ, ಅಲ್ಲಿ ರಸ್ತೆಯ ಮೇಲೆ ನಡೆಯುತ್ತಿರುವ ಗಲಭೆಯ ಚಿತ್ರದ ಹಿನ್ನೆಲೆಯಲ್ಲಿ ಒಂದು ಫರ್ನಿಚರ್ ಅಂಗಡಿಯ ಕಿಟಕಿಯಿಂದ ಜನರು ಇಣುಕಿ ನೋಡುತ್ತಿದ್ದಾರೆ, ಅದರ ನೆನಪು, ಆ ಸದ್ದುಗಳು, ಬಣ್ಣಗಳ ನೆನಪು. ಬಣ್ಣಗಳು ಹುಟ್ಟಿಸುವ ಭಾವನೆಗಳ ನೆನಪು, ಗತಿಸಿ ಹೋದ ಕಾಲದ, ಸಂಬಂಧಗಳ ನೆನಪುಗಳು. ಅತ್ಯಂತ ಖಾಸಗಿಯಾದ ನೆನಪುಗಳನ್ನು ಕಥೆಯನ್ನಾಗಿಸುವುದು, ಅದನ್ನು ನಿಜವಾಗಿಯೂ ಪರದೆಯ ಮೇಲೆ ತರುವುದಾದರೂ ಹೇಗೆ?

ನಿರ್ದೇಶಕ ಅಲ್ಫಾಂಸೋ ಕ್ವಾರೋನ್ ಕೂಡ ಚಿತ್ರದಲ್ಲಿ ತೋರಿಸಿದತಹ ಉಚ್ಚ ಮಧ್ಯಮ ವರ್ಗದಲ್ಲಿ ಬೆಳದವನು. ತಾನು ಬೆಳೆಯುತ್ತಿರುವಾಗ ಚಿತ್ರದಲ್ಲಿ ಇರುವ ಕ್ಲಿಯೋ ಹಾಗೆ ಅವನನ್ನೂ ಒಬ್ಬ ಸಹಾಯಕಿ ಲಿಬೋ ನೋಡಿಕೊಂಡಿದ್ದಳು. ಎಪ್ಪತ್ತರ ಮೊದಲರ್ಧದಲ್ಲಿ ಮೆಕ್ಸಿಕೋ ಕಷ್ಟದ ಕಾಲದಿಂದ ಹೋಗುತ್ತಿತ್ತು. ಆ ಸಹಾಯಕಿ, ಮೆಕ್ಸಿಕೋ ದೇಶದ ಆ ಕಾಲದ ನೆನಪುಗಳನ್ನು ದಶಕಗಟ್ಟಲೇ ಚಿಂತಿಸಿ, ಮನದಲ್ಲಿ ಒಂದು ಅಸ್ಪಷ್ಟ ರೂಪ ಮೂಡಿದಾಗ ಈ ಚಿತ್ರವನ್ನು ಪ್ರಾರಂಭಿಸಿದ. ಈ ಚಿತ್ರದ ಬಗ್ಗೆ ಯೋಚಿಸಿದಾಗೆಲ್ಲ, ತನ್ನ ನೆನಪುಗಳನ್ನೆಲ್ಲ ಕೆದಕಿದಾಗ ಅವೆಲ್ಲವುಗಳನ್ನು ಕಪ್ಪುಬಿಳುಪಿನಲ್ಲೇ ಕಂಡಿದ್ದರಿಂದ ಇದು ಕಲರ್ ಚಿತ್ರವಲ್ಲ. ತನ್ನ ಮುಂಚಿನ ಚಿತ್ರಗಳಲ್ಲಿ ಛಾಯಾಗ್ರಾಹಕನಾಗಿದ್ದ ಇಮ್ಯಾನುಯೆಲ್ ಲುಬೆಜ್ಕಿ ಅನ್ನು ಬಿಟ್ಟು ತಾನೇ ಕ್ಯಾಮರ ಹಿಡಿದ. ಪ್ರತಿಯೊಂದು ದೃಶ್ಯಗಳನ್ನು ತನ್ನ ನೆನಪಿನಾಳದಲ್ಲಿ ಮೂಡಿದ ಚಿತ್ರಗಳಂತೆ ಪರೆದಯ ಮೇಲೆ ಮೂಡಿಸಲು ಪ್ರಯತ್ನಿಸಿದ.

ತನ್ನ ನೆನಪುಗಳ ಪ್ರಾಮಾಣಿಕತೆಯನ್ನು ಮೂಡಿಸಲು ಕಠಿಣ ಶ್ರಮದೊಂದಿಗೆ ಸಿನೆಮಾ ಎಂಬ ಕಲೆಯ ಟೆಕ್ನಿಕ್‌ಗಳ ಸಹಾಯವೂ ಬೇಕು. ತನ್ನ ಆ ನೆನಪುಗಳು ಬಿಡಿ ಬಿಡಿ ಶಾಟ್‌ಗಳಲ್ಲಿ ಕಾಣಲಿಲ್ಲವಾದುದರಿಂದ ಚಿತ್ರದಲ್ಲಿ ಲಾಂಗ್‌ಶಾಟ್‌ಗಳು ಹೆಚ್ಚು ಕಾಣುತ್ತವೆ. ಆಗ ಇನ್ನಷ್ಟು ಶ್ರಮ ಬೇಕು. ಆಯಾ ದೀರ್ಘ ಶಾಟ್‌ಗಳಲ್ಲಿ ಕಂಡುವರುವ ಎಲ್ಲಾ ವಸ್ತುಗಳು ಆ ಸಮಯಕ್ಕೆ ತಕ್ಕಂತೆ ಇರಬೇಕು, ಪ್ರತಿಯೊಂದು ಚಲನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ಯಾಮರಾದ ಚಲನೆ ಮಾಡಬೇಕು, ಹೀಗೆ ಹತ್ತಾರು ವಿಷಯಗಳನ್ನು ಲಕ್ಷದಲ್ಲಿಟ್ಟುಕೊಂಡು ಪ್ರತಿಯೊಂದು ಶಾಟ್ ಅನ್ನು ತೆಗೆಯಬೇಕಾಗುತ್ತದೆ.

ಇದೊಂದು ಖಾಸಗಿ ಚಿತ್ರವಾದುದರಿಂದ ಚಿತ್ರದ ಸ್ಕ್ರಿಪ್ಟ್ ನಿರ್ದೇಶಕನಿಗೆ ಮಾತ್ರ ತಿಳಿದಿತ್ತು. ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡ ಜಲಿಟ್ಸಾ ಅಪಾರೆಸಿಒ ಸೇರಿ ಬಹುತೇಕ ನಟರು ವೃತ್ತಿಪರ ನಟರಲ್ಲ. ಚಿತ್ರದಲ್ಲಿ ನೈಜತೆಯನ್ನು ತರಲು ಸಾಮಾನ್ಯ ಜನರನ್ನೇ ಬಳಸಿಕೊಳ್ಳಲಾಯಿತು. ಪ್ರತಿದಿನ ಚಿತ್ರೀಕರಣ ಶುರುವಾಗುವ ಮುನ್ನ ಎಲ್ಲಾ ನಟರಿಗೂ ಪ್ರತ್ಯೇಕವಾಗಿ ದೃಶ್ಯಗಳನ್ನು ವಿವರಿಸಿ (ಕೆಲವೊಮ್ಮೆ ಬೇರೆ ಬೇರೆ ನಟರಿಗೆ ಒಂದೇ ದೃಶ್ಯದ ಬೇರೆ ಬೇರೆ ವಿವರಣ ನೀಡಿ) ಕ್ಯಾಮೆರ ಚಾಲನೆ ನೀಡುತ್ತಿದ್ದರು; ದೃಶ್ಯ ತನ್ನಿಂತಾನೆ ರೂಪಗೊಳ್ಳಲಿ ಎಂದು.

ಚಿತ್ರದಲ್ಲಿ ಇದ್ದ ಕೆಲವು ವೃತ್ತಿಪರ ನಟರಿಗೆ ಇದು ಗಲಿಬಿಲಿ (ಪ್ರಾರಂಭದಲ್ಲಿ) ಮಾಡಿಸಿದರೆ, ಮೊದಲನೇ ಬಾರಿ ನಟಿಸುವವರು ಲೀಲಾಜಾಲವಾಗಿ ನಟಿಸುವಂತೆ ಮಾಡಿತು. ಆಸ್ಪತ್ರೆಯ ದೃಶ್ಯದಲ್ಲಿ ನಿಜವಾದ ವೈದ್ಯರು ಮತ್ತು ಆರೋಗ್ಯಕರ್ಮಿಗಳನ್ನೇ ಬಳಸಿ ಚಿತ್ರೀಕರಣ ಮಾಡಿದರು.

ಕ್ಯಾಮೆರ ಮೂವಮೆಂಟ್ ಅಥವಾ ಛಾಯಾಗ್ರಹಣದ ಪ್ರಶ್ನೆ ಬಂದಾಗ ಎಷ್ಟೇ ಸುಂದರವಾದ ಶಾಟ್ ಬರುತ್ತಿದ್ದರೂ ಈ ಮುಂಚೆ ಬಳಸಲಾಗುವ ರೆಫರನ್ಸ್ ಶಾಟ್‌ಗಳನ್ನು ಬಳಸಬಾರದು ಎನ್ನುವ ಹಟಕ್ಕೆ ಬಿದ್ದಿದ್ದರು ನಿರ್ದೇಶಕ ಅಲ್ಫಾಂಸೋ. ಪ್ರತಿಯೊಂದು ಶಾಟ್ ಕೂಡ ಹೊಸದಾಗಿ, ತನ್ನ ನೆನಪಿನ ಚಿತ್ರಕ್ಕೆ ಪೂರಕವಾಗಿರುವಂತೆ ನೋಡಿಕೊಂಡರು. ಅದರಿಂದ ಈ ಚಿತ್ರಕ್ಕೆ ತನ್ನದೇ ಆದ ಒಂದು ವ್ಯಾಕರಣವಿದೆ; ತನ್ನದೇ ಆದ ಒಂದು ಜೀವವಿದೆ. ಅದನ್ನು ಒಂದು ಜೀವಮಾನದಲ್ಲಿ ಒಂದು ಸಲ ಮಾತ್ರ ಮಾಡಲು ಸಾಧ್ಯ. ಗ್ಯ್ರಾವಿಟಿ, ಯಿ ತು ಮಾಮಾ ತಾಂಬಿಯನ್, ಚಿಲ್ಡ್ರನ್ ಆಫ್ ಮೆನ್ ಮುಂತಾದ ವಿಶ್ವವಿಖ್ಯಾತ ಚಿತ್ರಗಳನ್ನು ನೀಡಿದ್ದರೂ, ರೋಮಾ ಎಂಬ ಈ ಚಿತ್ರ ತನ್ನ ಮೊದಲ ಚಿತ್ರ ಎಂದೇ ಅಂದುಕೊಳ್ಳುತ್ತಾನೆ ಅಲ್ಫಾಂಸೋ ಕ್ವಾರೋನ್.


ಇದನ್ನೂ ಓದಿ: ’’ಪ್ರತೀಕಾರ’: ರಾಜಶೇಖರ್‌ ಅಕ್ಕಿಯವರ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...