Homeಮುಖಪುಟನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ.

- Advertisement -
- Advertisement -

ಆಧುನಿಕ ಭಾರತದ ನಿರ್ಮಾತೃ ಎಂದು ಕರೆಸಿಕೊಳ್ಳುವ ದೇಶದ ಮೊದಲ ಪ್ರಧಾನಿ ಜವಹಾರ್ ಲಾಲ್ ನೆಹರೂರವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಹಿರಿಯ ಸಚಿವರು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಸೇರಿ ಪ್ರಮುಖರು ಗೈರುಹಾಜರಾಗಿದ್ದಾರೆ. ಈ ಕುರಿತು ಕಾಂಗ್ರೆಸ್ ಪಕ್ಷ ಅಸಮಾಧಾನ ಹೊರಹಾಕಿದೆ.

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ. ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ಅಂದಿನ ಭಾರತದ ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣನ್ ಅವರು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ 5 ಮೇ 1966 ರಂದು ಅನಾವರಣಗೊಳಿಸಿದರು.

ಕೇಂದ್ರ ಪ್ರಮುಖರು ಗೈರು ಹಾಜರಾಗಿದ್ದರಿಂದ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, “ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೆಹೂರುರವರ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವದ ಸಾಂಪ್ರದಾಯಿಕ ಸಮಾರಂಭದಲ್ಲಿನ ಅಸಾಧಾರಣ ದೃಶ್ಯವಿದು. ಲೋಕಸಭೆ ಸ್ಪೀಕರ್ ಗೈರು, ರಾಜ್ಯಸಭೆಯ ಸಭಾಪತಿ ಗೈರು, ಒಬ್ಬ ಸಚಿವರೂ ಹಾಜರಾಗಿಲ್ಲ. ಇದಕ್ಕಿಂತ ಕ್ರೂರವಾಗಬಹುದೇ?!” ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವ ಭಾನು ಪ್ರತಾಪ್ ಸಿಂಗ್ ವರ್ಮಾ ಉಪಸ್ಥಿತರಿದ್ದರು. ಅವರನ್ನು ಹೊರತುಪಡಿಸಿ ಕೇಂದ್ರ ಸರ್ಕಾರದ ಪ್ರಮುಖರ್ಯಾರು ಭಾಗವಹಿಸಿಲ್ಲ. ಕಾಂಗ್ರೆಸ್ ವತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಇತರ ಸಂಸದರು ಉಪಸ್ಥಿತರಿದ್ದರು.

ಕೆಲ ವರ್ಷಗಳ ಹಿಂದಷ್ಟೇ ನೆಹರೂರವರ ಜನ್ಮದಿನ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಪ್ರಮುಖ ಸಚಿವರು, ಲೋಕಸಭೆ ಸ್ಪೀಕರ್, ರಾಜ್ಯಸಭೆ ಸಭಾಪತಿಗಳು ಭಾಗವಹಿಸುತ್ತಿದ್ದರು. ಆದರೆ ಇಂದು ಅವರೆಲ್ಲ ಗೈರು ಹಾಜರಾಗಿದ್ದಾರೆ.

2016ರಲ್ಲಿ ನೆಹರು ಜನ್ಮದಿನದ ಸಂದರ್ಭದಲ್ಲಿ ಭಾಗವಹಿಸಿದ್ದ ಪ್ರಮುಖರು

ಕಳೆದೊಂದು ದಶಕದಿಂದ ನೆಹರೂರವರ ಕುರಿತು ಬಿಜೆಪಿ ಪಕ್ಷವು ನಕರಾತ್ಮಕ ಧೋರಣೆಯನ್ನು ಪ್ರದರ್ಶಿಸುತ್ತಿದೆ. ಅವರ ಸಾಧನೆಗಳನ್ನು ಅಲ್ಲಗೆಳೆಯುತ್ತಿದೆ. ಪ್ರಮುಖವಾಗಿ ಬಿಜೆಪಿ ಐಟಿ ಸೆಲ್‌ಗಳು ನೆಹರೂರವರ ಕುರಿತು ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂಬ ದಟ್ಟ ಆರೋಪಗಳು ಕೇಳಿಬಂದಿವೆ. ಈ ಕುರಿತು ನೂರಾರು ಫ್ಯಾಕ್ಟ್‌ಚೆಕ್‌ಗಳನ್ನು ಮಾಡಲಾಗಿದೆ. ಈ ಅಭಿಯಾನದ ಭಾಗವಾಗಿಯೇ ನೆಹರೂರವರ ಜನ್ಮದಿನದ ಕಾರ್ಯಕ್ರಮಕ್ಕೆ ಕೇಂದ್ರದ ಪ್ರಮುಖರು ಭಾಗವಹಿಸಿಲ್ಲ ಎಂಬುದು ಕಾಂಗ್ರೆಸ್ ಪಕ್ಷದ ಆರೋಪವಾಗಿದೆ.


ಇದನ್ನೂ ಓದಿ: ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...