Homeಮುಖಪುಟಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

- Advertisement -
- Advertisement -

ಸದನದಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ಸಭಾತ್ಯಾಗ ಮಾಡಿದರು.

ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಖರ್ಗೆ ಅವರಿಗೆ ಎರಡು ಬಾರಿ ಮಾತನಾಡಲು ಅವಕಾಶ ನೀಡಿದ್ದರೂ ಕೂಡ ಬಿಜೆಪಿ ಸದಸ್ಯರು ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಮೊದಲಿಗೆ ಕಡತದಿಂದ ತೆಗೆದುಹಾಕಲಾದ ಆರು ಅಂಶಗಳ ಭಾಗಗಳನ್ನು ಖರ್ಗೆ ಅವರು ಓದಲು ಪ್ರಾರಂಭಿಸಿದಾಗ ಮೊದಲ ಬಾರಿಗೆ ನಿಲ್ಲಿಸಲಾಯಿತು.

ಆ ಬಳಿಕ ಖರ್ಗೆ ಅವರು, ”ನಾವು ನಿಮ್ಮನ್ನು ಗೌರವಿಸುತ್ತೇವೆ, ನಮ್ಮ ಕೋಪವೆಲ್ಲಾ ಸರ್ಕಾರದ ಮೇಲೆಯೇ ಹೊರತು ವೈಯಕ್ತಿಕವಾಗಿ ನಿಮ್ಮ ಮೇಲಲ್ಲ… ನೀವು ನನ್ನ ಆರು ಅಂಶಗಳನ್ನು ಕಡತದಿಂದ ತಗೆದು ಹಾಕಿದ್ದೀರಿ. ಅವು ಅಸಂಸದೀಯ ಅಂಶಗಳಲ್ಲ, ಆದರೂ ನೀವು ಕಡತಕ್ಕೆ ಏಕೆ ಸೇರಿಸಲಿಲ್ಲ? ಸದನದಲ್ಲಿ ಕೇಳಿದ್ದಾರೆ. ಅವರು ದಾಖಲೆಯಲ್ಲಿ ಯಾವುದನ್ನು ಸೇರಿಸಲಾಗಿಲ್ಲ ಎಂಬ ಬಗ್ಗೆ ಖರ್ಗೆ ಅವರು ಅಧ್ಯಕ್ಷರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಈ ವೇಳೆ ವಿರೋಧ ಪಕ್ಷದ ಸಂಸದರು ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು. ಆದರೆ ಇದಕ್ಕೆ ಸಭಾಪತಿ ಸಮ್ಮತಿಸಲಿಲ್ಲ. ಶೂನ್ಯ ವೇಳೆಯಲ್ಲಿ ಸದಸ್ಯರು ಮಾತನಾಡುತ್ತಿದ್ದಾಗ ಅದಾನಿ-ಹಿಂಡೆನ್‌ಬರ್ಗ್ ಸಮಸ್ಯೆಯ ತನಿಖೆಗೆ ಜಂಟಿ ಸಂಸದೀಯ ಸಮಿತಿಗೆ ವಿರೋಧ ಪಕ್ಷಗಳು ಒತ್ತಾಯಿಸಿ, ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ಆ ಬಳಿಕ ವಿರೋಧ ಪಕ್ಷದ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಆಗ ಸಭಾಧ್ಯಕ್ಷರು ”ನಾನು ಅವರನ್ನು (ಖರ್ಗೆ) ಮಾತನಾಡಲು ಕರೆದಿದ್ದೇನೆ. ನಾನು ಕಡತದಿಂದ ತಗೆಸಿದ ಭಾಗಗಳನ್ನು ವಿರೋಧ ಪಕ್ಷದ ನಾಯಕರು ಓದಲು ಆರಂಭಿಸಿದ್ದರಿಂದ ನಾನು ಎದ್ದು ಬಂದೆ. ಇದನ್ನು ಸದಸ್ಯರು ಅರ್ಥಮಾಡಿಕೊಳ್ಳಬೇಕು. ಈಗ, ಅದನ್ನು ಎಂದಾದರೂ ಅನುಮತಿಸಬಹುದೇ? ಇಲ್ಲ.” ಆದರೂ ನೀವು ಅದನ್ನು ಕಡತಕ್ಕೆ ಸೇರಿಸಬೇಕು ಎಂದು ಹೇಳಿದರೆ ಅದು ನನ್ನ ನಿರ್ದೇಶನದ “ಅತಿರೇಕದ ನಿರ್ಲಕ್ಷ್ಯ” ಎಂದು ಅಧ್ಯಕ್ಷರು ಕರೆದರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖರ್ಗೆ ಅವರು, ”ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯವನ್ನು ಕಾಂಗ್ರೆಸ್ ಪ್ರಸ್ತಾಪಿಸುತ್ತಲೇ ಇರುತ್ತದೆ. ಆದರೂ ಸರ್ಕಾರ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಸಿದ್ಧವಿಲ್ಲದಿದ್ದರೆ ಜನರೇ ಅಧಿಕಾರದಿಂದ ಕೆಳಗಿಳಿಸುತ್ತಾರೆ” ಎಂದು ಹೇಳಿದ್ದಾರೆ.

ಅದಾನಿ ವಿವಾದ, ಸಂಸತ್ತಿನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಕೆಲವು ಟೀಕೆಗಳನ್ನು ಕಡತಕ್ಕೆ ಸೇರಸದೇ ಇರುವುದರ ಬಗ್ಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರಕ್ಕೆ 10 ಪ್ರಶ್ನೆಗಳನ್ನು ಕೇಳಿದ್ದಾರೆ.

ಅದಾನಿ ವಿಷಯವು ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ಆಗಿದೆ. ಅದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆದರೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ತನಿಖೆಗೆ ಆದೇಶಿಸಲು ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

”ನಾನಾಗಲಿ ರಾಹುಲ್ ಗಾಂಧಿ ಅವರಾಗಲಿ ಕಡತದಿಂದ ತಗೆಯುವಂತಹ ಅಸಂಸದೀಯ ಮಾತುಗಳನ್ನು ಮಾತನಾಡಿಲ್ಲ. ಅದಾನಿ ವಿಷಯದ ಬಗ್ಗೆ ಕೆಲವು ಪ್ರಶ್ನೆಗಳನ್ನು ಮಾತ್ರ ಕೇಳಿದ್ದೇವೆ” ಎಂದು ಖರ್ಗೆ ತಿಳಿಸಿದರು.

”ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಮೋದಿ ಸರ್ಕಾರವು ಜಂಟಿ ಸಂಸದೀಯ ಸಮಿತಿಯ ತನಿಖೆ ಏಕೆ ನಡೆಸುತ್ತಿಲ್ಲ? ಸಂಸತ್ತಿನಲ್ಲಿ ‘ಅದಾನಿ’ ಪದವನ್ನು ಯಾರಿಗೂ ಹೇಳಲು ಮೋದಿ ಜಿ ಮತ್ತು ಅವರ ಸರ್ಕಾರವು ಅವಕಾಶ ನೀಡದಿರುವುದಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದರು.

ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ನಡೆದಿದ್ದರೂ ಆರ್‌ಬಿಐ, ಸೆಬಿ, ಇಡಿ, ಎಸ್‌ಎಫ್‌ಐಒ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಐಟಿ ಮತ್ತು ಸಿಬಿಐ ಏಕೆ ಇನ್ನೂ ಮೌನವಾಗಿವೆ. ತನಿಖೆ ಏಕೆ ನಡೆಸುತ್ತಿಲ್ಲ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...