Homeಮುಖಪುಟಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

- Advertisement -
- Advertisement -

ಸದನದಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ಸಭಾತ್ಯಾಗ ಮಾಡಿದರು.

ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಖರ್ಗೆ ಅವರಿಗೆ ಎರಡು ಬಾರಿ ಮಾತನಾಡಲು ಅವಕಾಶ ನೀಡಿದ್ದರೂ ಕೂಡ ಬಿಜೆಪಿ ಸದಸ್ಯರು ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಮೊದಲಿಗೆ ಕಡತದಿಂದ ತೆಗೆದುಹಾಕಲಾದ ಆರು ಅಂಶಗಳ ಭಾಗಗಳನ್ನು ಖರ್ಗೆ ಅವರು ಓದಲು ಪ್ರಾರಂಭಿಸಿದಾಗ ಮೊದಲ ಬಾರಿಗೆ ನಿಲ್ಲಿಸಲಾಯಿತು.

ಆ ಬಳಿಕ ಖರ್ಗೆ ಅವರು, ”ನಾವು ನಿಮ್ಮನ್ನು ಗೌರವಿಸುತ್ತೇವೆ, ನಮ್ಮ ಕೋಪವೆಲ್ಲಾ ಸರ್ಕಾರದ ಮೇಲೆಯೇ ಹೊರತು ವೈಯಕ್ತಿಕವಾಗಿ ನಿಮ್ಮ ಮೇಲಲ್ಲ… ನೀವು ನನ್ನ ಆರು ಅಂಶಗಳನ್ನು ಕಡತದಿಂದ ತಗೆದು ಹಾಕಿದ್ದೀರಿ. ಅವು ಅಸಂಸದೀಯ ಅಂಶಗಳಲ್ಲ, ಆದರೂ ನೀವು ಕಡತಕ್ಕೆ ಏಕೆ ಸೇರಿಸಲಿಲ್ಲ? ಸದನದಲ್ಲಿ ಕೇಳಿದ್ದಾರೆ. ಅವರು ದಾಖಲೆಯಲ್ಲಿ ಯಾವುದನ್ನು ಸೇರಿಸಲಾಗಿಲ್ಲ ಎಂಬ ಬಗ್ಗೆ ಖರ್ಗೆ ಅವರು ಅಧ್ಯಕ್ಷರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಈ ವೇಳೆ ವಿರೋಧ ಪಕ್ಷದ ಸಂಸದರು ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು. ಆದರೆ ಇದಕ್ಕೆ ಸಭಾಪತಿ ಸಮ್ಮತಿಸಲಿಲ್ಲ. ಶೂನ್ಯ ವೇಳೆಯಲ್ಲಿ ಸದಸ್ಯರು ಮಾತನಾಡುತ್ತಿದ್ದಾಗ ಅದಾನಿ-ಹಿಂಡೆನ್‌ಬರ್ಗ್ ಸಮಸ್ಯೆಯ ತನಿಖೆಗೆ ಜಂಟಿ ಸಂಸದೀಯ ಸಮಿತಿಗೆ ವಿರೋಧ ಪಕ್ಷಗಳು ಒತ್ತಾಯಿಸಿ, ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ಆ ಬಳಿಕ ವಿರೋಧ ಪಕ್ಷದ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಆಗ ಸಭಾಧ್ಯಕ್ಷರು ”ನಾನು ಅವರನ್ನು (ಖರ್ಗೆ) ಮಾತನಾಡಲು ಕರೆದಿದ್ದೇನೆ. ನಾನು ಕಡತದಿಂದ ತಗೆಸಿದ ಭಾಗಗಳನ್ನು ವಿರೋಧ ಪಕ್ಷದ ನಾಯಕರು ಓದಲು ಆರಂಭಿಸಿದ್ದರಿಂದ ನಾನು ಎದ್ದು ಬಂದೆ. ಇದನ್ನು ಸದಸ್ಯರು ಅರ್ಥಮಾಡಿಕೊಳ್ಳಬೇಕು. ಈಗ, ಅದನ್ನು ಎಂದಾದರೂ ಅನುಮತಿಸಬಹುದೇ? ಇಲ್ಲ.” ಆದರೂ ನೀವು ಅದನ್ನು ಕಡತಕ್ಕೆ ಸೇರಿಸಬೇಕು ಎಂದು ಹೇಳಿದರೆ ಅದು ನನ್ನ ನಿರ್ದೇಶನದ “ಅತಿರೇಕದ ನಿರ್ಲಕ್ಷ್ಯ” ಎಂದು ಅಧ್ಯಕ್ಷರು ಕರೆದರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖರ್ಗೆ ಅವರು, ”ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯವನ್ನು ಕಾಂಗ್ರೆಸ್ ಪ್ರಸ್ತಾಪಿಸುತ್ತಲೇ ಇರುತ್ತದೆ. ಆದರೂ ಸರ್ಕಾರ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಸಿದ್ಧವಿಲ್ಲದಿದ್ದರೆ ಜನರೇ ಅಧಿಕಾರದಿಂದ ಕೆಳಗಿಳಿಸುತ್ತಾರೆ” ಎಂದು ಹೇಳಿದ್ದಾರೆ.

ಅದಾನಿ ವಿವಾದ, ಸಂಸತ್ತಿನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಕೆಲವು ಟೀಕೆಗಳನ್ನು ಕಡತಕ್ಕೆ ಸೇರಸದೇ ಇರುವುದರ ಬಗ್ಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರಕ್ಕೆ 10 ಪ್ರಶ್ನೆಗಳನ್ನು ಕೇಳಿದ್ದಾರೆ.

ಅದಾನಿ ವಿಷಯವು ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ಆಗಿದೆ. ಅದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆದರೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ತನಿಖೆಗೆ ಆದೇಶಿಸಲು ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

”ನಾನಾಗಲಿ ರಾಹುಲ್ ಗಾಂಧಿ ಅವರಾಗಲಿ ಕಡತದಿಂದ ತಗೆಯುವಂತಹ ಅಸಂಸದೀಯ ಮಾತುಗಳನ್ನು ಮಾತನಾಡಿಲ್ಲ. ಅದಾನಿ ವಿಷಯದ ಬಗ್ಗೆ ಕೆಲವು ಪ್ರಶ್ನೆಗಳನ್ನು ಮಾತ್ರ ಕೇಳಿದ್ದೇವೆ” ಎಂದು ಖರ್ಗೆ ತಿಳಿಸಿದರು.

”ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಮೋದಿ ಸರ್ಕಾರವು ಜಂಟಿ ಸಂಸದೀಯ ಸಮಿತಿಯ ತನಿಖೆ ಏಕೆ ನಡೆಸುತ್ತಿಲ್ಲ? ಸಂಸತ್ತಿನಲ್ಲಿ ‘ಅದಾನಿ’ ಪದವನ್ನು ಯಾರಿಗೂ ಹೇಳಲು ಮೋದಿ ಜಿ ಮತ್ತು ಅವರ ಸರ್ಕಾರವು ಅವಕಾಶ ನೀಡದಿರುವುದಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದರು.

ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ನಡೆದಿದ್ದರೂ ಆರ್‌ಬಿಐ, ಸೆಬಿ, ಇಡಿ, ಎಸ್‌ಎಫ್‌ಐಒ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಐಟಿ ಮತ್ತು ಸಿಬಿಐ ಏಕೆ ಇನ್ನೂ ಮೌನವಾಗಿವೆ. ತನಿಖೆ ಏಕೆ ನಡೆಸುತ್ತಿಲ್ಲ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...