Homeಮುಖಪುಟನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ.

- Advertisement -
- Advertisement -

ಆಧುನಿಕ ಭಾರತದ ನಿರ್ಮಾತೃ ಎಂದು ಕರೆಸಿಕೊಳ್ಳುವ ದೇಶದ ಮೊದಲ ಪ್ರಧಾನಿ ಜವಹಾರ್ ಲಾಲ್ ನೆಹರೂರವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಹಿರಿಯ ಸಚಿವರು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಸೇರಿ ಪ್ರಮುಖರು ಗೈರುಹಾಜರಾಗಿದ್ದಾರೆ. ಈ ಕುರಿತು ಕಾಂಗ್ರೆಸ್ ಪಕ್ಷ ಅಸಮಾಧಾನ ಹೊರಹಾಕಿದೆ.

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ. ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ಅಂದಿನ ಭಾರತದ ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣನ್ ಅವರು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ 5 ಮೇ 1966 ರಂದು ಅನಾವರಣಗೊಳಿಸಿದರು.

ಕೇಂದ್ರ ಪ್ರಮುಖರು ಗೈರು ಹಾಜರಾಗಿದ್ದರಿಂದ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, “ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೆಹೂರುರವರ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವದ ಸಾಂಪ್ರದಾಯಿಕ ಸಮಾರಂಭದಲ್ಲಿನ ಅಸಾಧಾರಣ ದೃಶ್ಯವಿದು. ಲೋಕಸಭೆ ಸ್ಪೀಕರ್ ಗೈರು, ರಾಜ್ಯಸಭೆಯ ಸಭಾಪತಿ ಗೈರು, ಒಬ್ಬ ಸಚಿವರೂ ಹಾಜರಾಗಿಲ್ಲ. ಇದಕ್ಕಿಂತ ಕ್ರೂರವಾಗಬಹುದೇ?!” ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವ ಭಾನು ಪ್ರತಾಪ್ ಸಿಂಗ್ ವರ್ಮಾ ಉಪಸ್ಥಿತರಿದ್ದರು. ಅವರನ್ನು ಹೊರತುಪಡಿಸಿ ಕೇಂದ್ರ ಸರ್ಕಾರದ ಪ್ರಮುಖರ್ಯಾರು ಭಾಗವಹಿಸಿಲ್ಲ. ಕಾಂಗ್ರೆಸ್ ವತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಇತರ ಸಂಸದರು ಉಪಸ್ಥಿತರಿದ್ದರು.

ಕೆಲ ವರ್ಷಗಳ ಹಿಂದಷ್ಟೇ ನೆಹರೂರವರ ಜನ್ಮದಿನ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಪ್ರಮುಖ ಸಚಿವರು, ಲೋಕಸಭೆ ಸ್ಪೀಕರ್, ರಾಜ್ಯಸಭೆ ಸಭಾಪತಿಗಳು ಭಾಗವಹಿಸುತ್ತಿದ್ದರು. ಆದರೆ ಇಂದು ಅವರೆಲ್ಲ ಗೈರು ಹಾಜರಾಗಿದ್ದಾರೆ.

2016ರಲ್ಲಿ ನೆಹರು ಜನ್ಮದಿನದ ಸಂದರ್ಭದಲ್ಲಿ ಭಾಗವಹಿಸಿದ್ದ ಪ್ರಮುಖರು

ಕಳೆದೊಂದು ದಶಕದಿಂದ ನೆಹರೂರವರ ಕುರಿತು ಬಿಜೆಪಿ ಪಕ್ಷವು ನಕರಾತ್ಮಕ ಧೋರಣೆಯನ್ನು ಪ್ರದರ್ಶಿಸುತ್ತಿದೆ. ಅವರ ಸಾಧನೆಗಳನ್ನು ಅಲ್ಲಗೆಳೆಯುತ್ತಿದೆ. ಪ್ರಮುಖವಾಗಿ ಬಿಜೆಪಿ ಐಟಿ ಸೆಲ್‌ಗಳು ನೆಹರೂರವರ ಕುರಿತು ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂಬ ದಟ್ಟ ಆರೋಪಗಳು ಕೇಳಿಬಂದಿವೆ. ಈ ಕುರಿತು ನೂರಾರು ಫ್ಯಾಕ್ಟ್‌ಚೆಕ್‌ಗಳನ್ನು ಮಾಡಲಾಗಿದೆ. ಈ ಅಭಿಯಾನದ ಭಾಗವಾಗಿಯೇ ನೆಹರೂರವರ ಜನ್ಮದಿನದ ಕಾರ್ಯಕ್ರಮಕ್ಕೆ ಕೇಂದ್ರದ ಪ್ರಮುಖರು ಭಾಗವಹಿಸಿಲ್ಲ ಎಂಬುದು ಕಾಂಗ್ರೆಸ್ ಪಕ್ಷದ ಆರೋಪವಾಗಿದೆ.


ಇದನ್ನೂ ಓದಿ: ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...