Homeಮುಖಪುಟಸ್ಪಾನಿಶ್ ಸಿನಿಮಾ ರೋಮಾ : ನೆನಪುಗಳೆಂಬ ಲೋಕ

ಸ್ಪಾನಿಶ್ ಸಿನಿಮಾ ರೋಮಾ : ನೆನಪುಗಳೆಂಬ ಲೋಕ

ಈ ಚಿತ್ರಕ್ಕೆ ತನ್ನದೇ ಆದ ಒಂದು ವ್ಯಾಕರಣವಿದೆ; ತನ್ನದೇ ಆದ ಒಂದು ಜೀವವಿದೆ. ಅದನ್ನು ಒಂದು ಜೀವಮಾನದಲ್ಲಿ ಒಂದು ಸಲ ಮಾತ್ರ ಮಾಡಲು ಸಾಧ್ಯ ಎನ್ನುತ್ತಾರೆ ನಿರ್ದೇಶಕ ಅಲ್ಪಾಂಸೋ ಕ್ವಾರೋನ್

- Advertisement -
- Advertisement -

ಕೆಲವು ಚಿತ್ರಗಳನ್ನು ನೋಡಿದಾಗ ಒಂದಿಷ್ಟು ಪ್ರಶ್ನೆಗಳು ಮೂಡುತ್ತವೆ; ನನಗ್ಯಾಕೆ ಈ ಚಿತ್ರ ಇಷ್ಟವಾಯಿತು? ನನಗೆ ನಿಜವಾಗಿಯೂ ಇಷ್ಟವಾಗಿದೆಯಾ ಅಥವಾ ಸುಮ್ನೆ ಹಾಗೆ ಅಂತಿದೀನಾ? ಒಂದು ವೇಳೆ ಈ ಚಿತ್ರದ ಕಥೆಯನ್ನು ನನಗೆ ಯಾರೋ ಹೇಳಿದ್ದಲ್ಲಿ ನನಗೆ ಇಷ್ಟವಾಗುತ್ತಿತ್ತಾ? ಯಾಕೆ ಈ ಚಿತ್ರ ಮಾಡಿದ ನಿರ್ದೇಶಕ?

ರೋಮಾ ಎಂಬ ಚಿತ್ರ ನೋಡಿದ ನಂತರ ಮೂಡಿದ ಕೆಲವ ಪ್ರಶ್ನೆಗಳು ಹೀಗೆಯೆ ಇದ್ದವು. ಈ ಚಿತ್ರ, ಈ ಚಿತ್ರದ ಹಿಂದಿರುವ ದೀರ್ಘ ಪ್ರಯಾಣವನ್ನು ಅರ್ಥ ಮಾಡಿಕೊಳ್ಳುವುದು ಒಂದು ಸವಾಲೆನಿಸಿತು. ಚಿತ್ರದ ಬಗ್ಗೆ ಹೇಳುವುದಾದರೆ; ಮೆಕ್ಸಿಕೋದ ಒಂದು ನಗರದಲ್ಲಿ ಉಚ್ಚ ಮಧ್ಯಮ ವರ್ಗದ ಮನೆಯಲ್ಲಿ ಕೆಲಸ ಮಾಡುತ್ತಿರುವ ಒಬ್ಬ ಯುವಕಿಯ ಕಥೆ. ಅದರೊಂದಿಗೆ ಅವಳನ್ನು ಕೆಲಸಕ್ಕಿಟ್ಟುಕೊಂಡಿರುವ ಕುಟುಂಬದ ಕಥೆಯೂ ಹೌದು. 70ರ ದಶಕದಲ್ಲಿಯ ಕಥೆಯಾದ ಇದನ್ನು ಆ ಕಾಲದಲ್ಲಿ ಮೆಕ್ಸಿಕೋದಲ್ಲಿ ಮನೆಗೆಲಸ ಮಾಡುವವರ ವ್ಯಥೆ ಅಥವಾ ಸಂಕಷ್ಟಗಳನ್ನು ತೋರಿಸಲು ಮಾಡಿದ ಚಿತ್ರವಲ್ಲ. ಈ ಚಿತ್ರ ಅಲ್ಪಾಂಸೋ ಕ್ವಾರೋನ್ ಎಂಬ ಖ್ಯಾತ ನಿರ್ದೇಶಕನ ನೆನಪುಗಳ ಚಿತ್ರಣ.

ಯಾವುದೇ ಚಿತ್ರ ಇಷ್ಟವಾದಾಗ ಅದರ ಸ್ಟ್ರಕ್ಚರ್ ಗಟ್ಟಿಯಾಗಿತ್ತು, ಪಾತ್ರಗಳು ಜೀವಂತವಾಗಿದ್ದವು, ಚಿತ್ರ ಪ್ರತಿ ಫ್ರೇಮ್‌ನಲ್ಲೂ ಕಥೆಯನ್ನು ಮುಂದುವರೆಸುತ್ತಿತ್ತು, ಮುಂದೇನಾಗುವುದೋ ಎನ್ನುವ ಕಾತುರ ಹುಟ್ಟಿಸುತ್ತಿತ್ತು ಎಂದೆಲ್ಲಾ ನಾವು ತಿಳಿದಿದ್ದೆವು. ಇಲ್ಲಿ ಅವೆಲ್ಲ ಗೌಣ. ಆ ಆಯಾಮಗಳ ಪೋಸ್ಟ್ ಮಾರ್ಟಮ್ ಮಾಡುವ ಯಾವ ಅವಶ್ಯಕತೆ ಕಾಣುವುದಿಲ್ಲ. ಈ ಚಿತ್ರವನ್ನು ನೋಡುವುದೊಂದು ಅನುಭವ. ನಿರ್ದೇಶಕನ ನೆನಪುಗಳ, ಅವನ ಬಾಲ್ಯದ ಜಗತ್ತಿನ ಪಾತ್ರಗಳ, ಘಟನೆಗಳ ಅನುಭವ. ಅದೇ ನನ್ನ ಮುಂದಿನ ಪ್ರಶ್ನೆಗೆ ಎಡೆಮಾಡಿಕೊಡುತ್ತದೆ.

ಕೇವಲ ನೆನಪುಗಳು ಒಂದು ಕಥೆಯಾಗಬಲ್ಲವೇ? ನೆನಪಿಡಿ, ಇಲ್ಲಿ ನೆನಪು ಅಂದರೆ ಒಂದು ಸ್ವಾರಸ್ಯಕರ ಅಥವಾ ಭೀಕರ ಘಟನೆಯ ನೆನಪಲ್ಲ. ನೆನಪೆಂದರೆ, ತಾನು ಬೆಳೆದ ಓಣಿಯಲ್ಲಿ ಬೀಳಿತ್ತಿದ್ದ ಬಿಸಿಲನ ನೆನಪು, ಪ್ರತಿಭಟನೆಯೊಂದು ನಡೆದಾಗ ಹಿಂಸೆಯಾಗಿ ಆ ಸುದ್ದಿ ಪತ್ರಿಕೆಯಲ್ಲಿ ಬಂದಾಗ, ಅಲ್ಲಿ ರಸ್ತೆಯ ಮೇಲೆ ನಡೆಯುತ್ತಿರುವ ಗಲಭೆಯ ಚಿತ್ರದ ಹಿನ್ನೆಲೆಯಲ್ಲಿ ಒಂದು ಫರ್ನಿಚರ್ ಅಂಗಡಿಯ ಕಿಟಕಿಯಿಂದ ಜನರು ಇಣುಕಿ ನೋಡುತ್ತಿದ್ದಾರೆ, ಅದರ ನೆನಪು, ಆ ಸದ್ದುಗಳು, ಬಣ್ಣಗಳ ನೆನಪು. ಬಣ್ಣಗಳು ಹುಟ್ಟಿಸುವ ಭಾವನೆಗಳ ನೆನಪು, ಗತಿಸಿ ಹೋದ ಕಾಲದ, ಸಂಬಂಧಗಳ ನೆನಪುಗಳು. ಅತ್ಯಂತ ಖಾಸಗಿಯಾದ ನೆನಪುಗಳನ್ನು ಕಥೆಯನ್ನಾಗಿಸುವುದು, ಅದನ್ನು ನಿಜವಾಗಿಯೂ ಪರದೆಯ ಮೇಲೆ ತರುವುದಾದರೂ ಹೇಗೆ?

ನಿರ್ದೇಶಕ ಅಲ್ಫಾಂಸೋ ಕ್ವಾರೋನ್ ಕೂಡ ಚಿತ್ರದಲ್ಲಿ ತೋರಿಸಿದತಹ ಉಚ್ಚ ಮಧ್ಯಮ ವರ್ಗದಲ್ಲಿ ಬೆಳದವನು. ತಾನು ಬೆಳೆಯುತ್ತಿರುವಾಗ ಚಿತ್ರದಲ್ಲಿ ಇರುವ ಕ್ಲಿಯೋ ಹಾಗೆ ಅವನನ್ನೂ ಒಬ್ಬ ಸಹಾಯಕಿ ಲಿಬೋ ನೋಡಿಕೊಂಡಿದ್ದಳು. ಎಪ್ಪತ್ತರ ಮೊದಲರ್ಧದಲ್ಲಿ ಮೆಕ್ಸಿಕೋ ಕಷ್ಟದ ಕಾಲದಿಂದ ಹೋಗುತ್ತಿತ್ತು. ಆ ಸಹಾಯಕಿ, ಮೆಕ್ಸಿಕೋ ದೇಶದ ಆ ಕಾಲದ ನೆನಪುಗಳನ್ನು ದಶಕಗಟ್ಟಲೇ ಚಿಂತಿಸಿ, ಮನದಲ್ಲಿ ಒಂದು ಅಸ್ಪಷ್ಟ ರೂಪ ಮೂಡಿದಾಗ ಈ ಚಿತ್ರವನ್ನು ಪ್ರಾರಂಭಿಸಿದ. ಈ ಚಿತ್ರದ ಬಗ್ಗೆ ಯೋಚಿಸಿದಾಗೆಲ್ಲ, ತನ್ನ ನೆನಪುಗಳನ್ನೆಲ್ಲ ಕೆದಕಿದಾಗ ಅವೆಲ್ಲವುಗಳನ್ನು ಕಪ್ಪುಬಿಳುಪಿನಲ್ಲೇ ಕಂಡಿದ್ದರಿಂದ ಇದು ಕಲರ್ ಚಿತ್ರವಲ್ಲ. ತನ್ನ ಮುಂಚಿನ ಚಿತ್ರಗಳಲ್ಲಿ ಛಾಯಾಗ್ರಾಹಕನಾಗಿದ್ದ ಇಮ್ಯಾನುಯೆಲ್ ಲುಬೆಜ್ಕಿ ಅನ್ನು ಬಿಟ್ಟು ತಾನೇ ಕ್ಯಾಮರ ಹಿಡಿದ. ಪ್ರತಿಯೊಂದು ದೃಶ್ಯಗಳನ್ನು ತನ್ನ ನೆನಪಿನಾಳದಲ್ಲಿ ಮೂಡಿದ ಚಿತ್ರಗಳಂತೆ ಪರೆದಯ ಮೇಲೆ ಮೂಡಿಸಲು ಪ್ರಯತ್ನಿಸಿದ.

ತನ್ನ ನೆನಪುಗಳ ಪ್ರಾಮಾಣಿಕತೆಯನ್ನು ಮೂಡಿಸಲು ಕಠಿಣ ಶ್ರಮದೊಂದಿಗೆ ಸಿನೆಮಾ ಎಂಬ ಕಲೆಯ ಟೆಕ್ನಿಕ್‌ಗಳ ಸಹಾಯವೂ ಬೇಕು. ತನ್ನ ಆ ನೆನಪುಗಳು ಬಿಡಿ ಬಿಡಿ ಶಾಟ್‌ಗಳಲ್ಲಿ ಕಾಣಲಿಲ್ಲವಾದುದರಿಂದ ಚಿತ್ರದಲ್ಲಿ ಲಾಂಗ್‌ಶಾಟ್‌ಗಳು ಹೆಚ್ಚು ಕಾಣುತ್ತವೆ. ಆಗ ಇನ್ನಷ್ಟು ಶ್ರಮ ಬೇಕು. ಆಯಾ ದೀರ್ಘ ಶಾಟ್‌ಗಳಲ್ಲಿ ಕಂಡುವರುವ ಎಲ್ಲಾ ವಸ್ತುಗಳು ಆ ಸಮಯಕ್ಕೆ ತಕ್ಕಂತೆ ಇರಬೇಕು, ಪ್ರತಿಯೊಂದು ಚಲನೆಗಳನ್ನು ಗಮನದಲ್ಲಿಟ್ಟುಕೊಂಡು ಕ್ಯಾಮರಾದ ಚಲನೆ ಮಾಡಬೇಕು, ಹೀಗೆ ಹತ್ತಾರು ವಿಷಯಗಳನ್ನು ಲಕ್ಷದಲ್ಲಿಟ್ಟುಕೊಂಡು ಪ್ರತಿಯೊಂದು ಶಾಟ್ ಅನ್ನು ತೆಗೆಯಬೇಕಾಗುತ್ತದೆ.

ಇದೊಂದು ಖಾಸಗಿ ಚಿತ್ರವಾದುದರಿಂದ ಚಿತ್ರದ ಸ್ಕ್ರಿಪ್ಟ್ ನಿರ್ದೇಶಕನಿಗೆ ಮಾತ್ರ ತಿಳಿದಿತ್ತು. ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡ ಜಲಿಟ್ಸಾ ಅಪಾರೆಸಿಒ ಸೇರಿ ಬಹುತೇಕ ನಟರು ವೃತ್ತಿಪರ ನಟರಲ್ಲ. ಚಿತ್ರದಲ್ಲಿ ನೈಜತೆಯನ್ನು ತರಲು ಸಾಮಾನ್ಯ ಜನರನ್ನೇ ಬಳಸಿಕೊಳ್ಳಲಾಯಿತು. ಪ್ರತಿದಿನ ಚಿತ್ರೀಕರಣ ಶುರುವಾಗುವ ಮುನ್ನ ಎಲ್ಲಾ ನಟರಿಗೂ ಪ್ರತ್ಯೇಕವಾಗಿ ದೃಶ್ಯಗಳನ್ನು ವಿವರಿಸಿ (ಕೆಲವೊಮ್ಮೆ ಬೇರೆ ಬೇರೆ ನಟರಿಗೆ ಒಂದೇ ದೃಶ್ಯದ ಬೇರೆ ಬೇರೆ ವಿವರಣ ನೀಡಿ) ಕ್ಯಾಮೆರ ಚಾಲನೆ ನೀಡುತ್ತಿದ್ದರು; ದೃಶ್ಯ ತನ್ನಿಂತಾನೆ ರೂಪಗೊಳ್ಳಲಿ ಎಂದು.

ಚಿತ್ರದಲ್ಲಿ ಇದ್ದ ಕೆಲವು ವೃತ್ತಿಪರ ನಟರಿಗೆ ಇದು ಗಲಿಬಿಲಿ (ಪ್ರಾರಂಭದಲ್ಲಿ) ಮಾಡಿಸಿದರೆ, ಮೊದಲನೇ ಬಾರಿ ನಟಿಸುವವರು ಲೀಲಾಜಾಲವಾಗಿ ನಟಿಸುವಂತೆ ಮಾಡಿತು. ಆಸ್ಪತ್ರೆಯ ದೃಶ್ಯದಲ್ಲಿ ನಿಜವಾದ ವೈದ್ಯರು ಮತ್ತು ಆರೋಗ್ಯಕರ್ಮಿಗಳನ್ನೇ ಬಳಸಿ ಚಿತ್ರೀಕರಣ ಮಾಡಿದರು.

ಕ್ಯಾಮೆರ ಮೂವಮೆಂಟ್ ಅಥವಾ ಛಾಯಾಗ್ರಹಣದ ಪ್ರಶ್ನೆ ಬಂದಾಗ ಎಷ್ಟೇ ಸುಂದರವಾದ ಶಾಟ್ ಬರುತ್ತಿದ್ದರೂ ಈ ಮುಂಚೆ ಬಳಸಲಾಗುವ ರೆಫರನ್ಸ್ ಶಾಟ್‌ಗಳನ್ನು ಬಳಸಬಾರದು ಎನ್ನುವ ಹಟಕ್ಕೆ ಬಿದ್ದಿದ್ದರು ನಿರ್ದೇಶಕ ಅಲ್ಫಾಂಸೋ. ಪ್ರತಿಯೊಂದು ಶಾಟ್ ಕೂಡ ಹೊಸದಾಗಿ, ತನ್ನ ನೆನಪಿನ ಚಿತ್ರಕ್ಕೆ ಪೂರಕವಾಗಿರುವಂತೆ ನೋಡಿಕೊಂಡರು. ಅದರಿಂದ ಈ ಚಿತ್ರಕ್ಕೆ ತನ್ನದೇ ಆದ ಒಂದು ವ್ಯಾಕರಣವಿದೆ; ತನ್ನದೇ ಆದ ಒಂದು ಜೀವವಿದೆ. ಅದನ್ನು ಒಂದು ಜೀವಮಾನದಲ್ಲಿ ಒಂದು ಸಲ ಮಾತ್ರ ಮಾಡಲು ಸಾಧ್ಯ. ಗ್ಯ್ರಾವಿಟಿ, ಯಿ ತು ಮಾಮಾ ತಾಂಬಿಯನ್, ಚಿಲ್ಡ್ರನ್ ಆಫ್ ಮೆನ್ ಮುಂತಾದ ವಿಶ್ವವಿಖ್ಯಾತ ಚಿತ್ರಗಳನ್ನು ನೀಡಿದ್ದರೂ, ರೋಮಾ ಎಂಬ ಈ ಚಿತ್ರ ತನ್ನ ಮೊದಲ ಚಿತ್ರ ಎಂದೇ ಅಂದುಕೊಳ್ಳುತ್ತಾನೆ ಅಲ್ಫಾಂಸೋ ಕ್ವಾರೋನ್.


ಇದನ್ನೂ ಓದಿ: ’’ಪ್ರತೀಕಾರ’: ರಾಜಶೇಖರ್‌ ಅಕ್ಕಿಯವರ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...