Homeಮುಖಪುಟನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ.

- Advertisement -
- Advertisement -

ಆಧುನಿಕ ಭಾರತದ ನಿರ್ಮಾತೃ ಎಂದು ಕರೆಸಿಕೊಳ್ಳುವ ದೇಶದ ಮೊದಲ ಪ್ರಧಾನಿ ಜವಹಾರ್ ಲಾಲ್ ನೆಹರೂರವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಹಿರಿಯ ಸಚಿವರು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಸೇರಿ ಪ್ರಮುಖರು ಗೈರುಹಾಜರಾಗಿದ್ದಾರೆ. ಈ ಕುರಿತು ಕಾಂಗ್ರೆಸ್ ಪಕ್ಷ ಅಸಮಾಧಾನ ಹೊರಹಾಕಿದೆ.

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ. ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ಅಂದಿನ ಭಾರತದ ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣನ್ ಅವರು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ 5 ಮೇ 1966 ರಂದು ಅನಾವರಣಗೊಳಿಸಿದರು.

ಕೇಂದ್ರ ಪ್ರಮುಖರು ಗೈರು ಹಾಜರಾಗಿದ್ದರಿಂದ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, “ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೆಹೂರುರವರ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವದ ಸಾಂಪ್ರದಾಯಿಕ ಸಮಾರಂಭದಲ್ಲಿನ ಅಸಾಧಾರಣ ದೃಶ್ಯವಿದು. ಲೋಕಸಭೆ ಸ್ಪೀಕರ್ ಗೈರು, ರಾಜ್ಯಸಭೆಯ ಸಭಾಪತಿ ಗೈರು, ಒಬ್ಬ ಸಚಿವರೂ ಹಾಜರಾಗಿಲ್ಲ. ಇದಕ್ಕಿಂತ ಕ್ರೂರವಾಗಬಹುದೇ?!” ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವ ಭಾನು ಪ್ರತಾಪ್ ಸಿಂಗ್ ವರ್ಮಾ ಉಪಸ್ಥಿತರಿದ್ದರು. ಅವರನ್ನು ಹೊರತುಪಡಿಸಿ ಕೇಂದ್ರ ಸರ್ಕಾರದ ಪ್ರಮುಖರ್ಯಾರು ಭಾಗವಹಿಸಿಲ್ಲ. ಕಾಂಗ್ರೆಸ್ ವತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಇತರ ಸಂಸದರು ಉಪಸ್ಥಿತರಿದ್ದರು.

ಕೆಲ ವರ್ಷಗಳ ಹಿಂದಷ್ಟೇ ನೆಹರೂರವರ ಜನ್ಮದಿನ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಪ್ರಮುಖ ಸಚಿವರು, ಲೋಕಸಭೆ ಸ್ಪೀಕರ್, ರಾಜ್ಯಸಭೆ ಸಭಾಪತಿಗಳು ಭಾಗವಹಿಸುತ್ತಿದ್ದರು. ಆದರೆ ಇಂದು ಅವರೆಲ್ಲ ಗೈರು ಹಾಜರಾಗಿದ್ದಾರೆ.

2016ರಲ್ಲಿ ನೆಹರು ಜನ್ಮದಿನದ ಸಂದರ್ಭದಲ್ಲಿ ಭಾಗವಹಿಸಿದ್ದ ಪ್ರಮುಖರು

ಕಳೆದೊಂದು ದಶಕದಿಂದ ನೆಹರೂರವರ ಕುರಿತು ಬಿಜೆಪಿ ಪಕ್ಷವು ನಕರಾತ್ಮಕ ಧೋರಣೆಯನ್ನು ಪ್ರದರ್ಶಿಸುತ್ತಿದೆ. ಅವರ ಸಾಧನೆಗಳನ್ನು ಅಲ್ಲಗೆಳೆಯುತ್ತಿದೆ. ಪ್ರಮುಖವಾಗಿ ಬಿಜೆಪಿ ಐಟಿ ಸೆಲ್‌ಗಳು ನೆಹರೂರವರ ಕುರಿತು ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂಬ ದಟ್ಟ ಆರೋಪಗಳು ಕೇಳಿಬಂದಿವೆ. ಈ ಕುರಿತು ನೂರಾರು ಫ್ಯಾಕ್ಟ್‌ಚೆಕ್‌ಗಳನ್ನು ಮಾಡಲಾಗಿದೆ. ಈ ಅಭಿಯಾನದ ಭಾಗವಾಗಿಯೇ ನೆಹರೂರವರ ಜನ್ಮದಿನದ ಕಾರ್ಯಕ್ರಮಕ್ಕೆ ಕೇಂದ್ರದ ಪ್ರಮುಖರು ಭಾಗವಹಿಸಿಲ್ಲ ಎಂಬುದು ಕಾಂಗ್ರೆಸ್ ಪಕ್ಷದ ಆರೋಪವಾಗಿದೆ.


ಇದನ್ನೂ ಓದಿ: ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...