Homeಮುಖಪುಟನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನೆಹರು ವಾರ್ಷಿಕೋತ್ಸವಕ್ಕೆ ಸ್ಪೀಕರ್‌, ಸಚಿವರ ಗೈರು: ಕಾಂಗ್ರೆಸ್ ಅಸಮಾಧಾನ

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ.

- Advertisement -
- Advertisement -

ಆಧುನಿಕ ಭಾರತದ ನಿರ್ಮಾತೃ ಎಂದು ಕರೆಸಿಕೊಳ್ಳುವ ದೇಶದ ಮೊದಲ ಪ್ರಧಾನಿ ಜವಹಾರ್ ಲಾಲ್ ನೆಹರೂರವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಸಂಸತ್ತಿನಲ್ಲಿ ನಡೆದ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಹಿರಿಯ ಸಚಿವರು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭೆಯ ಸಭಾಪತಿ ವೆಂಕಯ್ಯ ನಾಯ್ಡು ಸೇರಿ ಪ್ರಮುಖರು ಗೈರುಹಾಜರಾಗಿದ್ದಾರೆ. ಈ ಕುರಿತು ಕಾಂಗ್ರೆಸ್ ಪಕ್ಷ ಅಸಮಾಧಾನ ಹೊರಹಾಕಿದೆ.

ನವೆಂಬರ್ 14 ದೇಶದ ಮೊದಲ ಪ್ರಧಾನಿ ನೆಹರೂರವರ ಜನ್ಮದಿನದ ಅಂಗವಾನಿ ಪ್ರತಿ ವರ್ಷ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿರುವ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಗುತ್ತದೆ. ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ಅಂದಿನ ಭಾರತದ ರಾಷ್ಟ್ರಪತಿ ಡಾ ಎಸ್ ರಾಧಾಕೃಷ್ಣನ್ ಅವರು ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ 5 ಮೇ 1966 ರಂದು ಅನಾವರಣಗೊಳಿಸಿದರು.

ಕೇಂದ್ರ ಪ್ರಮುಖರು ಗೈರು ಹಾಜರಾಗಿದ್ದರಿಂದ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, “ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನೆಹೂರುರವರ ಭಾವಚಿತ್ರವನ್ನು ಪ್ರತಿಷ್ಠಾಪಿಸಲಾಗಿದೆ. ಅವರ ಜನ್ಮ ವಾರ್ಷಿಕೋತ್ಸವದ ಸಾಂಪ್ರದಾಯಿಕ ಸಮಾರಂಭದಲ್ಲಿನ ಅಸಾಧಾರಣ ದೃಶ್ಯವಿದು. ಲೋಕಸಭೆ ಸ್ಪೀಕರ್ ಗೈರು, ರಾಜ್ಯಸಭೆಯ ಸಭಾಪತಿ ಗೈರು, ಒಬ್ಬ ಸಚಿವರೂ ಹಾಜರಾಗಿಲ್ಲ. ಇದಕ್ಕಿಂತ ಕ್ರೂರವಾಗಬಹುದೇ?!” ಎಂದು ಟ್ವೀಟ್ ಮಾಡಿದ್ದಾರೆ.

ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವ ಭಾನು ಪ್ರತಾಪ್ ಸಿಂಗ್ ವರ್ಮಾ ಉಪಸ್ಥಿತರಿದ್ದರು. ಅವರನ್ನು ಹೊರತುಪಡಿಸಿ ಕೇಂದ್ರ ಸರ್ಕಾರದ ಪ್ರಮುಖರ್ಯಾರು ಭಾಗವಹಿಸಿಲ್ಲ. ಕಾಂಗ್ರೆಸ್ ವತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಇತರ ಸಂಸದರು ಉಪಸ್ಥಿತರಿದ್ದರು.

ಕೆಲ ವರ್ಷಗಳ ಹಿಂದಷ್ಟೇ ನೆಹರೂರವರ ಜನ್ಮದಿನ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಪ್ರಮುಖ ಸಚಿವರು, ಲೋಕಸಭೆ ಸ್ಪೀಕರ್, ರಾಜ್ಯಸಭೆ ಸಭಾಪತಿಗಳು ಭಾಗವಹಿಸುತ್ತಿದ್ದರು. ಆದರೆ ಇಂದು ಅವರೆಲ್ಲ ಗೈರು ಹಾಜರಾಗಿದ್ದಾರೆ.

2016ರಲ್ಲಿ ನೆಹರು ಜನ್ಮದಿನದ ಸಂದರ್ಭದಲ್ಲಿ ಭಾಗವಹಿಸಿದ್ದ ಪ್ರಮುಖರು

ಕಳೆದೊಂದು ದಶಕದಿಂದ ನೆಹರೂರವರ ಕುರಿತು ಬಿಜೆಪಿ ಪಕ್ಷವು ನಕರಾತ್ಮಕ ಧೋರಣೆಯನ್ನು ಪ್ರದರ್ಶಿಸುತ್ತಿದೆ. ಅವರ ಸಾಧನೆಗಳನ್ನು ಅಲ್ಲಗೆಳೆಯುತ್ತಿದೆ. ಪ್ರಮುಖವಾಗಿ ಬಿಜೆಪಿ ಐಟಿ ಸೆಲ್‌ಗಳು ನೆಹರೂರವರ ಕುರಿತು ಹಲವಾರು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂಬ ದಟ್ಟ ಆರೋಪಗಳು ಕೇಳಿಬಂದಿವೆ. ಈ ಕುರಿತು ನೂರಾರು ಫ್ಯಾಕ್ಟ್‌ಚೆಕ್‌ಗಳನ್ನು ಮಾಡಲಾಗಿದೆ. ಈ ಅಭಿಯಾನದ ಭಾಗವಾಗಿಯೇ ನೆಹರೂರವರ ಜನ್ಮದಿನದ ಕಾರ್ಯಕ್ರಮಕ್ಕೆ ಕೇಂದ್ರದ ಪ್ರಮುಖರು ಭಾಗವಹಿಸಿಲ್ಲ ಎಂಬುದು ಕಾಂಗ್ರೆಸ್ ಪಕ್ಷದ ಆರೋಪವಾಗಿದೆ.


ಇದನ್ನೂ ಓದಿ: ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...