Homeಮುಖಪುಟಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

- Advertisement -
- Advertisement -

ಸದನದಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ಸಭಾತ್ಯಾಗ ಮಾಡಿದರು.

ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಖರ್ಗೆ ಅವರಿಗೆ ಎರಡು ಬಾರಿ ಮಾತನಾಡಲು ಅವಕಾಶ ನೀಡಿದ್ದರೂ ಕೂಡ ಬಿಜೆಪಿ ಸದಸ್ಯರು ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಮೊದಲಿಗೆ ಕಡತದಿಂದ ತೆಗೆದುಹಾಕಲಾದ ಆರು ಅಂಶಗಳ ಭಾಗಗಳನ್ನು ಖರ್ಗೆ ಅವರು ಓದಲು ಪ್ರಾರಂಭಿಸಿದಾಗ ಮೊದಲ ಬಾರಿಗೆ ನಿಲ್ಲಿಸಲಾಯಿತು.

ಆ ಬಳಿಕ ಖರ್ಗೆ ಅವರು, ”ನಾವು ನಿಮ್ಮನ್ನು ಗೌರವಿಸುತ್ತೇವೆ, ನಮ್ಮ ಕೋಪವೆಲ್ಲಾ ಸರ್ಕಾರದ ಮೇಲೆಯೇ ಹೊರತು ವೈಯಕ್ತಿಕವಾಗಿ ನಿಮ್ಮ ಮೇಲಲ್ಲ… ನೀವು ನನ್ನ ಆರು ಅಂಶಗಳನ್ನು ಕಡತದಿಂದ ತಗೆದು ಹಾಕಿದ್ದೀರಿ. ಅವು ಅಸಂಸದೀಯ ಅಂಶಗಳಲ್ಲ, ಆದರೂ ನೀವು ಕಡತಕ್ಕೆ ಏಕೆ ಸೇರಿಸಲಿಲ್ಲ? ಸದನದಲ್ಲಿ ಕೇಳಿದ್ದಾರೆ. ಅವರು ದಾಖಲೆಯಲ್ಲಿ ಯಾವುದನ್ನು ಸೇರಿಸಲಾಗಿಲ್ಲ ಎಂಬ ಬಗ್ಗೆ ಖರ್ಗೆ ಅವರು ಅಧ್ಯಕ್ಷರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಈ ವೇಳೆ ವಿರೋಧ ಪಕ್ಷದ ಸಂಸದರು ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು. ಆದರೆ ಇದಕ್ಕೆ ಸಭಾಪತಿ ಸಮ್ಮತಿಸಲಿಲ್ಲ. ಶೂನ್ಯ ವೇಳೆಯಲ್ಲಿ ಸದಸ್ಯರು ಮಾತನಾಡುತ್ತಿದ್ದಾಗ ಅದಾನಿ-ಹಿಂಡೆನ್‌ಬರ್ಗ್ ಸಮಸ್ಯೆಯ ತನಿಖೆಗೆ ಜಂಟಿ ಸಂಸದೀಯ ಸಮಿತಿಗೆ ವಿರೋಧ ಪಕ್ಷಗಳು ಒತ್ತಾಯಿಸಿ, ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ಆ ಬಳಿಕ ವಿರೋಧ ಪಕ್ಷದ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಆಗ ಸಭಾಧ್ಯಕ್ಷರು ”ನಾನು ಅವರನ್ನು (ಖರ್ಗೆ) ಮಾತನಾಡಲು ಕರೆದಿದ್ದೇನೆ. ನಾನು ಕಡತದಿಂದ ತಗೆಸಿದ ಭಾಗಗಳನ್ನು ವಿರೋಧ ಪಕ್ಷದ ನಾಯಕರು ಓದಲು ಆರಂಭಿಸಿದ್ದರಿಂದ ನಾನು ಎದ್ದು ಬಂದೆ. ಇದನ್ನು ಸದಸ್ಯರು ಅರ್ಥಮಾಡಿಕೊಳ್ಳಬೇಕು. ಈಗ, ಅದನ್ನು ಎಂದಾದರೂ ಅನುಮತಿಸಬಹುದೇ? ಇಲ್ಲ.” ಆದರೂ ನೀವು ಅದನ್ನು ಕಡತಕ್ಕೆ ಸೇರಿಸಬೇಕು ಎಂದು ಹೇಳಿದರೆ ಅದು ನನ್ನ ನಿರ್ದೇಶನದ “ಅತಿರೇಕದ ನಿರ್ಲಕ್ಷ್ಯ” ಎಂದು ಅಧ್ಯಕ್ಷರು ಕರೆದರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖರ್ಗೆ ಅವರು, ”ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯವನ್ನು ಕಾಂಗ್ರೆಸ್ ಪ್ರಸ್ತಾಪಿಸುತ್ತಲೇ ಇರುತ್ತದೆ. ಆದರೂ ಸರ್ಕಾರ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಸಿದ್ಧವಿಲ್ಲದಿದ್ದರೆ ಜನರೇ ಅಧಿಕಾರದಿಂದ ಕೆಳಗಿಳಿಸುತ್ತಾರೆ” ಎಂದು ಹೇಳಿದ್ದಾರೆ.

ಅದಾನಿ ವಿವಾದ, ಸಂಸತ್ತಿನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಕೆಲವು ಟೀಕೆಗಳನ್ನು ಕಡತಕ್ಕೆ ಸೇರಸದೇ ಇರುವುದರ ಬಗ್ಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರಕ್ಕೆ 10 ಪ್ರಶ್ನೆಗಳನ್ನು ಕೇಳಿದ್ದಾರೆ.

ಅದಾನಿ ವಿಷಯವು ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ಆಗಿದೆ. ಅದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆದರೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ತನಿಖೆಗೆ ಆದೇಶಿಸಲು ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

”ನಾನಾಗಲಿ ರಾಹುಲ್ ಗಾಂಧಿ ಅವರಾಗಲಿ ಕಡತದಿಂದ ತಗೆಯುವಂತಹ ಅಸಂಸದೀಯ ಮಾತುಗಳನ್ನು ಮಾತನಾಡಿಲ್ಲ. ಅದಾನಿ ವಿಷಯದ ಬಗ್ಗೆ ಕೆಲವು ಪ್ರಶ್ನೆಗಳನ್ನು ಮಾತ್ರ ಕೇಳಿದ್ದೇವೆ” ಎಂದು ಖರ್ಗೆ ತಿಳಿಸಿದರು.

”ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಮೋದಿ ಸರ್ಕಾರವು ಜಂಟಿ ಸಂಸದೀಯ ಸಮಿತಿಯ ತನಿಖೆ ಏಕೆ ನಡೆಸುತ್ತಿಲ್ಲ? ಸಂಸತ್ತಿನಲ್ಲಿ ‘ಅದಾನಿ’ ಪದವನ್ನು ಯಾರಿಗೂ ಹೇಳಲು ಮೋದಿ ಜಿ ಮತ್ತು ಅವರ ಸರ್ಕಾರವು ಅವಕಾಶ ನೀಡದಿರುವುದಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದರು.

ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ನಡೆದಿದ್ದರೂ ಆರ್‌ಬಿಐ, ಸೆಬಿ, ಇಡಿ, ಎಸ್‌ಎಫ್‌ಐಒ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಐಟಿ ಮತ್ತು ಸಿಬಿಐ ಏಕೆ ಇನ್ನೂ ಮೌನವಾಗಿವೆ. ತನಿಖೆ ಏಕೆ ನಡೆಸುತ್ತಿಲ್ಲ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...