HomeUncategorizedಹರೀಶ್ ಪೂಂಜಾ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ ಸ್ಪೀಕರ್

ಹರೀಶ್ ಪೂಂಜಾ ಪ್ರಕರಣ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿದ ಸ್ಪೀಕರ್

- Advertisement -
- Advertisement -

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಧಾನಸಭೆಯಲ್ಲಿ ಮಂಡಿಸಿದ ಹಕ್ಕುಚ್ಯುತಿ ಪ್ರಸ್ತಾಪವನ್ನು ವಿಧಾನಮಂಡಲದ ಹಕ್ಕು ಬಾಧ್ಯತಾ ಸಮಿತಿಗೆ ವಹಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದು, ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಬೆಳ್ತಂಗಡಿಯ ಅರಣ್ಯಾಧಿಕಾರಿಗಳಿಂದ ನನಗೆ ಹಕ್ಕು ಚ್ಯುತಿಯಾಗಿದೆ ಎಂದು ಆರೋಪಿಸಿದ ಶಾಸಕ ಹರೀಶ್ ಪೂಂಜಾ, ಮಂಗಳವಾರ ವಿಧಾನಸಭೆ ಕಲಾಪದ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಂಡಿಸಲು ಅವಕಾಶ ಕೋರಿದರು. ಇದಕ್ಕೆ ಧ್ವನಿಗೂಡಿಸಿದ ಬಿಜೆಪಿ ಸದಸ್ಯರು ಗದ್ದಲ ಎಬ್ಬಿಸಿದರು. ಸದನದ ಬಾವಿಗಿಳಿದು ಧರಣಿ ನಡೆಸಿದರು.

ಬೆಳ್ತಂಗಡಿ ಅರಣ್ಯಾಧಿಕಾರಿಗಳು ಶಾಸಕ ಹರೀಶ್ ಪೂಂಜಾ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ. ಅರಣ್ಯಾಧಿಕಾರಿಗಳನ್ನು ಅಮಾನತು ಮಾಡಬೇಕು. ಶಾಸಕರ ರಕ್ಷಣೆ ನಿಮ್ಮ ಜವಾಬ್ದಾರಿ. ಶಾಸಕರಿಂದ ಹಕ್ಕುಚ್ಯುತಿ ಪಡೆದುಕೊಂಡು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಪೀಕರ್‌ಗೆ ಆಗ್ರಹಿಸಿದರು.

ಬಿಜೆಪಿ ಶಾಸಕರ ಒತ್ತಾಯಕ್ಕೆ ಮಣಿದ ಸ್ಪೀಕರ್ ಖಾದರ್, ಹಕ್ಕುಚ್ಯುತಿ ಮಂಡನೆಗೆ ಹರೀಶ್ ಪೂಂಜಾ ಅವರಿಗೆ ಅನುಮತಿ ನೀಡಿದರು. ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯ ಮೂವರು ಅರಣ್ಯಾಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

ಹಕ್ಕುಚ್ಯುತಿ ಮಂಡನೆಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮೀಸಲು ಅರಣ್ಯವನ್ನು ಅತಿಕ್ರಮಿಸಿ ಕೃಷಿ ಮಾಡಿದ್ದಕ್ಕೆ ದೂರು ದಾಖಲಾಗಿದೆ. ಅತಿಕ್ರಮಣ ಜಾಗದಲ್ಲಿ ಮನೆ ನಿರ್ಮಾಣ ಮಾಡಲು ಮುಂದಾದಾಗ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ನಾನು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿದಾಗ ಅತಿಕ್ರಮಣದ ಬಗ್ಗೆ ತಿಳಿಸಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ತರಿಸುವವರೆಗೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿದ್ದೆ. ನನ್ನ ಕಾಲ್ ರೆಕಾರ್ಡ್‌ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದೀರಿ. ಇದು ಸರಿಯಾದ ಕ್ರಮವಲ್ಲ ಎಂದರು.

ಈಶ್ವರ್ ಖಂಡ್ರೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಸುನೀಲ್ ಕುಮಾರ್, ಹಕ್ಕುಚ್ಯುತಿ ಬಗ್ಗೆ ಸಚಿವರು ಸ್ಪಷ್ಟನೆ ನೀಡುವ ಅಗತ್ಯವಿಲ್ಲ ಎಂದರು. ಈ ವೇಳೆ ಸಚಿವ ಖಂಡ್ರೆ ಬೆಂಬಲಕ್ಕೆ ಬಂದ ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ, ಅರಣ್ಯ ಸಚಿವರು ಪ್ರಕರಣದ ಬಗ್ಗೆ ಸದನಕ್ಕೆ ಮಾಹಿತಿ ನೀಡುತ್ತಿದ್ದಾರೆ ಎಂದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಪ್ರಕರಣದ ಹಿನ್ನೆಲೆ :

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಅವರು ಮೀಸಲು ಅರಣ್ಯದ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅ.6 ರಂದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆ ನಿರ್ಮಾಣಕ್ಕೆ ಹಾಕಿದ್ದ ಅಡಿಪಾಯ ತೆರವುಗೊಳಿಸಿದ್ದರು.

ಈ ವಿಚಾರ ತಿಳಿದು ಶಾಸಕ ಹರೀಶ್ ಪೂಂಜಾ ಅ.7ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಕುರಿತ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಅರಣ್ಯ ಇಲಾಖೆ ಜಾಗವನ್ನು ಒತ್ತುವರಿ ನಡೆಸಿದವರು ಹಾಗೂ ಅದಕ್ಕೆ ಸಹಕರಿಸಿದ 11 ಜನರ ವಿರುದ್ಧ ಅ. 7ರಂದು ಧರ್ಮಸ್ಥಳ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ದೂರು ದಾಖಲಿಸಿದ್ದರು.

ಅ. 9 ರಂದು ಮತ್ತೆ ಮೇಲಧಿಕಾರಿಗಳ ಆದೇಶದಂತೆ ಎಸಿಎಫ್ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ.ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಲೋಲಾಕ್ಷ ಅವರ ಮನೆಯ ಶೆಡ್ ತೆರವಿಗೆ ಮುಂದಾಗಿದ್ದರು. ಈ ವೇಳೆ ಹರೀಶ್ ಪೂಂಜಾ ಸೇರಿದಂತೆ ಜಿಲ್ಲೆಯ ಬಿಜೆಪಿ ಶಾಸಕರು ಸ್ಥಳಕ್ಕೆ ತೆರಳಿ ಲೋಲಾಕ್ಷ ಅವರ ಮನೆ ತೆರವು ಮಾಡದಂತೆ ನೋಡಿಕೊಂಡಿದ್ದರು.

ಈ ವೇಳೆ ಅರಣ್ಯಾಧಿಕಾರಿ ಮತ್ತು ಹರೀಶ್ ಪೂಂಜಾ ನಡುವೆ ವಾಗ್ವಾದ ನಡೆದು, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರಿಗೆ ಹರೀಶ್ ಪೂಂಜಾ ಅಸಂಸದೀಯ ಪದ ಬಳಸಿ ಬೈದಿದ್ದರು. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಬಿಜೆಪಿ-ಕಾಂಗ್ರೆಸ್‌ ನಡುವೆ ಕಿತ್ತಾಟಕ್ಕೆ ಕಾರಣವಾಗಿತ್ತು. ಈ ಸಂಬಂಧ ಅರಣ್ಯಾಧಿಕಾರಿ ಅ.13ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ : ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...