Homeಕರ್ನಾಟಕಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

ಆರೋಪ ಮಾಡುವಾಗ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ: ಹೆಚ್‌ಡಿಕೆಗೆ ಯತೀಂದ್ರ ತಿರುಗೇಟು

- Advertisement -
- Advertisement -

”ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಮಾಡುತ್ತಿರುವುದು ನೀಚ ರಾಜಕಾರಣ, ಅವರು ಅಧಿಕಾರದಲ್ಲಿದ್ದಾಗ ದಂಧೆ ಮಾಡುತ್ತಿದ್ದರು ಅನಿಸುತ್ತದೆ, ಹೀಗಾಗಿ ಅವರು ಮಾತೆತ್ತಿದರೆ ದಂಧೆ, ಲಂಚ, ಹಗರಣ ಬಗ್ಗೆ ಮಾತಮಾಡುತ್ತಾರೆ” ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಾವು ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊವನ್ನಿಟ್ಟುಕೊಂಡು ಸರ್ಕಾರವನ್ನು, ಸಿಎಂ ಸಿದ್ದರಾಮಯ್ಯನವರನ್ನು ಕಟುವಾಗಿ ಟೀಕಿಸುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡರು.

”ನಾನಾಗಲಿ, ನಮ್ಮ ತಂದೆಯಾಗಲೀ ವರ್ಗಾವಣೆ ದಂದೆಯಲ್ಲಿ ತೊಡಗಿಲ್ಲ. ಒಬ್ಬ ಮುಖ್ಯಮಂತ್ರಿ ಮೇಲೆ ಆರೋಪ ಮಾಡಬೇಕಾದರೆ ಸಾಕ್ಷ್ಯ ಇಟ್ಟುಕೊಂಡು ಮಾತನಾಡಿ” ಎಂದು ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

”ಇನ್ ಸ್ಪೆಕ್ಟರ್ ವಿವೇಕಾನಂದ ಯಾರೆಂಬುದೇ ನನಗೆ ಗೊತ್ತಿಲ್ಲ. ಅವರ ವರ್ಗಾವಣೆಗೂ ನನಗೂ ಸಂಬಂಧ ಇಲ್ಲ. ವಿಪಕ್ಷಗಳು ಹತಾಶರಾಗಿ ಟೀಕೆ ಮಾಡುತ್ತಿವೆ” ಎಂದರು.

”ಕುಮಾರಸ್ವಾಮಿ ಕೂಡ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂದೆಯನ್ನೇ ಮಾಡುತ್ತಿದ್ದರಾ?” ಎಂದು ಪ್ರಶ್ನಿಸಿದರು.

ವಿಡಿಯೋ ಕುರಿತು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ತಾವು ಮೊಬೈಲ್ ನಲ್ಲಿ ಮಾತನಾಡುವ ವೇಳೆ ಪ್ರಸ್ತಾಪಿಸಿದ್ದ ಲಿಸ್ಟ್ ಬಗ್ಗೆ ವಿರೋಧ ಪಕ್ಷಗಳ ನಾಯಕರು ತರಾಟೆಗೆ ತೆಗೆದುಕೊಳ್ಳುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಡಾ ಯತೀಂದ್ರ, ”ಸಿಎಸ್​ಆರ್ ಫಂಡ್​​ ಬಗ್ಗೆ ನಾನು ಅವತ್ತು ಮಾತನಾಡಿದ್ದು. ಒಬ್ಬ ಸಿಎಂ ಮೇಲೆ ಆರೋಪ ಮಾಡಬೇಕಾದ್ರೆ ಸಾಕ್ಷ್ಯ ಇಟ್ಟುಕೊಳ್ಳಬೇಕು. ನಮ್ಮ ತಂದೆ ಆಗಲಿ, ನಾನಾಗಲಿ ಯಾವುದೇ ದಂಧೆ ನಡೆಸುತ್ತಿಲ್ಲ. ವಿವೇಕಾನಂದ ಯಾರು ಎಂದು ನನಗೆ ಗೊತ್ತಿಲ್ಲ. ಇನ್ಸ್​ಪೆಕ್ಟರ್​​ ವಿವೇಕಾನಂದ ವರ್ಗಾವಣೆಗೂ ನನಗೂ ಸಂಬಂಧವಿಲ್ಲ. ನಮ್ಮ ಕ್ಷೇತ್ರದಲ್ಲಿ ವಿವೇಕಾನಂದ ಅಂತಾ ಬಿಇಒ ಕೂಡ ಇದ್ದಾರೆ. ವಿಪಕ್ಷಗಳು ಹತಾಶರಾಗಿ ನಮ್ಮ ವಿರುದ್ಧ ಆರೋಪ ಮಾಡುತ್ತಿವೆ. ಇವರು ಅಧಿಕಾರದಲ್ಲಿದ್ದರು, ಸಿಎಂ ಆಗಿಯೂ ಕೆಲಸ ಮಾಡಿದ್ದಾರೆ. ಇವರು ಅಧಿಕಾರದಲ್ಲಿದ್ದಾಗ ದಂಧೆಯನ್ನೇ ಮಾಡುತ್ತಿದ್ದರಾ, ಭ್ರಷ್ಟಾಚಾರ, ದಂಧೆ ಆಗ್ತಿದೆ ಎಂದು ಸುಳ್ಳು ಆರೋಪ ಮಾಡಬಾರದು” ಎಂದರು.

”ನಾನು ವರುಣಾ ಕ್ಷೇತ್ರದ ಮಾಜಿ ಶಾಸಕ. ಈ ಕ್ಷೇತ್ರದ ಉಸ್ತುವಾರಿ ನೋಡಿಕೊಳ್ಳುವ ಕೆಲಸವನ್ನು ತಂದೆ ಸಿದ್ದರಾಮಯ್ಯನವರು ನನಗೆ ವಹಿಸಿದ್ದಾರೆ. ಕ್ಷೇತ್ರದ ಕೆಲಸಗಳು ಸಾಕಷ್ಟು ಇರುತ್ತವೆ. ನಾನು ಒಬ್ಬ ಖಾಸಗಿ ವ್ಯಕ್ತಿಯಲ್ಲ, ಸಾರ್ವಜನಿಕ ವ್ಯಕ್ತಿ, ನಮ್ಮ ಬಳಿ ಹತ್ತಾರು ಜನರು ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಬರುತ್ತಾರೆ, ವರ್ಗಾವಣೆ ಪ್ರತಿ ಸರ್ಕಾರದಲ್ಲಿಯೂ ಆಗುತ್ತಿರುತ್ತದೆ. ಹಿಂದೆ ಬಿಜೆಪಿ ಸರ್ಕಾರದಲ್ಲಿ ಕೂಡ ಆಗುತ್ತಿತ್ತು, ಹಾಗಾದರೆ ಅವರು ದಂಧೆಯಲ್ಲಿ ತೊಡಗಿದ್ದರೇ?” ಎಂದು ಪ್ರಶ್ನಿಸಿದರು.

ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ. ಹಲವು ಕೆಲಸ ಮಾಡಿಕೊಡುವಂತೆ ಪಟ್ಟಿ ಕೊಡುತ್ತೇನೆ. ನಮ್ಮಲ್ಲಿ ನೂರಾರು ಅರ್ಜಿಗಳು, ಬೇಡಿಕೆಗಳು ಬರುತ್ತವೆ, ಅವುಗಳನ್ನು ನೋಡಿಕೊಂಡು ಸಿಎಂ ಅವರಿಗೆ ಫಾರ್ವರ್ಡ್ ಮಾಡುತ್ತೇನೆ, ಅದನ್ನು ಮಾಡುವುದು ಬಿಡುವುದು ಸಿಎಂ ಅವರಿಗೆ ಬಿಟ್ಟ ವಿಚಾರ” ಎಂದರು.

”ನಾನು ದುಡ್ಡಿನ ಬಗ್ಗೆ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ನಾನು ಸಿಎಸ್ಆರ್ ಫಂಡ್ ವಿಚಾರದ ಬಗ್ಗೆ ಮಾತನಾಡಿರುವುದು. ಲಿಸ್ಟ್ ಎಂದ ಕೂಡಲೇ ವರ್ಗಾವಣೆಗೆ ಅಂತಾ ಯಾಕೆ ಹೇಳುತ್ತೀರಿ? ಇವರ ಅವಧಿಯಲ್ಲಿ ಲಿಸ್ಟ್, ವರ್ಗಾವಣೆ ಅಂದರೆ ದಂಧೆಯಾಗಿತ್ತಾ? ಇವರ ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಯಲ್ಲಾ ದಂಧೆಯೇ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ?” ಎಂದು ಯತೀಂದ್ರ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿಯ ಕಾಮಾಲೆ ಕಣ್ಣಿಗೆ ಎಲ್ಲವೂ ಲಂಚದ ವ್ಯವಹಾರಗಳಂತೆ ಕಾಣಿಸುತ್ತಿದೆ: ಸಿದ್ದರಾಮಯ್ಯ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...