Homeಮುಖಪುಟಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

- Advertisement -
- Advertisement -

ಸದನದಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ಸಭಾತ್ಯಾಗ ಮಾಡಿದರು.

ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಖರ್ಗೆ ಅವರಿಗೆ ಎರಡು ಬಾರಿ ಮಾತನಾಡಲು ಅವಕಾಶ ನೀಡಿದ್ದರೂ ಕೂಡ ಬಿಜೆಪಿ ಸದಸ್ಯರು ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಮೊದಲಿಗೆ ಕಡತದಿಂದ ತೆಗೆದುಹಾಕಲಾದ ಆರು ಅಂಶಗಳ ಭಾಗಗಳನ್ನು ಖರ್ಗೆ ಅವರು ಓದಲು ಪ್ರಾರಂಭಿಸಿದಾಗ ಮೊದಲ ಬಾರಿಗೆ ನಿಲ್ಲಿಸಲಾಯಿತು.

ಆ ಬಳಿಕ ಖರ್ಗೆ ಅವರು, ”ನಾವು ನಿಮ್ಮನ್ನು ಗೌರವಿಸುತ್ತೇವೆ, ನಮ್ಮ ಕೋಪವೆಲ್ಲಾ ಸರ್ಕಾರದ ಮೇಲೆಯೇ ಹೊರತು ವೈಯಕ್ತಿಕವಾಗಿ ನಿಮ್ಮ ಮೇಲಲ್ಲ… ನೀವು ನನ್ನ ಆರು ಅಂಶಗಳನ್ನು ಕಡತದಿಂದ ತಗೆದು ಹಾಕಿದ್ದೀರಿ. ಅವು ಅಸಂಸದೀಯ ಅಂಶಗಳಲ್ಲ, ಆದರೂ ನೀವು ಕಡತಕ್ಕೆ ಏಕೆ ಸೇರಿಸಲಿಲ್ಲ? ಸದನದಲ್ಲಿ ಕೇಳಿದ್ದಾರೆ. ಅವರು ದಾಖಲೆಯಲ್ಲಿ ಯಾವುದನ್ನು ಸೇರಿಸಲಾಗಿಲ್ಲ ಎಂಬ ಬಗ್ಗೆ ಖರ್ಗೆ ಅವರು ಅಧ್ಯಕ್ಷರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಈ ವೇಳೆ ವಿರೋಧ ಪಕ್ಷದ ಸಂಸದರು ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು. ಆದರೆ ಇದಕ್ಕೆ ಸಭಾಪತಿ ಸಮ್ಮತಿಸಲಿಲ್ಲ. ಶೂನ್ಯ ವೇಳೆಯಲ್ಲಿ ಸದಸ್ಯರು ಮಾತನಾಡುತ್ತಿದ್ದಾಗ ಅದಾನಿ-ಹಿಂಡೆನ್‌ಬರ್ಗ್ ಸಮಸ್ಯೆಯ ತನಿಖೆಗೆ ಜಂಟಿ ಸಂಸದೀಯ ಸಮಿತಿಗೆ ವಿರೋಧ ಪಕ್ಷಗಳು ಒತ್ತಾಯಿಸಿ, ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ಆ ಬಳಿಕ ವಿರೋಧ ಪಕ್ಷದ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಆಗ ಸಭಾಧ್ಯಕ್ಷರು ”ನಾನು ಅವರನ್ನು (ಖರ್ಗೆ) ಮಾತನಾಡಲು ಕರೆದಿದ್ದೇನೆ. ನಾನು ಕಡತದಿಂದ ತಗೆಸಿದ ಭಾಗಗಳನ್ನು ವಿರೋಧ ಪಕ್ಷದ ನಾಯಕರು ಓದಲು ಆರಂಭಿಸಿದ್ದರಿಂದ ನಾನು ಎದ್ದು ಬಂದೆ. ಇದನ್ನು ಸದಸ್ಯರು ಅರ್ಥಮಾಡಿಕೊಳ್ಳಬೇಕು. ಈಗ, ಅದನ್ನು ಎಂದಾದರೂ ಅನುಮತಿಸಬಹುದೇ? ಇಲ್ಲ.” ಆದರೂ ನೀವು ಅದನ್ನು ಕಡತಕ್ಕೆ ಸೇರಿಸಬೇಕು ಎಂದು ಹೇಳಿದರೆ ಅದು ನನ್ನ ನಿರ್ದೇಶನದ “ಅತಿರೇಕದ ನಿರ್ಲಕ್ಷ್ಯ” ಎಂದು ಅಧ್ಯಕ್ಷರು ಕರೆದರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖರ್ಗೆ ಅವರು, ”ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯವನ್ನು ಕಾಂಗ್ರೆಸ್ ಪ್ರಸ್ತಾಪಿಸುತ್ತಲೇ ಇರುತ್ತದೆ. ಆದರೂ ಸರ್ಕಾರ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಸಿದ್ಧವಿಲ್ಲದಿದ್ದರೆ ಜನರೇ ಅಧಿಕಾರದಿಂದ ಕೆಳಗಿಳಿಸುತ್ತಾರೆ” ಎಂದು ಹೇಳಿದ್ದಾರೆ.

ಅದಾನಿ ವಿವಾದ, ಸಂಸತ್ತಿನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಕೆಲವು ಟೀಕೆಗಳನ್ನು ಕಡತಕ್ಕೆ ಸೇರಸದೇ ಇರುವುದರ ಬಗ್ಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರಕ್ಕೆ 10 ಪ್ರಶ್ನೆಗಳನ್ನು ಕೇಳಿದ್ದಾರೆ.

ಅದಾನಿ ವಿಷಯವು ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ಆಗಿದೆ. ಅದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆದರೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ತನಿಖೆಗೆ ಆದೇಶಿಸಲು ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

”ನಾನಾಗಲಿ ರಾಹುಲ್ ಗಾಂಧಿ ಅವರಾಗಲಿ ಕಡತದಿಂದ ತಗೆಯುವಂತಹ ಅಸಂಸದೀಯ ಮಾತುಗಳನ್ನು ಮಾತನಾಡಿಲ್ಲ. ಅದಾನಿ ವಿಷಯದ ಬಗ್ಗೆ ಕೆಲವು ಪ್ರಶ್ನೆಗಳನ್ನು ಮಾತ್ರ ಕೇಳಿದ್ದೇವೆ” ಎಂದು ಖರ್ಗೆ ತಿಳಿಸಿದರು.

”ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಮೋದಿ ಸರ್ಕಾರವು ಜಂಟಿ ಸಂಸದೀಯ ಸಮಿತಿಯ ತನಿಖೆ ಏಕೆ ನಡೆಸುತ್ತಿಲ್ಲ? ಸಂಸತ್ತಿನಲ್ಲಿ ‘ಅದಾನಿ’ ಪದವನ್ನು ಯಾರಿಗೂ ಹೇಳಲು ಮೋದಿ ಜಿ ಮತ್ತು ಅವರ ಸರ್ಕಾರವು ಅವಕಾಶ ನೀಡದಿರುವುದಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದರು.

ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ನಡೆದಿದ್ದರೂ ಆರ್‌ಬಿಐ, ಸೆಬಿ, ಇಡಿ, ಎಸ್‌ಎಫ್‌ಐಒ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಐಟಿ ಮತ್ತು ಸಿಬಿಐ ಏಕೆ ಇನ್ನೂ ಮೌನವಾಗಿವೆ. ತನಿಖೆ ಏಕೆ ನಡೆಸುತ್ತಿಲ್ಲ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...